ಸುಳ್ಸುದ್ದಿ – ಪ್ರಶಸ್ತಿ ವಾಪಸ್ ಪ್ರಹಸನ : ಬೇಸ್ತುಬಿದ್ದ ಸಾಹಿತಿಗಳು
– ಪ್ರವೀಣ್ ಕುಮಾರ್,ಮಾವಿನಕಾಡು
ಘಟನೆ ಒಂದು:
ಅವರೊಬ್ಬ ಹಳೆಯ ಸಾಹಿತಿ.ಹಲವಾರು ವರ್ಷಗಳ ಹಿಂದೆ ಅವರಿಗೆ ಎರಡು ಲಕ್ಷ ನಗದಿನ ಜೊತೆಗೆ ಅಕಾಡೆಮಿ ಪ್ರಶಸ್ತಿ ಕೂಡಾ ದೊರಕಿತ್ತು.ಕೆಲ ದಿನಗಳ ಹಿಂದೆ ಟೌನ್ ಹಾಲ್ ಬಳಿ ಅವರನ್ನು ಭೇಟಿಯಾದ ವ್ಯಕ್ತಿಯೊಬ್ಬ,ವಿಚಾರವಾದಿಗಳ ಹತ್ಯೆಯನ್ನು ಖಂಡಿಸಿ, ಅರವತ್ತು ವರ್ಷದಲ್ಲಿ ದೇಶದಲ್ಲಿ ಎಂದೂ ಇಂತಹಾ ಘಟನೆ ನಡೆದಿಲ್ಲ ಎಂದು ಬಿಂಬಿಸುವ ಸಲುವಾಗಿ ಅದೇ ಕಾರಣವನ್ನು ನೀಡಿ ನಿಮಗೆ ನೀಡಲಾದ ಪ್ರಶಸ್ತಿ ಮತ್ತು ಪ್ರಶಸ್ತಿಯ ಜೊತೆ ದೊರೆತ ಹಣವನ್ನು ಅಕಾಡೆಮಿಗೆ ಮರಳಿಸಿದರೆ ಮುಂದೆ ರಚಿಸಲ್ಪಡುವ “ಗಂಜಿ ಗಿರಾಕಿಗಳ ಉದ್ಧಾರ ಸಮಿತಿ”ಗೆ ನಿಮ್ಮನ್ನೇ ಅಧ್ಯಕ್ಷರಾಗಿಸಲಾಗುವುದು ಮತ್ತು ಕ್ಯಾಬಿನೆಟ್ ದರ್ಜೆಯ ಸ್ಥಾನ ಮಾನ ನೀಡಲಾಗುವುದು ಎಂದು ಪುಸಲಾಯಿಸಿದ್ದಾನೆ.ಪ್ರಮುಖ ಪಕ್ಷವೊಂದರ ಹಿರಿಯ ನಾಯಕನೆಂದು ಹೇಳಿಕೊಂಡಿದ್ದ ಆತನ ಮಾತು ಕೇಳಿ 5 ಪರ್ಸೆಂಟ್ ಬಡ್ಡಿಗೆ ಹಣ ತಂದು ತಮ್ಮ ಬ್ಯಾಂಕ್ ಖಾತೆಗೆ ತುಂಬಿ ಚೆಕ್ ನ ಜೊತೆಗೆ ಪ್ರಶಸ್ತಿಯನ್ನೂ ತೆಗೆದುಕೊಂಡು ಹೋಗಿ ಅಕಾಡೆಮಿಗೆ ಮರಳಿಸಿ ಇಂದಿಗೆ ಹದಿನೈದು ದಿನವಾಯಿತು.ಇದುವರೆಗೂ ಆತನ ಕಡೆಯಿಂದ ಯಾವುದೇ ಸುದ್ದಿಯೂ ಇಲ್ಲ! ಆ ನಾಯಕನ ಮಾತು ಕೇಳಿ ಸಾಲ ಮಾಡಿ ಪ್ರಶಸ್ತಿ ಮರಳಿಸಿದ ಸಾಹಿತಿ ಈಗ,ಅತ್ತ ಹುದ್ದೆಯೂ ಇಲ್ಲ,ಇತ್ತ ಪ್ರಶಸ್ತಿ ಮತ್ತು ಹಣವೂ ಇಲ್ಲ ಎಂದು ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ!!
