ವಿಷಯದ ವಿವರಗಳಿಗೆ ದಾಟಿರಿ

Archive for

16
ಫೆಬ್ರ

ಜೆಎನ್‍ಯು : ಯೂನಿವರ್ಸಿಟಿಯ ಹೆಸರಲ್ಲೇ ದೋಷ ಇರಬಹುದೆ?!

– ರೋಹಿತ್ ಚಕ್ರತೀರ್ಥ

ಜೆಎನ್‍ಯುನೇರಾನೇರವಾಗಿ ವಿಷಯಕ್ಕೆ ಬರೋಣ. ಜವಹರ್‍ಲಾಲ್ ನೆಹರೂ ಹೆಸರಲ್ಲಿರುವ ವಿಶ್ವವಿದ್ಯಾಲಯದಲ್ಲಿ ಮೊನ್ನೆ ಫೆಬ್ರವರಿ 9ನೇ ತಾರೀಖು ಡಿಎಸ್‍ಯು (ಡೆಮೊಕ್ರಾಟಿಕ್ ಸ್ಟೂಡೆಂಟ್ಸ್ ಯೂನಿಯನ್) ಎಂಬ ಸಂಘಟನೆಯ ವಿದ್ಯಾರ್ಥಿಗಳು ಎರಡು ವರ್ಷದ ಹಿಂದೆ ನೇಣುಗಂಬವೇರಿದ್ದ ಒಬ್ಬ ಭಯೋತ್ಪಾದಕನ “ಪುಣ್ಯತಿಥಿ”ಯನ್ನು ಆಚರಿಸಲು ನಿರ್ಧರಿಸಿದ್ದರು. ಕಾರ್ಯಕ್ರಮಕ್ಕೆ ಅವರು ಕೊಟ್ಟಿದ್ದ ಹೆಸರು “ಅಫ್ಜಲ್ ಗುರು ಮತ್ತು ಮಖ್‍ಬೂಲ್ ಭಟ್‍ರ ನ್ಯಾಯಾಂಗ ಹತ್ಯೆಯ ನೆನಪಿನಲ್ಲಿ” ನಡೆಸುವ ಕಾರ್ಯಕ್ರಮ ಎಂದು. ಈ ಡಿಎಸ್‍ಯು ಒಂದು ಮಾವೋವಾದಿ ಕಮ್ಯುನಿಸ್ಟ್ ವಿದ್ಯಾರ್ಥಿ ಸಂಘಟನೆ. ದೇಶದೊಳಗಿನ ಮಾವೋವಾದಿ ನಕ್ಸಲರಿಗೆ ಗುಟ್ಟಿನಿಂದಲ್ಲ, ಓಪನ್ ಆಗಿ ಬೆಂಬಲ ಸೂಚಿಸುವ ಸಂಘಟನೆ ಇದು! ಆದರೆ, ಎಲ್ಲಿಯವರೆಗೆ ಈ ಸಂಘಟನೆಯ ವಿದ್ಯಾರ್ಥಿಗಳು ತಾವಾಗಿ ಬಂದೂಕು ಹಿಡಿದು ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ತಿರುಗಾಡುವುದಿಲ್ಲವೋ ಅಲ್ಲಿಯವರೆಗೂ ಅವರನ್ನು ಸಹಿಸಿಕೊಳ್ಳಬಹುದು ಎಂಬುದು ವಿವಿಯ ಉದಾರ ಧೋರಣೆ. ಫೆಬ್ರವರಿ 9ರಂದು ಆಯೋಜನೆಯಾಗಿದ್ದ ಕಾರ್ಯಕ್ರಮದ ಬಗ್ಗೆ ಕಣ್ಮುಚ್ಚಿ ಕುಳಿತಿದ್ದ (ಅಸಲಿಗೆ ಮಾಹಿತಿಯೇ ಇರದಿದ್ದ) ವಿವಿಯ ಆಡಳಿತ ಮಂಡಳಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಒಂದು ಪತ್ರ ಬರೆದು “ಸುಪ್ರೀಂ ಕೋರ್ಟಿನ ತೀರ್ಪಿಗೆ ಅನುಸಾರವಾಗಿ ಶಿಕ್ಷೆಗೊಳಪಟ್ಟ ಒಬ್ಬ ಉಗ್ರನ ಹೆಸರಲ್ಲಿ ಅವನ ಪುಣ್ಯತಿಥಿಯನ್ನು ಕ್ಯಾಂಪಸ್ ಒಳಗೆ ಆಚರಿಸುವುದು ಸರಿಯೇ? ಇದು ನ್ಯಾಯಾಂಗ ನಿಂದನೆ ಮಾತ್ರವಲ್ಲ; ದೇಶದ ಸಮಗ್ರತೆಯನ್ನೇ ಪ್ರಶ್ನಿಸುವ ಕೆಲಸ. ಇಂಥ ಅನರ್ಥಗಳು ನಡೆಯದಂತೆ ವಿವಿ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಕೇಳಿಕೊಂಡಿತು. ಬಹುಶಃ ಆಗ ವಿವಿಗೂ ಈ ಸಂಗತಿ ಮುಂದೆ ಹೇಗೆಲ್ಲ ಕವಲೊಡೆಯಬಹುದು, ಎಷ್ಟು ಸಮಸ್ಯೆಗಳನ್ನು ಹುಟ್ಟುಹಾಕಬಹುದು ಎಂಬ ಅಂದಾಜು ಸಿಕ್ಕಿರಬೇಕು. ಕೂಡಲೇ ಅದು ಡಿಎಸ್‍ಯು ಸಂಘಟನೆಯ ಮುಖಂಡರನ್ನು ಕರೆದು, ಇಂಥಾದ್ದನ್ನೆಲ್ಲ ಇಲ್ಲಿ ಇಟ್ಟುಕೊಳ್ಳಬೇಡಿ; ಕ್ಯಾಂಪಸ್ ಹೊರಗೆ ಏನು ಬೇಕಾದರೂ ಮಾಡಿಕೊಳ್ಳಿ ಎಂಬ ಸ್ಪಷ್ಟ ಸೂಚನೆ ಕೊಟ್ಟಿತು.

ಮತ್ತಷ್ಟು ಓದು »

15
ಫೆಬ್ರ

ಸುಳ್ಸುದ್ದಿ : ಭಯೋತ್ಪಾದಕಿಯನ್ನು ವರಿಸಲಿರುವ ರಾಷ್ಟ್ರೀಯ ಪಕ್ಷದ ಉಪಾಧ್ಯಕ್ಷ!

