ಮಲೇಷ್ಯಾದಲ್ಲಿ ನರಕಯಾತನೆ ಅನುಭವಿಸುತಿದ್ದ ಯುವಕರಿಗೆ ಒಂದು ಈ-ಮೇಲ್ #ಅಚ್ಚೇದಿನ್ ತಂದ ಕಥೆ
– ಅರುಣ್ ಬಿನ್ನಡಿ
ಕಾಡಿ ಬೇಡಿದ್ದಕ್ಕೆ ದಿನಕ್ಕೆ ಸಿಗುತ್ತಿದ್ದದ್ದು ಕೇವಲ ಒಂದೊತ್ತು ಊಟ,ಭವಿಷ್ಯದ ಕನಸುಗಳು ಮೊಸದ ಜಾಲಕ್ಕೆ ಸಿಲುಕಿ ಕಣ್ಮರೆಯಾಗಿದ್ದವು,ಕತ್ತಲೆಯ ಕೊಣೆಯಲ್ಲಿ ೨೦ ದಿನಗಳಿಂದ ನರಕಯಾತನೆಯ ರೌದ್ರನರ್ತನ,ಅಷ್ಟಕ್ಕೂ ಹೇಗಾದರು ಈ ವಿಷವರ್ತುಲದಿಂದ ಜೀವವನ್ನಾದರು ಉಳಿಸಿಕೊಳ್ಳೊಣವೆಂದರೆ ಆ ದೇಶದಲ್ಲಿ ಯಾರು ಪರಿಚಿತರಿರಲಿಲ್ಲ,ಒಟ್ಟಿನಲ್ಲಿ ಆ ಯುವಕರ ಪಾಲಿಗೆ ಜಗತ್ತಿನ ಬೆಳಕು ನೊಡಲು ಯಾವ ದಾರಿಯು ಉಳಿದಿರಲಿಲ್ಲ,ಉದ್ಯೋಗ ಅರಸಿ ದೂರದ ಮಲೇಶಿಯಾಕ್ಕೆ ಹೋದ ನಮ್ಮ ಬೆಂಗಳೂರಿನ ಇಬ್ಬರು ಯುವಕರ ದಾರುಣ ಕಥೆ ಇದು.
ಬೆಂಗಳೂರಿನ ಕೆಂಗೇರಿಯ ರಾಜೀವ್ ಮತ್ತು ಪ್ರಭು ಎಂಬ ಯುವಕರಿಬ್ಬರು ಉದ್ಯೋಗಕ್ಕಾಗಿ ಮಲೇಷ್ಯಾಗೆ ತೆರಳಲು ನಿರ್ಧರಿಸಿದ್ದರು.ಆಗ್ರಾದಲ್ಲಿರುವ ಟ್ರಾವೆಲ್ ಏಜೆಂಟ್ ಇಬ್ಬರಿಂದಲೂ ತಲಾ ೨.೫೦ಲಕ್ಷ ಹಣವನ್ನು ಕೇಳಿದ್ದಾನೆ.ಈ ಹುಡುಗರು ಹಣ ನೀಡಿದ ಬಳಿಕ ಅವರಿಗೆ ಏರ್-ಟಿಕೇಟ್ ಕೊಟ್ಟು ಮಲೇಷ್ಯಾಗೆ ಕಳುಹಿಸಲಾಗಿದೆ.ಅಲ್ಲಿ ತಲುಪಿಕೊಂಡ ನಂತರ ತಿಳಿದುಬಂದಿದ್ದೇನೆಂದರೆ ಭಾರತದ ಏಜೆಂಟ್ ಅಲ್ಲಿನ ಏಜೆಂಟರಿಗೆ ದುಡ್ಡು ನೀಡಿರಲಿಲ್ಲ.ಅಲ್ಲಿನ ಏಜೆಂಟರು ಈ ಹುಡುಗರನ್ನು ೧೮ ದಿನಗಳ ಗೃಹಬಂಧನದಲ್ಲಿಟ್ಟು ದಿನಕ್ಕೆ ಒಂದೊತ್ತು ಊಟ ಮಾತ್ರ ನೀಡುತಿದ್ದರು ಮತ್ತು ಕುಟುಂಬದವರಿಗೆ ಕರೆ ಮಾಡಿಸಿ ಹಣಕ್ಕಾಗಿ ಬೇಡಿಕೆಯಿಡುತಿದ್ದರು.ಅತ್ತ ಆ ಯುವಕರು ಸಿಬು ಎಂಬ ಸಣ್ಣ ಪಟ್ಟಣದಲ್ಲಿ ಒಂದು ಕೋಣೆಯಲ್ಲಿ ಬಂಧಿತರಾಗಿ ಹೈರಾಣಗಿದ್ದರೇ,ಇತ್ತ ಹೆತ್ತವರಿಗೆ ದಿಕ್ಕು ತೋಚದಂತಾಗಿತ್ತು.ಈ ಸುದ್ದಿ ಕೆಂಗೇರಿ ಬಿಜೆಪಿಯ ಯುವಮುಖಂಡರಾದ ಅನಿಲ್ ಚಳಗೇರಿಯವರ ಗಮನಕ್ಕೆ ಬಂದಿದೆ.
