ನಾಳೆ ಬಿಡುಗಡೆಯಾಗಲಿರುವ ನಿಲುಮೆ ಪ್ರಕಾಶನದ ಪುಸ್ತಕಗಳ ಪರಿಚಯ
ಬುದ್ಧಿಜೀವಿಗಳ ಮೂಢನಂಬಿಕೆಗಳು :
ಭಾರತೀಯ ಸಮಾಜದ ಕುರಿತು ಇಂದು ಪ್ರಚಲಿತದಲ್ಲಿರುವ ಥಿಯರಿಗಳು ಕ್ರೈಸ್ತ ಥಿಯಾಲಜಿಯ ಪೂರ್ವಗ್ರಹಗಳೇ ವಿನಃ ನಿಜವಾದ ಥಿಯರಿಗಳಲ್ಲ. ನಿಜವಾದ ಥಿಯರಿಗಳನ್ನು ಕಟ್ಟುವ ಕೆಲಸ ಇನ್ನು ಮುಂದೆ ನಡೆಯಬೇಕಿದೆ. ಈಗ ಸಮಾಜ ವಿಜ್ಞಾನಿಗಳಿಂದ ಆಗಬೇಕಾಗಿರುವ ಕೆಲಸವೆಂದರೆ ನಿಜವಾದ ಸಾಮಾಜಿಕ ಸಿದ್ಧಾಂತಗಳನ್ನು ರೂಪಿಸುವುದು. ಅಂದರೆ ಪಾಶ್ಚಾತ್ಯರು ಪ್ರಾರಂಭಿಸಿದ ಸಮಾಜ ವಿಜ್ಞಾನದ ತಿಳಿವಳಿಕೆಯನ್ನು ನಮ್ಮ ಅನುಭವದ ಬೆಳಕಿನಲ್ಲಿ ಪರಿಷ್ಕರಿಸುತ್ತ ಬೆಳೆಸುವುದು. ಇದೊಂದು ಅಗಾಧವಾದ ಕೆಲಸ ಹಾಗೂ ಅನೇಕ ತಲೆಮಾರುಗಳ ಕೆಲಸ.
ಇಂದು ಸಮಾಜ ವಿಜ್ಞಾನದ ಸತ್ಯಗಳು ಒಬ್ಬನು ಯಾವ ಜಾತಿ, ಲಿಂಗ ಅಥವಾ ಮತಕ್ಕೆ ಸೇರಿದ್ದಾನೆ ಎಂಬುದನ್ನು ಅವಲಂಬಿಸಿ ನಿರ್ಣಯವಾಗುವ ಪರಿಸ್ಥಿತಿ ಇದೆ. ಇದೊಂದು ರೀತಿಯ ಕುರುಡು. ಇದನ್ನೇ ಬುದ್ಧಿಜೀವಿಗಳ ಮೌಢ್ಯ ಎಂದು ಕರೆಯಲು ಬಯಸುತ್ತೇನೆ. ಅಂದರೆ ಇದು ನಿಜವಾಗಿಯೂ ವೈಜ್ಞಾನಿಕ ಚಿಂತನೆಯ ಕುರಿತ ಹಾಗೂ ಸಾಮಾಜಿಕ ಥಿಯರಿಗಳನ್ನು ಕಟ್ಟುವ ಕುರಿತ ಮೌಢ್ಯ. ಇವರೆಲ್ಲ ಭಾರತೀಯ ಸಂಸ್ಕೃತಿಯಲ್ಲಿರುವ ಮೂಢನಂಬಿಕೆಗಳನ್ನು ತೊಡೆಯುವ ಕುರಿತು ಮಾತನಾಡುತ್ತಿದ್ದಾರೆ. ಆದರೆ ಅಂಥ ಭಾರತೀಯ ಸಂಸ್ಕೃತಿ ಹಾಗೂ ಸಮಾಜದ ಕುರಿತ ಇವರ ವಿಚಾರಗಳೇ ಮೂಢನಂಬಿಕೆಗಳ ಸರಣಿಯಾಗಿವೆ ಎಂಬುದು ಒಂದು ವಿಪರ್ಯಾಸ.
