ವಿಷಯದ ವಿವರಗಳಿಗೆ ದಾಟಿರಿ

Archive for

7
ಜನ

ಅನುಭವ, ಅನುಭಾವ, ಅನುಭೂತಿ ಇತ್ಯಾದಿ…

– ನಾಗೇಶ ಮೈಸೂರು

ಮುಂಜಾನೆಬದುಕಿನ ಎಷ್ಟೊ ಒಡನಾಟಗಳಲ್ಲಿ ಕೆಲವಷ್ಟೆ ಆಳಕ್ಕಿಳಿದು ಬೇರೂರಿ ನಿಲ್ಲುವಂತಹವು. ಮಿಕ್ಕವೆಲ್ಲಿ ಕೆಲವು ಹಾಗೆ ಬಂದು ಹೀಗೆ ಹೋಗುವ ಗುಂಪಿನದಾದರೆ ಬಾಕಿಯೆಲ್ಲ ತಾವರೆಯೆಲೆಯ ಮೇಲಿನ ಅಂಟಿಯೂ ಅಂಟದ ನಿರ್ಲಿಪ್ತ ಕೊಂಡಿಗಳು. ಹಿಂದೆಲ್ಲ ಈ ತರಹೆವಾರಿ ಬಂಧಗಳೆಲ್ಲವನ್ನು ಅದರದರ ಸ್ಥಾಯಿ / ಚಲನ ಶಕ್ತಿಗನುಗುಣವಾಗಿ ಒಗ್ಗೂಡಿಸಿಡಲು ಮುಂಜಿ, ನಾಮಕರಣ, ಮದುವೆಗಳಂತಹ ಖಾಸಗಿ ಸಮಾರಂಭಗಳಿಂದ ಹಿಡಿದು ಸಾರ್ವಜನಿಕ ಸಭೆ, ಕಾರ್ಯಕ್ರಮ, ಚಟುವಟಿಕೆಗಳು ನೆರವಾಗುತ್ತಿದ್ದವು. ಒಂದಲ್ಲ ಒಂದು ಕಡೆ ಭೇಟಿಯಾಗುವ, ಕೊಂಡಿಯ ಸಂಪರ್ಕವನ್ನುಳಿಸಿಕೊಳ್ಳುವ ಸಾಧ್ಯತೆಯಿರುತ್ತಿತ್ತು.

ಆದರೀಗ ಅಷ್ಟೊಂದು ಹೆಣಗುವ ಅವಶ್ಯಕತೆಯಿಲ್ಲದೆಯೆ ಫೇಸ್ಬುಕ್, ಟ್ವಿಟ್ಟರ್, ವಾಟ್ಸಪ್ ಗಳಂತಹ ತಂತ್ರಜ್ಞಾನ ಪ್ರೇರಿತ ಸಾಮಾಜಿಕ ಸಾಧನ ಸಲಕರಣೆಗಳನ್ನು ಬಳಸಿ ಸಂಪರ್ಕ ಕೊಂಡಿಯನ್ನು ನಿತ್ಯವೂ ಜೀವಂತವಿರಿಸಿಕೊಳ್ಳುವ ಸಾಧ್ಯತೆ. ಕಾಲೇಜಿನ ದಿನಗಳ ಒಡನಾಟದ ನಂತರ ಎಲ್ಲಿ, ಹೇಗಿರುವರೆಂದೆ ಗೊತ್ತಿರದೆ ಇದ್ದ ಅನೇಕ ಮಿತ್ರರು ಈ ಮೂಲಕ ಮತ್ತೆ ನಂಟಿಗೆ ಅಂಟಿಕೊಳ್ಳಲು ಸಾಧ್ಯವಾಗಿಸುತ್ತಿರುವುದೂ ಈ ತಂತಜ್ಞಾನ ಪರಿಕರಗಳೆ. ಹೀಗಾಗಿ ಖಾಸಗಿಯಾಗಲಿ, ಸಾರ್ವತ್ರಿಕವಾಗಲಿ ‘ಕಮ್ಯೂನಿಕೇಷನ್’ ಗೆ ಮೊದಲಿಗಿಂತ ಹೆಚ್ಚು ಸುಲಭ, ಸರಳ ಮಾರ್ಗೋಪಾಯಗಳು ಈಗ ಸದಾ ಬೆರಳ ತುದಿಯಲ್ಲಿ ಸಿದ್ದ. ಅದರಲ್ಲು ಮೊಬೈಲು ಜಗದಲ್ಲೆ ಎಲ್ಲಾ ನಿಭಾಯಿಸುವ ಸಾಧ್ಯತೆಯಿರುವುದರಿಂದ ನೆಟ್ವರ್ಕ್ / ಅಂತರ್ಜಾಲಕ್ಕೆ ಸಂಪರ್ಕವೊಂದಿದ್ದರೆ ಸಾಕು ಎಲ್ಲೆಂದರಲ್ಲಿ ಪರಿಸ್ಥಿತಿಗೆ ಸ್ಪಂದಿಸಬಹುದು ಕನಿಷ್ಠ ಪದಗಳಲ್ಲಾದರು.

