ವಿಷಯದ ವಿವರಗಳಿಗೆ ದಾಟಿರಿ

Archive for

14
ಜುಲೈ

ಬಡವರಿರಬೇಕು, ಮಾತ್ರವಲ್ಲ, ಅವರು ಹೆಚ್ಚಬೇಕು!

– ಡಾ. ಶ್ರೀಪಾದ ಭಟ್, ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

Anna Bhaagyaಮೊದಲು ಒಂದು ಸಂಗತಿಯನ್ನು ಸ್ಪಷ್ಟಮಾಡಿಕೊಳ್ಳಬೇಕು: ಜನತಂತ್ರ ವ್ಯವಸ್ಥೆಯಲ್ಲಿ ಸರ್ಕಾರಗಳು ಜನರ ಕಲ್ಯಾಣಕ್ಕಾಗಿವೆಯೇ ವಿನಾ ಲಾಭ ಮಾಡುವುದಕ್ಕಲ್ಲ. ಆದರೆ ಸಮಾಜಕ್ಕೆ ಲಾಭವಾಗುವಂತೆ ಮಾಡುವುದು ಅವುಗಳ ಕರ್ತವ್ಯ. ಅಂಥ ಲಾಭ ದೀರ್ಘಕಾಲಿಕವಾಗುವಂತೆ ಅದು ನೋಡಿಕೊಳ್ಳಬೇಕಾಗುತ್ತದೆ. ಸಾಧ್ಯವಾದಷ್ಟು ವರ್ಷ ಅಧಿಕಾರದಲ್ಲಿ ಇರುವ ಆಸೆಯಿಂದ ಚುನಾಯಿತ ಸರ್ಕಾರಗಳು ಜನರನ್ನು ಓಲೈಸುವ ಅಗ್ಗದ ಜನಪ್ರಿಯ ಯೋಜನೆಗಳನ್ನು ಕೈಗೊಳ್ಳುವುದರಲ್ಲೇ ಆಸಕ್ತಿ ತೋರಿಸುತ್ತವೆ. ಇಂಥ ಯೋಜನೆಗಳ ಉದ್ದೇಶವನ್ನು ಯಾರೂ ಪ್ರಶ್ನಿಸುವಂತಿರುವುದಿಲ್ಲ, ಆದರೆ ಅವುಗಳ ಜಾರಿ, ಅವು ಉಂಟುಮಾಡುವ ದೀರ್ಘಕಾಲಿಕ ಪರಿಣಾಮ ಮೊದಲಾದ ಸಂಗತಿಗಳು ಚಿಂತನಾರ್ಹ.

ಹಿಂದೆ ವಯಸ್ಕ ಶಿಕ್ಷಣ ಎಂಬ ಸಾಕ್ಷರ ಯೋಜನೆಯೊಂದಿತ್ತು. ಎಲ್ಲರನ್ನೂ ಸಾಕ್ಷರರನ್ನಾಗಿಸಲು ಸಾವಿರಾರು ಕೋಟಿ ರೂ.ಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುರಿದವು. ಈಗಾಗಲೇ ಮಧ್ಯವಯಸ್ಸು ದಾಟಿದ, ಆದರೆ ಸಾಕ್ಷರರಲ್ಲದ ಜನಸಂಖ್ಯೆಯನ್ನು ಗುರುತಿಸಿ, ಸರಾಸರಿ ಆಯುರ್ಮಾನವನ್ನು ಎಣಿಸಿ ಅದರಂತೆ ಯೋಜನೆ ರೂಪಿಸಲಾಯಿತು. ಹೊಸದಾಗಿ ಜನಿಸುವವರಿಗೆ ಕಡ್ಡಾಯ ಶಿಕ್ಷಣದ ಮೂಲಕ ಸಾಕ್ಷರರನ್ನಾಗಿಸುವ ಯೋಜನೆ ಇದ್ದುದರಿಂದ ಅನಕ್ಷರಸ್ಥರು ಹುಟ್ಟುವ ಸಾಧ್ಯತೆ ಇರಲಿಲ್ಲ ಹಾಗೂ ದೇಶದ ಜನರ ಸರಾಸರಿ ಆಯಸ್ಸು 56-60 ಇದ್ದುದರಿಂದ ಈ ಯೋಜನೆಗೆ ನಿಗದಿತ ಅವಧಿ ಹಾಕಿಕೊಳ್ಳಲಾಯಿತು. 10ನೇ ಯೋಜನೆ ಮುಕ್ತಾಯದ ವೇಳೆಗೆ ನಿಗದಿತ ಗುರಿ ತಲಪುವಂತೆ ಕಾಲಮಿತಿ ಹಾಕಿಕೊಂಡ ಈ ಯೋಜನೆ ಈಗ ತನ್ನ ಸ್ವರೂಪ ಬದಲಿಸಿಕೊಂಡು ಔಪಚಾರಿಕ ಶಿಕ್ಷಣ ದೊರಕದವರಿಗೆ ಕೌಶಲ್ಯ ಕಲಿಸತೊಡಗಿ, ಸಾಕ್ಷರರಿಗೆ ಸ್ವಾವಲಂಬನೆ ಮಾರ್ಗ ತೋರಿಸುತ್ತಿದೆ. ಇದು ನಿಜಕ್ಕೂ ಸ್ತುತ್ಯರ್ಹವಾದುದು. ಹೀಗೆ ಸದುದ್ದೇಶದ ಯೋಜನೆಯೊಂದು ಬೆಳವಣಿಗೆ ಕಾಣಬೇಕು; ಸಮಾಜವನ್ನು ಸ್ವಾಸ್ಥ್ಯದತ್ತ ಕೊಂಡೊಯ್ಯಬೇಕು. ಸರ್ಕಾರಗಳ ಬಹಳಷ್ಟು ಯೋಜನೆಗಳಲ್ಲಿ ಇಂಥ ಬೆಳವಣಿಗೆಯೇ ಇರುವುದಿಲ್ಲ.
ಮತ್ತಷ್ಟು ಓದು »