ವಿಷಯದ ವಿವರಗಳಿಗೆ ದಾಟಿರಿ

Archive for

6
ನವೆಂ

ಸುದ್ಧಿಮಾಧ್ಯಮ: ದೇಶ ಬೆನ್ನಿಗೆ ಕಟ್ಟಿಕೊಂಡ ಕೆಂಡ

– ಪ್ರೇಮಶೇಖರ

ಪೇಯ್ಡ್ ಮೀಡಿಯಾ26/11ರ ಮುಂಬೈ ಧಾಳಿಗಳ ರೂವಾರಿಯೊಬ್ಬ ಕರಾಚಿಯಿಂದ ಹೊರಡುತ್ತಿದ್ದ ಅಜ್ಮಲ್ ಕಸಾಬ್ ಸೇರಿದಂತೆ ಹತ್ತು ಭಯೋತ್ಪಾದಕರಿಗೆ ನೀಡಿದನೆನ್ನಲಾದ ‘ಉಪದೇಶ’ ಹೀಗಿತ್ತು: “ತಾಜ್ ಹೋಟೆಲ್ ಆಕ್ರಮಿಸಿಕೊಂಡ ನಂತರ ಯಾವುದಾದರೊಂದು ಕೋಣೆ ಸೇರಿ ಅಲ್ಲಿರುವ ಟೀವಿ ಚಾಲೂ ಮಾಡಿ ಭಾರತೀಯ ನ್ಯೂಸ್ ಚಾನಲ್ ಒಂದನ್ನು ನೋಡಿ.  ಭಾರತೀಯ ಭದ್ರತಾ ಪಡೆಗಳು ನಿಮ್ಮ ವಿರುದ್ಧ ಕೈಗೊಳ್ಳುತ್ತಿರುವ ತಂತ್ರಗಳ ಇಡೀ ವಿವರ ಅದರಲ್ಲಿ ನಿಮಗೆ ದೊರೆಯತೊಡಗುತ್ತದೆ.  ಅದಕ್ಕನುಗುಣವಾಗಿ ನಿಮ್ಮ ಪ್ರತಿತಂತ್ರಗಳನ್ನು ನೀವು ರೂಪಿಸಿಕೊಳ್ಳಬಹುದು.”  ನಮ್ಮ ಮಾಧ್ಯಮಗಳು ಅತ್ಯುತ್ಸಾಹದಿಂದ ಪ್ರಸಾರ ಮಾಡುತ್ತಿದ್ದ ವಿವರಗಳೇ ತಾಜ್ ಹೋಟೆಲ್ ಮೇಲೆ ಪಾಕ್ ಉಗ್ರರ ಹಿಡಿತ ದೀರ್ಘವಾಗಲು ಕಾರಣವಾಯಿತು ಎಂಬ ಕಟುವಾಸ್ತವದ ಹಿನ್ನೆಲೆಯಲ್ಲಿ ಆ ಪಾಕ್ ಭಯೋತ್ಪಾದಕ ನಮ್ಮ ಮಾಧ್ಯಮಗಳ ನಾಡಿಮಿಡಿತವನ್ನು ಅದೆಷ್ಟು ಚೆನ್ನಾಗಿ ಅರಿತಿದ್ದ ಎಂಬ ಕಹಿಸತ್ಯ ಎದೆಗೆ ನಾಟುತ್ತದೆ.  ಈ ಪೀಠಿಕೆಯೊಂದಿಗೆ ಭಯೋತ್ಪಾದನೆಯ ವಿಷಯದಲ್ಲಿ ನಮ್ಮ ಮಾಧ್ಯಮಗಳು ಅನುಸರಿಸುವ ಕುನೀತಿಯ ಪರಿಚಯ ಮಾಧ್ಯಮಗಳ ಬಗೆಗಿನ ಲೇಖನದ ಮೂರನೆಯ ಹಾಗೂ ಅಂತಿಮ ಕಂತಿನ ವಸ್ತುವಿಷಯ.  ನನ್ನ ಅವಲೋಕನವನ್ನು ಕಾಲು ಶತಮಾನದಷ್ಟು ದೀರ್ಘವಾದ ಕಾಶ್ಮೀರದಲ್ಲಿನ ಭಯೋತ್ಪಾದನೆಯೊಂದಿಗೆ ಪ್ರಾರಂಭಿಸುತ್ತೇನೆ.

ಮತ್ತಷ್ಟು ಓದು »