ಟಿಪ್ಪು ಜಯಂತಿಗೆ ಕೊಡವರ ಭರ್ಜರಿ ಗಿಫ್ಟ್ “ಕಾಂಗ್ರೆಸ್ ಮುಕ್ತ ಕೊಡಗು”
– ಅನಿರುದ್ಧ ಎಸ್.ಆರ್ , ಭದ್ರಾವತಿ
ಕೋಮುವಾದಿ”ಗಳಿಗೆ ಕೊಡವರ ಗಿಫ್ಟ್ – ಓಲೈಕೆ ರಾಜಕಾರಣವೆಂಬ ರಕ್ತ ಬೀಜಾಸುರನ ಸಂಹಾರ ಆರಂಭ
ಓಲೈಕೆ ರಾಜಕಾರಣ ಎಂಬ ರಕ್ತಬೀಜಾಸುರನನ್ನು ಸ್ವಚ್ಛಂದವಾಗಿ ಬೆಳೆಸಿ, ಒಡೆದಾಳುವ ನೀತಿಯೇ ತಮ್ಮ ಧ್ಯೇಯವೆಂಬಂತೆ ನಡೆದುಕೊಂಡು ಬರುತ್ತಿರುವ ನೆಹರೂ ಕುಟುಂಬ ಅಂದರೆ ಸೋ ಕಾಲ್ಡ್ ಗಾಂಧಿ ಕುಟುಂಬ ಹಾಗೂ ಕಾಂಗ್ರೆಸ್ ರಾಷ್ಟ್ರ ರಾಜಕಾರಣದಲ್ಲಿ ಎಬ್ಬಿಸಿರುವ ಹೊಲಸನ್ನು ತೊಳೆಯಲು ಇನ್ನೆಷ್ಟು ದಶಕಗಳು ಬೇಕೋ. ಆದರೆ, ತನ್ನ ಸ್ವಾರ್ಥಕ್ಕಾಗಿ ಅಮಾಯಕರನ್ನು ಬಲಿ ಕೊಡುವ, ಅಸಹಾಕಯಕರನ್ನೇ ಮೆಟ್ಟಿಲನ್ನಾಗಿ ಮಾಡಿಕೊಳ್ಳುವ ಇವರ ಪರಿಯಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರತ ಮಾನ ಮೂರಾಬಟ್ಟೆಯಾಗಿದೆ.
ಆರಂಭದಲ್ಲಿ ಹೇಳಿದ ರಕ್ತಬೀಜಾಸುರನ ಪ್ರಸ್ತಾಪಕ್ಕೆ ಉದಾಹರಣೆ ಟಿಪ್ಪು ಜಯಂತಿಯ ಅಂಗವಾಗಿ ಮಡಿಕೇರಿಯಲ್ಲಿ ನಡೆದ ಮೆರವಣಿಗೆ ಹಾಗೂ ಅದರ ಮೂರ್ತ ರೂಪ ಗಲಭೆ. ಹಿಂದೂ ಸಂಘಟನೆ ಹಾಗೂ ರಾಜ್ಯದ ನಾಗರಿಕರ ತೀವ್ಯ ವಿರೋಧದ ನಡೆವೆಯೂ ಅಲ್ಪಸಂಖ್ಯಾತರ ಓಲೈಕೆಗಾಗಿ ಟಿಪ್ಪು ಜಯಂತಿಗೆ ಅನುಮತಿ ನೀಡಿದ ಸಿದ್ಧರಾಮಯ್ಯ ಸರ್ಕಾರದ ನೀಚ ಕೃತ್ಯಕ್ಕೆ ವಿಎಚ್ ಪಿ ಮುಖಂಡ ದೇವದಂಡ ಕುಟ್ಟಪ್ಪ ಬಲಿಯಾಗಿದ್ದರು. ಅಂದು ನಡೆದ ಗಲಭೆಯಲ್ಲಿ ಎಲ್ಲಿಂದಲೋ ಬಂದವರು ಅಟ್ಟಹಾಸ ಮೆರೆದು, ತಮ್ಮ ವಿಕೃತ ಮನಸ್ಥಿತಿಯ ಸುಖಕ್ಕಾಗಿ ಅಮಾಯಕನನ್ನು ಕೊಂದರು. ಪ್ರಕರಣ ಕುರಿತಂತೆ ಇತ್ತೀಚಿಗೆ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದು, ಕುಟ್ಟಪ್ಪ ಸಾವು ಆಕಸ್ಮಿಕವಲ್ಲ ಕೊಲೆ ಎನ್ನುವುದನ್ನು ಸ್ಪಷ್ಟೀಕರಿಸಿದ್ದರು.