ಯು. ಆರ್. ಅನಂತಮೂರ್ತಿಯವರ “ಪ್ರಜ್ಞೆ ಮತ್ತು ಪರಿಸರ”
–ಡಾ. ಪ್ರವೀಣ ಟಿ. ಎಲ್,ಕುವೆಂಪು ವಿಶ್ವವಿದ್ಯಾನಿಲಯ
ಕಳೆದ ವರ್ಷ ತುಂಬಾ ಚರ್ಚೆಯಲ್ಲಿದ್ದು, ಈಗ ನಮ್ಮೊಂದಿಗಿಲ್ಲದ ಹಿರಿಯ ಸಾಹಿತಿ ಯು. ಆರ್ ಅನಂತಮೂರ್ತಿ. ಅವರು ಮೋದಿ ವಿರುದ್ಧ ನೀಡಿದ ಹೇಳಿಕೆಯಿಂದ ಹಿಡಿದು, ಅವರ ಅಂತ್ಯ’ಸಂಸ್ಕಾರ’ದ ನಂತರವೂ ಸುದ್ದಿಯಲ್ಲಿದ್ದರು. ಆ ಸಂದರ್ಭದಲ್ಲಿ ಅವರನ್ನು ಅರ್ಥಮಾಡಿಕೊಳ್ಳಲು ಸ್ವತಃ ಅವರ ಸಮರ್ಥಕರಿಗೂ, ವಿಮರ್ಶಕರಿಗೂ ಸ್ವಲ್ಪ ತ್ರಾಸವೇ ಆಯಿತು. ಆಗ ಕೆಲವರು ಅನಂತಮೂರ್ತಿಯವರ ನಿಲುವನ್ನು ‘ಕಪಟತನ’ ಎಂದು ಒರಟಾಗಿಯೂ, ಇನ್ನು ಕೆಲವರು ‘ದ್ವಂಧ್ವ’ ಎಂದೂ ತೀರ್ಪಿತ್ತರು. ಅವರ ಗ್ರಹಿಕೆಯ ಸಂಪೂರ್ಣ ಚಿತ್ರಣವನ್ನು ನೀಡುವುದು ಈ ಲೇಖನದ ವ್ಯಾಪ್ತಿಯಲ್ಲಿ ಅಸಾಧ್ಯ. ಆದರೆ ಅವರು ಹಿಂದೂ ಸಂಪ್ರದಾಯಗಳ ‘ಆಂತರಿಕ ವಿಮರ್ಶಕ’ರಾಗಿ ಜೀವನದುದ್ದಕ್ಕೂ ಅದರ ಆಚರಣೆಗಳನ್ನು ಟೀಕಿಸುತ್ತಾ ಬಂದವರು, ಕೊನೆಗೆ ಆ ಸಂಪ್ರದಾಯದಂತೆಯೇ ತನ್ನ ಸಂಸ್ಕಾರ ನಡೆಯಬೇಕೆಂದು ಇಚ್ಚಿಸಿದ್ದು ದೊಡ್ಡ ಚರ್ಚೆಗೆ ಗ್ರಾಸವಾಯಿತು. ಈ ನಡೆಯು ಅವರ ಪ್ರಗತಿಪರ ಮಿತ್ರರಿಗೆ ನುಂಗಲಾರದ ತುತ್ತಾಗಿದ್ದು ಈಗ ಇತಿಹಾಸ. (ಅವರ ಕಾದಂಬರಿಯ ನಾರಾಣಪ್ಪನವರ ಸಂಸ್ಕಾರದಂತೆ ತನ್ನ ಸಂಸ್ಕಾರ ದೊಡ್ಡ ಸವಾಲಾಗದಿರಲಿ ಎಂದು ಬ್ರಾಹ್ಮಣ ಪರಂಪರೆಯಂತೆ ತಮ್ಮ ಅಂತ್ಯಸಂಸ್ಕಾರವಾಗಬೇಕೆಂಬ ಇಚ್ಚೆಯನ್ನು ವ್ಯಕ್ತಪಡಿಸಿದರೇನೋ!!) ಆದರೆ ಹೀಗ್ಯಾಕೆ ಮಾಡಿದರು ಎಂಬ ಪ್ರಶ್ನೆಗೆ ಬಹುತೇಕರು ಸಮರ್ಪಕ ಉತ್ತರ ಹುಡುಕುವ ಬದಲಿಗೆ, ಅದನ್ನು ಬ್ರಾಹ್ಮಣರ ಕುತಂತ್ರಕ್ಕೋ, ಕಪಟತನಕ್ಕೋ ಸಂಬಂಧ ಕಲ್ಪಿಸಿ ಕೈತೊಳೆದುಕೊಂಡರು. ಆದರೆ ಅದನ್ನು ಗ್ರಹಿಸಲು ಯತ್ನಿಸಿದ ಕೆಲವರು ‘ಮೇಷ್ಟ್ರು ನಮ್ಮ ನಂಬಿಕೆಗೆ ಮೋಸ ಮಾಡಿದರು’ ಎಂದು ಅಲವತ್ತುಕೊಳ್ಳುವಲ್ಲಿಯೇ ತೃಪ್ತಿಹೊಂದಿದರು. ಆ ದ್ವಂದ್ವವನ್ನು ಅರ್ಥೈಸುವ ಚಿಕ್ಕ ಪ್ರಯತ್ನವೇ ಈ ಬರಹ.