– ಪ್ರವೀಣ್ ಕುಮಾರ್ ಮಾವಿನಕಾಡು

Nilume Sulsuddi - Terro Supporting Politicsಕಳೆದ ಹಲವು ದಶಕಗಳಿಂದ ಭಾರತದ ಮೋಸ್ಟ್ ಎಲಿಜೆಬಲ್ ಬ್ಯಾಚುಲರ್ ಎನಿಸಿಕೊಂಡಿದ್ದ ರಾಷ್ಟ್ರೀಯ ಪಕ್ಷದ ಉಪಾಧ್ಯಕ್ಷರೊಬ್ಬರು ಭಯೊತ್ಪಾದಕಿಯೊಬ್ಬಳನ್ನು ವಿವಾಹವಾಗಲಿರುವುದಾಗಿ ಆ ಪಕ್ಷದ ಹಿರಿಯ ವಕ್ತಾರರೊಬ್ಬರು ತಿಳಿಸಿದ್ದಾರೆ. ಇತ್ತೀಚಿಗೆ ಪಕ್ಷ ಕೈಗೊಂಡ ಸಮೀಕ್ಷೆಯ ಪ್ರಕಾರ ದೇಶದಲ್ಲಿ ಭಯೋತ್ಪಾದಕರು ಅಥವಾ ಭಯೋತ್ಪಾದಕರ ಬೆಂಬಲಿಗರು ಸುಮಾರು 15 ರಿಂದ 20 ಪ್ರತಿಶತ ಇದ್ದು,ಅವರೆಲ್ಲರೂ ಈ ಮೊದಲು ನಮ್ಮ ಪಕ್ಷದ ಖಾಯಂ ಮತದಾರರಾಗಿದ್ದರು,ಆದರೆ ಇತ್ತೀಚಿನ ದಿನಗಳಲ್ಲಿ ನಮ್ಮ ಪಕ್ಷದಂತೆಯೇ ಹಲವು ಮೂಲಭೂತವಾದೀ ಪಕ್ಷಗಳು ಉದಯಿಸಿದ್ದು, ಇನ್ನು ಕೆಲವು ಪಕ್ಷಗಳು ವೋಟಿಗಾಗಿ ತಮ್ಮ ತತ್ವ-ಸಿದ್ದಾಂತ ಗಳನ್ನು ಬದಲಾಯಿಸಿಕೊಂಡಿದ್ದು,ಇದರಿಂದಾಗಿ ಭಯೋತ್ಪಾದಕರ ಓಟಿಗಾಗಿ ದೇಶದಲ್ಲಿ ತೀವ್ರ ಸ್ಪರ್ದೆ ಏರ್ಪಟ್ಟಿದೆ.ಆದ ಕಾರಣ ಆಂಧ್ರ,ಪಶ್ಚಿಮ ಬಂಗಾಳ,ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಹರಿದು ಹಂಚಿ ಹೋಗಿರುವ ನಮ್ಮ ಸಾಂಪ್ರದಾಯಿಕ ಭಯೋತ್ಪಾದಕರ ಮತಗಳನ್ನು ಮತ್ತೆ ಬುಟ್ಟಿಗೆ ಹಾಕಿಕೊಳ್ಳುವ ದೃಷ್ಠಿಯಿಂದಾಗಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಕಳೆದ ತಿಂಗಳು ಹೈದರಾಬಾದ್ ನಲ್ಲಿ ಬಾಂಬ್ ಇಟ್ಟಿದ್ದ ಯಾಕೂಬ್ ಮೆಮನ್ ಎನ್ನುವ ಉಗ್ರವಾದಿಯ ಬೆಂಬಲಿಗರ ಪರವಾಗಿ ಹೋರಾಟ ನಡೆಸಿದ ಆ ಯುವರಾಜನಿಗೆ ಸಿಕ್ಕ ಅಭೂತಪೂರ್ವ ಬೆಂಬಲವನ್ನು ಕಂಡು ಪುಳಕಗೊಂಡ ಪಕ್ಷದಿಂದ ನೇಮಿಸಲ್ಪಟ್ಟ ಹಲವು ಸಲಹೆಗಾರರು,ಆತನ ತಾಯಿಯೂ ಆದ ಪಕ್ಷದ ಅಧ್ಯಕ್ಷೆಯ ಮುಂದೆ ಈ ರೀತಿಯ ಸಲಹೆಯನ್ನಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.ನಂತರ ಪಕ್ಷಾಧ್ಯಕ್ಷೆ ಈ ಬಗ್ಗೆ ಸಕಾರಾತ್ಮಕ  ತೀರ್ಮಾನವನ್ನು ಕೈಗೊಂಡು ಪಕ್ಷದ ನೀತಿ ನಿರೂಪಣಾ ಸಮಿತಿಯ ಮುಂದೆ ಮಂಡಿಸಿದ್ದು, ಸಮಿತಿ ತನ್ನ ಸರ್ವಾನುಮತದ ಒಪ್ಪಿಗೆ ಸೂಚಿಸಿದ ಬಳಿಕ ಪಕ್ಷ ಈ ಕುರಿತು ಅಂತಿಮ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ.

ಮತ್ತಷ್ಟು ಓದು »

15
ಫೆಬ್ರ

ಗುರುತ್ವದ ಅಲೆಗಳಲ್ಲಿ ಕೇಳುವ ಬ್ರಹ್ಮಾಂಡದ ಸಂಗೀತ

– ವಿನಾಯಕ ಹಂಪಿಹೊಳಿ

ಗುರುತ್ವದ ಅಲೆನೀವು ಅಂತರಿಕ್ಷದ ಆಕಾಶನೌಕೆಯೊಂದರಲ್ಲಿದ್ದೀರಿ ಎಂದು ಭಾವಿಸಿ. ಆ ನೌಕೆಯು ೯.೮ ಮೀ/ಸೆ ವೇಗೋತ್ಕರ್ಷದಿಂದ ಚಲಿಸಲಾರಂಭಿಸಿತು ಎಂದಿಟ್ಟುಕೊಳ್ಳಿ. ಆ ನೌಕೆಯ ಕಿಟಕಿ ಬಾಗಿಲುಗಳೆಲ್ಲವೂ ಮುಚ್ಚಿವೆ ಎಂದು ಊಹಿಸಿ. ಆಗ ಅದು ವೇಗೋತ್ಕರ್ಷದಿಂದ ಚಲಿಸುತ್ತಿರುವ ಅನುಭವ ನಿಮಗೆ ನೇರವಾಗಿ ಆಗುವದಿಲ್ಲ. ಅದನ್ನು ಹೇಗೆ ತಿಳಿಯುತ್ತೀರಿ? ಸುಲಭ. ಆಗ ನಿಮ್ಮ ಕೈಯಲ್ಲಿನ ಚೆಂಡನ್ನು ಬಿಟ್ಟು ಬಿಡಿ. ಒಂದು ವೇಳೆ ನೌಕೆಯು ಏಕವೇಗದಿಂದ ಹೋಗುತ್ತಿದ್ದರೆ ಆ ಚೆಂಡು ಅಲ್ಲೇ ಇರುತ್ತದೆ. ನೌಕೆ ವೇಗೋತ್ಕರ್ಷವನ್ನು ಹೊಂದುತ್ತಿದ್ದರೆ ಚೆಂಡು ಮತ್ತು ನೌಕೆಯ ತಳದ ಅಂತರ ಕಡಿಮೆಯಾಗುತ್ತ ಸಾಗಿ ಕೊನೆಗೆ ನಿಮ್ಮ ಕಾಲ ಬಳಿ ಬಂದು ನೌಕೆಯ ತಳ ಭಾಗಕ್ಕೆ ಬಡಿಯುತ್ತದೆ. ಆಗ ನಿಮಗೆ ಚೆಂಡು ಕೆಳಗೆ ಬಿದ್ದಂತೆ ಕಾಣುತ್ತದೆ.

