ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೊಂದು ಬಹಿರಂಗ ಪತ್ರ
– ನಾಗರಾಜ್ ಹೆತ್ತೂರು
ಕಾರ್ಯಾಧ್ಯಕ್ಷರು, ಅಂಬೇಡ್ಕರ್ ಯುವ ಸೇನೆ ರಾಜ್ಯ ಸಮಿತಿ
ವಿಷಯ: ಅಕಾಡೆಮಿ ಪ್ರಶಸ್ತಿ ಮೌಲ್ಯವನ್ನು ಉಳಿಸಲು ಮತ್ತು ವಾಪಾಸು ಮಾಡಿದ ಪ್ರಶಸ್ತಿಗಳನ್ನು ಆಯಾ ಸಾಲಿನ ಪ್ರಶಸ್ತಿ ವಂಚಿತ ಪ್ರತಿಭಾವಂತರಿಗೆ ನೀಡಲು ಒತ್ತಾಯ
ನಮ್ಮೆಲ್ಲರ ಪ್ರೀತಿಯ ಸಾಹಿತಿಗಳೂ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಪ್ರೊ. ಮಾಲತಿಪಟ್ಟಣಶೆಟ್ಟಿ ಅವರಿಗೆ ನಮಸ್ಕಾರಗಳು. ತಾವು ಅಕಾಡೆಮಿ ಅಧ್ಯಕ್ಷರಾದ ನಂತರ ಸಾಹಿತ್ಯ ಅಕಾಡೆಮಿ ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದು ಇತರೆ ಎಲ್ಲಾ ಅಕಾಡೆಮಿಗಳಿಗೆ ಮಾದರಿಯಾಗಿ ಕೆಲಸ ಮಾಡುತ್ತಿದೆ. ಈ ನಡುವೆ ಕೆಲವು ತಿಂಗಳಿಂದ ದೇಶದಲ್ಲಿ ಸಹಿಷ್ಣುತೆ-ಅಸಹಿಷ್ಣುತೆ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ನಮ್ಮೊಳಗಿನ ಪ್ರಮುಖ ಚಿಂತಕರಾದ ಕಲಬುರ್ಗಿ ಅವರ ಹತ್ಯೆ ನಂತರ ರಾಜ್ಯದಲ್ಲಿ ಈ ಕುರಿತು ದೊಡ್ಡ ಜನಾಭಿಪ್ರಾಯ ರೂಪಿತವಾಗಿದ್ದು ಕೆಲವು ಸಾಹಿತಿಗಳು ಪ್ರಶಸ್ತಿ ವಾಪಾಸ್ ನೀಡುವ ಮೂಲಕ ಪ್ರತಿಭಟನಾತ್ಮಕ ನಡೆ ಇಟ್ಟಿದ್ದಾರೆ. ಈಚೆಗೆ ಅಕಾಡೆಮಿ ಯಿಂದ ಹಮ್ಮಿಕೊಂಡಿದ್ದ ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಕಿರಿಯ ಸಾಹಿತಿಯೊಬ್ಬರು ಪ್ರಶಸ್ತಿ ಬಹಿಷ್ಕರಿಸಿ, ನಿಮಗೆ ಮತ್ತು ಮಾಧ್ಯಮಗಳಲ್ಲಿ ಪತ್ರ ಬರೆದಿದ್ದನ್ನು ಗಮನಿಸಿದ್ದೇವೆ. ಅವರ ಪ್ರತಿಭಟನೆ ಹಕ್ಕನ್ನು ಗೌರವಿಸುತ್ತೇವೆ. ಕಲಬುರ್ಗಿ ಸೇರಿದಂತೆ ದೇಶದಲ್ಲಿ ನಡೆದ ಸಾಹಿತಿಗಳ ಅವರ ಹತ್ಯೆಯನ್ನು ಖಂಡಿಸುತ್ತೇವೆ ಮತ್ತು ಈ ಸಂಬಂಧ ಪ್ರತಿಭಟನೆ ಮಾಡಿ ಸರಕಾರಕ್ಕೆ ಒತ್ತಾಯಿಸಿದ್ದೇವೆ ಎಂಬುದನ್ನು ನಿಮಗೆ ನೆನಪಿಸುತ್ತಲೇ ಪ್ರಶಸ್ತಿ ವಾಪಾಸತಿ ಕುರಿತಂತೆ ಕೆಲವು ಅಭಿಪ್ರಾಯಗಳನ್ನು ದಾಖಲಿಸುತ್ತಿದ್ದು ಈ ಬಗ್ಗೆ ಸಾರ್ವಜನಿಕ ಹಿತಾದೃಷ್ಟಿಯಿಂದ ಅಕಾಡೆಮಿ ಕೆಲವು ಸ್ಪಷ್ಟೀಕರಣ ನೀಡಬೇಕೆಂದು ಈ ಮೂಲಕ ಮನವಿ ಮಾಡುತ್ತೇನೆ.