ಆನುದೇವಾ ಹೊರಗಣವನು ಸೆಕ್ಯುಲರಿಸಂನಿಂದ
– ರಾಕೇಶ್ ಶೆಟ್ಟಿ
ಅರಸರ ಆಡಳಿತದಲ್ಲಿದ್ದು ಆ ನಂತರ ದಶಕಗಳಿಗೂ ಹೆಚ್ಚು ಕಾಲದ ಮಾವೋವಾದಿಗಳ ಹಿಂಸಾಚಾರದ ನಂತರ ಅರಸರ ಆಡಳಿತಕ್ಕೆ ತಿಲಾಂಜಲಿಯಿಟ್ಟು ಪ್ರಜಾಪ್ರಭುತ್ವವನ್ನು ಅಪ್ಪಿಕೊಂಡ ನೇಪಾಳಿಗಳು ಮತ್ತು ನೇಪಾಳ ಹೆಜ್ಜೆ-ಹೆಜ್ಜೆಗೂ ಸವಾಲುಗಳನ್ನು ಎದುರಿಸುತ್ತಲೇ ಸಾಗುತ್ತಲಿದೆ.ಪ್ರಜಾಪ್ರಭುತ್ವಕ್ಕೆ ಕಾಲಿಟ್ಟಂತೆ,ಹೊಸ ಸಂವಿಧಾನ ರಚಿಸುವ ನಿರ್ಧಾರಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಬಂದಿದ್ದರೂ ೨೦೦೬ರಿಂದ ಈ ಪ್ರಕ್ರಿಯೆ ನಾನಾ ವಿಘ್ನಗಳಿಂದ ಕುಂಟುತ್ತಲೇ ಸಾಗಿದೆ.ಇತ್ತೀಚೆಗೆ ನಡೆದ ಪ್ರಬಲ ಭೂಕಂಪದ ನಂತರ ದೊಡ್ಡ ಮನಸ್ಸು ಮಾಡಿ ಎಲ್ಲಾ ರಾಜಕೀಯ ಪಕ್ಷಗಳೂ ಒಗ್ಗೂಡಿ ಮತ್ತೆ ಈ ಕಾರ್ಯಕ್ಕೆ ಜೈ ಎಂದಿದ್ದವು.ಈಗ ಕಾರ್ಯ ಶುರುವಾದಂತೆ ಬಹಳಷ್ಟು ಪರ-ವಿರೋಧ ಪ್ರತಿಭಟನೆ ಚರ್ಚೆಗಳು ಶುರುವಾಗಿವೆ.
ಅವುಗಳಲ್ಲಿ ಒಂದು,ನೇಪಾಳದ ಭಾಗಗಳನ್ನು ಜನರ ಆಚರಣೆ-ಭಾಷೆಯ ಮೇಲೆ ಪ್ರತ್ಯೇಕವಾಗಿಸುವುದನ್ನು ವಿರೋಧ ವ್ಯಕ್ತವಾಗುತ್ತಿದೆ.ಈ ನಡೆ ಮುಂದೆ ನೇಪಾಳವನ್ನು ಇನ್ನಷ್ಟು ಚೂರು ಚೂರು ಮಾಡಲಿದೆ ಎಂಬ ದೂರದೃಷ್ಟಿಯುಳ್ಳವರು ನೇಪಾಳದಲ್ಲಿರುವುದು ನೇಪಾಳಿಗಳ ಪುಣ್ಯವೇ ಸರಿ.ಬಹುಷಃ ಅವರು ಭಾರತದ ಸ್ಥಿತಿಯಿಂದ ಪಾಠ ಕಲಿತಿರಬಹುದು.ಅದರಲ್ಲೂ ಮುಖ್ಯವಾಗಿ ಭಾರತದ ಈಶಾನ್ಯ ರಾಜ್ಯಗಳನ್ನು ನೋಡಿ.ಒಂದೆಡೆ ಮಿಷನರಿಗಳ ಚಿತಾವಣೆ,ಮತ್ತೊಂದೆಡೆ ಜನಾಂಗೀಯ ಆಧರಿತ ಉಗ್ರಪಡೆಗಳ ಹಿಂಸಾಚಾರಗಳಿಂದ ಈಗಾಗಲೇ ಎಂಟು ರಾಜ್ಯಗಳಾಗಿರುವ ಈಶಾನ್ಯ ಭಾಗವೂ ಇನ್ನೂ ಚೂರುಚೂರಾಗುವ ಆಂತಕವಿದ್ದೇ ಇದೆ.ಈಶಾನ್ಯ ರಾಜ್ಯಗಳ ಉದಾಹರಣೆಯೇಕೆ.ನೆರೆಯ ತಮಿಳುನಾಡಿನಲ್ಲಿಯೇ ಭಾಷೆ ಮತ್ತು ನಮ್ಮ ಸಂಸ್ಕೃತಿಯಗೇ ಪರಕೀಯವಾದ ’ದ್ರಾವಿಡ ಜನಾಂಗೀಯ’ ಎಂಬ ಹುಚ್ಚು ಕಲ್ಪನೆಯ ಚಳುವಳಿಯ ನೆಪದಲ್ಲಿ ಏನೆಲ್ಲಾ ಅಧ್ವಾನಗಳಾಯಿತು ಎಂಬುದನ್ನು ನೋಡಿದರೆ ಸಾಕಲ್ಲವೇ? ಈ ನಿಟ್ಟಿನಲ್ಲಿ ನೋಡಿದಾಗ ನೇಪಾಳಿಗಳ ಆತಂಕ ಸರಿಯಾಗಿದೆ ಎನಿಸುತ್ತದೆ.