ವಿಷಯದ ವಿವರಗಳಿಗೆ ದಾಟಿರಿ

Archive for

20
ಜುಲೈ

ಕುವೆಂಪು ಮತ್ತು ಅಧ್ಯಾತ್ಮ

– ಡಾ. ಶ್ರೀಪಾದ ಭಟ್,ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

ಕುವೆಂಪುಕುವೆಂಪು ಮೂಲತಃ ಒಬ್ಬ ಕವಿ, ಶ್ರೇಷ್ಠ ಕವಿ. “ನಾನೃಷಿಃ ಕುರುತೇ ಕಾವ್ಯಂ” ಎಂಬ ಮಾತಿದೆ. ಋಷಿ ಎಂಬುದಕ್ಕೆ ದ್ರಷ್ಟಾರ ಎಂಬ ಅರ್ಥವಿದೆ. ಅಧ್ಯಾತ್ಮದ ಒಂದು ಮಜಲನ್ನು ದಾಟದಿದ್ದರೆ ದ್ರಷ್ಟಾರನಾಗುವುದು ಸಾಧ್ಯವಿಲ್ಲ. ಅಧ್ಯಾತ್ಮ ಎಂದರೆ ‘Immediate feeling of unity of the self with God’ ಎಂಬ ವ್ಯಾಖ್ಯೆಯನ್ನು ನೀಡಲಾಗಿದೆ. ದೇವರದೊಂದಿಗಿನ ಆತ್ಮದ ಐಕ್ಯವೇ ಅಧ್ಯಾತ್ಮ. ಕಾಯಕ, ನಿಸರ್ಗ, ಅಣುಜೀವ ಪ್ರೇಮ, ಹೀಗೆ ಯಾವುದೇ ಶಾಶ್ವತ ಮೌಲ್ಯವೂ ದೇವರಾಗಬಹುದು. ಇವು ವ್ಯಕ್ತಿಯಲ್ಲಿ ಲೀನವಾಗುವ ಬಗೆ ಅಧ್ಯಾತ್ಮದ ಹಂತಕ್ಕೆ ಒಯ್ಯುತ್ತದೆ.

ತೀವ್ರ ವಿಚಾರವಾದಿ, ಅಧ್ಯಾತ್ಮವಾದಿ, ಅಧ್ಯಾತ್ಮ ಜೀವಿಯಾದ ಕುವೆಂಪು ಸುಲಭಗ್ರಾಹ್ಯರಲ್ಲ. ಅವರು ವಿಚಾರವಾದಿ ನಿಜ, ಆದರೆ ಕೇವಲ ಭೌತವಾದಿಯಲ್ಲ. ಅಧ್ಯಾತ್ಮವಾದಿ ನಿಜ, ಆದರೆ ಕರ್ಮಠರಲ್ಲ. ಅಧ್ಯಾತ್ಮ ಜೀವಿ ನಿಜ, ಆದರೆ ಸಂನ್ಯಾಸಿಯಲ್ಲ. ನಿರಂಕುಶಮತಿಗಾಗಿ ಅವರು ನೀಡುವ ಕರೆ,ಆತ್ಮಶ್ರೀಗಾಗಿಯೇ ವಿನಾ ಭೌತಿಕ ರುಚಿಗಳ ಆರೈಕೆ, ಪೂರೈಕೆಗಳಿಗಾಗಿ ಅಲ್ಲ.

ಯಾವುದೇ ಅಧ್ಯಾತ್ಮ ತತ್ತ್ವದ ಅಂತಿಮ ಬಿಂದು ವ್ಯಕ್ತಿ ನಿಷ್ಠತೆ, ವ್ಯಕ್ತಿ ಉದ್ಧಾರ. ಸಮೂಹವನ್ನು ಇಡಿಯಾಗಿ ಉದ್ಧರಿಸುವ ಆಧ್ಯಾತ್ಮಿಕ ಸೂತ್ರ ಇಲ್ಲವೇ ಇಲ್ಲ. ಭಗವದ್ಗೀತೆಯಲ್ಲಿ ಹೇಳುವ “ಉದ್ಧರೇದಾತ್ಮನಾತ್ಮನಂ” ಎಂಬ ಮಾತು ಅಕ್ಷರಶಃ ನಿಜ. ವ್ಯಕ್ತಿ ಸ್ವತಃ ಉದ್ಧಾರವಾಗಬೇಕು. ವ್ಯಕ್ತಿ ವ್ಯಕ್ತಿಗಳು ಕೂಡಿ ಒಂದು ಸಮಾಜ. ವ್ಯಕ್ತಿಗಳ ಉದ್ಧಾರವೇ ಸಮಾಜದ ಉದ್ಧಾರ. ಕುವೆಂಪು ಅವರ ಕಾವ್ಯ, ಸಾಹಿತ್ಯ ಸೃಷ್ಟಿಯ ಮುಖ್ಯ ಸೂತ್ರವೂ ವ್ಯಕ್ತಿಯ ಆತ್ಮ ಸ್ವಾತಂತ್ರ್ಯಕ್ಕಾಗಿ ತುಡಿಯುವುದೇ ಆಗಿದೆ. ನಮ್ಮ ಉದ್ಧಾರಕ್ಕಾಗಿ ಯಾರೋ ಒಬ್ಬರು ದುಡಿಯುತ್ತಾರೆ ಎಂದು ಬಯಸುವಂತಿಲ್ಲ. ಎಲ್ಲರೂ ದುಡಿಯುತ್ತಲೇ ಅವರವರ ಹಾದಿಯಲ್ಲಿ ನಡೆದು, ಉದ್ಧಾರ ಕಂಡುಕೊಳ್ಳಬೇಕೆಂಬುದು ಅವರ ಕಾಣ್ಕೆ. ಹಾಗಾಗಿಯೇ ಅವರ ಸಾಹಿತ್ಯ ಸರ್ವಸ್ವದ ಸಾರವೇ ಆಗಿರುವ ಸಪ್ತ ಸೂತ್ರಗಳಲ್ಲಿ, “ಮತ ತೊಲಗಿ ಅಧ್ಯಾತ್ಮ ಮಾತ್ರ ವೈಜ್ಞಾನಿಕ ತತ್ತ್ವವಾಗಿ ಮಾನ್ಯತೆ ಪಡೆಯಬೇಕು ಹಾಗೂ ಯಾವ ಒಂದು ಗ್ರಂಥವೂ ‘ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು, ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾಗುವ ಎಲ್ಲವನ್ನೂ ಓದಿ ತಿಳಿದು ತನ್ನ ‘ದರ್ಶನ’ವನ್ನು ತಾನೇ ಪಡೆಯಬೇಕು” ಎಂದಿದ್ದಾರೆ.