ಕೊಟ್ಟಕುದುರೆಯನೇರಲರಿಯದೆ :
ವಚನಗಳು ಜಾತಿ ವಿರೋಧಿ ಚಳವಳಿಯೆಂದು ಒತ್ತಾಯಿಸುವ ಚಿಂತಕರು, ಆಧ್ಯಾತ್ಮ ಸಾಧನೆಯ ಆರಂಭದ ಹಂತದಲ್ಲಿ ಬರುವ ಕೆಲವೇ ಕೆಲವು ವಚನಗಳಲ್ಲಿನ ವಿಚಾರವನ್ನೇ ಇಡಿಯಾಗಿ ವಚನ ಸಂಪ್ರದಾಯಕ್ಕೆ ಆರೋಪಿಸುವ ತಪ್ಪು ಮಾಡುತ್ತಾರೆ. ಷಟ್ ಸ್ಥಲ ಕಲ್ಪನೆಯ ಮೂಲಕ ನೋಡುವುದಾದರೆ, ಅಲ್ಲಮ ಬಸವಣ್ಣನವರಂಥ ಆತ್ಮಜ್ಞಾನಿಗಳನ್ನು ಇವರು ಭಕ್ತಸ್ಥಲ ಮತ್ತು ಮಾಹೇಶ್ವರಸ್ಥಲದ ಆಚೆಗೆ ಹೋಗದ, ಅಂದರೆ ತಮ್ಮ ಭವವೇ ಹಿಂಗಿರದ ಹೊಡೆಯುತ್ತಿರುವ ಸಾಧಾರಣ ಭಕ್ತರು ಎಂಬಂತೆ ಚಿತ್ರಿಸಿ ಅದನ್ನು ಜಗತ್ತಿನಲ್ಲೆಲ್ಲಾ ಸಾರುತ್ತಿದ್ದಾರೆ. ಅಷ್ಟೇ ಅಲ್ಲ ಅದೇ ಅವರ ಹೆಚ್ಚುಗಾರಿಕೆ ಎಂದು ಒತ್ತಾಯಿಸುತ್ತಿದ್ದಾರೆ. ನಮಗೆ ಇಂದು ಯಾವ ಚಿತ್ರಣ ಬೇಕು? ಬಸವಣ್ಣನವರ ಕುರಿತು ಭಾರತೀಯ ಪರಂಪರೆಯು ಒದಗಿಸುವ ಚಿತ್ರಣವೊ ಅಥವಾ ಪಾಶ್ಚಾತ್ಯ ಪರಂಪರೆಯು ಒದಗಿಸುವ ಚಿತ್ರಣವೊ?
ವಚನಗಳ ಈಗಿನ ಓದಿನಲ್ಲಿರುವ ಕೊರತೆಯನ್ನು ತೆಗೆದು ತೋರಿಸಿ ಅವನ್ನು ಸರಿಪಡಿಸುವ ತುರ್ತು ಅಗತ್ಯ ಇಂದು ನಮ್ಮ ಮುಂದಿದೆ.ಈ ಕೃತಿಯಲ್ಲಿರುವ ಲೇಖನಗಳು ಈ ನಿಟ್ಟಿನಲ್ಲಿ ಬಾಲಗಂಗಾಧರರ ಸಂಶೋಧನಾ ತಂಡದ ಅಲ್ಪ ಕಾಣಿಕೆಗಳು. ನಾವು ಬೆಳೆದು ಬಂದ ಸಂಪ್ರದಾಯಗಳು ಸತ್ತ ಪಳೆಯುಳಿಕೆಗಳಲ್ಲ, ಅವನ್ನು ನಮಗೆ ಬೇಕಾದಂತೇ ಬೇಕಾಬಿಟ್ಟಿಯಾಗಿ ಉಪಯೋಗಿಸಿ ಬಿಸಾಡಲು ಬರುವುದಿಲ್ಲ, ಹಾಗೂ 21ನೆಯ ಶತಮಾನದಲ್ಲೂ ಕೂಡ ಅವು ತಮ್ಮ ಸತ್ವವನ್ನು ಹಾಗೂ ಪ್ರಸ್ತುತತೆಯನ್ನು ಉಳಿಸಿಕೊಂಡಿವೆ ಎಂದು ನಮ್ಮಂತೆ ನಂಬುವವರನ್ನು ಉದ್ದೇಶಿಸಿ ಈ ಲೇಖನಗಳನ್ನು ಬರೆಯಲಾಗಿದೆ
ನಮ್ಮ ಪ್ರಕಾಶನದ ಮೊದಲ ಪುಸ್ತಕ, “ಬೌದ್ಧಿಕ ದಾಸ್ಯದಲ್ಲಿ ಭಾರತ” ಪುಸ್ತಕ ದೊರೆಯುವ ಬಗ್ಗೆ ಮಾಹಿತಿ
ಕಂಡವರ ಮಕ್ಕಳನ್ನು ಕಾಡಿಗಟ್ಟುತ್ತಿರುವವರು ಯಾರು?
– ವಿಘ್ನೇಶ್, ಯಲ್ಲಾಪುರ
ಮೊನ್ನೆ ಮೊನ್ನೆ ನಡೆದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆಯನ್ನು ನೋಡಿ ಕೆಲವು ಪ್ರಗತಿಪರರು “ಯೋಧ”ರನ್ನು ಕುರಿತು,ಬಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಾರೆ ಎಂದು ಬೊಬ್ಬೆ ಹಾಕುತಿದ್ದರು.ಇದು 24 – 11- 2008ರಂದು ಕನ್ನಡ ಪ್ರಭದಲ್ಲಿ ಪ್ರಕಟವಾಗಿದ್ದ ಲೇಖನ.ಈ ಲೇಖನವನ್ನೊಮ್ಮೆ ಓದಿ.ಕಂಡವರ ಮಕ್ಕಳನ್ನು ಬಾವಿಗೆ ತಳ್ಳಿದವರು ಯಾರು ಎಂಬುದು ಅರ್ಥವಾಗಬಹುದು
ಅವಳು ಪಾರ್ವತಿ!
