ವಿಷಯದ ವಿವರಗಳಿಗೆ ದಾಟಿರಿ

Archive for

9
ಸೆಪ್ಟೆಂ

ಅಂಬೇಡ್ಕರ್ ಮತ್ತು ಮಾರ್ಕ್ ವಾದ

– ಡಾ. ಜಿ. ಭಾಸ್ಕರ ಮಯ್ಯ

ಅಂಬೇಡ್ಕರ್-ಕಾರ್ಲ್ ಮಾರ್ಕ್ಸ್ಬಹಳ ಕಾಲದಿಂದಲೂ ಬುದ್ಧಿಜೀವಿಗಳ ವಲಯದಲ್ಲಿ ಅಂಬೇಡ್ಕರ್ ಮತ್ತು ಮಾರ್ಕ್ಸ್ ವಾದದ ಬಗೆಗೆ ಚರ್ಚೆಯಿದೆ. ಮಾರ್ಕ್ಸ್ ವಾದಿ ಕಮ್ಯೂನಿಸ್ಟ್ ಪಕ್ಷದ ಬುದ್ಧಿಜೀವಿಗಳು ಅಂಬೇಡ್ಕರರ ಕೊಡುಗೆ ಮತ್ತು ಭಾರತದ ಇತಿಹಾಸದಲ್ಲಿ ಅವರ ಸ್ಥಾನಮಾನಗಳ ಕುರಿತು ಸ್ಪಷ್ಟವಾಗಿ ಚರ್ಚಿಸಿದ್ದಾರೆ. ಈ ಕುರಿತು ಬಿ.ಟಿ. ರಣದಿವೆಯವರ “ಜಾತಿ ಮತ್ತು ವರ್ಗ” ಕೃತಿಯನ್ನು ನೋಡಬಹುದು. ಆದರೆ, ಬಹಳಷ್ಟು ಇತರೇ ಬುದ್ಧಿಜೀವಿಗಳಿಗೆ ಅಂಬೇಡ್ಕರ್ ಅವರು ಮಾರ್ಕ್ಸ್ ವಾದಕ್ಕೆ ಅತಿನಿಕಟ ಎಂತಲೊ ಅಥವಾ ಅಂಬೇಡ್ಕರ್‍ರದ್ದೇ ನಿಜವಾದ ಮಾರ್ಕ್ಸ್ ವಾದ ಎಂತಲೊ ಭ್ರಮೆಯಿದೆ.

ಇತ್ತೀಚೆಗೆ ವಿಜಯಕರ್ನಾಟಕದಲ್ಲಿ ಬರಗೂರು ರಾಮಚಂದ್ರಪ್ಪನವರ “ಕೆರಳಿದ ಕರುಳ ಧ್ವನಿ ಅಂಬೇಡ್ಕರ್” ಎಂಬ ಲೇಖನ ಪ್ರಕಟವಾಗಿದೆ. ಇಲ್ಲಿಯೂ ಅಂತಹ ಒಂದು ವಿಲಕ್ಷಣ ಭ್ರಮಾಪ್ರಯತ್ನವನ್ನು ನೋಡಬಹುದು. ಈ ಕುರಿತು ಒಂದು ಚರ್ಚೆ ಪ್ರಸ್ತುತ ಲೇಖನದ ಉದ್ದೇಶ. ಮೊದಲಿಗೆ ಬರಗೂರರು ಅಂಬೇಡ್ಕರರ ಮೂರು ಹೇಳಿಕೆಗಳನ್ನು (ಅವುಗಳಲ್ಲಿ 2, 3 ಮಾರ್ಕ್ಸ್ ವಾದವನ್ನು ಎತ್ತಿ ಹಿಡಿಯುತ್ತವೆ) ಉಲ್ಲೇಖಿಸಿ ಅದರ ಮೇಲೆ ತಮ್ಮ ಚರ್ಚೆಯನ್ನು ಆರಂಭಿಸುತ್ತಾರೆ.

ಗಾಂಧೀಜಿ ವರ್ಗರಹಿತ ಸಮಾಜದ ಪ್ರತಿಪಾದಕರಲ್ಲ
ಗಾಂಧೀಜಿಯವರ ಕುರಿತು ಬರಗೂರು “ಆರಂಭದಲ್ಲಿ ಜಾತಿವರ್ಣಗಳನ್ನು ತಮ್ಮದೇ ವ್ಯಾಖ್ಯಾನದ ಮೂಲಕ ಸಮರ್ಥಿಸುತ್ತಿದ್ದ ಗಾಂಧೀಜಿ ಆನಂತರ ಜಾತಿ ಮತ್ತು ವರ್ಗರಹಿತ ಸಮಾಜದ ನಿರ್ಮಾಣವನ್ನು ಪ್ರತಿಪಾದಿಸಿದರು” ಎಂದಿದ್ದಾರೆ. ಜಗತ್ತಿನ ಯಾವ ಮಾರ್ಕ್ಸ್ ವಾದಿಯೂ ಮೈಮರೆತು ಕೂಡಾ ಗಾಂಧೀಜಿ ವರ್ಗರಹಿತ ಸಮಾಜದ ಪ್ರತಿಪಾದಕರು ಎಂದು ಹೇಳಿಲ್ಲ. ಏಕೆಂದರೆ ಗಾಂಧೀಜಿ ಎಂದೂ ವರ್ಗರಹಿತ ಸಮಾಜ ನಿರ್ಮಾಣದ ಕನಸು ಕಂಡಿಲ್ಲ. ಭಾರತದ ಅತ್ಯುನ್ನತ ಮಟ್ಟದ ಮಾರ್ಕ್ಸ್ ವಾದಿಗಳಾದ ಡಾಂಗೆ, ಯಶ್‍ಪಾಲ್,ಇಎಂಎಸ್ ನಂಬೂದಿರಿ ಪಾಡ್-ಎಲ್ಲರೂ ಗಾಂಧೀಜಿಯ ಒಟ್ಟು ಐತಿಹಾಸಿಕ ಪಾತ್ರ ಬಂಡವಾಳಿಗರ ವರ್ಗವನ್ನು ಹೇಗೆ ಪ್ರತಿನಿಧಿಸುತ್ತಿತ್ತು ಎಂಬುದನ್ನೇ ವಿಶದೀಕರಿಸಿದ್ದಾರೆ. ಗಾಂಧೀಜಿಯವರ ಅತ್ಯಂತ ಯಥಾರ್ಥ
ಮೌಲ್ಯಮಾಪನವನ್ನು ಇಎಂಎಸ್ ತಮ್ಮ “ಗಾಂಧಿ ಎಂಡ್ ಹಿಸ್ ಇಸಮ್” ಕೃತಿಯಲ್ಲಿ ವಿವರವಾಗಿ ದಾಖಲಿಸಿದ್ದಾರೆ. ನನಗನ್ನಿಸುವಂತೆ ಬಹಳಷ್ಟು ಬುದ್ಧಿಜೀವಿಗಳಿಗೆ “ವರ್ಗ” ಎಂಬ ವಿಶೇಷ ಪದದ ಅರ್ಥವೇ ತಿಳಿದಿಲ್ಲ! ಅದರಿಂದಾಗಿಯೇ ಇಂತಹ ಅವಾಂತರಗಳು ಉಂಟಾಗುತ್ತವೆ.

ಮತ್ತಷ್ಟು ಓದು »