ಮತ್ತಷ್ಟು ಓದು »

16
ಜುಲೈ

ಕ್ರಿಕೆಟ್ ನಿಂದ ಆಜೀವ ನಿಷೇಧ: ಮೇಯಪ್ಪನ್,ರಾಜ್ ಕುಂದ್ರಾಗೆ ಸಂತಸ !!

– ಪ್ರವೀಣ್ ಕುಮಾರ್ ಮಾವಿನಕಾಡು
ಕುಂದ್ರಾ-ಮೇಯಪ್ಪನ್
ಚೆನ್ನೈ ನ ಹೊರವಲಯದ ರೆಸಾರ್ಟ್ ಒಂದರಲ್ಲಿ ಗುರುನಾಥ್ ಮೇಯಪ್ಪನ್ ಮತ್ತು ರಾಜ್ ಕುಂದ್ರಾ ರವರು ಜಂಟಿಯಾಗಿ ಆಯೋಜಿಸಿದ್ದ ಸಂತೋಷಕೂಟದಲ್ಲಿ,ತಂಡದ ಹಲವು ಆಟಗಾರರು ಹಾಗೂ ಬುಕ್ಕಿಗಳನ್ನುದ್ದೇಶಿಸಿ ಮಾತನಾಡುತ್ತಾ ಇಬ್ಬರೂ ಸಹಾ ತಮಗೆ ಎಲ್ಲಾ ಮಾದರಿಯ ಕ್ರಿಕೆಟ್ ನಿಂದ ಆಜೀವ ನಿಷೇಧ ಹೇರಿದ ಕ್ರಮವನ್ನು ಸ್ವಾಗತಿಸಿದ್ದಾರೆ ಮತ್ತು ನಿಷೇಧ ಹೇರಿದ ಕ್ರಮಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ! ಇಷ್ಟು ವರ್ಷಗಳ ಕಾಲ ಐಪಿಎಲ್ ನ ಜವಾಬ್ಧಾರಿಯಿಂದಾಗಿ ಬೆಟ್ಟಿಂಗ್ ನಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಕೊಳ್ಳಲು ಸಾಧ್ಯವಾಗಿರಲಿಲ್ಲ.ಇನ್ನು ಮುಂದೆ ನಾವುಗಳು ಪೂರ್ಣ ಪ್ರಮಾಣದಲ್ಲಿ ಬೆಟ್ಟಿಂಗ್ನಲ್ಲಿ ತೊಡಗಿಕೊಳ್ಳಲು ಯಾವುದೇ ತೊಂದರೆ ಇಲ್ಲ.ಇದರಿಂದ ತಮಗೆಲ್ಲರಿಗೂ ದುಪ್ಪಟ್ಟು ಲಾಭವಾಗಲಿದೆ ಎಂದು ಬುಕ್ಕಿಗಳನ್ನುದ್ದೇಶಿಸಿ ಮಾತನಾಡುತ್ತಾ ಹೇಳಿದರೆಂದು ನಂಬಲನರ್ಹ ಮೂಲಗಳಿಂದ ತಿಳಿದುಬಂದಿದೆ.

ಮತ್ತಷ್ಟು ಓದು »

15
ಜುಲೈ

ಅಭಿಮಾನ ಹೇಗಿರಬೇಕೆಂದರೆ… ಅಭಿಮಾನದ ಮೇಲೆಯೇ ಅಭಿಮಾನ ಮೂಡುವಂತಿರಬೇಕು.

– ಗುರುಪ್ರಸಾದ್ ಆಚಾರ್ಯ, ಕುಂಜೂರು

ಅತಿರೇಕದ ಅಭಿಮಾನನಮ್ಮಲ್ಲಿ ಸರ್ವೇ ಸಾಧಾರಣವಾಗಿ ಪ್ರತಿಯೊಬ್ಬರಿಗೂ ಹೆಚ್ಚಾಗಿ ಮೆಚ್ಚಿನ ನಟ ಅಥವಾ ಮೆಚ್ಚಿನ ರಾಜಕಾರಣಿ ಅಥವಾ ಮೆಚ್ಚಿನ ವ್ಯಕ್ತಿ ಅನ್ನೋ ಯಾವುದಾದರೂ ವ್ಯಕ್ತಿಗಳು ಇದ್ದೇ ಇರುತ್ತಾರೆ. ಅವರನ್ನ ಆರಾಧಿಸುವಷ್ಟು ನಮಗೆ ಅವರ ಮೇಲೆ ಅಭಿಮಾನ. ಅಂದರೆ ಗರ್ವ… ನನ್ನ ಮೆಚ್ಚಿನ ವ್ಯಕ್ತಿಯ ಯಾವುದೇ ನಡೆ ಕೂಡಾ ನಮಗೆ ಶ್ಲಾಘನೀಯವಾಗಿ ಬಿಡುತ್ತದೆ. ಅವರನ್ನ ಯಾರಾದರೂ ಟೀಕಿಸಿದರೆ ನಮಗೆ ಇನ್ನೆಲ್ಲಿಲ್ಲದ ಕೋಪ ಬಂದು ಬಿಡುತ್ತದೆ.ಇದು ಹೆಚ್ಚಾಗಿ ಕಾಣಸಿಗುವುದು ಸಿನಿಮಾ ನಟ/ಟಿ ವಿಷಯದಲ್ಲಿ ಅಥವಾ ರಾಜಕೀಯ ನಾಯಕರ ವಿಷಯದಲ್ಲಿ.ಈ ಅಭಿಮಾನ ಎಲ್ಲಿಯವರೆಗೆ ಸಾಗುತ್ತದೆ ಎಂದರೆ ನಾವು ನಮ್ಮ ನಮ್ಮಲ್ಲೇ ಜಗಳವಾಡಲೂ,ಸಂಬಂಧಗಳನ್ನು ಮುರಿಯಲೂ ಸಿದ್ಧರಾಗುತ್ತೇವೆ. ಹಾಗಾಗಿ ನಮ್ಮಲ್ಲಿ ನಮ್ಮಲ್ಲಿ ಇಂತಹಾ ಪ್ರಭಾವ ಬೀರಬಲ್ಲ ಈ ” ಅಭಿಮಾನ ” ಅನ್ನುವುದರ ಕುರಿತಾಗಿ ನಾವೊಮ್ಮೆ ಆಳವಾಗಿ ಚಿಂತಿಸಬೇಕಾಗಿದೆ ಅಂತನಿಸುವುದಿಲ್ಲವೇ…?

