ವಿಷಯದ ವಿವರಗಳಿಗೆ ದಾಟಿರಿ

Archive for

6
ಆಗಸ್ಟ್

ಯಾಕೂಬ್ ಮೆಮನ್ ಗಲ್ಲಿಗೆ ಕಂಬನಿ ಮಿಡಿದ ಜೀವಪರ ಮನಸ್ಸುಗಳು

– ಪ್ರವೀಣ್ ಕುಮಾರ್,ಮಾವಿನಕಾಡು

Nilume Sulsuddi - Yakoob Menonಗಲ್ಲಿಗೇರಿ ಸತ್ತ 1993 ರ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ,ನತದೃಷ್ಟ ಭಯೋತ್ಪಾದಕ ಯಾಕೂಬ್ ಮೆಮನ್ ನ ಸ್ಮರಣಾರ್ಥ ಹಾಳ್ ಟೌನ್ ನಲ್ಲಿ ಇಂದು ನಡೆದ ಸಂತಾಪ ಸೂಚಕ ಸಭೆಯಲ್ಲಿ ಭಾರತದ ನ್ಯಾಯ ವ್ಯವಸ್ಥೆಯ ವಿರುದ್ಧ ರಾಜ್ಯದ ಹಲವು ಪ್ರಮುಖ ಜೀವಪರ ಮನಸ್ಸುಗಳ ಆಕ್ರೋಶ ಸ್ಫೋಟಗೊಂಡಿತು.

ಆತನನ್ನು 257 ಜನರ ಸಾವಿಗೆ ಕಾರಣನೆನ್ನಲಾಗುತ್ತಿದೆ.ಒಂದು ವೇಳೆ ಅಂದು ಸ್ಥಳದಲ್ಲಿ ಆ 257 ಜನ ಇಲ್ಲದಿರುತ್ತಿದ್ದರೆ ಆತ ಕೊಲೆಗಾರನಾಗಲು ಹೇಗೆ ಸಾಧ್ಯವಾಗುತ್ತಿತ್ತು?ಆದ್ದರಿಂದ ಆ ಘಟನೆಗೆ ಆ 257 ಜನ ಮತ್ತು ಗಾಯಗೊಂಡ ವ್ಯಕ್ತಿಗಳೇ ಕಾರಣವೇ ಹೊರತೂ ಯಾಕೂಬ್ ಮೆಮನ್ ಅಲ್ಲ.257 ಜನ ಮಾಡಿದ ತಪ್ಪಿಗೆ ಅಮಾಯಕನೊಬ್ಬನನ್ನು ನಮ್ಮ ವ್ಯವಸ್ಥೆಯೇ ನೇಣು ಬಿಗಿದು ಕೊಂದು ಹಾಕಿತು ಎಂದು ಕರ್ನಾಟಕ ರಾಜ್ಯದ ಹಿರಿಯ ಬುದ್ಧಿಜೀವಿ ಬಾಯ್ಕಟ್ ಬೀಬಿ ಆಕ್ರೋಶ ವ್ಯಕ್ತಪಡಿಸಿದರು.