ಸರಿ. ಈ ಕಾಲ್ಪನಿಕ ಪ್ರಯೋಗದ ಲಾಭವೇನು? ತುಂಬಾ ಇದೆ. ಹೊರಗಡೆಯ ಸಂಪರ್ಕವೇ ಇಲ್ಲದ ಅಂಥ ನೌಕೆ ೯.೮ ಮೀ/ಸೆ ವೇಗೋತ್ಕರ್ಷದಿಂದ ಮುನ್ನುಗ್ಗುತ್ತಿದ್ದರೆ, ನಿಮಗೆ ಭೂಮಿಯ ಮೇಲೆ ಇದ್ದ ಅನುಭವವೇ ಆಗುತ್ತಿರುತ್ತದೆ. ಎಲ್ಲಿಯವರೆಗೆ ನೀವು ಕಿಟಕಿ ತೆರೆದು ಹೊರಜಗತ್ತನ್ನು ನೋಡುವದಿಲ್ಲವೋ ಅಲ್ಲಿಯವರೆಗೂ ನಿಮಗೆ ಆಕಾಶದಲ್ಲಿದ್ದೇವೆ ಎಂದೇ ಅನಿಸುವದಿಲ್ಲ. ಹಾಗೆ ಅನ್ನಿಸಬೇಕಾದರೆ ನೀವು ಮುಚ್ಚಿರುವ ನೌಕೆಯಿಂದ ಆಚೆಗಿನ ಜಗತ್ತಿನೆಡೆ ಕಣ್ಣು ಹಾಯಿಸಬೇಕು. ಆಗಲೇ “ಒಹೋ! ಭೂಮಿಯ ಮೇಲಿಲ್ಲ!!” ಎಂಬ ಅನುಭವ ಬರುತ್ತದೆ. ಕನಸನ್ನು ಕಾಣುತ್ತಿರುವಾಗ ಈ ಕನಸು ಸುಳ್ಳು ಎಂದು ಎಂದಾದರೂ ಅನಿಸಿದೆಯೇ? “ಒಹೋ! ಕನಸಾ!!” ಎಂಬ ಸುಳ್ಳಿನ ಅರಿವು ಉಂಟಾಗುವದು ಎಚ್ಚರವಾದ ಮೇಲೇ ಅಲ್ಲವೇ? ಹಾಗೇ ಇದು.

ಮತ್ತಷ್ಟು ಓದು »

10
ಫೆಬ್ರ

ಕನ್ನಡ ವಿಕಿಪೀಡಿಯಕ್ಕೆ ಹದಿಮೂರರ ಹರೆಯದ ಸಂಭ್ರಮ

– ವಿಕಾಸ್ ಹೆಗಡೆ, ಬೆಂಗಳೂರು

ಕನ್ನಡ ವಿಕಿಪೀಡಿಯವಿಕಿಪೀಡಿಯ – ಇಂದಿನ ಆನ್ ಲೈನ್ ಜಗತ್ತಿನಲ್ಲಿ ಇದರ ಹೆಸರು ಕೇಳದವರಿಲ್ಲ. ಯಾವುದೇ ವಿಷಯವಾದರೂ ಸರಿ, ಕ್ಷಣಮಾತ್ರದಲ್ಲಿ ಮಾಹಿತಿ ತಂದು ಮುಂದಿಡುವ ವಿಕಿಪೀಡಿಯ ಇಂದು ಜಗತ್ತಿನ ಅತೀ ಹೆಚ್ಚು ಭೇಟಿ ಕೊಡುವ ತಾಣಗಳಲ್ಲಿ ಜಾಗತಿಕ ಮಟ್ಟದಲ್ಲಿ ಐದನೇ ಸ್ಥಾನದಲ್ಲಿದೆ ಅಂದರೆ ಅದರ ಜನಪ್ರಿಯತೆ ಊಹಿಸಿಕೊಳ್ಳಬಹುದು. “ಪ್ರಪಂಚದ ಎಲ್ಲಾ ಜ್ಞಾನವೂ ಒಟ್ಟುಗೂಡಿ ಪ್ರತಿಯೊಬ್ಬರಿಗೂ ಮುಕ್ತವಾಗಿ ಸಿಗುವ ಲೋಕವೊಂದನ್ನು ಕಲ್ಪಿಸಿಕೊಳ್ಳಿ” ಎಂಬ ಘೋಷವಾಕ್ಯದ ವಿಕಿಪೀಡಿಯ ಇಂದು ಹೆಮ್ಮರವಾಗಿ ಬೆಳೆದಿದೆ.ವಿಕಿಪೀಡಿಯ ನಾನ್ ಪ್ರಾಫಿಟ್ ಸಂಸ್ಥೆಯಾದ ವಿಕಿಮೀಡಿಯ ಫೌಂಡೇಶನ್‌ನ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದೆ.ಇದರ ವಿಶೇಷವೆಂದರೆ ಇದು ಜನರಿಂದ ಜನರಿಗಾಗಿ ನಡೆಯುತ್ತಿರುವ ಸಮುದಾಯ ಕಾರ್ಯ. ಜನರ ಮತ್ತು ಸಂಸ್ಥೆಗಳ ದೇಣಿಗೆಗಳೇ ಇದರ ಆರ್ಥಿಕ ಮೂಲ. ಇದರಲ್ಲಿ ಮಾಹಿತಿ ತುಂಬಿಸುವಿಕೆ ಮತ್ತು ಮಾಹಿತಿ ಪಡೆದುಕೊಳ್ಳುವಿಕೆ ಪ್ರತಿಯೊಬ್ಬನಿಗೂ ಮುಕ್ತ. ಜಗತ್ತಿನ ಯಾವುದೇ ವಿಷಯದ ಬಗ್ಗೆ ಮಾಹಿತಿಪೂರ್ಣ ವಿಷಯಗಳನ್ನು ಯಾರುಬೇಕಾದರೂ ವಿಕಿಪೀಡಿಯ ಸಂಪಾದಕನಾಗಿ ನೊಂದಾಯಿಸಿಕೊಂಡು ಹಾಕಬಹುದು. ಹೊಸ ಲೇಖನದ ಪುಟ ರಚಿಸಬಹುದು.ಇರುವ ಲೇಖನ ತಿದ್ದಬಹುದು. ಹೆಚ್ಚಿನ ಮಾಹಿತಿ ಸೇರಿಸಬಹುದು. ಬೇರೆ ಬೇರೆ ದೇಶ ಪ್ರದೇಶ, ಹಿನ್ನೆಲೆಗಳ ಅನೇಕ ಮಂದಿಯ ಸಹಕಾರದಲ್ಲಿ ಪ್ರತಿಯೊಂದು ಪುಟವೂ ರೂಪುಗೊಳ್ಳುತ್ತದೆ. ಹಾಗಾಗಿ ವಿಕಿಪೀಡಿಯ ಒಂದು ಸಹಯೋಗಿ ವಿಶ್ವಕೋಶ.ಇಂತಹ ಒಂದು ಸ್ವತಂತ್ರ ಮತ್ತು ಮುಕ್ತ ವಿಶ್ವಕೋಶ ಆನ್ ಲೈನ್ ವಿಶ್ವಕೋಶ ಇಂದು ಸುಮಾರು ಮುನ್ನೂರು ಭಾಷೆಗಳಲ್ಲಿ ಇದೆ. ಇಂಗ್ಲೀಷ್ ವಿಕಿಪೀಡಿಯಾ ಒಂದರಲ್ಲೇ ಸುಮಾರು ಐವತ್ತು ಲಕ್ಷ ಲೇಖನಗಳಿವೆ ಅಂದರೆ ಅದರ ಮಾಹಿತಿ ಅಗಾಧತೆಯನ್ನು ಊಹಿಸಿಕೊಳ್ಳಬಹುದು! ವಿಕಿಪೀಡಿಯಾ ಆರಂಭವಾಗಿದ್ದು ೨೦೦೧ರ ಜನವರಿ ೧೫ರಂದುಈ ವರ್ಷ ಜನವರಿಯಲ್ಲಿ ಅದು ೧೫ನೇ ಹುಟ್ಟುಹಬ್ಬ ಆಚರಿಸಿಕೊಂಡಿತು.
ಮತ್ತಷ್ಟು ಓದು »