ಮೇಲೆ ಹೇಳಿದ ಹಾಗೇ ಸಿನಿಮಾ ನಟರ ಮೇಲಿನ ಅಭಿಮಾನ ಮತ್ತು ರಾಜಕೀಯ ನಾಯಕರ ಮೇಲಿನ ಅಭಿಮಾನ ಈ ಎರಡು ವಿಭಾಗವನ್ನೂ ಆಯ್ದುಕೊಂಡು ನನ್ನೊಳಗಿನ ಚಿಂತನೆಯನ್ನ ನಿಮ್ಮಲ್ಲಿ ಹಂಚಿಕೊಳ್ಳುವ ಆಸೆ…ಅದೇ ಈ ಲೇಖನದ ಮೂಲ ಆಶಯ.

ಮತ್ತಷ್ಟು ಓದು »

15
ಜುಲೈ

ಟಿಂಗ್-ಟಾಂಗ್ : 1

– ವಿಶ್ವ ಸುಂಕಸಾಳ

ಟಿಂಗ್-ಟಾಂಗ್೧. ಕೆಲವರು ಸತ್ಯವನ್ನು ಇಷ್ಟಪಡುತ್ತಾರೆ. ಯಾವತ್ತೂ ಸತ್ಯವನ್ನೇ ಹೇಳಬೇಕೆಂದೂ ಬಯಸುತ್ತಾರೆ.ಆದರೆ ಬಹಿರಂಗವಾಗಿ ಯಾವತ್ತೂ ಸತ್ಯವನ್ನೇ ಹೇಳುತ್ತಾ,ಒಪ್ಪಿಕೊಳ್ಳುತ್ತಾ ಹೋದರೆ ಮೋದಿ ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗುವ ಭಯ..!!
೨. ನೀವು ತಟಸ್ಥ ಬರಹಗಾರರೆಂದು ಬಿಂಬಿಸಿಕೊಳ್ಳಬೇಕೆಂದಿದ್ದರೆ ಯಾವುದೇ ವಿಷಯದ ಮೇಲೆ ಬರೆದ ಬರಹವಾದರೂ ಸರಿ, ಕೊನೆಯಲ್ಲಿ ಮೋದಿಯನ್ನು ಟೀಕಿಸಿದರಾಯಿತು.
೩. ಸಲಹೆಯನ್ನು ಯಾರು ಬೇಕಾದರೂ ಕೊಡುತ್ತಾರೆ. ಆದರೆ ಎಲ್ಲರಿಗೂ ಸರ್ಕಾರೀ ಕಾರು, ಜನರ ದುಡ್ಡಿನಲ್ಲಿ ಮೋಜು ಮಾಡುವ ಸೌಲಭ್ಯಗಳೆಲ್ಲ ಸಿಗುವುದಿಲ್ಲ.
೪. ಕವಿಗಳಲ್ಲೂ ಕೆಲವರು ಸಜ್ಜನ ಕವಿಗಳಿರುತ್ತಾರೆ. ಎಲ್ಲರೂ ಜೀವಪರಕವಿಗಳಲ್ಲ.
೫. ಸೋಮಾರಿಗಳಿಗೆ ಮಾತ್ರ ಯೋಗದ ಅಗತ್ಯವಿದೆಯೆಂದು ನುಡಿದವರು ಕೊನೆಗೂ ಅದನ್ನು ಸ್ವತಃ ಮಾಡುವ ಮೂಲಕ ತಮ್ಮ ಮಾತನ್ನು ಸಾಬೀತುಪಡಿಸಿದರು.
೬. ಕೆಲವರು ಮುಂದಿನ ಐದು ವರ್ಷ ಟೀಕಾಕಾರರಾಗಿರಬೇಕೋ ಅಥವಾ ಹೊಗಳುಭಟರಾಗಿರಬೇಕೋ ಎಂಬುದನ್ನು ಚುನಾವಣೆ ನಿರ್ಧರಿಸುತ್ತದೆ.
ಮತ್ತಷ್ಟು ಓದು »

14
ಜುಲೈ

ಬಡವರಿರಬೇಕು, ಮಾತ್ರವಲ್ಲ, ಅವರು ಹೆಚ್ಚಬೇಕು!

– ಡಾ. ಶ್ರೀಪಾದ ಭಟ್, ಸಹಾಯಕ ಪ್ರಾಧ್ಯಾಪಕ
ಡಾ. ಡಿ ವಿ ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರ,ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

