ವಿಷಯದ ವಿವರಗಳಿಗೆ ದಾಟಿರಿ

Archive for

20
ಆಕ್ಟೋ

ವಿಚಾರವ್ಯಾದಿ ಅಳಿದು ವಿಚಾರವಾದ ಬೆಳೆಯಲಿ

– ಅಮೃತ್ ಜೋಶಿ

ಮಂಡೆ ಮೊಸರುಸಂಶೋಧಕ ಡಾ. ಎಂ.ಎಂ.ಕಲ್ಬುರ್ಗಿ ಅವರ ಹತ್ಯೆಯ ದುರದುಷ್ಟಕರ ಪ್ರಕರಣ ಹಾಗೂ “ಭಗವಾನ ಉವಾಚ”ದಿಂದಾಗಿ ಇಡೀ ರಾಜ್ಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ವಿಚಾರವಾದ ಅಥವಾ ಪ್ರಗತಿಪರ ಚಿಂತನೆ- ಈ ಶಬ್ದಗಳ ಅರ್ಥ ಮತ್ತು ವ್ಯಾಪ್ತಿಯ ಬಗ್ಗೆ ಬಿಸಿಬಿಸಿಯಾದ ಮತ್ತೆ ಹಲವಡೆ ಹಸಿಹಸಿಯಾದ ಚರ್ಚೆ ನಡೆಯುತ್ತಿದೆ.

ಬಹಳಷ್ಟು ಚರ್ಚೆಗಳಲ್ಲಿ ಅಥವಾ ವಾದಗಳಲ್ಲಿ ಬೈಗಳ ಅಥವಾ ವಿತಂಡವಾದಗಳ ಮೂಲಕವೇ ತಮ್ಮ ಶ್ರೇಷ್ಟತೆಯನ್ನು ಸಾರಿ ಹೇಳಿಕೊಳ್ಳಬೇಕಾದ ಪರಿಸ್ಥಿತಿಯನ್ನು ನೋಡಿದರೆ ಅದು ಅವುಗಳ ಟೊಳ್ಳುತನವನ್ನು ಎತ್ತಿತೋರುತ್ತದೆ. ವಿಚಾರವಾದ ಅಥವಾ ಪ್ರಗತಿಪರ ಚಿಂತನೆ ತಮ್ಮಿಂದನೇ ಹುಟ್ಟಿಕೊಂಡಿದ್ದು, ಅದು ತಮ್ಮ ಸೈದಾಂತಿಕ ಗುತ್ತಿಗೆ ಎಂದೇ ಅನೇಕ ತಥಾಕಥಿತ ವಿಚಾರವಾದಿಗಳು ಭಾವಿಸಿದ್ದಾರೆ ಮತ್ತು ಅದಕ್ಕೆ ತಕ್ಕಂತೆ ವರ್ತಿಸುತ್ತಿದ್ದಾರೆ. ವ್ಯವಸ್ಥೆಯನ್ನು ದಿಕ್ಕರಿಸಿ, ಅದರ ವಿರುದ್ಧ ಬಂಡಾಯ ಸಾರುವವನೇ ವಿಚಾರವಾದಿ. ಅವನೇ ಸಮಾಜ ಸುಧಾರಕ, ಅವನೇ ಪ್ರಗತಿಪರ ಚಿಂತಕ ಎಂದು ಈವರೆಗೆ ನಮ್ಮೆಲ್ಲರಿಗೆ ನಮ್ಮ ಶಿಕ್ಷಣ ಪದ್ಧತಿ ಹೇಳಿಕೊಟ್ಟಿರುವ ಗಿಳಿಪಾಠವಾಗಿದೆ.

ಹಾಗಾದರೆ ತನ್ನ ಮನೆ ಸ್ವಚ್ಛವಾಗಿಲ್ಲ ಎಂದು ಮನೆಯಿಂದ ಹೊರಗೆ ನಿಂತು ತನ್ನ ಮನೆಯ ವ್ಯವಸ್ಥೆಯ ಬಗ್ಗೆ ದೋಷಿಸುತ್ತ, ಅವಹೇಳನ ಮಾಡುತ್ತ ಕಾಲ ಕಳೆಯುವವನು ಶ್ರೇಷ್ಟನೋ ಅಥವಾ ಅದೇ ವ್ಯವಸ್ಥೆಯಲ್ಲಿದ್ದು ಆ ಮನೆಯ ಸ್ವಚ್ಛತೆಯ ಬಗ್ಗೆ ಸದಾ ಕಾರ್ಯಮಗ್ನರಾಗಿರುವ ಮನೆಯ ಸದಸ್ಯ ಶ್ರೇಷ್ಟನೋ? ಈ ಹಿನ್ನೆಲೆಯಲ್ಲಿ ವಿಚಾರವಾದಿ, ಪ್ರಗತಿಪರ ಚಿಂತಕ, ಸಮಾಜ ಸುಧಾರಕರನ್ನು ಗುರುತಿಸುವುದೇ ನಿಜವಾದ ಮಾನದಂಡವಾಗಿದೆ.

ಮತ್ತಷ್ಟು ಓದು »