ಆತನಿಗೆ ಕ್ಷಮಾದಾನ ನೀಡಿದ್ದರೆ ಈ ರಾಷ್ಟ್ರ ಭಯೋತ್ಪಾದನೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂಬ ಶಕ್ತಿಯುತ ಸಂದೇಶವನ್ನು ಜಗತ್ತಿಗೆ ಸಾರುವ ಅವಕಾಶವಿತ್ತು!ಅನ್ಯಾಯವಾಗಿ ಭಾರತ ಅಂತಹಾ ಸುವರ್ಣಾವಕಾಶವನ್ನು ಕಳೆದುಕೊಂಡಿತು ಎಂದು ಕರ್ನಾಟಕ ರಾಜ್ಯ ಕಾರ್ಯಮರೆತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಾಗೂ ಸದ್ಯದ ಪ್ರಗತಿಪರಬುದ್ಧಿಜೀವಿಪತ್ರಕರ್ತರಾಜಕಾರಣಿಯೊಬ್ಬರು ವ್ಯಾಖ್ಯಾನಿಸಿದರು.”ಮನುಷ್ಯರನ್ನು ಗಲ್ಲಿಗೇರಿಸುವುದು ಈ ದೇಶವನ್ನು ಸುರಕ್ಷಿತವಾಗಿಸುವುದಿಲ್ಲ ಬದಲಾಗಿ ನಮ್ಮನ್ನು ಕೆಳಕ್ಕೆ ನೂಕುತ್ತದೆ” ಎಂದು ಅವರು ಪ್ರತಿಪಾದಿಸಿದರು. ಕೇಂದ್ರದಲ್ಲಿ ನಾವು ಬೆಂಬಲಿಸುತ್ತಿರುವ ಸರ್ಕಾರವಿದ್ದಿದ್ದರೆ ಖಂಡಿತಾ ಇಂತಹಾ ಘಟನೆಗಳು ನಡೆಯಲು ಬಿಡುತ್ತಿರಲಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಮತ್ತಷ್ಟು ಓದು »

6
ಆಗಸ್ಟ್

ಶತಮಾನ ಕಂಡ ಕಾದಂಬರಿ: ಮಾಡಿದ್ದುಣ್ಣೋ ಮಹಾರಾಯ

– ರಾಘವೇಂದ್ರ ಅಡಿಗ ಎಚ್ಚೆನ್

ಮಾಡಿದ್ದುಣ್ಣೋ ಮಹಾರಾಯಸ್ನೇಹಿತರೇ ನಾನಿಲ್ಲಿ ಹೇಳ ಹೊರಟಿರುವ ಕಾದಂಬರಿ ಕನ್ನಡ ಕಾದಂಬರಿಗಳಲ್ಲೆಲ್ಲಾ ಅತ್ಯಂತ ಪ್ರಮುಖವಾದದ್ದು ಹಾಗೂ ಒಂದು ಶತಮಾನವನ್ನು ಕಂಡಂತದೂ ಆಗಿದೆ. ಕನ್ನಡದಲ್ಲಿ ಕಾದಂಬರಿ ಪ್ರಕಾರವನ್ನು ಜನಪ್ರಿಯಗೊಳಿಸಿದವರು ಕಾರಂತರು, ಅ.ನ.ಕೃ. ಮುಂತಾದವರಾದರೆ ಕಾದಂಬರಿ ಪ್ರಕಾರವನ್ನು ಹುಟ್ಟುಹಾಕಿದವರು ಗುಲ್ವಾಡಿ ವೆಂಕಟರಾವ್ (ಇಂದಿರಾಬಾಯಿ-ಕನ್ನಡದ ಮೊದಲ ಸಾಮಾಜಿಕ ಕಾದಂಬರಿ) ಮೈಸೂರು ಸೂರ್ಯನಾರಾಯಣ ಭಟ್ಟ ಪುಟ್ಟಣ್ಣ (ಎಂ.ಎಸ್. ಪುಟ್ಟಣ್ಣ) ನವರುಗಳು. ಇದರಲ್ಲಿ ಎಂ.ಎಸ್. ಪುಟ್ಟಣ್ಣನವರು ಬರೆದ ಪ್ರಥಮ ಕಾದಂಬರಿ-ಮಾಡಿದ್ದುಣ್ಣೋ ಮಹಾರಾಯ (1915) ಗೆ ಇದೀಗ ಶತಮಾನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಕೃತಿಕಾರರಾದ ಪುಟ್ಟಣ್ಣ ಹಾಗೂ ಕೃತಿಯ ಕುರಿತಂತೆ ನಾಲ್ಕು ಮಾತುಗಳನ್ನು ನಿಮ್ಮೊಡನೆ ಹಂಚಿಕೊಳ್ಳುವ ಇರಾದೆ ನನ್ನದು.