Anna Bhaagyaಮೊದಲು ಒಂದು ಸಂಗತಿಯನ್ನು ಸ್ಪಷ್ಟಮಾಡಿಕೊಳ್ಳಬೇಕು: ಜನತಂತ್ರ ವ್ಯವಸ್ಥೆಯಲ್ಲಿ ಸರ್ಕಾರಗಳು ಜನರ ಕಲ್ಯಾಣಕ್ಕಾಗಿವೆಯೇ ವಿನಾ ಲಾಭ ಮಾಡುವುದಕ್ಕಲ್ಲ. ಆದರೆ ಸಮಾಜಕ್ಕೆ ಲಾಭವಾಗುವಂತೆ ಮಾಡುವುದು ಅವುಗಳ ಕರ್ತವ್ಯ. ಅಂಥ ಲಾಭ ದೀರ್ಘಕಾಲಿಕವಾಗುವಂತೆ ಅದು ನೋಡಿಕೊಳ್ಳಬೇಕಾಗುತ್ತದೆ. ಸಾಧ್ಯವಾದಷ್ಟು ವರ್ಷ ಅಧಿಕಾರದಲ್ಲಿ ಇರುವ ಆಸೆಯಿಂದ ಚುನಾಯಿತ ಸರ್ಕಾರಗಳು ಜನರನ್ನು ಓಲೈಸುವ ಅಗ್ಗದ ಜನಪ್ರಿಯ ಯೋಜನೆಗಳನ್ನು ಕೈಗೊಳ್ಳುವುದರಲ್ಲೇ ಆಸಕ್ತಿ ತೋರಿಸುತ್ತವೆ. ಇಂಥ ಯೋಜನೆಗಳ ಉದ್ದೇಶವನ್ನು ಯಾರೂ ಪ್ರಶ್ನಿಸುವಂತಿರುವುದಿಲ್ಲ, ಆದರೆ ಅವುಗಳ ಜಾರಿ, ಅವು ಉಂಟುಮಾಡುವ ದೀರ್ಘಕಾಲಿಕ ಪರಿಣಾಮ ಮೊದಲಾದ ಸಂಗತಿಗಳು ಚಿಂತನಾರ್ಹ.

ಹಿಂದೆ ವಯಸ್ಕ ಶಿಕ್ಷಣ ಎಂಬ ಸಾಕ್ಷರ ಯೋಜನೆಯೊಂದಿತ್ತು. ಎಲ್ಲರನ್ನೂ ಸಾಕ್ಷರರನ್ನಾಗಿಸಲು ಸಾವಿರಾರು ಕೋಟಿ ರೂ.ಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುರಿದವು. ಈಗಾಗಲೇ ಮಧ್ಯವಯಸ್ಸು ದಾಟಿದ, ಆದರೆ ಸಾಕ್ಷರರಲ್ಲದ ಜನಸಂಖ್ಯೆಯನ್ನು ಗುರುತಿಸಿ, ಸರಾಸರಿ ಆಯುರ್ಮಾನವನ್ನು ಎಣಿಸಿ ಅದರಂತೆ ಯೋಜನೆ ರೂಪಿಸಲಾಯಿತು. ಹೊಸದಾಗಿ ಜನಿಸುವವರಿಗೆ ಕಡ್ಡಾಯ ಶಿಕ್ಷಣದ ಮೂಲಕ ಸಾಕ್ಷರರನ್ನಾಗಿಸುವ ಯೋಜನೆ ಇದ್ದುದರಿಂದ ಅನಕ್ಷರಸ್ಥರು ಹುಟ್ಟುವ ಸಾಧ್ಯತೆ ಇರಲಿಲ್ಲ ಹಾಗೂ ದೇಶದ ಜನರ ಸರಾಸರಿ ಆಯಸ್ಸು 56-60 ಇದ್ದುದರಿಂದ ಈ ಯೋಜನೆಗೆ ನಿಗದಿತ ಅವಧಿ ಹಾಕಿಕೊಳ್ಳಲಾಯಿತು. 10ನೇ ಯೋಜನೆ ಮುಕ್ತಾಯದ ವೇಳೆಗೆ ನಿಗದಿತ ಗುರಿ ತಲಪುವಂತೆ ಕಾಲಮಿತಿ ಹಾಕಿಕೊಂಡ ಈ ಯೋಜನೆ ಈಗ ತನ್ನ ಸ್ವರೂಪ ಬದಲಿಸಿಕೊಂಡು ಔಪಚಾರಿಕ ಶಿಕ್ಷಣ ದೊರಕದವರಿಗೆ ಕೌಶಲ್ಯ ಕಲಿಸತೊಡಗಿ, ಸಾಕ್ಷರರಿಗೆ ಸ್ವಾವಲಂಬನೆ ಮಾರ್ಗ ತೋರಿಸುತ್ತಿದೆ. ಇದು ನಿಜಕ್ಕೂ ಸ್ತುತ್ಯರ್ಹವಾದುದು. ಹೀಗೆ ಸದುದ್ದೇಶದ ಯೋಜನೆಯೊಂದು ಬೆಳವಣಿಗೆ ಕಾಣಬೇಕು; ಸಮಾಜವನ್ನು ಸ್ವಾಸ್ಥ್ಯದತ್ತ ಕೊಂಡೊಯ್ಯಬೇಕು. ಸರ್ಕಾರಗಳ ಬಹಳಷ್ಟು ಯೋಜನೆಗಳಲ್ಲಿ ಇಂಥ ಬೆಳವಣಿಗೆಯೇ ಇರುವುದಿಲ್ಲ.
ಮತ್ತಷ್ಟು ಓದು »