ಭಾರತೀಯ ಆಹಾರ ಶೈಲಿಗಳ ಕುರಿತು ಒಂದು ವೈಜ್ಞಾನಿಕ ಚಿತ್ರಣ
– ವಿನಾಯಕ ಹಂಪಿಹೊಳಿ
ಆಹಾರದ ಶೈಲಿಗಳಲ್ಲಿ ಎಷ್ಟು ಪ್ರಕಾರಗಳು ಎಂಬ ಪ್ರಶ್ನೆಗೆ ಎಲ್ಲರೂ ಉತ್ತರಿಸುವದು ಸಸ್ಯಾಹಾರ ಮತ್ತು ಮಾಂಸಾಹಾರ ಎಂಬ ಎರಡು ಪ್ರಕಾರಗಳ ಬಗ್ಗೆ. ಪಾಶ್ಚಿಮಾತ್ಯ ಲೋಕದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರಗಳ ಕುರಿತು ಅನೇಕ ಚರ್ಚೆಗಳು ವಾದ ವಿವಾದಗಳಾಗಿವೆ. ನಮ್ಮ ದೇಶದಲ್ಲಿಯೂ ಸಂತರು ಸಸ್ಯಾಹಾರಕ್ಕೆ ಹೆಚ್ಚು ಒತ್ತು ಕೊಟ್ಟಂತೆ ಕಾಣುವ ಕೃತಿಗಳು ಕಾಣುತ್ತವೆ. ಆದರೂ ಸಸ್ಯಾಹಾರ v/s ಮಾಂಸಾಹಾರದಲ್ಲಿ ಯಾವದು ಸರಿ ಎಂಬಂಥ ಚರ್ಚೆಗಳು ಹಿಂದೆಂದೂ ಆದಂತೆ ಕಾಣುವದಿಲ್ಲವಾದರೂ ಈಗ ಅಂಥ ಚರ್ಚೆಗಳು ಚೆನ್ನಾಗಿಯೇ ನಡೆಯುತ್ತಿವೆ. ಇಂದು ನಮ್ಮ ದೇಶದಲ್ಲಿರುವ ಹೋಟೆಲ್ಲುಗಳ ರಚನೆಗಳು ಬಹುತೇಕ ಸಸ್ಯಾಹಾರ ಮತ್ತು ಮಾಂಸಾಹಾರ ಎಂಬ ಎರಡು ಪ್ರಕಾರಗಳ ಮೇಲೆಯೇ ಆಗಿರುತ್ತವೆ.