ಅನೇಕರಿಗೆ ಇದಾಗಲೇ ಪುಟ್ಟಣ್ಣನವರ ಬಗೆಗೆ ತಿಳಿದಿರಬಹುದು ಆದರೂ ಇಲ್ಲಿ ಅವರ ಜೀವನದ ಕುರಿತಂತೆ ಸ್ವಲ್ಪ ತಿಳಿದುಕೊಂಡು ಬಳಿಕ ಕಾದಂಬರಿಯ ಕುರಿತು ವಿಚಾರ ಮಾಡೋಣ

ಪುಟ್ಟಣ್ಣ (ಲಕ್ಷ್ಮೀನರಸಿಂಹ ಶಾಸ್ತ್ರಿ)ನವರು ಹುಟ್ಟಿದ್ದು ಮೈಸೂರಿನಲ್ಲಿ (21-11-1854). ತಂದೆ ಸೂರ್ಯನಾರಾಯಣ ಭಟ್ಟ, ತಾಯಿ ಲಕ್ಷ್ಮಮ್ಮ. ಹುಟ್ಟಿದ ಹತ್ತು ದಿವಸದಲ್ಲೇ ತಾಯಿಯನ್ನು ಕಳೆದುಕೊಂಡು ಬೆಳದದ್ದು ಸೋದರ ಮಾವನ ಮನೆಯಲ್ಲಿ. ಪ್ರಾರಂಭಿಕ ವಿದ್ಯಾಭ್ಯಾಸ ಖಾಸಗಿ ಮಠಗಳಲ್ಲಿ ಪೂರೈಸಿದ ಪುಟ್ಟಣ್ಣನವರು ಬಳಿಕ ರಾಜಾ ಸ್ಕೂಲಿನಲ್ಲಿ (ಇಂದಿನದ ಮಹಾರಾಜಾ ಕಾಲೇಜು) ಎಫ್. ಎ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಕೋಲಾರದ ಪ್ರೌಢಶಾಲೆಯಲ್ಲಿ ಸಹ ಅಧ್ಯಾಪಕರಾಗಿ ನೇಮಕಗೊಂಡರು.ಮದರಾಸಿನಲ್ಲಿ ಬಿ.ಎ. ಪದವಿ ವ್ಯಾಸಂಗವನ್ನು ಮುಗಿಸಿದ ಇವರು ಅಧ್ಯಾಪಕ ಪದವಿ ಬಿಟ್ಟು ಬೆಂಗಳೂರಿನ ಚೀಫ್ ಕೋರ್ಟಿನಲ್ಲಿ (ಈಗಿನ ಹೈಕೋರ್ಟಿನಲ್ಲಿ) ಭಾಷಾಂತರಕಾರರಾಗಿ ದುಡಿದರು. 1867 ರಲ್ಲಿ ಅವರನ್ನು ಚಿತ್ರದುರ್ಗದ ಅಮಲ್ದಾರನ್ನಾಗಿ ನೇಮಿಸಲಾಯಿತು. ಮುಂದೆ ನೆಲಮಂಗಲ, ಚಾಮರಾಜನಗರ, ಬಾಗೇಪಲ್ಲಿ, ಮುಳಬಾಗಿಲು, ಹೊಸದುರ್ಗಗಳಲ್ಲಿ  ಅಮಲ್ದಾರರಾಗಿ  ಕಾರ್ಯ ನಿರ್ವಹಿಸಿದರು. ಬೆಂಗಳೂರಿನ ತೆರಿಗೆದಾರರ ಸಂಘಟಕರಾಗಿದ್ದ ಅವರು ಆ ದಿನಗಳಲ್ಲಿಯೇ ದಾಖಲೆಗಳನ್ನು ಕನ್ನಡದಲ್ಲಿ ಮೂಡಿಸಲು ಕಾರಣರಾದರು. ಮತ್ತಷ್ಟು ಓದು »