13
ಜುಲೈ

ಬಹುಶಃ ನನಗೇ ಈ ಶೋಷಣೆ,ಸಮಾನತೆ,ಸಹಪಂಕ್ತಿ ಇವೆಲ್ಲಾ ಅರ್ಥವಾಗೊಲ್ಲ

– ರಾಘವೇಂದ್ರ ಸುಬ್ರಹ್ಮಣ್ಯ,ಶೃಂಗೇರಿ

Samaanateಯಾಕಂದ್ರೆ ನಮ್ಮೂರಲ್ಲಿ ದೇವಸ್ಥಾನಕ್ಕೆ ಒಳಗೆ ಬಿಡೋದ್ರ ಬಗ್ಗೆ ಗಲಾಟೆಯೇ ಇಲ್ಲ. ಶೃಂಗೇರಿ ಅಂತಲ್ಲ, ಸುತ್ತ ಮುತ್ತಲಿನ ಯಾವೂರಿನಲ್ಲೂ ‘ಏಯ್ ಹೊರಗೆ ಹೋಗೋ, ದೇವಸ್ಥಾನದೊಳಗೆ ನೀನು ಬರೋ ಹಾಗಿಲ್ಲ’ ಅನ್ನಲ್ಲ. ಅಲ್ಲಿ ಜನರನ್ನ ಹೊರಗಿಡೋದು ಬಿಡಿ, ಉಲ್ಟಾ, ಕೆಲವಷ್ಟು ಕೆಲಸಗಳಿಗೆ ಕೆಲಜನರು ಬರದಿದ್ರೆ ಮುಖ್ಯ ಕೆಲಸಗಳೇ ನಡೀತಾ ಇರ್ಲಿಲ್ಲ. ಉದಾಹರಣೆಗೆ, ಭೋವಿ ಜನಾಂಗದ ಜನರು ಬಂದು ಪಲ್ಲಕ್ಕಿ ಹೊರ್ಲಿಲ್ಲ ಅಂದ್ರೆ, ಸಾರದಬಾಗಿಲಿನಿಂದ ಜನ ಬಂದು ದೀಪ, ದೀವಟಿಗೆ, ಚಾಮರ ಹಿಡೀಲಿಲ್ಲ ಅಂದ್ರೆ ನವರಾತ್ರಿಯ ಅಡ್ಡಪಲ್ಲಕ್ಕಿಯ ಉತ್ಸವವೇ ನಡಿತಾ ಇರ್ಲಿಲ್ಲ. ಅವತ್ತಿನ ಮಟ್ಟಿಗೆ ನಾನಂತೂ ಅದನ್ನ ಶೋಷಣೆ ಅಂತಾ ಅಂದ್ಕೊಳ್ಳಿಲ್ಲ. ಉಲ್ಟಾ ಅದು ನಮ್ಮ ಐಡೆಂಟಿಟಿಯಾಗಿತ್ತು. ಇವತ್ತಿನ ಹುಡುಗ್ರು ಏನಂದ್ಕೊಳ್ತಾರೋ ಗೊತ್ತಿಲ್ಲಪ್ಪ. ಶೃಂಗೇರಿಯಲ್ಲಂತೂ ಬುರ್ಖಾ ಹಾಕಿಕೊಂಡೇ ಕೆಲ ಹೆಣ್ಣುಮಕ್ಕಳು ದೇವಸ್ಥಾನದಲ್ಲಿರೋ ಮೀನುಗಳಿಗೆ ಮಂಡಕ್ಕಿ ತಿನ್ಸೋಕೆ ಬಂದಿರೋದನ್ನ ನೋಡಿದ್ದೇನೆ. ದೇವಸ್ಥಾನವೆಂದರೆ ನಾಲ್ಕು ಜನ ಸೇರೋ ಜಾಗ ಅಂದುಕೊಂಡು ಬೆಳೆದ ನನಗೆ ಶೋಷಣೆಯ ಆಂಗಲ್ಲೇ ಹೊಳೆಯಲಿಲ್ಲ. ಅದೂ ಅಲ್ದೆ ‘ತಿಂಗಳ ಆ ದಿನಗಳಲ್ಲಿ’ ದೇವಸ್ಥಾನದೊಳಗೆ ಹೋಗದ ನನ್ನ ಅತ್ತೆಯಂದಿರು, ಉತ್ಸವ ಮೂರ್ತಿ ಹೊರಗೆ ಬಂದಾಗ ಕೈಮುಗಿದು ‘ನೋಡು ನಾವು ಒಳಗೆ ಹೋಗದಿದ್ರೇನಂತೆ, ಶಾರದಮ್ಮನೇ ಹೊರಗೆ ಬಂದು ನಮಗೆ ದರ್ಶನ ಕೊಟ್ಲು’ ಅಂತಾ ಹೇಳಿದ್ದು ನನಗೆ ತಮಾಷೆ ಎನ್ನಿಸಲೇ ಇಲ್ಲ. ಅವೊಂತರಾ pradigm shift ಮಾಡುವಂತಾ ಮಾತುಗಳಾಗಿಬಿಟ್ಟವು. ಆದರೂ ಕೆಲವರು ‘ನಮ್ಮನ್ನು ದೇವಸ್ಥಾದೊಳಕ್ಕೆ ಬಿಡಲಿಲ್ಲ’ ಅಂತಾ ಹೋರಾಟ ಮಾಡುವಾಗ ನನಗೆ ಆಶ್ಚರ್ಯವಾಗುತ್ತೆ. ಅದಕ್ಕೇ ಏನೋಪ್ಪ ನನಗೆ ಇವೆಲ್ಲಾ ಅರ್ಥವಾಗೊಲ್ಲ.

ಮತ್ತಷ್ಟು ಓದು »

11
ಜುಲೈ

ಇನ್ಮುಂದೆ ಕೆಡುಕಿ ಫ್ರೈಡ್ ಚಿಕನ್ ಜೊತೆಗೆ ಶಾರ್ಪಿಕ್ ಬಾಟಲ್ ಸಂಪೂರ್ಣ ಉಚಿತ!

– ಪ್ರವೀಣ್ ಕುಮಾರ್ ಮಾವಿನಕಾಡು

KHಇತ್ತೀಚಿನ ದಿನಗಳಲ್ಲಿ ಸಿದ್ಧ ಆಹಾರಗಳ ತಯಾರಿಕೆಯಲ್ಲಿ ತೀವ್ರ ನಿರ್ಲಕ್ಷ್ಯ ಕಂಡುಬರುತ್ತಿದ್ದು,ಮ್ಯಾಗಿಯಲ್ಲಿ ಸೀಸ,ಹಾಲಿನ ಪುಡಿಯಲ್ಲಿ ಡಿಟರ್ಜೆಂಟ್ ಪತ್ತೆಯಾದಂತೆ ಫ್ರೈಡ್ ಚಿಕನ್ ನಲ್ಲಿ ಸಾಮಾನ್ಯವಾಗಿ ಚರಂಡಿಯಲ್ಲಿ ಕಂಡುಬರುವ ಬ್ಯಾಕ್ಟೀರಿಯಾಗಳು ಕಂಡುಬಂದಿವೆ.