ಇವರೆಲ್ಲ ಭಾರತೀಯ ಮುಸ್ಲಿಮರ ಹಿತಚಿಂತಕರೆ?
– ಪ್ರೊ.ರಾಜಾರಾಮ್ ಹೆಗಡೆ
ಪ್ರಾಧ್ಯಾಪಕರು, ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ, ಕುವೆಂಪು ವಿ.ವಿ
ಇತ್ತೀಚೆಗೆ ಯಾಕೂಬ್ ಮೆಮನ್ ಗಲ್ಲಿಗೇರಿದ ನಂತರ ದೇಶಾದ್ಯಂತ ಬಂದ ಪ್ರತಿಕ್ರಿಯೆಗಳಲ್ಲಿ ಒಂದು ಅಸಹಜತೆಯಿತ್ತು. ಮೊದಲನೆಯದಾಗಿ, ಕೆಲವರು ಮರಣ ದಂಡನೆ ಇರಬೇಕೇ ಬೇಡವೆ? ಎಂಬ ನೆಲೆಯಲ್ಲಿ ಚರ್ಚಿಸಿದರು. ಇದಕ್ಕೂ ಹಿಂದೆ ಎಷ್ಟೋ ಮರಣದಂಡನೆಗಳಾಗಿವೆ, ಇಷ್ಟು ಗಂಭಿರವಾಗಿ ನಾಗರಿಕರು ಚರ್ಚೆಯನ್ನೆತ್ತಿದ್ದು ನನ್ನ ಗಮನಕ್ಕೆ ಬಂದಿಲ್ಲ. ಸ್ವತಂತ್ರ ಭಾರತದಲ್ಲಿ ನಾಥೂರಾಮ ಗೋಡ್ಸೆಯ ಪ್ರಕರಣದಿಂದಲೇ ಇಂಥ ಉದಾಹರಣೆಗಳು ಪ್ರಾರಂಭವಾದವು. ಅವನ ಮರಣದಂಡನೆಯನ್ನು ತಡೆಯಬಹುದಿತ್ತೆಂದು ಈ ಮಾನವ ಹಕ್ಕುಗಳ ವಕ್ತಾರರಿಗೆ ಎಂದಾದರೂ ಅನ್ನಿಸಬಹುದೆ? ಹಾಗಾಗಿ ಈ ಕುರಿತು ಚರ್ಚೆ ನಡೆಸಬಯಸುವವರು ಇಂಥ ಕ್ಷುದ್ರತನದಿಂದ ಮೇಲೆ ಏರಬೇಕಾಗುತ್ತದೆ. ಎರಡನೆಯದಾಗಿ, ಯಾಕೂಬ್ ಅಪರಾಧಿಯಾಗಿದ್ದನೆ? ಎಂಬ ನೆಲೆಯಲ್ಲಿ ಕೂಡ ಹಲವರು ಚರ್ಚೆ ನಡೆಸಿದರು. ಈ ಚರ್ಚೆ ಕೂಡ ಈ ಸಂದರ್ಭದಲ್ಲೇ ಎದ್ದಿದ್ದು ಕುತೂಹಲಕಾರಿಯಾಗಿದೆ. ಏಕೆಂದರೆ ಅದು ನಮ್ಮ ನ್ಯಾಯದಾನದ ಕಾರ್ಯಕ್ಷಮತೆಯ ಕುರಿತ ಪ್ರಶ್ನೆ. ಆದರೆ ಯಾಕೂಬನಿಗೆ ಸಂಬಂಧಿಸಿದಂತೆ ನಡೆದಷ್ಟು ಅಳೆದು ತೂಗುವ ಕೆಲಸ ಹಿಂದೆಂದೂ ಇಂಥ ಸಂದರ್ಭಗಳಲ್ಲಿ ನ್ಯಾಯಾಲಯಗಳಲ್ಲಿ ನಡೆದಿರಲಿಲ್ಲ.
