ವಿಷಯದ ವಿವರಗಳಿಗೆ ದಾಟಿರಿ

Archive for

16
ಫೆಬ್ರ

ಜೆಎನ್‍ಯು : ಯೂನಿವರ್ಸಿಟಿಯ ಹೆಸರಲ್ಲೇ ದೋಷ ಇರಬಹುದೆ?!

– ರೋಹಿತ್ ಚಕ್ರತೀರ್ಥ

ಜೆಎನ್‍ಯುನೇರಾನೇರವಾಗಿ ವಿಷಯಕ್ಕೆ ಬರೋಣ. ಜವಹರ್‍ಲಾಲ್ ನೆಹರೂ ಹೆಸರಲ್ಲಿರುವ ವಿಶ್ವವಿದ್ಯಾಲಯದಲ್ಲಿ ಮೊನ್ನೆ ಫೆಬ್ರವರಿ 9ನೇ ತಾರೀಖು ಡಿಎಸ್‍ಯು (ಡೆಮೊಕ್ರಾಟಿಕ್ ಸ್ಟೂಡೆಂಟ್ಸ್ ಯೂನಿಯನ್) ಎಂಬ ಸಂಘಟನೆಯ ವಿದ್ಯಾರ್ಥಿಗಳು ಎರಡು ವರ್ಷದ ಹಿಂದೆ ನೇಣುಗಂಬವೇರಿದ್ದ ಒಬ್ಬ ಭಯೋತ್ಪಾದಕನ “ಪುಣ್ಯತಿಥಿ”ಯನ್ನು ಆಚರಿಸಲು ನಿರ್ಧರಿಸಿದ್ದರು. ಕಾರ್ಯಕ್ರಮಕ್ಕೆ ಅವರು ಕೊಟ್ಟಿದ್ದ ಹೆಸರು “ಅಫ್ಜಲ್ ಗುರು ಮತ್ತು ಮಖ್‍ಬೂಲ್ ಭಟ್‍ರ ನ್ಯಾಯಾಂಗ ಹತ್ಯೆಯ ನೆನಪಿನಲ್ಲಿ” ನಡೆಸುವ ಕಾರ್ಯಕ್ರಮ ಎಂದು. ಈ ಡಿಎಸ್‍ಯು ಒಂದು ಮಾವೋವಾದಿ ಕಮ್ಯುನಿಸ್ಟ್ ವಿದ್ಯಾರ್ಥಿ ಸಂಘಟನೆ. ದೇಶದೊಳಗಿನ ಮಾವೋವಾದಿ ನಕ್ಸಲರಿಗೆ ಗುಟ್ಟಿನಿಂದಲ್ಲ, ಓಪನ್ ಆಗಿ ಬೆಂಬಲ ಸೂಚಿಸುವ ಸಂಘಟನೆ ಇದು! ಆದರೆ, ಎಲ್ಲಿಯವರೆಗೆ ಈ ಸಂಘಟನೆಯ ವಿದ್ಯಾರ್ಥಿಗಳು ತಾವಾಗಿ ಬಂದೂಕು ಹಿಡಿದು ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ತಿರುಗಾಡುವುದಿಲ್ಲವೋ ಅಲ್ಲಿಯವರೆಗೂ ಅವರನ್ನು ಸಹಿಸಿಕೊಳ್ಳಬಹುದು ಎಂಬುದು ವಿವಿಯ ಉದಾರ ಧೋರಣೆ. ಫೆಬ್ರವರಿ 9ರಂದು ಆಯೋಜನೆಯಾಗಿದ್ದ ಕಾರ್ಯಕ್ರಮದ ಬಗ್ಗೆ ಕಣ್ಮುಚ್ಚಿ ಕುಳಿತಿದ್ದ (ಅಸಲಿಗೆ ಮಾಹಿತಿಯೇ ಇರದಿದ್ದ) ವಿವಿಯ ಆಡಳಿತ ಮಂಡಳಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಒಂದು ಪತ್ರ ಬರೆದು “ಸುಪ್ರೀಂ ಕೋರ್ಟಿನ ತೀರ್ಪಿಗೆ ಅನುಸಾರವಾಗಿ ಶಿಕ್ಷೆಗೊಳಪಟ್ಟ ಒಬ್ಬ ಉಗ್ರನ ಹೆಸರಲ್ಲಿ ಅವನ ಪುಣ್ಯತಿಥಿಯನ್ನು ಕ್ಯಾಂಪಸ್ ಒಳಗೆ ಆಚರಿಸುವುದು ಸರಿಯೇ? ಇದು ನ್ಯಾಯಾಂಗ ನಿಂದನೆ ಮಾತ್ರವಲ್ಲ; ದೇಶದ ಸಮಗ್ರತೆಯನ್ನೇ ಪ್ರಶ್ನಿಸುವ ಕೆಲಸ. ಇಂಥ ಅನರ್ಥಗಳು ನಡೆಯದಂತೆ ವಿವಿ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಕೇಳಿಕೊಂಡಿತು. ಬಹುಶಃ ಆಗ ವಿವಿಗೂ ಈ ಸಂಗತಿ ಮುಂದೆ ಹೇಗೆಲ್ಲ ಕವಲೊಡೆಯಬಹುದು, ಎಷ್ಟು ಸಮಸ್ಯೆಗಳನ್ನು ಹುಟ್ಟುಹಾಕಬಹುದು ಎಂಬ ಅಂದಾಜು ಸಿಕ್ಕಿರಬೇಕು. ಕೂಡಲೇ ಅದು ಡಿಎಸ್‍ಯು ಸಂಘಟನೆಯ ಮುಖಂಡರನ್ನು ಕರೆದು, ಇಂಥಾದ್ದನ್ನೆಲ್ಲ ಇಲ್ಲಿ ಇಟ್ಟುಕೊಳ್ಳಬೇಡಿ; ಕ್ಯಾಂಪಸ್ ಹೊರಗೆ ಏನು ಬೇಕಾದರೂ ಮಾಡಿಕೊಳ್ಳಿ ಎಂಬ ಸ್ಪಷ್ಟ ಸೂಚನೆ ಕೊಟ್ಟಿತು.

ಮತ್ತಷ್ಟು ಓದು »