ಘಟನೆಯ ವಿವರ: ಇತ್ತೀಚಿಗೆ ಬಹುರಾಷ್ಟ್ರೀಯ ರೆಸ್ಟೋರೆಂಟ್ ಸರಪಣಿಯ ಚಿಕನ್ಪುರ್ ಜಿಲ್ಲೆಯ ಔಟ್ ಲೆಟ್ ಒಂದರಲ್ಲಿ ಫ್ರೈಡ್ ಚಿಕನ್‌ಗೆ ಆರ್ಡರ್ ಮಾಡಿ ಬಾಯಲ್ಲಿ ನೀರೂರಿಸುತ್ತಾ ಕುಳಿತಿದ್ದ ಗ್ರಾಹಕರೊಬ್ಬರು ತಮಗೆ ಸರ್ವ್ ಮಾಡಿದ ಚಿಕನ್ ಜೊತೆ ಬ್ಯಾಕ್ಟೀರಿಯಾಗಳು ಇರುವುದನ್ನು ತಿಳಿದು ಹೌಹಾರಿದ್ದಾರೆ.ಈ ಬಗ್ಗೆ ಮಳಿಗೆಯ ಸಿಬ್ಬಂದಿಗೆ ತಿಳಿಸಿದಾಗ ಅದು ಹೊರಗಿನಿಂದ ತಾವೇ ತಂದುಕೊಂಡ ಆಹಾರ ಎಂದು ವಾದ ಮಾಡಿದ್ದಾರೆ.ಆದರೆ ದೂರು ಸ್ವೀಕರಿಸಲು ಸ್ಥಳಕ್ಕೆ ಬಂದ ಅಧಿಕಾರಿಗಳಿಗೆ ಈ ಬಗ್ಗೆ ಪುರಾವೆ ಲಭಿಸಿದ್ದು,ಬ್ಯಾಕ್ಟೀರಿಯಾಗಳಿದ್ದ ಮಾಂಸದ ತುಂಡುಗಳನ್ನು ಹೆಚ್ಚುವರಿ ಪರೀಕ್ಷೆಗೆ ಕಳುಹಿಸಲಾಗಿತ್ತು.ಪ್ರಯೋಗಾಲಯದ ವರದಿಯಲ್ಲಿ ಚಿಕನ್ ನಲ್ಲಿ ಬ್ಯಾಕ್ಟೀರಿಯಾಗಳು ಇರುವುದು ಧೃಢಪಟ್ಟಿದೆ!

ಮತ್ತಷ್ಟು ಓದು »

10
ಜುಲೈ

ಕಬ್ಬು ಸಕ್ಕರೆಗಷ್ಟೇ ಸೀಮಿತವೆ?

– ರಾಘವೇಂದ್ರ ಅಡಿಗ

ಕಬ್ಬು ಬೆಳೆಗಾರರುರಾಜ್ಯದಲ್ಲಿ ಇದೇ ಇಪ್ಪತ್ತು ದಿನಗಳಲ್ಲಿ ಸುಮಾರು ಇಪ್ಪತ್ತೈದು ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಲ್ಲಿ ಬಹುಪಾಲು ಮಂದಿ ಕಬ್ಬು ಬೆಳೆಗಾರರೇ ಆಗಿದ್ದು ಸಾಲ ಮಾಡಿ ಬೆಳೆದ ಕಬ್ಬನ್ನು ಸಕ್ಕರೆ ಕಾರ್ಖಾನೆಗೆಳಿಗೆ ನೀಡಿದ ಬಳಿಕ ಕಾರ್ಖಾನೆ ಮಾಲೀಕರಿಂದ ಬರಬೇಕಾದ ಹಣ ಬರದೆ ಸಾಲದ ಬಡ್ಡಿಯನ್ನೂ ಕಟ್ಟಲಾಗದೆ ಆತ್ಮಹತ್ಯೆಯ ಮೊರೆ ಹೋಗುತ್ತಿದ್ದಾರೆ. ರೈತರ ಈ ಸರಣಿ ಆತ್ಮಹತ್ಯೆಗೆ ಸರ್ಕಾರ ಹಾಗೂ ಕಾರ್ಖಾನೆ ಮಾಲೀಕರೇ ನೇರ ಹೊಣೆ ಎಂದು ವಿರೋಧ ಪಕ್ಷಗಳ ನಾಯಕರೂ ಸೇರಿದಂತೆ ಎಲ್ಲರೂ ಗುಲ್ಲೆಬ್ಬಿಸುತ್ತಿದ್ದಾರೆ. ಇದು ತಕ್ಕಮಟ್ಟಿಗೆ ನಿಜವೂ ಆಗಿರಬಹುದು. ಆದರೆ ಇಂದಿನ ಕೃಷಿ ಪದ್ದತಿ, ರೈತರ ಮನಸ್ಥಿತಿಯೂ ಸಹ ಈ ದುರ್ದೆಸೆಗೆ ಕಾರಣೆವೆಂದರೆ ಅದು ತಪ್ಪಲ್ಲ.