ಈ ಚರ್ಚೆಯನ್ನು ಗಮನಿಸಿದರೆ ಕೇವಲ ನ್ಯಾಯ ಅನ್ಯಾಯಗಳಷ್ಟೇ ಇಲ್ಲಿನ ಸಮಸ್ಯೆಯಲ್ಲ ಎಂಬುದಂತೂ ಸ್ಪಷ್ಟ. ಇದಕ್ಕೆ ಮುಸ್ಲಿಂ ಜನಾಂಗವನ್ನು ತಳಕುಹಾಕುತ್ತಿರುವುದು ಆತಂಕಕಾರಿ. ಕೆಲವರು, ರಾಜೀವಗಾಂಧಿ, ಇಂದಿರಾ ಗಾಂಧಿ ಹಂತಕರು ಹಿಂದೂಗಳು ಎಂಬ ಕಾರಣಕ್ಕಾಗಿ ರಕ್ಷಿಸಿ, ಯಾಕೂಬ್ ಮುಸ್ಲಿಮನೆಂಬ ಕಾರಣಕ್ಕೆ ಗಲ್ಲಿಗೆ ಏರಿಸುತ್ತಿದ್ದಾರೆ ಎಂದರು. ಅವರಿಗೆ ಗಾಂಧಿ ಹಂತಕರಿಗೆ ಏನಾಯಿತೆಂಬುದು ಮರೆತೇ ಹೋದಂತಿದೆ. ಇನ್ನೂ ಕೆಲವರು ಅಹಮದಾಬಾದ ಗಲಭೆಯ ರೂವಾರಿಗಳಿಗೆ ಪ್ರಧಾನ ಮಂತ್ರಿ ಪಟ್ಟದ ಸನ್ಮಾನ, ಬಾಂಬೆ ಗಲಭೆಯ ರೂವಾರಿಗೆ ಮರಣದಂಡನೆ ಎಂಬುದಾಗಿ ವಿಷಾದ ವ್ಯಕ್ತಪಡಿಸಿದರು. ಇವರಿಗೆಲ್ಲ ಅಹಮದಾಬಾದ ಗಲಭೆಯ ಹಿಂದೆ ಗೋಧ್ರಾದಲ್ಲಿನ ನೂರಾರು ಜನ ಹಿಂದೂ ಕರಸೇವಕರ ಜೀವಂತ ದಹನದ ಘಟನೆ ಇತ್ತೆನ್ನುವುದು ಮರೆತೇ ಹೋಗಿದೆ. ಅದಕ್ಕಿಂತ, ತದನಂತರ ಮುಸ್ಲಿಂ ಭಯೋತ್ಪಾದಕರಿಂದ ಇಂಥದ್ದೇ ಇತರ ಅನೇಕ ಹಿಂಸಾಕಾಂಡಗಳ ಸಂದರ್ಭದಲ್ಲಿ ಹಿಂದೂಗಳು ಹೀಗೇನೂ ಪ್ರತಿಕ್ರಿಯಿಸದೇ ಸಂಯಮಿಸಿಕೊಂಡಿದ್ದು ಮರೆತೇ ಹೋಗಿದೆ. ಆಶ್ಚರ್ಯವೆಂದರೆ ಮೋದಿಯನ್ನು ವಿರೋಧಿಸುವ ಭರದಲ್ಲಿ ಅನೇಕ ಸೆಕ್ಯುಲರ್ ಚಿಂತಕರೂ ಇಂಥ ಅಪಾಯದ ಹಾದಿಯನ್ನು ತುಳಿಯುತ್ತಿದ್ದಾರೆ.