ವಿಷಯದ ವಿವರಗಳಿಗೆ ದಾಟಿರಿ

Archive for

11
ಆಗಸ್ಟ್

ನಾಡು-ನುಡಿ ಮರುಚಿಂತನೆ : ಬೌದ್ಧ ಮತ – ಸಂಘ ಮತ್ತು ಸಂಸಾರ

– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ

ಬುದ್ಧನಾವು ಇಂದು ಓದುತ್ತಿರುವ ಬೌದ್ಧ ಮತದ ಜನಪ್ರಿಯ ಇತಿಹಾಸದಲ್ಲಿ ಒಂದು ಸಮಸ್ಯೆಯಿದೆ. ಅದೆಂದರೆ ನಾವು ಕ್ರಿಶ್ಚಿಯಾನಿಟಿ ಹಾಗೂ ಇಸ್ಲಾಮಿನ ಮಾದರಿಗಳನ್ನಿಟ್ಟುಕೊಂಡು ಅವುಗಳ ಲಕ್ಷಣಗಳನ್ನು ಆರೋಪಿಸಿಕೊಂಡು ಬೌದ್ಧ ಮತ ಎಂಬುದನ್ನು ಊಹಿಸಿಕೊಳ್ಳುತ್ತಿರುತ್ತೇವೆ. ಅಂದರೆ ಬೌದ್ಧ ಮತವನ್ನು ಒಂದು ರಿಲಿಜನ್ನು ಎಂಬದಾಗಿ ಭಾವಿಸಿಕೊಂಡು ಪಾಶ್ಚಾತ್ಯ ವಿದ್ವಾಂಸರು ಮೊತ್ತಮೊದಲು ಅದನ್ನು ಅಧ್ಯಯನಕ್ಕೊಳಪಡಿಸಿದರು ಹಾಗೂ ಅವರನ್ನನುಸರಿಸಿ ಭಾರತೀಯರೂ ಇಂಥ ಅಧ್ಯಯನಗಳನ್ನು ಮುಂದುವರಿಸಿದರು.

ಬೌದ್ಧ ಮತದ ಕುರಿತು ನಮ್ಮ ಜನಪ್ರಿಯ ಇತಿಹಾಸದ ಪ್ರಕಾರ ಬುದ್ಧನು ಬುದ್ಧಿಸಂ ಎಂಬ ಒಂದು ಹೊಸ ಜಾತ್ಯತೀತ ಸಮಾಜದ ಹುಟ್ಟಿಗೆ ಕಾರಣನಾದನು. ಅವನು ಮಾಡಿದ ಉಪದೇಶಗಳು ಅವನ ಅನುಯಾಯಿಗಳ ಜೀವನವನ್ನು ನಿರ್ದೇಶಿಸುವ ನಿಯಮಗಳಾದವು. ಇಂಥ ನಿಯಮಗಳನ್ನು ತಿಳಿಸುವ ಬೌದ್ಧರ ಪವಿತ್ರ ಗ್ರಂಥವೇ ಪಾಳಿ ತ್ರಿಪಿಟಕ. ಇಂಥ ನಿಯಮಗಳಾದರೂ ಯಾವವು? ನಮಗೆ ಸದ್ಯಕ್ಕೆ ಗೊತ್ತಿರುವುದು ಒಂದೇ ಒಂದು ನಿಯಮ: ಅದೆಂದರೆ ಜಾತಿ ಭೇದವನ್ನು ನಿರಾಕರಿಸಿದ್ದು. ಅಂದರೆ ಬೌದ್ಧರ ಆಚರಣೆಗಳಲ್ಲಿ ಜಾತಿಯನ್ನಾಧರಿಸಿ ತರತಮಗಳನ್ನಾಗಲೀ, ವ್ಯತ್ಯಾಸವನ್ನಾಗಲೀ ಮಾಡುವಂತಿಲ್ಲ. ಬೌದ್ಧ ಸಂಘಗಳೆಂದರೆ ಚರ್ಚುಗಳಂತೇ. ಅವುಗಳ ಕೆಲಸ ಬೌದ್ಧರಲ್ಲದವರನ್ನು ಬೌದ್ಧ ಮತಕ್ಕೆ ಪರಿವರ್ತನೆ ಮಾಡುವುದು. ಬೌದ್ಧ ಮತದ ಜಾತ್ಯತೀತತೆಗೆ ಮನಸೋತು ವರ್ಣ ಸಮಾಜದಲ್ಲಿ ಸಾಮಾಜಿಕ ಸ್ಥಾನಮಾನಗಳನ್ನು ಕಳೆದುಕೊಂಡ ಜಾತಿಗಳೆಲ್ಲವೂ ಬೌದ್ಧರಾಗಿ ಸಮಾನತೆಯನ್ನು ಪಡೆದರು.ಈ ರೀತಿಯಲ್ಲಿ ಬೌದ್ಧ ಮತವು ಭಾರತ ಹಾಗೂ ಪೂರ್ವ ಏಶಿಯಾದಲ್ಲೆಲ್ಲ ಜನಪ್ರಿಯತೆಯನ್ನು ಪಡೆದು ವ್ಯಾಪಿಸಿಕೊಂಡಿತು. ಆದರೆ ಮಧ್ಯಕಾಲದಲ್ಲಿ ಭಾರತೀಯರೆಲ್ಲರೂ ಮತ್ತೆ ಬೌದ್ಧ ಮತವನ್ನು ಬಿಟ್ಟು ಹಿಂದೂಯಿಸಂಗೇ ಸೇರಿಕೊಂಡರು. ಬೌದ್ಧ ಮತವು ಭಾರತದಲ್ಲಿ ಅವನತಿ ಹೊಂದಿತು.  ಆದರೆ ಉಳಿದೆಡೆ ಉಳಿದುಕೊಂಡಿತು.
ಮತ್ತಷ್ಟು ಓದು »