ವಿಷಯದ ವಿವರಗಳಿಗೆ ದಾಟಿರಿ

Archive for

6
ಆಕ್ಟೋ

ಎತ್ತಿನ ಹೊಳೆ ಯೋಜನೆ: ವಿರೋಧಿಸುವುದಕ್ಕೂ ಕಾರಣಗಳಿವೆ!

– ಪ್ರಸಾದ್ ಕುಮಾರ್,ಮಾರ್ನಬೈಲ್

ನೇತ್ರಾವತಿ ಉಳಿಸಿಒಂದೆಡೆ ಕಳಸಾ ಬಂಡೂರಿ ಯೋಜನೆ. ಇನ್ನೊಂದೆಡೆ ಎತ್ತಿನಹೊಳೆ ನದಿ ತಿರುವು ಯೋಜನೆ.  ಒಂದರಲ್ಲಿ ಉತ್ತರಕರ್ನಾಟಕದ ಜನರ ಆಕ್ರೋಶವಾದರೆ ಇನ್ನೊಂದರಲ್ಲಿ ಕರಾವಳಿಗರ ಆಕ್ರೋಶ. ವಿಚಿತ್ರವೆಂದರೆ ಅತ್ಯವಶ್ಯಕವಾಗಿರುವ ಕಳಸಾ ಬಂಡೂರಿ ವಿಚಾರದಲ್ಲಿ ಅಂಗೈ ಅಗಲದ ಗೋವಾದ ರಾಜಕಾರಣದ ಮುಂದೆ ನಮ್ಮ ಸರಕಾರ ಕುಬ್ಜವಾಗಿ ಕೂತಿದ್ದರೆ,ಸಂಶಯಾಸ್ಪದವಾಗಿರುವ ಎತ್ತಿನಹೊಳೆಯ ವಿಚಾರದಲ್ಲಿ ಮಾತ್ರ ಅನಾವಶ್ಯಕ ಪೌರುಷದ ಪ್ರದರ್ಶನ ನೀಡುತ್ತಿದೆ! ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ಕಳಸಾ ಬಂಡೂರಿ ಯೋಜನೆಯೇನಾದರೂ ಜಾರಿಯಾದರೆ ಅದರಿಂದ ರಾಜ್ಯಕ್ಕೆ ಲಾಭವಲ್ಲದೆ ಯಾವ ವಿಧದ ನಷ್ಟವೂ ಇಲ್ಲ. ಆದರೆ ಅದೇ ಎತ್ತಿನ ಹೊಳೆ ಯೋಜನೆಯೇನಾದರು ಕಾರ್ಯರೂಪಕ್ಕೆ ಬಂತು ಎಂದಾದರೆ ಅದರಿಂದ ರಾಜ್ಯವು ಗಳಿಸುವುದಕ್ಕಿಂತಲೂ ಕಳೆದುಕೊಳ್ಳುವುದೇ ಅಧಿಕ! ಕರಾವಳಿಗರ ಭಾವನೆಗಳಿಗೆ ಬೆಲೆ ನೀಡದೆ ಅತ್ತ ಬಯಲು ಸೀಮೆಗೂ ಸರಿಯಾಗಿ ನೀರು ದೊರೆಯದೆ ಎಲ್ಲಾ ರೀತಿಯಲ್ಲೂ  ವಂಚನೆಗೈದಂತಾಗಲಿದೆ ಇಲ್ಲಿ! ಮೇಲಾಗಿ ಇದು ಸುಪ್ತವಾಗಿರುವ ಕರಾವಳಿಗರ ಪ್ರತ್ಯೇಕತೆಯ ಕೂಗಿಗೂ ಭವಿಷ್ಯದಲ್ಲಿ ಒಂದಷ್ಟು ಪುಷ್ಠಿ ನೀಡುವ ಸಾಧ್ಯತೆಯೂ ಇದೆ! ಮೇಲಾಗಿ ಇಲ್ಲಿ ಸಿಗುವ ನೀರಿನ ಬಗ್ಗೆಯೇ ದೊಡ್ಡ ಮಟ್ಟದ ಸಂಶಯವಿರುವುದರಿಂದ ಪೂರ್ಣ ಯೋಜನೆಯೇ ಅಂತಿಮವಾಗಿ ವಿಫಲವಾಗುವ ಸಾಧ್ಯತೆಯನ್ನೂ ಅಲ್ಲಗಳೆಯುವ ಹಾಗಿಲ್ಲ!

ಹಾಗಿದ್ದರೂ ಯಾಕಿಷ್ಟು ಆತುರ!?
ಮತ್ತಷ್ಟು ಓದು »