8
ಫೆಬ್ರ

ಸಂಸ್ಕೃತ ಮತ್ತು ಕನ್ನಡಗಳ ಅಂತರ್ಜಾಲ ಸ್ಥಿತಿಗತಿ

– ನವೀನ್ ಗಂಗೋತ್ರಿ

ಸಂಸ್ಕೃತಸಂಸ್ಕೃತದ ಕುರಿತಾಗಿ ಭಾರೀ ಅನುಕಂಪದಿಂದ ಮಾತಾಡುವ ಬಲುದೂರದ ಮಿತ್ರವಲಯವೊಂದಿದೆ ನನ್ನ ಬಳಿ. ಸಂಸ್ಕೃತವನ್ನೋದಿಕೊಂಡ ನಾನು, ನನ್ನಂಥವರು, ನಮ್ಮ ಸಂಸ್ಕೃತ ಸಂಸ್ಥೆಗಳು, ಸಂಸ್ಕೃತ ಪ್ರಪಂಚ ಮತ್ತು ಸಂಸ್ಕೃತಭಾಷೆಯ ಕುರಿತಾದ ಆಳವಾದ ಅನುಕಂಪ ಮತ್ತು ಕರುಣವೊಂದು ಅವರ ದನಿಯಲ್ಲಿರುತ್ತದೆ. ಆದರೆ ನನಗೆಂದಿಗೂ ಈ ಅನುಕಂಪ ಸಮರ್ಪಕವೆಂದೆನಿಸಿಲ್ಲ. ಬಹುಶಃ ಎಪತ್ತು ಎಂಭತ್ತು ತೊಂಭತ್ತರ ದಶಕದ ಸಂಸ್ಕೃತದ ಸ್ಥಿತಿಯ ಕುರಿತಾದ ಅವರ ಗ್ರಹಿಕೆ ಇನ್ನೂ ಅಪ್ಡೇಟಾಗಿಲ್ಲವೆಂದು ಸುಮ್ಮನಾಗುತ್ತೇನೆ. ವಾಸ್ತವದಲ್ಲಿ ಸಂಸ್ಕೃತದ ಪ್ರಪಂಚ ಚಟುವಟಿಕೆಯಿಂದ ಕೂಡಿದೆಯಲ್ಲದೆ ಅದು ಪ್ರಪಂಚದ ಬಹುಪಾಲನ್ನು ತಲುಪುವ ದಿಕ್ಕಿನಲ್ಲಿ ಸಮರ್ಥ ಹೆಜ್ಜೆಯನ್ನಿಟ್ಟಿದೆ. ಸಂಸ್ಕೃತಕ್ಕಾಗಿ ಉಳಿದೆಲ್ಲವನ್ನೂ ತೊರೆದ ನಿಷ್ಠ ಕಾರ್ಯಕರ್ತರಿದ್ದಾರೆ, ವಿದ್ವಾಂಸರಿದ್ದಾರೆ, ಸಂಸ್ಥೆಗಳಿವೆ ಮತ್ತು ವಿವಿ ಗಳಿವೆ. ನಿಜವೆಂದರೆ ಸಂಸ್ಕೃತದ ಕಾರ್ಯ ಭಾರತದಲ್ಲಿ ಮಾತ್ರವಲ್ಲ, ಯೂರೋಪ್ ನಿಂದ ಕೂಡ ನಡೆಯುತ್ತಿದೆ. ಅದರ ಪರಿಣಾಮವೇ ಸಂಸ್ಕೃತದ ಲಭ್ಯತೆ ಎಲ್ಲಾ ಅರ್ಥದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನಿಮ್ಮಲ್ಲಿ ಅಂತರ್ಜಾಲದ ವ್ಯವಸ್ಥೆ ಇದೆಯೆಂದರೆ ಸಂಸ್ಕೃತ ವಿಶ್ವದ ಕ್ಲಾಸಿಕ್ ಕೃತಿಗಳೆಲ್ಲವೂ ನಿಮ್ಮಲ್ಲಿವೆ ಎಂದೇ ಅರ್ಥ. ಈ ಮಾತುಗಳಲ್ಲಿ ನಿಮಗೆ ನಂಬಿಕೆಯಿಲ್ಲವೆಂದಾದರೆ ಸುಮ್ಮನೇ ಒಮ್ಮೆ ಗೂಗಲಿನಲ್ಲಿ ಸಂಸ್ಕೃತದ ಕೃತಿಯೊಂದಕ್ಕಾಗಿ ಹುಡುಕಾಡಿ ನೋಡಿ.