ಮತ್ತಷ್ಟು ಓದು
ಜನಸಾಮಾನ್ಯರಿಗಾಗಿ ಕಾವ್ಯ ಮತ್ತು ಕಾವ್ಯದಲ್ಲಿ ಸರಳತೆ
– ನಾಗೇಶ ಮೈಸೂರು
ಕೆಲವೊಮ್ಮೆ ನನಗನಿಸುತ್ತದೆ – ಚಲನಚಿತ್ರ ಗೀತೆಗಳಿಗೆ ಸಿಕ್ಕಷ್ಟು ಹೆಸರು, ಪ್ರಾಮುಖ್ಯತೆ ಒಳ್ಳೆಯ ಕಾವ್ಯ- ಕವಿತೆಗಳಿಗೆ ದೊರಕುತ್ತಿಲ್ಲವೆಂದು. ಎಲ್ಲಾ ಸ್ತರಗಳ ಹೆಚ್ಚು ಮನಸುಗಳನ್ನು ಚಲನಚಿತ್ರ ಗೀತೆಗಳು ತಲುಪುತ್ತದೆ ಎನ್ನುವುದು ನಿರ್ವಿವಾದ. ಆದರೆ ಅವುಗಳ ರೀತಿಯಲ್ಲೆ ಕವನಗಳ ಶ್ರೇಷ್ಠತೆ ಮುಖ್ಯವಾಹಿನಿಗೆ ಮುಟ್ಟುತ್ತಿಲ್ಲ ಅನ್ನುವುದು ಕೂಡ ಅಷ್ಟೇ ಸತ್ಯ.
ಕಾವ್ಯಕ್ಕು ಭಾವಕ್ಕು ಅವಿನಾಭಾವ ಸಂಬಂಧ. ಭಾವ ಜೀವಿಯೊಬ್ಬ ಬರಹಗಾರನಾಗಿರಲಿ, ಬಿಡಲಿ – ಅಂತರಂಗದ ಬಡಿತ ಝೇಂಕರಿಸಿದಾಗ ಸ್ಪುರಿಸುವ ಭಾವನೆ ಪದಗಳಾಗಿ ಹೊರಬಿದ್ದಾಗ ಕಾವ್ಯ ರೂಪದಲ್ಲಿರುವುದೆ ಹೆಚ್ಚು. ಭಾವನೆಯ ನವಿರು ಮತ್ತು ನಾವೀನ್ಯತೆಯನ್ನು ಪರಿಗಣಿಸಿ ಹೇಳುವುದಾದರೆ ಅದು ಕಾವ್ಯ ರೂಪದಲ್ಲಿರುವುದೆ ಸಹಜ ಗುಣ ಧರ್ಮ. ಈ ಭಾವ ಕೆಲವರಲ್ಲಿ ಕ್ಲಿಷ್ಠ ಕವನದ ರೂಪತಾಳಿದರೆ ಮತ್ತೆ ಕೆಲವರಿಗೆ ಸರಳ ಪದ ಕುಣಿತದ ಹಾಡಾಗಬಹುದು. ಮತ್ತಿತರರಿಗೆ ಎರಡು ಅಲ್ಲದ ನಡುವಿನ ಗಡಿಯ ತ್ರಿಶಂಕುವೂ ಆಗಬಹುದು. ಭಾವ ಗಣಿತದಲ್ಲಿ ಗಣನೆಗೆ ಬರುವುದು ಅದು ಆ ಗಳಿಗೆಯಲ್ಲಿರುವ ಮನಸ್ಥಿತಿಗನುಸಾರವಾಗಿ ಅಂಕೆಗಿಲ್ಲದೆ ಪ್ರಸ್ತಾವಗೊಳ್ಳುವ ರೀತಿಯೆ ಹೊರತು ಯಾವುದೆ ನೀತಿ ನಿಯಮಾವಳಿಗೊಳಪಟ್ಟ ನಿರ್ಬಂಧಿತ ಸರಕಲ್ಲ. ಹೀಗಾಗಿ ಅದು ಅದ್ಬುತವೂ ಆಗಿಬಡಿಬಹುದು, ಅನಾಥವೂ ಅನಿಸಿಬಿಡಬಹುದು.