ಮತ್ತಷ್ಟು ಓದು »

7
ಜನ

ಅಶ್ವತ್ಥಾಮನಿಗೆ ಬ್ರಹಾಸ್ತ್ರ ಒಲಿದಂತೆ – ಪ್ಲುಟೋನಿಯಂ ಬೆಂಕಿಗೆ ಜಲಜನಕದ ತುಪ್ಪ

– ವಿನಾಯಕ್ ಹಂಪಿಹೊಳಿ

ಉತ್ತರ ಕೊರಿಯಾ1ಸ್ಪೆಷಲ್ ರಿಲೇಟಿವಿಟಿ ಸಿದ್ಧಾಂತವನ್ನು ಐನ್ಸ್ಟೈನ್ ಮುಂದಿಟ್ಟಾಗ ಅದರದ್ದೊಂದು ಇಕ್ವೇಷನ್ನು E= mc2 ತುಂಬಾ ಸಂಚಲನ ಉಂಟು ಮಾಡಿತ್ತು. ಏಕೆಂದರೆ ಅದು ದ್ರವ್ಯರಾಶಿ ಮತ್ತು ಶಕ್ತಿಗಳನ್ನು ಸಮೀಕರಣಗೊಳಿಸಿತ್ತು. ಆದರೂ ಅದಕ್ಕೆ ಪ್ರತ್ಯಕ್ಷ ಸಾಕ್ಷಿ ಸಿಕ್ಕಿರಲಿಲ್ಲ. ಅದು ಸಿಕ್ಕಿದ್ದು ಯುರೇನಿಯಂ ಎಂಬ ಭಾರದ ಪರಮಾಣುವಿಗೆ ನ್ಯೂಟ್ರಾನೊಂದು ಬಡಿದಾಗ ಬೀಜವಿದಳನ ನಡೆದು ಬೇರಿಯಂ ಮತ್ತ್ರು ಕ್ರಿಪ್ಟಾನ್ ಪರಮಾಣುಗಳು ರಚನೆಯಾದಾಗ. ಆ ಬೀಜವಿದಳನದಲ್ಲಿ ಕೊಂಚ ಪ್ರಮಾಣದ ದ್ರವ್ಯರಾಶಿ ಕಾಣೆಯಾಗಿತ್ತು ಮತ್ತು ಊಹಿಸಲಿಕ್ಕೇ ಆಗದಷ್ಟು ಪ್ರಮಾಣದ ಶಕ್ತಿಯು ಬಿಡುಗಡೆಯಾಗಿತ್ತು. ತನ್ಮೂಲಕ ಬಹುಚರ್ಚಿತ ಈ ಸಮೀಕರಣವು ಸರಿಯೆಂದು ಸಾರಿತ್ತು.

ಪಾರಮಾಣ್ವಿಕ ಕ್ರಿಯೆಗಳು(ನ್ಯೂಕ್ಲಿಯರ್ ರಿಯಾಕ್ಷನ್ಸ್) ಎಂಬುದು ಪ್ರಕೃತಿಗೇನೂ ಹೊಸತಲ್ಲ ಬಿಡಿ. ನಮಗೆ ಹಗಲೆಲ್ಲ ಸಿಗುವ ಸೂರ್ಯನ ಬೆಳಕು ಇದೇ ಕ್ರಿಯೆಗಳ ಶಕ್ತಿಯೇ. ಆದರೆ ಸೂರ್ಯನಲ್ಲಿ ಯುರೇನಿಯಂ ವಿದಳನವಾಗುವದಿಲ್ಲ. ಬದಲಿಗೆ ಅಲ್ಲಿ ಎರಡು ಜಲಜನಕಗಳ ಸಂಯೋಜನೆಗೊಂಡು ಹೀಲಿಯಂ ಆಗುವದು. ಈ ಪ್ರಕ್ರಿಯೆ ನಮ್ಮ ವಿಜ್ಞಾನಿಗಳಿಗೆ ತೀವ್ರ ಕುತೂಹಲ ಕೆರಳಿಸಿತ್ತು. ಏಕೆಂದರೆ ಭೂಮಿಯಲ್ಲಿ ಯುರೇನಿಯಂ ಪ್ರಮಾಣ ಕಡಿಮೆ. ಆದರೆ ಜಲಜನಕ ಹಾಗಲ್ಲ ನೋಡಿ. ೭೦% ನೀರಿನಿಂದಲೇ ತುಂಬಿರುವ ಭೂಮಿಗೆ ಜಲಜನಕಕ್ಕೆ ಕೊರತೆಯೇ? ಅಲ್ಲದೇ ೧ ಗ್ರಾಂ ಯುರೇನಿಯಂನಿಂದ ಸಿಗುವ ವಿದಳನ ಶಕ್ತಿಗಿಂತ ೧ ಗ್ರಾಂ ಜಲಜನಕದಿಂದ ಸಿಗುವ ಸಂಯುಗ್ಮಶಕ್ತಿ ನೂರಾರು ಪಟ್ಟು ಜಾಸ್ತಿ ಬೇರೆ.

ಮತ್ತಷ್ಟು ಓದು »