ಸಂಸ್ಕೃತದ ಕೃತಿಗಳಿಗಾಗಿ ಹುಡುಕಿದಂತೆಯೇ ಕನ್ನಡದ ಕ್ಲಾಸಿಕ್ ಕೃತಿಗಳಿಗಾಗಿ ಹುಡುಕಿ ನೋಡಿದರೆ ನಿಮಗೆ ನಿಜಕ್ಕೂ ಖೇದವಾಗುತ್ತದೆ. ನಾವು ಆರೇಳು ಕೋಟಿ ಜನ ಕರ್ನಾಟಕದಲ್ಲಿ ಕುಳಿತು, ಬೆಂಗಳೂರಿನಂಥ ಸಿಲಿಕಾನ್ ಕಣಿವೆಯನ್ನು ನಮ್ಮ ರಾಜಧಾನಿಯನ್ನಾಗಿ ಇಟ್ಟುಕೊಂಡು, ಮಹಾ ಮಹಾ ವಿಶ್ವ ವಿದ್ಯಾಲಯಗಳನ್ನು ಕಟ್ಟಿಕೊಂಡು, ಕನ್ನಡಕ್ಕಾಗಿ ಕೈಯೆತ್ತುವ ಸಂಘ ಸಂಸ್ಥೆಗಳನ್ನೆಲ್ಲಾ ಇಟ್ಟುಕೊಂಡು ನಮ್ಮ ಮಹತ್ತರ ಕೃತಿಗಳನ್ನು ಇನ್ನೂ ಅಂತರ್ಜಾಲಕ್ಕೆ ಬಿಡುಗಡೆ ಮಾಡದೇ ಗೆಣಸು ಹೆರೆಯುತ್ತ ಕೂತಿದ್ದೇವೆ. ಕುಮಾರವ್ಯಾಸನ ಕರ್ಣಾಟಕ ಭಾರತ ಕಥಾಮಂಜರಿ (ಕೆಲಸ ಅರ್ಧವಾಗಿದೆ), ಕುವೆಂಪುರವರ ರಾಮಾಯಣ ದರ್ಶನಮ್ (ಕಣಜದಲ್ಲಿದೆ), ಇವನ್ನು ಹೊರತುಪಡಿಸಿದರೆ ಕನ್ನಡದ ಕ್ಲಾಸಿಕ್ ಅಂತರ್ಜಾಲದಲ್ಲಿ ಲಭ್ಯಯವಿಲ್ಲ. ಕಾರಂತರು, ತೇಜಸ್ವಿಯವರು, ಮತ್ತು ಕೆಲವು ಕಾದಂಬರಿಕಾರ್ತಿಯರ ಕೃತಿಗಳು ಪಿಡಿಎಫ್ ಆಗಿ ಲಭ್ಯವಿದ್ದರೂ ಓಸಿಆರ್ ತಂತ್ರಜ್ಞಾನ ಇಲ್ಲದ್ದರಿಂದ ರೆಫರೆನ್ಸ್ ಗೆ ಅಷ್ಟೇನೂ ಉಪಯೋಗವಿಲ್ಲ. ಬಹುಶಃ ನಮಗೆ ಹೋರಾಟಗಳೇ ಮುಗಿಯೋದಿಲ್ಲ, ದಿನಾ ಬೆಳಗಾದರೆ ಪಂಥಗಳ ಹೆಸರಿನಲ್ಲಿ ಟೌನ್ ಹಾಲ್ ಮುಂದೆ ಜಮಾಯಿಸೋದಷ್ಟೇ ಕನ್ನಡದ ಕೆಲಸ ಅಂದುಕೊಂಡು ಬಿಟ್ಟಿದ್ದೇವೆ. ಕೆಲವರಂತೂ ಮಾತೆತ್ತಿದರೆ ಸಂಸ್ಕೃತದ ವಿರುದ್ಧ ಹರಿಹಾಯುತ್ತಾರೆ. ಸಂಸ್ಕೃತ ಸತ್ತೋಗಿದೆ ಅನ್ನುತ್ತಾರೆ. ಆದರೆ ಆಧುನಿಕ ಜಗತ್ತಿನಲ್ಲಿ ಸಂಸ್ಕೃತವು ಕನ್ನಡಕ್ಕಿಂತ ವ್ಯಾಪಕವಾದ ಬದುಕನ್ನು ಬದುಕುವತ್ತ ಮುನ್ನುಗ್ಗುತ್ತಿದೆ. ನೆನಪಿಡಿ, ಸಂಸ್ಕೃತದಲ್ಲಿ ಓಸಿಆರ್ ಈಗಾಗಲೇ ಇದೆ. ಆರ್ಕೈವ್ ನಿಂದ ಅಥವ ಗೂಗಲ್ ಪುಸ್ತಕದಿಂದ ತೆರೆದುಕೊಂಡ ಸಂಸ್ಕೃತಪುಸ್ತಕದಲ್ಲಿ ಯಾವುದೇ ಶಬ್ದವನ್ನು ಆರಾಮವಾಗಿ ಹುಡುಕಬಹುದು. ಇದನ್ನೆಲ್ಲ ಭಾರತೀಯರೇ ಮಾಡಿದ್ದೆಂದು ನಾನು ಹೇಳುತ್ತಿಲ್ಲ, ಆದರೆ ಸಂಸ್ಕೃತ ನಿಷ್ಠೆಯ ಜನರಿಂದ ವಿಶ್ವದಾದ್ಯಂತ ಇದೆಲ್ಲ ಕೆಲಸ ನಡೆಯುತ್ತಿದೆ.  ಕನ್ನಡದಂಥಾ ಕನ್ನಡಕ್ಕೇನಾಗಿದೆ?

ಮತ್ತಷ್ಟು ಓದು »

7
ಫೆಬ್ರ

ಸಣ್ಣಕಥೆ: ಕ್ಯಾಂಪಸ್ ಇಂಟರ್ವ್ಯೂವ್…

– ನಾಗೇಶ ಮೈಸೂರು

ಇಂಟರ್ವ್ಯೂಕಾರನ್ನು ಟ್ರಾಫಿಕ್ಕಿನ ಚಕ್ರವ್ಯೂಹದ ನಡುವೆಯೆ ಹೇಗೇಗೊ ತೂರಿಸಿಕೊಂಡು, ಹೆಚ್ಚು ಕಡಿಮೆ ಕಾಲ್ನಡಿಗೆಯಷ್ಟೆ ವೇಗದಲ್ಲಿ ತೆವಳುತ್ತ, ಕೊನೆಗು ಟ್ರಾಫಿಕ್ಕಿಲ್ಲದ ದೊಡ್ಡ ಮುಖ್ಯ ರಸ್ತೆಗೆ ತಂದಾಗ ನಿರಾಳತೆಯ ನಿಟ್ಟುಸಿರು ಬಿಟ್ಟೆ. ಇದು ಇನ್ನೂ ಪಯಣದ ಆರಂಭ; ಹೊರಟಿರುವ ಗಮ್ಯದ ಕಡೆಗೆ ಇನ್ನು ಎಂಟು ಗಂಟೆಗಳ ದೂರವಿದೆ. ಕೇರಳದ ಇಂಜಿನಿಯರಿಂಗ್ ಕಾಲೋಜೊಂದರಲ್ಲಿ ನಮ್ಮ ಕಂಪನಿಗೆ ಕಾಲೇಜಿನಿಂದ ನೇರ ಅಭ್ಯರ್ಥಿಗಳನ್ನು ಆಯ್ದುಕೊಳ್ಳಲು ಕ್ಯಾಂಪಸ್ ಇಂಟರ್ವ್ಯೂ ಸಲುವಾಗಿ ಹೊರಟಿದ್ದು… ಜತೆಯಲ್ಲಿರುವ ಕೇಶವ ನಾಯರ್ ಎಂಬೆಡೆಡ್ ಸಾಫ್ಟ್ ವೇರ್ ವಿಭಾಗದಲ್ಲಿರುವ ಮ್ಯಾನೇಜರನಾದರು,ಅವನ ಪರಿಚಯ ಅಷ್ಟಾಗಿಲ್ಲ… ಬಹುಶಃ ಈ ಟ್ರಿಪ್ಪಿನ ನಂತರ ಸ್ವಲ್ಪ ಹೆಚ್ಚಿನ ಪರಿಚಯವಾಗಬಹುದು… ಜತೆಗೆ ಮಾನವ ಸಂಪನ್ಮೂಲ ವಿಭಾಗದಿಂದ ಬಂದಿರುವ ಜಾನಕಿ ದೇವಿ.

