ಕ್ರಿಕೆಟ್ ನಿಂದ ಆಜೀವ ನಿಷೇಧ: ಮೇಯಪ್ಪನ್,ರಾಜ್ ಕುಂದ್ರಾಗೆ ಸಂತಸ !!
– ಪ್ರವೀಣ್ ಕುಮಾರ್ ಮಾವಿನಕಾಡು
ಚೆನ್ನೈ ನ ಹೊರವಲಯದ ರೆಸಾರ್ಟ್ ಒಂದರಲ್ಲಿ ಗುರುನಾಥ್ ಮೇಯಪ್ಪನ್ ಮತ್ತು ರಾಜ್ ಕುಂದ್ರಾ ರವರು ಜಂಟಿಯಾಗಿ ಆಯೋಜಿಸಿದ್ದ ಸಂತೋಷಕೂಟದಲ್ಲಿ,ತಂಡದ ಹಲವು ಆಟಗಾರರು ಹಾಗೂ ಬುಕ್ಕಿಗಳನ್ನುದ್ದೇಶಿಸಿ ಮಾತನಾಡುತ್ತಾ ಇಬ್ಬರೂ ಸಹಾ ತಮಗೆ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಆಜೀವ ನಿಷೇಧ ಹೇರಿದ ಕ್ರಮವನ್ನು ಸ್ವಾಗತಿಸಿದ್ದಾರೆ ಮತ್ತು ನಿಷೇಧ ಹೇರಿದ ಕ್ರಮಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ! ಇಷ್ಟು ವರ್ಷಗಳ ಕಾಲ ಐಪಿಎಲ್ ನ ಜವಾಬ್ಧಾರಿಯಿಂದಾಗಿ ಬೆಟ್ಟಿಂಗ್ ನಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಿರಲಿಲ್ಲ.ಇನ್ನು ಮುಂದೆ ನಾವುಗಳು ಪೂರ್ಣ ಪ್ರಮಾಣದಲ್ಲಿ ಬೆಟ್ಟಿಂಗ್ನಲ್ಲಿ ತೊಡಗಿಕೊಳ್ಳಲು ಯಾವುದೇ ತೊಂದರೆ ಇಲ್ಲ.ಇದರಿಂದ ತಮಗೆಲ್ಲರಿಗೂ ದುಪ್ಪಟ್ಟು ಲಾಭವಾಗಲಿದೆ ಎಂದು ಬುಕ್ಕಿಗಳನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರೆಂದು ನಂಬಲನರ್ಹ ಮೂಲಗಳಿಂದ ತಿಳಿದುಬಂದಿದೆ.