ವಿಷಯದ ವಿವರಗಳಿಗೆ ದಾಟಿರಿ

Archive for

10
ಸೆಪ್ಟೆಂ

ಸುಳ್ಸುದ್ದಿ : ಉದ್ಯಮಿಗಳಿಬ್ಬರ ದೇವರ ಕೋಣೆಗಳು ಇನ್ನು ಮುಜರಾಯಿ ಇಲಾಖೆಯ ವಶಕ್ಕೆ!!

– ಪ್ರವೀಣ್ ಕುಮಾರ್ ಮಾವಿನಕಾಡು

Nilume Sulsuddi - Mujarayi Ilakheಹೂವು,ಹಣ್ಣು,ಅಗರಬತ್ತಿ,ಕರ್ಪೂರ ಮುಂತಾದ ಪೂಜಾ ಸಾಮಗ್ರಿಗಳ ಖರೀದಿಯ ಲೆಕ್ಕ ಪತ್ರಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ನೀಡಿ ಬೆಂಗಳೂರಿನ ಇಬ್ಬರು ಉದ್ಯಮಿಗಳ ಪೂಜಾ ಗೃಹಗಳನ್ನು ಮುಜರಾಯಿ ಇಲಾಖೆಯ ವಶಕ್ಕೆ ಪಡೆಯುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ! ಉದ್ಯಮಿಗಳ ವಿರುದ್ದ ಅವರ ಹೆಂಡತಿ ಹಾಗೂ ಮಕ್ಕಳಿಂದ ಸಲ್ಲಿಕೆಯಾಗಿರುವ ದೂರುಗಳ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತರು ಮತ್ತು ಜಿಲ್ಲಾಧಿಕಾರಿ ಮಟ್ಟದಲ್ಲಿ ಪರಿಶೀಲನೆ ನಡೆಸಿದ ನಂತರ ಮುಂದಿನ ಕ್ರಮಗಳು ಜರುಗಲಿವೆ.ಈ ಬಗ್ಗೆ ಈಗಾಗಲೇ ಇಲಾಖೆಯ ಕಾನೂನು ತಜ್ಞರಿಂದ ಅಭಿಪ್ರಾಯ ನಿರೀಕ್ಷಿಸಲಾಗುತ್ತಿದ್ದು,ಅವರಿಂದ ಶಿಫಾರಸು ಬಂದ ನಂತರ ಇಲಾಖೆಯ ಆಯುಕ್ತರು ಅಗತ್ಯ ಕಾನೂನು ಕ್ರಮಕೈಗೊಳ್ಳುತ್ತಾರೆ ಎಂದು ಮುಜರಾಯಿ ಸಚಿವರು ತಿಳಿಸಿದರು.
ಇದಕ್ಕೂ ಮುನ್ನ ಒಬ್ಬ ಉದ್ಯಮಿಯ ಪತ್ನಿ,ತನ್ನ ಪತಿ ನನ್ನನ್ನು ತುಂಬಾ ಹಣ ಖರ್ಚಾಗುತ್ತದೆ ಎನ್ನುವ ಕಾರಣವೊಡ್ಡಿ ಶಾಪಿಂಗ್ ಗೆ ಕರೆದು ಕೊಂಡು ಹೋಗುವುದಿಲ್ಲ, ಆದರೆ ಪ್ರತೀ ತಿಂಗಳೂ ಸಂಕಷ್ಟ ಹರ ಗಣಪತಿ ವ್ರತಕ್ಕಾಗಿ ಸಾವಿರಾರು ರೂ.ಖರ್ಚು ಮಾಡುತ್ತಾರೆ.ಜೊತೆಗೆ ಖರ್ಚು ಮಾಡಿದ ಹಣದ ಲೆಕ್ಕ ಕೊಡಿ ಎಂದರೆ ಅದನ್ನೂ ಕೊಡುತ್ತಿಲ್ಲ ಎಂದು ದೂರು ದಾಖಲಿಸಿದ್ದರು.

ಇನ್ನೊಬ್ಬ ಉದ್ಯಮಿಯ ಪುತ್ರ,ನನ್ನ ತಂದೆ ತುಂಬಾ ಹಣ ಖರ್ಚಾಗುತ್ತದೆ ಎಂದು ನನ್ನ ಬಹು ದಿನದ ಬೇಡಿಕೆಯಾದ ಸೈಕಲ್ ಕೊಡಿಸಿರಲಿಲ್ಲ.ಆದರೆ ಮೊನ್ನೆ ಮೊನ್ನೆ ವರಮಹಾ ಲಕ್ಷ್ಮಿ ಹಬ್ಬಕ್ಕೆ ಸುಮಾರು ಹತ್ತು ಸಾವಿರ ರೂ.ಗಳಿಗಿಂತಾ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಮತ್ತು ಇದ್ಯಾವುದಕ್ಕೂ ಸರಿಯಾದ ಲೆಕ್ಕ ಪತ್ರವನ್ನೂ ಇಟ್ಟಿಲ್ಲ ಎಂದು ದೂರು ದಾಖಲಿಸಿದ್ದನು.
ಮತ್ತಷ್ಟು ಓದು »