ಮಧ್ಯೆ ಊಟ ತಿಂಡಿ ಕಾಫಿ ಎಂದು ಬ್ರೇಕ್ ಕೊಟ್ಟು, ಮತ್ತೆ ಹಾಗೂ ಹೀಗು ತಾಕಲಾಡುತ್ತ ಗಮ್ಯ ತಲುಪುವ ಹೊತ್ತಿಗೆ ಕತ್ತಲಾಗಿ ಹೋಗಿತ್ತು. ಇಂಟರ್ವ್ಯೂವ್ ಇದ್ದದ್ದು ಮರುದಿನವಾದ ಕಾರಣ ಅಲ್ಲೆ ಕಾಲೇಜು ಹಾಸ್ಟೆಲಿನ ಗೆಸ್ಟ್ ರೂಮಿನಲ್ಲಿ ರಾತ್ರಿ ಬಿಡಾರಕ್ಕೆ ವ್ಯವಸ್ಥೆಯಾಗಿತ್ತು. ಜಾನಕಿ ಇದರಲ್ಲೆಲ್ಲಾ ಕಿಲಾಡಿ. ಕಂಪನಿಯ ಕೆಲಸವೆ ಆದರು ಸುಮ್ಮನೆ ಹೋಟೆಲ್ಲು ವೆಚ್ಚವೇಕೆ ವ್ಯರ್ಥ ಮಾಡಬೇಕು ಎಂದು ಕಾಲೇಜಿನ ಗೆಸ್ಟ್ ರೂಮಲ್ಲಿ ಇರುವ ವ್ಯವಸ್ಥೆ ಮಾಡಿಬಿಟ್ಟಿದ್ದಾಳೆ.. ಹೇಗೂ ಅವರೂ ಇಲ್ಲವೆನ್ನುವಂತಿಲ್ಲ.. ಅಲ್ಲಿ ಸೊಳ್ಳೆ ಕಾಟ ಹೆಚ್ಚಾದ ಕಾರಣ , ರಾತ್ರಿ ಸೊಳ್ಳೆ ಬತ್ತಿ ಹಚ್ಚಿ ಮಲಗಿದರೆ ಸಾಕು, ಮನೆಯಲ್ಲಿದ್ದ ಹಾಗೆ ಅನಿಸಿ ಒಳ್ಳೆ ನಿದ್ದೆ ಬರುತ್ತೆ.. ಹೋಟೆಲ್ ರೂಮಿನದೇನು ಮಹಾ..? ಆ ಕಿಷ್ಕಿಂದದಲ್ಲಿ ಇರುವುದಕ್ಕಿಂತ ಇದೆ ವಾಸಿ ಎಂದು ದಾರಿಯಲ್ಲಿ ಸುಮಾರು ಆರೇಳು ಸಲ ಹೇಳಿದ್ದಾಳೆ – ಬಹುಶಃ ನಾವು ಮಾನಸಿಕವಾಗಿ ಅಲ್ಲಿರಲು ಸಿದ್ದರಾಗಿರಲಿ ಅಂತಿರಬೇಕು..

ಆದರೆ ಅದರಲ್ಲಿ ಸ್ವಲ್ಪ ಅತಿ ಎನಿಸಿದ್ದು ಮಾತ್ರ ರಾತ್ರಿಯೂಟದ ವ್ಯವಸ್ಥೆ.. ಹೇಗು ಕಾರಿತ್ತಾಗಿ ಸಿಟಿಯ ಯಾವುದಾದರು ಊಟದ ಹೋಟೆಲ್ಲಿಗೆ ಹೋಗಿ ಬರಬಹುದಿತ್ತು… ಅದು ಸಿಟಿಯಿಂದ ದೂರ ಎಂದು ಹೇಳಿ ಅಲ್ಲೆ ಹಾಸ್ಟೆಲಿನ ವೆಜಿಟೇರಿಯನ್ ಊಟವೆ ಓಕೆ ಎಂದು ಹೇಳಿ ಅಲ್ಲೆ ತಿನ್ನುವ ಹಾಗೆ ಮಾಡಿಬಿಟ್ಟಿದ್ದಳು..! ಅದೇ ಮೊದಲ ಬಾರಿಗೆ ನನಗೆ ಅಭ್ಯಾಸವಿಲ್ಲದ ಆ ಅನ್ನ ತಿಂದು, ನೀರಿನ ಬದಲಿಗೆ ನೀಡಿದ ವಿಶೇಷ ಬಣ್ಣದ ಕೇರಳದ ಟ್ರೇಡ್ ಮಾರ್ಕ್ ದ್ರವ ಪಾನೀಯ ಕುಡಿಯುವಂತಾಗಿತ್ತು.. ಆದರೂ ಆ ನೀರಿನ ಪಾನೀಯ ಮಾತ್ರ ಏನೊ ಚೇತೋಹಾರಿಯಾಗಿದೆ ಅನಿಸಿ ಎರಡೆರಡು ಬಾರಿ ಹಾಕಿಸಿಕೊಂಡು ಕುಡಿದಿದ್ದೆ.. ಪ್ರಯಾಣದ ಆಯಾಸಕ್ಕೊ, ಏನೊ ಸೊಳ್ಳೆ ಬತ್ತಿ ಹಚ್ಚಿ ಮಲಗುತ್ತಿದ್ದ ಹಾಗೆ ಮಂಪರು ಕವಿದಂತಾಗಿ ಗಾಢವಾದ ನಿದ್ದೆ ಬಂದುಬಿಟ್ಟಿತ್ತು , ಹೊಸ ಜಾಗವೆನ್ನುವ ಪರಿವೆಯಿಲ್ಲದೆ..

ಮತ್ತಷ್ಟು ಓದು »

6
ಫೆಬ್ರ

ಇವರದ್ದು ಅಭಿವೃದ್ಧಿ! ಅವರದ್ದು ವ್ಯಾಪಾರ!?

