ಇವರದ್ದು ಅಭಿವೃದ್ಧಿ! ಅವರದ್ದು ವ್ಯಾಪಾರ!?
ರಾಜ್ಯದಲ್ಲಿ ೯೬೩೨ ಕಿಮೀ ರಾಷ್ಟ್ರೀಯ ಹೆದ್ದಾರಿಯಿದ್ದು, ರಾಜ್ಯ ಸರ್ಕಾರ ಭೂಮಿ ನೀಡಿದರೆ, ಕೇಂದ್ರದಿಂದ ೧ ಲಕ್ಷ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಿಕೊಡಲು ಸಿದ್ಧರಿದ್ದೇವೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎನ್ನುತ್ತಿದ್ದ ಕಾಂಗ್ರೆಸ್ಸಿಗರೇ, ಕೇಂದ್ರ ಈ ತೀರ್ಮಾನಕ್ಕೆ ಈಗೇನು ಹೇಳುತ್ತೀರಿ? ಕೇಂದ್ರದಲ್ಲಿ ನಿಮ್ಮ ಸರ್ಕಾರವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ಸೇತರ ಸರ್ಕಾರವಿದ್ದ ವೇಳೆ ಇಂತಹ ವಿಶಾಲ ಮನಸ್ಥಿತಿಯನ್ನು ಪ್ರದರ್ಶಿಸಿದ್ದಿರೇ? ನಾಚಿಕೆಯಾಗಬೇಕು ನಿಮ್ಮ ಮನಸ್ಥಿತಿಗೆ.
– ಎಸ್.ಆರ್ ಅನಿರುದ್ಧ ವಸಿಷ್ಠ,ಭದ್ರಾವತಿ
ಬನ್ನಿ, ಕರ್ನಾಟಕದಲ್ಲಿ ಬಂಡವಾಳ ಹೂಡಿ: ರಾಜ್ಯದ ಪರವಾಗಿ ಉದ್ಯಮಿಗಳ ಕರೆ…
ಎಷ್ಟಾದರೂ ಭೂಮಿ ಕೊಡಲು ಸಿದ್ಧರಿದ್ದೇವೆ: ಸಿದ್ಧರಾಮಯ್ಯ…
ಇದು ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಆಯೋಜಿಸಿರುವ ಇನ್ವಸ್ಟ್ ಕರ್ನಾಟಕ ಸಮಾವೇಶದ ಪ್ರಮುಖ ನುಡಿಮುತ್ತುಗಳು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ ಬಂಡವಾಳ ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಿದ್ದು, ಇದರಲ್ಲಿ ಪಾಲ್ಗೊಂಡ ಗಣ್ಯೋದ್ಯಮಿಗಳು ರಾಜ್ಯದ ಹಲವೆಡೆ ವಿವಿಧ ರೀತಿಯಲ್ಲಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದು, ಮೊದಲ ದಿನವೇ ಈ ಕುರಿತ ೯೫ ಸಾವಿರ ಕೋಟಿ ಹೂಡಿಕೆಯ ೧೦೦ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.ದೇಶದ ಉದ್ಯಮ ಕ್ಷೇತ್ರದಲ್ಲಿ ದಿಗ್ಗಜರು ನಿನ್ನೆಯ ವೇದಿಕೆಯಲ್ಲಿ ಉಪಸ್ಥಿತರಿದ್ದು, ಇವರಿಗೆಲ್ಲಾ ರಾಜ್ಯ ಕಾಂಗ್ರೆಸ್ ಸರ್ಕಾರ ಕೆಂಪು ಹಾಸು ಹಾಕಿ ಬರಮಾಡಿಕೊಂಡಿದೆ. ಈ ಮೂಲಕ ಸಮಾಜವಾದ ಹಾಗೂ ಬಡವರ ಪರ ಮಾತನಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ, ಬಂಡವಾಳಶಾಹಿಗಳಿಗೆ ಮಣೆ ಹಾಕಿದೆ!!
ಹೌದು, ತಮ್ಮದು ಬಡವರ ಪರ ಸರ್ಕಾರ, ಅಹಿಂದ ಪರವಾಗಿಯೇ ನಮ್ಮ ಯೋಜನೆಗಳು, ದೀನ ದ..ರ ಅಭಿವೃದ್ಧಿಯೇ ನಮ್ಮ ಗುರಿ. ಆದರೆ, ಬಿಜೆಪಿ ಹಾಗೂ ನರೇಂದ್ರ ಮೋದಿ ಕಾರ್ಪೊರೇಟ್ ಸಂಸ್ಕೃತಿಯವರು. ಮೋದಿ ಬಂಡವಾಳಶಾಹಿಗಳಿಗೆ ಮಣೆ ಹಾಕುತ್ತಿದ್ದಾರೆ. ದೇಶದ ಬಡ ರೈತನಿಂದ ಹಿಡಿದು, ಜನ ಸಾಮಾನ್ಯರ ಹಿತವನ್ನು ಕಡೆಗಣಿಸಿರುವ ಮೋದಿ, ಉದ್ಯಮಿಗಳಿಗೆ ಹಾಗೂ ಬಂಡವಾಳಶಾಹಿಗಳಿಗೆ ರತ್ನಗಂಬಳಿ ಹಾಸುವ ಮೂಲಕ ದೇಶವನ್ನು ಮಾರಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಯುವರಾಜ ರಾಹುಲ್ಗಾಂಧಿಯಿಂದ ಮೊದಲ್ಗೊಂಡು, ಕಾಂಗ್ರೆಸ್ನ ಕೆಲ ಹಂತದ ಕಾರ್ಯಕರ್ತನವರೆಗೂ ಹೀಗಳೆದಿದ್ದರು. ಮತ್ತಷ್ಟು ಓದು