ಇಷ್ಟಾದರೂ ಇಲ್ಲೊಂದು ವಿಲಕ್ಷಣ ವಿಪರ್ಯಾಸವಿದೆ. ಮೇಲ್ನೋಟಕ್ಕೆ ಇದು ಎದ್ದು ಕಾಣಿಸದಿದ್ದರು, ಸ್ವಲ್ಪ ಒಳಹೊಕ್ಕು ಆಳ ನೋಡಿ ಈಜಲು ಬಯಸಿದವರಿಗೆ ಇದು ಚಿರಪರಿಚಿತವೇ ಎನ್ನಬಹುದು. ಇದನ್ನು ಅರ್ಥ ಮಾಡಿಕೊಳ್ಳಲ್ಲು ಒಂದು ಉದಾಹರಣೆಯ ಮುಖೇನ ಯತ್ನಿಸುವುದು ಸೂಕ್ತವೆನಿಸುತ್ತದೆ. ಉತ್ತಮವಾಗಿಯೆ ಬರೆಯುವ ಸಾಮರ್ಥ್ಯವಿರುವ ಉದಯೋನ್ಮುಖ ಕವಿಯೊಬ್ಬ, ತಾನು ಬರೆದುದು ಹೆಚ್ಚು ಜನರಲ್ಲಿ ತಲುಪಲಿ ಎಂಬ ಅಶೆಯಿಂದ ಒಂದು ಪುಸ್ತಕವಾಗಿ ಪ್ರಕಟಿಸಲು ಬಯಸುತ್ತಾನೆ ಎಂದಿಟ್ಟುಕೊಳ್ಳೋಣ. ಅಲ್ಲಿಂದಲೆ ಆರಂಭ ತೊಂದರೆ. ಮೊದಲಿಗೆ ಅದನ್ನು ಪ್ರಕಟಿಸುವ ಇಚ್ಛೆಯಿರುವ ಪ್ರಕಾಶಕ ದೊರಕುವುದೆ ಕಷ್ಟ. ಸಿಗುವವರೆಲ್ಲ ಆ ಕ್ಷೇತ್ರದಲ್ಲಿ ಹೆಸರು ಮಾಡಿರುವವರ ಮೇಲಷ್ಟೆ ಬಂಡವಾಳ ಹಾಕಲು ಸಿದ್ದರಿರುತ್ತಾರೆಯೆ ಹೊರತು, ಹೊಸಬರ ಮೇಲಲ್ಲ. ಎಷ್ಟೊ ಸಲ ಬರೆದವರ ಪ್ರಕಟಿಸಬೇಕೆಂಬ ಹಂಬಲ, ಸ್ವಂತವಾಗಿ ಎಲ್ಲಾ ವೆಚ್ಚ ಭರಿಸಿ ಪುಸ್ತಕವಾಗಿಸುವುದರಲ್ಲಿ ಪರ್ಯಾವಸಾನವಾಗುವ ಪ್ರಕರಣಗಳು ಕಡಿಮೆಯೇನಲ್ಲ. ಆದರೆ ಅಲ್ಲಿಯೂ ಹೆಚ್ಚು ಜನರನ್ನು ತಲುಪೀತೆಂಬ ಆಶಯ ಕೈಗೂಡುವುದೆಂದು ಹೇಳುವಂತಿಲ್ಲ – ಮಾರುಕಟ್ಟೆಗೆ ತಲುಪಿಸುವ ರೀತಿ, ನೀತಿ, ವಿಧಾನಗಳ ಕೊರತೆಯಿಂದಾಗಿ. ಜತೆಗೆ ಕಥೆಯೊ, ಕಾದಂಬರಿಯೊ ಆದರೆ ಪ್ರಕಟಿಸಲು ಯಾರಾದರೂ ಸಿಕ್ಕಿದರೂ ಸಿಗಬಹುದು ; ಆದರೆ ಕಾವ್ಯವೆಂದ ತಕ್ಷಣ ಅರ್ಧಕರ್ಧ ಆಸಕ್ತಿಯೆ ತಗ್ಗಿ ಹೋಗುತ್ತದೆ. ಆ ಕಡಯಿಂದ ಫಕ್ಕನೆ ಬರುವ ಉತ್ತರ – ‘ಈ ದಿನಗಳಲ್ಲಿ ಕಾವ್ಯ, ಕವನ ಕೊಂಡು ಓದುವವರು ಕಮ್ಮಿ’ ಎಂಬುದಾಗಿ.
ಮತ್ತಷ್ಟು ಓದು