ರಾಜ್ಯದಲ್ಲಿ ೯೬೩೨ ಕಿಮೀ ರಾಷ್ಟ್ರೀಯ ಹೆದ್ದಾರಿಯಿದ್ದು, ರಾಜ್ಯ ಸರ್ಕಾರ ಭೂಮಿ ನೀಡಿದರೆ, ಕೇಂದ್ರದಿಂದ ೧ ಲಕ್ಷ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಿಕೊಡಲು ಸಿದ್ಧರಿದ್ದೇವೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎನ್ನುತ್ತಿದ್ದ ಕಾಂಗ್ರೆಸ್ಸಿಗರೇ, ಕೇಂದ್ರ ಈ ತೀರ್ಮಾನಕ್ಕೆ ಈಗೇನು ಹೇಳುತ್ತೀರಿ? ಕೇಂದ್ರದಲ್ಲಿ ನಿಮ್ಮ ಸರ್ಕಾರವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ಸೇತರ ಸರ್ಕಾರವಿದ್ದ ವೇಳೆ ಇಂತಹ ವಿಶಾಲ ಮನಸ್ಥಿತಿಯನ್ನು ಪ್ರದರ್ಶಿಸಿದ್ದಿರೇ? ನಾಚಿಕೆಯಾಗಬೇಕು ನಿಮ್ಮ ಮನಸ್ಥಿತಿಗೆ.

– ಎಸ್.ಆರ್ ಅನಿರುದ್ಧ ವಸಿಷ್ಠ,ಭದ್ರಾವತಿ

ಇನ್ವೆಸ್ಟ್ ಕರ್ನಾಟಕಬನ್ನಿ, ಕರ್ನಾಟಕದಲ್ಲಿ ಬಂಡವಾಳ ಹೂಡಿ: ರಾಜ್ಯದ ಪರವಾಗಿ ಉದ್ಯಮಿಗಳ ಕರೆ…
ಎಷ್ಟಾದರೂ ಭೂಮಿ ಕೊಡಲು ಸಿದ್ಧರಿದ್ದೇವೆ: ಸಿದ್ಧರಾಮಯ್ಯ…
ಇದು ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಆಯೋಜಿಸಿರುವ ಇನ್ವಸ್ಟ್ ಕರ್ನಾಟಕ ಸಮಾವೇಶದ ಪ್ರಮುಖ ನುಡಿಮುತ್ತುಗಳು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳ ಬಂಡವಾಳ ಹೂಡಿಕೆದಾರರ ಸಮಾವೇಶ ಯಶಸ್ವಿಯಾಗಿದ್ದು, ಇದರಲ್ಲಿ ಪಾಲ್ಗೊಂಡ ಗಣ್ಯೋದ್ಯಮಿಗಳು ರಾಜ್ಯದ ಹಲವೆಡೆ ವಿವಿಧ ರೀತಿಯಲ್ಲಿ ಹೂಡಿಕೆ ಮಾಡುವುದಾಗಿ ಘೋಷಿಸಿದ್ದು, ಮೊದಲ ದಿನವೇ ಈ ಕುರಿತ ೯೫ ಸಾವಿರ ಕೋಟಿ ಹೂಡಿಕೆಯ ೧೦೦ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.ದೇಶದ ಉದ್ಯಮ ಕ್ಷೇತ್ರದಲ್ಲಿ ದಿಗ್ಗಜರು ನಿನ್ನೆಯ ವೇದಿಕೆಯಲ್ಲಿ ಉಪಸ್ಥಿತರಿದ್ದು, ಇವರಿಗೆಲ್ಲಾ ರಾಜ್ಯ ಕಾಂಗ್ರೆಸ್ ಸರ್ಕಾರ ಕೆಂಪು ಹಾಸು ಹಾಕಿ ಬರಮಾಡಿಕೊಂಡಿದೆ. ಈ ಮೂಲಕ ಸಮಾಜವಾದ ಹಾಗೂ ಬಡವರ ಪರ ಮಾತನಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ, ಬಂಡವಾಳಶಾಹಿಗಳಿಗೆ ಮಣೆ ಹಾಕಿದೆ!!

ಹೌದು, ತಮ್ಮದು ಬಡವರ ಪರ ಸರ್ಕಾರ, ಅಹಿಂದ ಪರವಾಗಿಯೇ ನಮ್ಮ ಯೋಜನೆಗಳು, ದೀನ ದ..ರ ಅಭಿವೃದ್ಧಿಯೇ ನಮ್ಮ ಗುರಿ. ಆದರೆ, ಬಿಜೆಪಿ ಹಾಗೂ ನರೇಂದ್ರ ಮೋದಿ ಕಾರ್ಪೊರೇಟ್ ಸಂಸ್ಕೃತಿಯವರು. ಮೋದಿ ಬಂಡವಾಳಶಾಹಿಗಳಿಗೆ ಮಣೆ ಹಾಕುತ್ತಿದ್ದಾರೆ. ದೇಶದ ಬಡ ರೈತನಿಂದ ಹಿಡಿದು, ಜನ ಸಾಮಾನ್ಯರ ಹಿತವನ್ನು ಕಡೆಗಣಿಸಿರುವ ಮೋದಿ, ಉದ್ಯಮಿಗಳಿಗೆ ಹಾಗೂ ಬಂಡವಾಳಶಾಹಿಗಳಿಗೆ ರತ್ನಗಂಬಳಿ ಹಾಸುವ ಮೂಲಕ ದೇಶವನ್ನು ಮಾರಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಯುವರಾಜ ರಾಹುಲ್‌ಗಾಂಧಿಯಿಂದ ಮೊದಲ್ಗೊಂಡು, ಕಾಂಗ್ರೆಸ್‌ನ ಕೆಲ ಹಂತದ ಕಾರ್ಯಕರ್ತನವರೆಗೂ ಹೀಗಳೆದಿದ್ದರು. ಮತ್ತಷ್ಟು ಓದು »

5
ಫೆಬ್ರ

ಭಾರತದಲ್ಲಿ ವಿದ್ಯಾರ್ಥಿ ಆಂದೋಲನಗಳು – ಒಂದು ವಿಮರ್ಶೆ

– ಬಿ.ಜಿ.ಕುಲಕರ್ಣಿ,ಸಹಾಯಕ ಪ್ರಾಧ್ಯಾಪಕರು
ರಾಜ್ಯಶಾಸ್ತ್ರ ವಿಭಾಗ,ಬಸವಪ್ರಭು ಕೋರೆ ಪದವಿ ಮಹಾವಿದ್ಯಾಲಯ,ಚಿಕ್ಕೋಡಿ, ಜಿ.ಬೆಳಗಾವಿ                                                                   

