ವಿಷಯದ ವಿವರಗಳಿಗೆ ದಾಟಿರಿ

Archive for

22
ಜನ

ಆ ದಿನದ ಸಂಚಿಕೆಯಿಲ್ಲ…ತೊಳಲಾಟ ನಿಲ್ಲುವುದಿಲ್ಲ

– ಸಂದೀಪ್ ಶರ್ಮಾ ಮೂಟೇರಿ

ಕನ್ನಡ ಪತ್ರಿಕೆಗಳುವಿಜಯದಶಮಿಯ ದಿನ ಎಂದಿನಂತೆ ಬೆಳಿಗ್ಗೆ ಎದ್ದು ಬೆಳಗಿನ ಕಾರ್ಯಗಳನ್ನು ಮುಗಿಸಿ ಕಾಫಿ ಲೋಟವನ್ನು ಹಿಡಿದು ದಿನಪತ್ರಿಕೆಗಾಗಿ ಜಾಲಾಡಲು ಶುರುಮಾಡಿದೆ, ಇನ್ನು ಪೇಪರ್ ಹಾಕುವ ಹುಡುಗ ದಿನಪತ್ರಿಕೆಯನ್ನು ಹಾಕಿಲ್ಲವೇನೋ ಎಂದು ಮನಸ್ಸಿನಲ್ಲೆ ಹೇಳಿಕೊಂಡು ಹುಡುಕಲು ಯತ್ನಿಸಿದೆ, ಸಿಗಲಿಲ್ಲ. ಸಾಮಾನ್ಯವಾಗಿ ಪೇಪರ್ ಹಾಕುವ ಹುಡುಗ ಮಹಡಿಯ ಮೊಗಸಾಲೆಗೆ ಬಿಸಾಡುವ ಪ್ರಸಂಗ ಹೆಚ್ಚು ಎಂದು ತಿಳಿದು ಮೊಗಸಾಲೆಗೆ ಹೋಗಿ ನೋಡಿದರು ಪತ್ರಿಕೆಯ ಸುಳಿವಿಲ್ಲ. ಧರ್ಮಪತ್ನಿ ಒಗೆದಿದ್ದ ಬಟ್ಟೆಯನ್ನು ಹರಗಲು ಮೊಗಸಾಲೆಗೆ ಆಗಮಿಸಿದಾಗ ನಾನು ಪತ್ರಿಕೆಯವನಿಗಾಗಿ ಕಾಯುತ್ತಿರುವುದನ್ನು ಕಂಡು “ಏನು ಇಲ್ಲಿ ನಿಂತಿದ್ದೀರಿ?” ಎಂದು ಪ್ರಶ್ನಿಸಿದಳು. ನಾನು “ಪತ್ರಿಕೆಯವ ಇನ್ನು ಬರಲಿಲ್ಲವಲ್ಲ” ಎಂದೆ, ಅವಳು ಪುನರುಚ್ಚಿಸಿದಳು “ಎಲ್ರೀ ಬರ್ತಾನೆ, ಇವತ್ತು ಪತ್ರಿಕೆ ಬರೊಲ್ವಲ್ಲ, ನೆನ್ನೆ ಆಯುಧ ಪೂಜೆ ನಿಮಿತ್ತ ರಜೆ ಅಲ್ವೆ? ” ಎಂದಳು. ಹೌದಲ್ಲ, ನೆನ್ನೆ ತಾನೆ ಓದಿದ್ದ ನಾನು ಅಷ್ಟು ಬೇಗ ಮರೆತೆನೆ? ಎಂದು ಹಿಂದಿನ ದಿನದ ಬೆಳಗಿನ ಜಾವದ ಸಂದರ್ಭವನ್ನು ನೆನೆಸಿಕೊಂಡು ಒಳಗೆ ಬಂದೆ. ಬೆಳಗಿನ ಜಾವದ ಅಭ್ಯಾಸಬಲದಿಂದ ಮೊದಲು ಹುಡುಕುವುದೆ ಆ ದಿನದ ದಿನಪತ್ರಿಕೆಯನ್ನು, ವಾಚಕನ ದಿನಚರಿಯೆ ಹಾಗಲ್ಲವೆ?

ಒಳಗೆ ಬಂದರೆ ಕುಳಿತುಕೊಳ್ಳಲಾಗುತ್ತಿಲ್ಲ, ಕಾಫಿ ಹೀರುತ್ತಿದ್ದರು ಅದರ ರುಚಿಯು ಮನಸ್ಸಿಗೆ ನಾಟುತ್ತಿಲ್ಲ, ಅಂತರ್ಜಾಲ ಮೂಲಕ ಈ – ಪೇಪರ್ ಮೂಲಕವಾದರು ಸುದ್ದಿಗಳನ್ನು ತಿಳಿಯೋಣವೆಂದರೆ ಅಲ್ಲಿಯು ಇಲ್ಲ. ಸುದ್ದಿಗಳು ಜಾಲತಾಣದಲ್ಲಿ ದೊರಕುವುದರು ಕೂಡ ಪತ್ರಿಕೆಯನ್ನು ಕೈಯಲ್ಲಿ ಹಿಡಿದಷ್ಟು ಸಂತುಷ್ಟ ಮನೋಭಾವ ಹೊಂದಲು ಸಾಧ್ಯವೇ ಇಲ್ಲ. ವಿಧಿಯಿಲ್ಲದೆ ಹತ್ತು ದಿನಗಳ ಹಿಂದಿನ ಪತ್ರಿಕೆಯನ್ನು ಓದೋಣವೆಂದು ಅಂದುಕೊಂಡು ಹಳೆಯ ಪತ್ರಿಕೆಯನ್ನು ಕೈಗೆತ್ತಿಕೊಂಡಾಗ ಸಕಲ ಸುದ್ದಿಗಳು ಮನನ ಮಾಡಿದಂತೆ ಅದರ ಪದಗಳ ಲಾಲಿತ್ಯವು ಮನಸ್ಸಿಗೆ ನಾಟುತ್ತಿತ್ತು. ಕೂಡಲೇ ಎತ್ತಿಟ್ಟೆ. ನನ್ನ ತೊಳಲಾಟ ನೋಡಲಾರದೆ “ಏನ್ರಿ ! ಮುಖ್ಯವಾದ ವಸ್ತುವನ್ನು ಕಳೆದುಕೊಂಡವರ ತರಹ ಅತೃಪ್ತಿಯನ್ನು ಹೊಂದಿರುವವರಂತೆ ಕಾಣುತ್ತೀರಿ” ಎಂದಳು. “ಇವತ್ತಿನ ದಿನಪತ್ರಿಕೆ ಇಲ್ಲವಲ್ಲೆ” ಎಂದೆ. “ಅಯ್ಯೋ, ನೀವೋ…ನಿಮ್ಮ ದಿನಪತ್ರಿಕೆಯೋ..”ಎಂದು ಮೂದಲಿಸಿದಳು. “ನಿನಗೇನೆ ಗೊತ್ತು ಬಿಸಿ ಬಿಸಿ ಸುದ್ಧಿ ಹೇಳುವ ದಿನಪತ್ರಿಕೆಯ ತೂಕದ ವಿಷಯಗಳು” ಎಂದೆ. ತಲೆಚಚ್ಚಿಕೊಂಡು ತನ್ನ ಕೆಲಸದಲ್ಲಿ ಮಗ್ನಳಾದಳು. ನಾನು ನಿಂತಲ್ಲಿಯೆ ನಿಂತೆ ತೊಳಲಾಟವನ್ನು ಸಹಿಸಿಕೊಂಡು.

ಮತ್ತಷ್ಟು ಓದು »