ವಿಷಯದ ವಿವರಗಳಿಗೆ ದಾಟಿರಿ

Archive for

3
ಜನ

ಹಣದ ಹೊಳೆ ನಿಲ್ಲಿಸಿ, ಮೇಲ್ಮನೆ ಮಾನ ಉಳಿಸಿ

– ಎಸ್‌. ಸುರೇಶ್‌ ಕುಮಾರ್‌, ಮಾಜಿ ಸಚಿವರು,ಹಿರಿಯ ಬಿಜೆಪಿ ನಾಯಕ

ಎಸ್‌. ಸುರೇಶ್‌ ಕುಮಾರ್‌ಕರ್ನಾಟಕದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ 25 ಸದಸ್ಯರನ್ನು ಆಯ್ಕೆ ಮಾಡುವ ಚುನಾವಣೆ ಮುಗಿದು ಫ‌ಲಿತಾಂಶಗಳೂ ಪ್ರಕಟವಾಗಿವೆ. ಈಗೇನಿದ್ದರೂ ಆಯಾ ಪಕ್ಷ ಎಷ್ಟು ಸ್ಥಾನಗಳನ್ನು ಗೆದ್ದಿದೆ? ಸೋತಿರುವ ಕ್ಷೇತ್ರಗಳಲ್ಲಿ ಕಾರಣಗಳೇನು? ಎಂಬುದರ ಲೆಕ್ಕಾಚಾರ ನಡೆಯುವ ಸಮಯ. ಈ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳ ನಾಯಕರಿಗೆ ನನ್ನದೊಂದು ಈ ಮನವಿ ಪತ್ರ.

ಕೆಲವು ವರ್ಷಗಳ ಹಿಂದೆ ನನ್ನ ಮೊಬೈಲ್‌ಗೆ ಒಂದು ವಿಚಿತ್ರವಾದ, ಆದರೆ ಅರ್ಥಗರ್ಭಿತ ಸಂದೇಶ ಬಂದಿತ್ತು. ‘ಸ್ನೇಹಿತರೇ. ನಾನು ಮಹಾತ್ಮಾ ಗಾಂಧೀಜಿಯವರ ಫೋಟೋಗಳನ್ನು ಸಂಗ್ರಹಿಸುತ್ತಿದ್ದೇನೆ. ನನ್ನ ಈ ಸಂಗ್ರಹ ಕಾರ್ಯದಲ್ಲಿ ನೀವು ಸಹಕರಿಸಿ. ನಿಮ್ಮ ಕೊಡುಗೆಯನ್ನು ನೀಡಿ. ಆದರೆ ಒಂದು ಷರತ್ತು. ನನಗೆ ಸಂಗ್ರಹವಾಗಬೇಕಿರುವ ಮಹಾತ್ಮಾ ಗಾಂಧೀಜಿ ಪೋಟೋಗಳು ಒಂದು ಸಾವಿರ ರೂಪಾಯಿ ನೋಟುಗಳ ಮೇಲೆ ಇರಬೇಕು.’ ಇದು ಆಘಾತಕಾರಿ ಎನಿಸಿದರೂ ಇಂದಿನ ಅತ್ಯಂತ ಕಟು ಸತ್ಯವನ್ನು ಬಿಂಬಿಸುತ್ತದೆ.

ಭಾರತದ ಚುನಾವಣಾ ವ್ಯವಸ್ಥೆಯಲ್ಲಿ ಹಣದ ಬಲ ವಹಿಸುವ ಪಾತ್ರ ಎಲ್ಲರಿಗೂ ತಿಳಿದಿದೆ. ಟಿ. ಎನ್‌.ಶೇಷನ್‌ ಅವರು ಭಾರತದ ಮುಖ್ಯ ಚುನಾವಣಾಧಿಕಾರಿ ಆಗಿದ್ದಾಗ ಈ ಕುರಿತು ಕೈಗೊಂಡ ಕೆಲವು ಕಠಿನ ಕ್ರಮಗಳು ಚುನಾವಣಾ ಸುಧಾರಣೆಯ ಪಥದಲ್ಲಿ ಮಹತ್ವ ಪಡೆದುಕೊಂಡಿದ್ದವು. ಆದರೆ, ದಿನೇ ದಿನೇ ಚುನಾವಣೆಗಳಲ್ಲಿ ಹಣದ ಪಾತ್ರ ಹೆಚ್ಚಾಗುತ್ತಿದೆ ಎಂಬುದು ಎಲ್ಲರ ಅನುಭವ. ನಗರ ಪಾಲಿಕೆ ಚುನಾವಣೆಗಳಲ್ಲಿಯೂ ಹಲವಾರು ಕೋಟಿ ರೂ. ಖರ್ಚು ಮಾಡುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಒಂದೊಮ್ಮೆ ಮಹಾತ್ಮ ಗಾಂಧೀಜಿ, ಅಬ್ದುಲ್‌ ಕಲಾಂ ಅಥವಾ ಅಣ್ಣಾ ಹಜಾರೆಯಂಥವರು ನಿಲ್ಲಲು ಬಯಸಿದರೆ ಅವರ ಬಳಿ ಹಣವಿಲ್ಲವೆಂಬ ಅಂಶವೇ ದೊಡ್ಡ ತೊಡಕೆಂದು ಇಂದಿನ ರಾಜಕಾರಣದಲ್ಲಿ ಆಗಾಗ ಕೇಳಿ ಬರುವ ಮಾತು.

ಮತ್ತಷ್ಟು ಓದು »