ವಿಷಯದ ವಿವರಗಳಿಗೆ ದಾಟಿರಿ

Archive for

16
ಜನ

ವಿಶ್ವಗುರು ವಿವೇಕಾನಂದ ಹೀಗಿದ್ದರು – ಭಾಗ ೨

– ರೋಹಿತ್ ಚಕ್ರತೀರ್ಥ

ವಿಶ್ವಗುರು ವಿವೇಕಾನಂದ ಹೀಗಿದ್ದರು – ಭಾಗ ೧

ಮೊಳಗಿತು ಕಂಚಿನ ಕಂಠ

Swami Vivekanandaಅಂದು, ಸೆಪ್ಟೆಂಬರ್ 11ನೇ ತಾರೀಖು, ಶಿಕಾಗೋದಲ್ಲಿ ಜಮಾಯಿಸಿದ್ದ ಧರ್ಮಜಿಜ್ಞಾಸುಗಳೆದುರು ಸರ್ವಧರ್ಮ ಸಂಸತ್ತಿನ ವೇದಿಕೆಯಲ್ಲಿ ನಿಂತ ವಿವೇಕಾನಂದರ ಮಾತು ಶುರುವಾಗಿದ್ದು “ಅಮೆರಿಕದ ಸೋದರ ಸೋದರಿಯರೇ” ಎಂಬ ಶಕ್ತಿಶಾಲಿಯಾದ ಪದಗಳ ಮೂಲಕ. ತನ್ನೆದುರು ಕೂತಿದ್ದ ಅಷ್ಟೂ ಜನರನ್ನು  ಹಾಗೆ ಒಂದೇ ಉಸಿರಿನಲ್ಲಿ ತನ್ನವರನ್ನಾಗಿ ಮಾಡಿಕೊಂಡ ಯಾವ ಧರ್ಮಗುರುವೂ ಅಲ್ಲಿರಲಿಲ್ಲ. ಹಾಗಿದ್ದಾಗ ವಿವೇಕಾನಂದರು ಸೋದರ-ಸೋದರಿಯರೇ ಎಂದಿದ್ದೇ ತಡ ಇಡೀ ಸಭಾಂಗಣದಲ್ಲಿ ವಿದ್ಯುತ್ಸಂಚಾರವಾಯಿತು! ಸಭಿಕರು ಎದ್ದು ಮೂರ್ನಾಲ್ಕು ನಿಮಿಷಗಳ ದೀರ್ಘ ಕರತಾಡನ ಮಾಡಿದರು. ತನ್ನ ಕೇವಲ ಹದಿನೈದು ನಿಮಿಷಗಳ ಪುಟ್ಟ ಭಾಷಣದಲ್ಲಿ ವಿವೇಕಾನಂದರು ಭಾರತದ ಸನಾತನ ಸಂಸ್ಕøತಿಯ ಮೂಲ ಆಶಯವನ್ನು ಅನಾವರಣ ಮಾಡಿದ್ದರು. ಮರುದಿನದ ಪತ್ರಿಕೆಗಳಲ್ಲಿ ದೂರದ ಹಿಂದೂಸ್ತಾನದಿಂದ ಬಂದ ಈ ಯುವ ಸಂನ್ಯಾಸಿಯ ಸಿಂಹಗರ್ಜನೆಯದ್ದೇ ಸುದ್ದಿ! ದ ನ್ಯೂಯಾಕ್ ಹೆರಾಲ್ಡ್ ಪತ್ರಿಕೆ, “ಧರ್ಮ ಸಂಸತ್ತಿನ ಅತ್ಯಂತ ಪ್ರಮುಖ ಆಕರ್ಷಣೆ ಭಾರತದಿಂದ ಬಂದ ಸ್ವಾಮಿ ವಿವೇಕಾನಂದರು. ಅವರ ಮಾತುಗಳನ್ನು ಕೇಳಿದ ಮೇಲೆ, ಆ ಪುಣ್ಯಭೂಮಿಯತ್ತ ನಾವು ಮಿಷನರಿಗಳನ್ನು ಧರ್ಮಪ್ರಚಾರಕ್ಕಾಗಿ ಕಳಿಸುತ್ತಿರುವುದು ಅದೆಷ್ಟು ಹಾಸ್ಯಾಸ್ಪದ ಕಾರ್ಯ ಎಂಬುದು ಅರಿವಾಗುತ್ತದೆ” ಎಂದು ಬರೆಯಿತು. ಇನ್ನೊಂದು ಪತ್ರಿಕೆ, “ಜನರು ಉಳಿದವರ ಗಂಟೆಗಟ್ಟಲೆ ಉಪನ್ಯಾಸಗಳನ್ನು ಕೂಡ ಸಹಿಸಿಕೊಂಡು ಈ ಸ್ವಾಮೀಜಿಯ ಹದಿನೈದು ನಿಮಿಷಗಳ ಚಿಕ್ಕ ಭಾಷಣವನ್ನು ಕೇಳಲು ತುದಿಗಾಲಲ್ಲಿ ನಿಂತಿದ್ದರು” ಎಂದು ವಿಮರ್ಶೆ ಬರೆದಿತ್ತು. ತನ್ನ ಹನ್ನೆರಡು ವರ್ಷಗಳ ಕಠಿಣ ತಪಸ್ಸು, ಸಾಧನೆ, ಅಧ್ಯಯನ, ಚಿಂತನಗಳಿಂದ ವಿವೇಕಾನಂದರು ಈಗ “ರಾತ್ರಿಬೆಳಗಾಗುವುದರಲ್ಲಿ” ತಾರೆಯಾಗಿದ್ದರು! ಭಾರತದಲ್ಲಿ ಪ್ರಕಟವಾಗುತ್ತಿದ್ದ ಪತ್ರಿಕೆಗಳು ಕೂಡ ಅಮೆರಿಕನ್ ಪತ್ರಕರ್ತರಿಂದ ಲೇಖನಗಳನ್ನು ಬರೆಸಿ ಪ್ರಕಟಿಸಿದವು. ವಿವೇಕಾನಂದರ ಅಮೆರಿಕಾ ದಿಗ್ವಿಜಯ ಭಾರತದಲ್ಲಿ ಬಲುದೊಡ್ಡ ಸುದ್ದಿಯಾಯಿತು. ರಾಮಕೃಷ್ಣ ಮಠದಲ್ಲಂತೂ ಸಂಭ್ರಮವೇ ಸಂಭ್ರಮ ಮನೆಮಾಡಿತು. ಅಮೆರಿಕೆಯ ಹತ್ತುಹಲವಾರು ಕಡೆಗಳಲ್ಲಿ ಸ್ವಾಮೀಜಿಯ ಭಾಷಣ ಏರ್ಪಾಟಾಯಿತು. ಭಾರತದ ಸನಾತನ ಧರ್ಮದ ಬಗ್ಗೆ ಅರಿಯುವ ಆಸಕ್ತಿ ಅಲ್ಲಿನ ಬಿಳಿತೊಗಲಿನ ಜಿಜ್ಞಾಸುಗಳಿಗೆ ಹೆಚ್ಚಾಯಿತು.

ಮತ್ತಷ್ಟು ಓದು »