ನಮ್ಮ ದೇಶದ ಬುದ್ಧಿಜೀವಿಗಳು ಚರಿತ್ರೆಯಲ್ಲಿ ಆಗಿ ಹೋದ ಶ್ರೇಷ್ಠ ಸಂತರ ಜಾತಿ-ವಿರೋಧೀ ವಾಕ್ಯಗಳನ್ನು ಸಾಮಾಜಿಕ ಕ್ರಾಂತಿಗೆ ಸಮೀಕರಿಸಿ ಸಮಾನತೆ ಸ್ವಾತಂತ್ರ್ಯದ ಹಕ್ಕುಗಳ ಕಲ್ಪನೆ ಅವರಲ್ಲಿತ್ತು ಎಂದು ಹೇಳುತ್ತಾರಾದರೂ, ಅದೇ ಸಂತರು ವಿಧಿಸುವ ಆಹಾರ ಪದ್ಧತಿಯ ಕುರಿತು ದಿವ್ಯ ಮೌನವನ್ನು ತಾಳುತ್ತಾರೆ. ಕಾರಣ ಅದೇ ತರ್ಕದ ಅಡಿಯಲ್ಲಿ ಆ ವಿಧಿಯು ಹೇರಿಕೆಯಾಗಿ ಬಿಡುತ್ತದೆ ಇಲ್ಲವೇ ಸ್ವಾತಂತ್ರ್ಯದ ಹರಣವಾಗಿ ಪರಿಗಣಿಸಬೇಕಾಗುತ್ತದೆ. ಆದರೆ ಅದು ಬುದ್ಧಿಜೀವಿಗಳಿಗೆ ಇಷ್ಟವಿಲ್ಲ. ಪಾಶ್ಚಾತ್ಯರ ವಸಾಹತು ಶಿಕ್ಷಣ ಪಡೆದು ಹಿಂದೂ ಎಂಬ ರಿಲಿಜನ್ನನ್ನು ಒಪ್ಪಿಕೊಂಡ ಸಸ್ಯಾಹಾರಿಗೂ ಹಿಂದೂ ರಿಲಿಜನ್ನಿನ ಪವಿತ್ರ ಗ್ರಂಥಗಳಾದ ವೇದಗಳಲ್ಲಿ ಮಾಂಸಾಹಾರದ ಉಲ್ಲೇಖಗಳು ವಿಚಿತ್ರವಾಗಿ ಕಾಣುತ್ತವೆ.
ಹಾಗಿದ್ದರೆ ಭಾರತೀಯ ಆಹಾರ ಶೈಲಿ ಏನು? ಅದನ್ನು ಸಸ್ಯಾಹಾರ ಮತ್ತು ಮಾಂಸಾಹಾರ ಎಂದು ಎರಡು ರೀತಿಯಲ್ಲಿ ವಿಂಗಡಿಸಿ ಹೊರಟರೆ ನಮ್ಮ ಸಂಪ್ರದಾಯಗಳ ಆಹಾರದ ಶೈಲಿಗಳನ್ನು ವಿವರಿಸಬಲ್ಲದೇ? ಸಮರ್ಪಕವಾಗಿ ವಿವರಿಸುವ ಚಿತ್ರಣವನ್ನೇ ತಾನೇ ವೈಜ್ಞಾನಿಕವೆಂದು ಕರೆಯಲು ಸಾಧ್ಯ. ಆದ್ದರಿಂದ ಮೊದಲು ಈಗಿರುವ ಸಸ್ಯಾಹಾರ ಮತ್ತು ಮಾಂಸಾಹಾರವೆಂಬ ವಿಭಾಗಗಳ ಚಿತ್ರಣವನ್ನು ಮೊದಲು ಅವಲೋಕಿಸೋಣ. ಅದು ನಮ್ಮ ಸಂಪ್ರದಾಯಗಳ ಆಹಾರ ಪದ್ಧತಿಯನ್ನು ವಿವರಿಸಲು ಸಾಧ್ಯವೇ ಎಂಬುದನ್ನು ಅರಿಯೋಣ. ಇಲ್ಲವಾದಲ್ಲಿ ನಮ್ಮ ಸಂಪ್ರದಾಯಗಳಲ್ಲಿರುವ ವಿವಿಧ ಆಹಾರದ ಶೈಲಿಗಳನ್ನು ವಿವರಿಸುವ ಚಿತ್ರಣವನ್ನು ರಚಿಸಲು ಸಾಧ್ಯವೇ ಎನ್ನುವದನ್ನು ಚರ್ಚಿಸೋಣ.