ಸಕ್ಕರೆಗೆ ಸೀಮಿತವಲ್ಲ!
ಮೊದಲನೆಯದಾಗಿ ನಮ್ಮ ರೈತರ ಮನಸ್ಥಿತಿ ಬದಲಾಗಬೇಕು. ಕಾರ್ಖಾನೆಗಳು, ಸರ್ಕಾರಗಳನ್ನೇ ಅವಲಂಬಿಸಿಕೊಳ್ಳುವುದರಿಂದ ಹೊರಬಂದು ತಾವೇ ಸ್ವತಂತ್ರವಾಗಿ ಯೋಚಿಸುವುದನ್ನು ಕಲಿಯಬೇಕಿದೆ. ಇಂದು ತಂತ್ರಜ್ಜಾನ ಅದೆಷ್ಟು ಮುಂದುವರಿದಿದೆ, ಮಾನವನು ತಾನದೆಷ್ಟರ ಮಟ್ಟಿಗೆ ಅದರ ಅನುಕೂಲಗಳನ್ನು ಬಳಸಿಕೊಳ್ಳುತ್ತಿದ್ದಾನೆ ಎನ್ನುವುದನ್ನು ನಾವ್ಯಾರೂ ಇನ್ನೊಬ್ಬರಿಗೆ ಹೇಳಿಕೊಡಬೇಕಾಗಿಲ್ಲ. ಕೃಷಿ ಕ್ಷೇತ್ರದಲ್ಲಿಯೂ ಸಹ ಹಿಂದಿನ ಕಾಲಕ್ಕಿಂತ ಸಾಕಷ್ಟು ಬದಲಾವಣೆಗಾಳಾಗಿವೆ. ಕ್ರಾಂತಿಕಾರಿ ರೀತಿಯಲ್ಲಾಗಿರುವ ತಾಂತ್ರಿಕ ಪ್ರಗತಿಯನ್ನೂ ನಮ್ಮವರೇ ಕೆಲವು ಕೃಷಿಕರು ಅದರ ಲಾಭವನ್ನು ಯಶಸ್ವಿಯಾಗಿ ಬಳಸಿಕೊಳ್ಳುತ್ತಿರುವುದನ್ನೂ ನಾವು ನೋಡುತ್ತಿದ್ದೇವೆ. ಆದರೆ ಇಂತಹಾ ಸನ್ನಿವೇಶದಲ್ಲಿಯೂ ಕಬ್ಬು ಬೆಳೆಗಾರರು ಬೆಳೆದ ಕಬ್ಬನ್ನೇ ನೆಲಸಮ ಮಾಡುವುದು, ಸುಡುವುದು ಅಲ್ಲದೆ ತಾನೂ ಕೂಡ ಆತ್ಮಹತ್ಯೆಯಂತಹಾ ಕೃತ್ಯಕ್ಕೆ ಮುಂದಾಗುತ್ತಿರುವುದು ನೋಡಿದರೆ ನಮ್ಮ ಕೃಷಿಕರಿಗೆ ಈ  ತಂತ್ರಜ್ಞಾನ ಬೆಳವಣಿಗೆಯ ಕುರಿತ ಸಾಮಾನ್ಯ ಜ್ಞಾನವೂ ಇಲ್ಲವೆ ಎನ್ನುವ ಪ್ರಶ್ನೆ ಎದುರಾಗುತ್ತದೆ.

ಮತ್ತಷ್ಟು ಓದು »

9
ಜುಲೈ

ರಂಗಿತರಂಗ

– ಚಿರು ಭಟ್

#‎ರಂಗಿತರಂಗ‬!

ರಂಗಿತರಂಗಒಂದೇ ಮಾತಲ್ಲಿ ಹೇಳುವುದಾದರೆ, ನಾನು ಕೆಲವು ವರ್ಷಗಳ ನಂತರ ಮನಸಾರೆ ಇಷ್ಟ ಪಟ್ಟ ಚಿತ್ರ. ಈಗ ಚಿತ್ರದ ಬಗ್ಗೆ ಮಾತಾಡೋಣ. ಅಸಲಿಗೆ ಚಿತ್ರದ ಬಗ್ಗೆ ನಾವು ವಿಮರ್ಶೆ ಬರೆದರೆ ಅದು ತಪ್ಪಾಗುತ್ತದೆ. ಕಥೆ ಅರ್ಧ ಹೇಳಿದರೆ ನಿಮಗೆ ಅರ್ಥವಾಗುವುದಿಲ್ಲ, ಪೂರ್ತಿ ಹೇಳಿದರೆ ಮಜಾ ಬರಲ್ಲ. ಗುಡ್ಡದ ಭೂತ, ಅಂಗಾರನ ಭೂತ, ಸಾಲು ಸಾಲು ಬಸುರಿ ಹೆಂಗಸರ ಕೊಲೆ, ತನ್ನ ಸುತ್ತ ಏನಾಗುತ್ತಿದೆ ಎಂದೇ ತಿಳಿಯದ ನಾಯಕ, ಅವನ ಹೆಂಡತಿ ಮತ್ತು ಅದೇ ನಾಯಕನನ್ನು ಒಂದು ಉದ್ದೇಶದಿಂದ ಹುಡುಕುತ್ತಾ ಅಲೆದಾಡುತ್ತಿರುವ ಮತ್ತೊಬ್ಬ ಜರ್ನಲಿಸ್ಟ್ ಹುಡುಗಿ.

ಇವಿಷ್ಟು ಸಾಮಾನ್ಯ ಜನರ ಕೈಯಲ್ಲಿ ಕೊಟ್ಟರೆ ಪುಳಿಯೊಗರೆ ಚಿತ್ರಾನ್ನ ಸೇರಿಸಿ ಉಪ್ಪಿಟ್ಟು ಮಾಡುತ್ತಿದ್ದರೇನೋ ಆದರೆ ಅನುಪ್ ಭಂಡಾರಿಯವರಿಗೆ ಕೊಟ್ಟಿದ್ದರಿಂದ ಅದು “ರಂಗಿತರಂಗ”ವಾಗಿದೆ. ನಿಜಕ್ಕೂ ಒಂದು ಸದಭಿರುಚಿಯ ಚಿತ್ರ. ಅಪ್ಪ ಹಾಕಿದ ಆಲದ ಮರಕ್ಕೇ ಜೋತುಬಿದ್ದಿರುವ ನಾಯಕನ ಚಿತ್ರಕ್ಕೆ ಹೋಗುವುದಕ್ಕಿಂತ ಇಂಥ ಒಂದು ಚಿತ್ರ ನೋಡಿದರೆ, ಕಾಸು ಕೊಟ್ಟಿದ್ದಕ್ಕೂ ಮೈ ಉರಿಯುವುದಿಲ್ಲ. ಸಿನಿಮಾದ ಒಂದೊಂದು ಫ್ರೇಮ್ ಕೂಡ ಕಮರೊಟ್ಟುಗೇ ನಮ್ಮನ್ನು ಫ್ರೀಯಾಗಿ ಕರೆದುಕೊಂಡು ಹೋದಂತಿದೆ. ಛಾಯಾಗ್ರಹಣ ನಿರ್ದೇಶನದಲ್ಲಿ ಲ್ಯಾನ್ಸ್ ಕ್ಯಾಪ್ಲನ್ ಗೆದ್ದಿದ್ದಾರೆ. ಸಿನಿಮಾದ ಹಿನ್ನೆಲೆ ಸಂಗೀತ ಮತ್ತು ಸಂಗೀತ ಬಹಳ ಅದ್ಭುತವಾಗಿ ಮೂಡಿಬಂದಿದೆ. ರಾಧಿಕಾ ಚೇತನ್ ನಟನೆ ಚೆನ್ನಾಗಿದೆ. ಅವಂತಿಕ ಶೆಟ್ಟಿ ನಟನೆಯೂ ಚೆನ್ನಾಗಿದೆ ಆದರೆ, ಮತ್ತಷ್ಟು ಎಫರ್ಟ್ ಹಾಕಬೇಕು. ನಾಯಕ ನಟ ನಿರುಪ್ ನಟನೆಯಲ್ಲಿ ಸುಧಾರಿಸುವುದು ಬಹಳ ಇದೆ. ಆದರೆ ಈ ಚಿತ್ರಕ್ಕೆ ಅವರ ನಟನೆ ತಕ್ಕ ಮಟ್ಟಿಗಿದೆ ಅಷ್ಟೆ. ಚಿತ್ರ ನಿಂತಿರುವುದೇ ಸಾಯಿಕುಮಾರ್‍ರ ನಟನೆಯ ಮೇಲೆ, ಅವರ ಪಾತ್ರದ ಮೇಲೆ ಎಂದರೆ ತಪ್ಪಾಗುವುದಿಲ್ಲ. ಅವರ ಬಗ್ಗೆ ಹೇಳಬೇಕೆಂದರೆ “Guys, Saikumar is backkkk!!”
ಮತ್ತಷ್ಟು ಓದು »

