ವಿಷಯದ ವಿವರಗಳಿಗೆ ದಾಟಿರಿ

Archive for

17
ಫೆಬ್ರ

ಏಕರೂಪ ನಾಗರಿಕ ಸಂಹಿತೆ – ಸುಪ್ರೀಂ ಕೋರ್ಟ್ V/S ಜಮಾತೆ ವಿಚಾರಧಾರೆ

– ಅನಿರುದ್ಧ ವಸಿಷ್ಟ,ಭದ್ರಾವತಿ

ಅರಾಜಕತೆ ತಂದೊಡ್ಡದಿರಲಿ ಧರ್ಮಾಧಾರಿತ ಕಾನೂನು

Uniform Civil Codeಪ್ರಜಾಪ್ರಭುತ್ವ ದೇಶದಲ್ಲಿರುವ ಭಾರತೀಯರಿಗೆ ದೇಶದ ಸಂವಿಧಾನವೇ ಮೇಲ್ಪಂಕ್ತಿಯಾಗಿದ್ದು, ಸಂವಿಧಾನವೇ ಅಂತಿಮವಾದುದು. ಧರ್ಮ ಗ್ರಂಥಗಳಾದ ರಾಮಾಯಣ, ಮಹಾಭಾರತ, ಕುರಾನ್, ಬೈಬಲ್‌ಗಳು ಆಯಾ ಧರ್ಮದ ಅನುಯಾಯಿಗಳ ವೈಯಕ್ತಿಕವಾಗಿರಬೇಕು.ಆದರೆ,ವೋಟ್ ಬ್ಯಾಂಕ್ ರಾಜಕಾರಣದ ಫಲವಾಗಿ ಸರ್ಕಾರಗಳು ಕೈಗೊಂಡ ನಿರ್ಧಾರಗಳು ಸಂವಿಧಾನ ವಿರುದ್ಧ ನಡೆಯಲು ಪ್ರೇರಣೆಯಾಗುತ್ತವೆ ಎಂದರೆ ಅದು ಪ್ರಜಾಪ್ರಭುತ್ವದ ದುರಂತವೇ ಹೌದು.೩೦೦ ವರ್ಷಗಳ ಕಾಲ ಬ್ರಿಟೀಷರಿಂದ ಆಳಿಸಿಕೊಂಡ ನಮ್ಮ ದೇಶ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದರೂ, ಒಂದು ರೀತಿಯಲ್ಲಿ ಸರ್ವಾಧಿಕಾರಿ ಮನಸ್ಥಿತಿಯನ್ನೆ ಇಂದಿಗೂ ಹೊಂದಿದೆ ಎಂದರೆ ತಪ್ಪಲ್ಲ. ಇದು ಕೇವಲ ಆಳುವ ಪಕ್ಷಗಳ ಮನಸ್ಥಿತಿ ಮಾತ್ರವಲ್ಲ, ದೇಶದ ಪ್ರತಿ ಧರ್ಮ ಹಾಗೂ ಜಾತಿಗಳಲ್ಲಿ ಇದು ಹಾಸು ಹೊಕ್ಕಾಗಿದೆ.

೧೯೪೭ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ರೂಪಿಸಲಾದ ಸಂವಿಧಾನ ಮಹೋನ್ನತ ಆಶಯಗಳನ್ನು ಹೊಂದಿದೆ.ಸಂವಿಧಾನವೇ ಭಾರತೀಯರಿಗೆ ಒಂದು ರೀತಿಯಲ್ಲಿ ಸವೋತ್ತಮ ಎಂದರೂ ತಪ್ಪಲ್ಲ. ಆದರೆ, ಸಂವಿಧಾನ ಆಶಯಕ್ಕೆ ಧಕ್ಕೆ ಬರುವ ರೀತಿಯಲ್ಲಿ ಯಾವುದೇ ಸರ್ಕಾರ ಅಥವಾ ಧರ್ಮಗಳು ನಡೆದುಕೊಂಡಾಗ ಅದನ್ನು ನ್ಯಾಯಾಂಗದಲ್ಲಿ ಪ್ರಶ್ನೆ ಮಾಡುವ ಅಧಿಕಾರವನ್ನು ಇದೇ ಸಂವಿಧಾನ ಕಲ್ಪಿಸಿದೆ. ಆದರೆ, ಯಾವುದೇ ಒಂದು ಒಳ ವ್ಯವಸ್ಥೆ ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯನ್ನೇ ಪ್ರಶ್ನಿಸುತ್ತದೆ ಎಂದರೆ ಹೇಗೆ?

ಮತ್ತಷ್ಟು ಓದು »