ಕೊಪ್ಪ ತಾಲೂಕಿನ ಸೂರ್ಯದೇವಸ್ಥಾನದ ಹುಡುಗಿ. ಕಾಲೇಜು ವಿದ್ಯಾಭ್ಯಾಸಕ್ಕೆಂದು ಹೋಗಿ ಸೇರಿದ್ದು ಶಿವಮೊಗ್ಗೆಯನ್ನು. ತನ್ನ ಕುಟುಂಬದಲ್ಲಿದ್ದ ಬಡತನ ಅವಳಲ್ಲಿ ಸಾಮಾಜಿಕ ಕಳಕಳಿಯನ್ನು ಹುಟ್ಟುಹಾಕಿತ್ತು; ಶಿವಮೊಗ್ಗದಲ್ಲಿದ್ದಷ್ಟು ವರ್ಷವೂ ಒಂದಲ್ಲ ಒಂದು ಸಾಮಾಜಿಕ ವಿಷಯದ ಕುರಿತು ಹೋರಾಟ ಮಾಡಲು ಪ್ರೇರೇಪಿಸಿತ್ತು. ಅದಕ್ಕಾಗಿ ವಿವಿಧ ಸಂಘಟನೆಗಳನ್ನು ಸೇರಿದಳು. ‘ಮಹಿಳಾ ಜಾಗೃತಿ’ಯ ಕಾರ್ಯಕರ್ತೆಯಾಗಿ ಹಗಲಿರುಳು ದುಡಿದಳು, ನಾಯಕಿಯಾಗಿ ಬೆಳೆದಳು. ಶಿವಮೊಗ್ಗದ ಕೆಲ ಉಪನ್ಯಾಸಕರು ದೂರದ ಆಂಧ್ರದಿಂದ ಗದ್ದರ್ನನ್ನು ಕರೆಸಿ ನಡೆಸಿದ ಸಭೆಗಳಲ್ಲಿ ನಡುರಾತ್ರಿಯವರೆಗೂ ಭಾಗವಹಿಸಿದಳು. ರೈತ ಹೋರಾಟದಿಂದ ಹಿಡಿದು ನದೀಮೂಲ ರಕ್ಷಣೆಯಂತಹ ವಿಷಯದವರೆಗೆ, ಕಾಲೇಜು ವಿದ್ಯಾರ್ಥಿನಿಯರ ಸಮಸ್ಯೆಯಿಂದ ಹಿಡಿದು ಕೊಳಚೆ ನಿವಾಸಿಗಳ ದನಿಯಾಗುವವರೆಗೆ ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಂಡಳು. ಹೀಗೆ ಅತ್ಯಂತ ಕ್ರಿಯಾಶೀಲಳಾಗಿದ್ದ ಹುಡುಗಿ, ಇದ್ದಕ್ಕಿದ್ದಂತೆ ಒಂದು ದಿನ ಕಣ್ಮರೆಯಾದಳು. ನಾಲ್ಕೈದು ವರ್ಷ ಪಾರ್ವತಿ ಎಲ್ಲಿದ್ದಾಳೆ ಎಂಬುದೇ ನಾಗರಿಕ ಸಮಾಜಕ್ಕೆ ತಿಳಿದಿರಲಿಲ್ಲ. ಸಮಾಜದ ಕುರಿತು ಅಪಾರ ಕಳಕಳಿಯನ್ನಿಟ್ಟುಕೊಂಡು ಹಗಲಿರುಳೂ ಸೈಕಲ್ ತುಳಿಯುತ್ತಿದ್ದ ಹುಡುಗಿ ಹೀಗೆ ಇದ್ದಕ್ಕಿದಂತೆ ಕಣ್ಮರೆಯಾಗಿದ್ದು ಏಕೆ? ಎಲ್ಲಿ ಹೋದಳು?
ಈ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, 2003ರ ನವೆಂಬರ್ 17ನೇ ತಾರೀಖು. ಕಾರ್ಕಳ ತಾಲೂಕಿನ ಈದು ಬಳಿಯ ಬೊಲ್ಲೊಟ್ಟುವಿನ ಮನೆಯೊಂದರಲ್ಲಿ ರಾತ್ರಿ ಸಿಡಿದ ಪೋಲೀಸರ ಗುಂಡಿನ ಬೆಳಕಲ್ಲಿ ಪಾರ್ವತಿ ಗೋಚರಿಸಿದಳು. ಹರೆಯದ ಕನಸುಗಳೆಲ್ಲ ಅರಳಿ,ಬದುಕಿನ ಗಾಂಭೀರ್ಯದತ್ತ ಹೊರಳಬೇಕಾದ ವಯಸ್ಸಿನಲ್ಲಿ ಪಾರ್ವತಿ ಹೆಣವಾಗಿ ಬಿದ್ದಿದ್ದಳು! ಅವಳ ಜೊತೆಗೇ ಮಸಣ ಸೇರಿದ ಹಾಜಿಮಾಳ ಕಥೆಯೂ ಇದಕ್ಕಿಂತ ಭಿನ್ನವೇನಲ್ಲ! ಮತ್ತಷ್ಟು ಓದು