8
ಜುಲೈ

ಶೇರ್ ಷಾ !

– ಆತ್ಮನ್ ಭಟ್,ಚಿತ್ರದುರ್ಗ

ವಿಕ್ರಮ್ ಬಾತ್ರಾಆತ ಭಾರತೀಯ ಸೇನೆಯ ಮಗದೊಬ್ಬ ಕ್ಯಾಪ್ಟನ್ ಅಷ್ಟೆ! ಆವತ್ತೂ ೭ ಜುಲೈ. ಕರೆಕ್ಟಾಗಿ ಹದಿನಾರು ವರ್ಷಗಳ ಹಿಂದಿನ’ ಫ್ಲ್ಯಾಷ್  ಬ್ಯಾಕು’. ಕಾರ್ಗಿಲ್ ಯುದ್ಧದ ರಣರಂಗ. ಅದೇ ಕಾರ್ಗಿಲ್ ಯುದ್ಧದ ಒಂದು ಗುಡ್ಡಗಾಡು. ವಂಚಕ ಹೇಡಿ ಪಾಕಿಸ್ತಾನೀ ನುಸುಳುಕೋರರ ಹಾಗೂ ಭಾರತೀಯ ಸೇನೆಯ ತುಕಡಿಯೊಂದರ ನಡುವಣ ಕಾಳಗ. Right now, ಆ ಕಾಳಗದ ಕ್ಲೈಮ್ಯಾಕ್ಸ್. ಒಬ್ಬ ಕ್ಯಾಪ್ಟನ್, ಅದೇ ಮೇಲೆ ಹೇಳಿದ್ದೆನಲ್ಲ ಆತ. ತನಗಿಂತ ಮೊದಲು ಹೋಗಬೇಕಿದ್ದ ಸುಬೇದಾರನಿಗೆ “तू बाल-बच्चेदार है, हट जा पीचे” ಅಂತ ಕೂಗಿದ. “ನಿನಗೆ ಮಕ್ಕಳು ಮರಿ ಇದಾವ. ನಡೀಲೆ ಆಚೆ!” ಅಂತ ಅರ್ಥ! ಹೋಲ್ಡ್ ಡೌನ್, ಈತನೇನು ಜೀವನ ಸಾಕಾದವನಲ್ಲ, ಈತನ ಕಾಲುಭಾಗ ಜೀವನವೂ ಮುಗಿದಿರಲಿಲ್ಲ. ಅವನಿಗಾಗ 24ರ ಹರೆಯ! ತಾನು ಮುಂದುವರೆದ. ಗುಂಡೇಟು ತಿಂದ, ಎಡವಿದ, ದಾಳಿಗೆ ಎದೆಗೊಟ್ಟ, ಆದರೂ ತ್ರಿವಿಕ್ರಮನಂತೆ ನುಗ್ಗಿದ. ಕೊನೆಗೊಮ್ಮೆ, ಅಲ್ಲೇ ‘जय माता दि ‘ ಅಂತ ಕೂಗಿ ಯುದ್ಧಾಂಕಣದಲ್ಲೇ ಕೊನೆಯುಸಿರೆಳೆದ. ಕೊನೆಯುಸಿರೆಳೆಯುವ ಮುನ್ನ ಉಸಿರಿಗೊಬ್ಬನಂತೆ ಐದು ಶತ್ರು ಸೈನಿಕರನ್ನ ಕೊಂದ. ಅವರ ತೀರ ಹತ್ತಿರಕ್ಕೆ, ಅಂದರೆ ಶತ್ರುವಿನ  ಸುಮಾರು ಒಂದು ಮಾರು ಹತ್ತಿರದಿಂದ ಅವರ ಎದೆಗೆ ಗುಂಡು ಹೊಕ್ಕಿಸಿದ. ಇವನ ಶೌರ್ಯ ಇಲ್ಲಿಗೆ ಮುಗಿಯುವುದಿಲ್ಲ, ಇಲ್ಲಿಂದ ಶುರುವಾಗುವುದೂ ಇಲ್ಲ. ಮುಂದೆ ಓದಿ. ನೆನಪಿರಲಿ, ಈತ ಭಾರತದ ಅತ್ಯುನ್ನತ ಶೌರ್ಯ ಪ್ರಶಸ್ತಿ ಪಡೆದವ. ‘ದಿ ಪರಮವೀರ ಚಕ್ರ’ವನ್ನು ಯುದ್ಧದಲ್ಲಿ ಭಾಗವಹಿಸಿದವರಿಗೆಲ್ಲ ಕೊಡುವುದಿಲ್ಲ! It is not surely a satisfactory certificate! ಆತನ ಹೆಸರೊಂದನ್ನು ಹೇಳಿಬಿಡುತ್ತೇನೆ, ಅದು ‘ವಿಕ್ರಮ್ ಬಾತ್ರಾ’!

ಮತ್ತಷ್ಟು ಓದು »