ದೆಹಲಿ ಪ್ರತಿಭಟನೆಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ವಿದ್ಯಾರ್ಥಿಗಳು ಅತ್ಯಂತ ಪ್ರಮುಖವಾದ ಪಾತ್ರವಹಿಸಿರುವದು ನಮ್ಮೆಲ್ಲರಿಗೂ ಗೊತ್ತಿರುವ ವಿಷಯ. ಸ್ವಾತಂತ್ರ್ಯ ನಂತರ ಶಿಕ್ಷಣ ಸುಧಾರಣೆಯ ರೂಪುರೇಷೆಗಳನ್ನು ಸಿದ್ಧಪಡಿಸುವಾಗ ಕೂಡ ಅವರು ಗಮನಾರ್ಹವಾದ ಪ್ರಭಾವವನ್ನು ಬೀರಿದ್ದಾರೆ.  ದೇಶದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳು ಕೂಡ ವಿದ್ಯಾರ್ಥಿಗಳ ರಾಜಕೀಯ ಚಟುವಟಿಕೆಗಳ ಮೇಲೆ ಸಾಕಷ್ಟು ಪ್ರಭಾವ ಬೀರಿವೆ. 1975-77ರ ತುರ್ತುಪರಿಸ್ಥಿತಿಯ ಅವಧಿಯನ್ನು ಹೊರತುಪಡಿಸಿ ಉಳಿದೆಲ್ಲ ಸಂದರ್ಭಗಳಲ್ಲಿಯೂ ವಿದ್ಯಾರ್ಥಿ ಸಂಘಟನೆಗಳು ತುಂಬಾ ಸಕ್ರೀಯವಾಗಿರುವದನ್ನು ನಾವು ಕಾಣಬಹುದಾಗಿದೆ. ರಾಜ್ಯಶಾಸ್ತ್ರದ ಆಧುನಿಕ ಪರಿಕಲ್ಪನೆಗಳಾದ ಸ್ವಾತಂತ್ರ್ಯ,ಸಮಾನತೆ ಮತ್ತು ಸಹೋದರತ್ವದ ಮಹತ್ವವನ್ನು ಸಾಮಾನ್ಯ ಜನರಲ್ಲಿ ಈ ವಿದ್ಯಾರ್ಥಿ ಸಂಘಟನೆಗಳು ಮೂಡಿಸಿವೆ. ರಾಜಕೀಯ ಅಭಿವೃದ್ಧಿ ಮತ್ತು ಆಧುನೀಕರಣ ಪ್ರಕ್ರಿಯೆಯ ಅಧ್ಯಯನ ಮಾಡುವಾಗ ವಿದ್ಯಾರ್ಥಿ ರಾಜಕೀಯವನ್ನು ನಾವು ನಿರ್ಲಕ್ಷಿಸುವಂತಿಲ್ಲ. ಜಾಗತಿಕ ಮಟ್ಟದಲ್ಲಿ ಇಂದು ವಿದ್ಯಾರ್ಥಿ ಚಳುವಳಿಗಳು ತನ್ನದೇ ಆದ ಮಹತ್ವವನ್ನು ಪಡೆದುಕೊಂಡಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿ ಕ್ರಿಯಾಶೀಲತೆಯ ಬಗ್ಗೆ  ಇಲ್ಲಿ ಚರ್ಚಿಸುವದು  ಸೂಕ್ತ.

ಕ್ರಾಂತಿಕಾರಿ ಚಳವಳಿಗಳು ಯಾವತ್ತೂ ಆದರ್ಶಗಳನ್ನು ಹೊಂದಿರುವ ಹಾಗು ಅವುಗಳನ್ನು ಅನುಷ್ಠಾನಗೊಳಿಸಬೇಕೆಂಬ ಉತ್ಸಾಹದಲ್ಲಿರುವ ವಿದ್ಯಾರ್ಥಿಗಳ ಬೆಂಬಲವನ್ನು ಬಯಸುತ್ತವೆ. ಅದಕ್ಕಾಗಿಯೇ ಸಿ. ರೈಟ್ ಮೀಲ್ಸ್ ಎಂಬ ವಿದ್ವಾಂಸರು “ಹೊಸ ಕ್ರಾಂತಿಕಾರಿ ಚಳವಳಿಗೆ ಬುದ್ಧಿಜೀವಿಗಳು ಹಾಗು ವಿದ್ಯಾರ್ಥಿಗಳು ಮಾತ್ರ ಒಂದು ಭದ್ರವಾದ ಅಡಿಪಾಯ ಹಾಕುತ್ತಾರೆ” ಎಂದಿದ್ದಾರೆ. ಇವರ ವಿಚಾರಗಳಿಗೆ ಪೂರಕವಾಗಿ ಎಸ್.ಎಮ್.ಲಿಪ್‍ಸೆಟ್ “ಭವಿಷ್ಯತ್ತಿನ ರಾಜಕೀಯವನ್ನು ವಿಶ್ಲೇಷಣೆ ಮಾಡುವಾಗ ವಿದ್ಯಾರ್ಥಿಗಳನ್ನು ಕಡೆಗಣಿಸುವುದು ಮಹಾ ಪ್ರಮಾದಕ್ಕೆ ದಾರಿ ಮಾಡಿ ಕೊಡುತ್ತದೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ. ಹಾಗೆಯೇ ಲೀಬ್‍ಮ್ಯಾನ್ ವಾಕರ್ ಮತ್ತು ಗ್ಲೇಜರ್ ಜಗತ್ತಿನಾದ್ಯಂತ ಶಾಂತಿ ಕದಡುವ, ಸಾಂಪ್ರದಾಯಿಕ ಮೌಲ್ಯಗಳನ್ನು ಹಾಗು ಅಸ್ತಿತ್ವದಲ್ಲಿರುವ ಸರಕಾರಗಳನ್ನು ಪ್ರಶ್ನಿಸುವ ಎರಡೇ ಎರಡು ಗುಂಪುಗಳೆಂದರೆ ಬುದ್ಧಿಜೀವಿಗಳು ಮತ್ತು ವಿದ್ಯಾರ್ಥಿಗಳು” ಎಂದು ಸ್ಪಷ್ಟವಾಗಿ ತಿಳಿಸಿರುತ್ತಾರೆ.

ಮತ್ತಷ್ಟು ಓದು »

4
ಫೆಬ್ರ

ಒಂದು ಸಾವು ತೋರಿಸಿದ ಜಗತ್ತಿನ ಕರಾಳ ಮುಖಗಳು!

– ಸಂಕೇತ್ ಡಿ ಹೆಗಡೆ

ರೋಹಿತ್ ವೆಮುಲಾಆವತ್ತು ಗೆಲೆಲಿಯೋ ಹೇಳಿದ್ದಿಷ್ಟೆ… “ನೀವು ಅಂದುಂಕೊಂಡಂಗೆ ಭೂಮಿ ಚಪ್ಪಟೆ ಇಲ್ರಪಾ.. ಅದು ಗೋಳಾಕಾರವಾಗಿದೆ” ಅಂತ. ಅವತ್ತಿನ ಕ್ಯಾಥೋಲಿಕ್ ಚರ್ಚ್ ಕೆಂಡಾಮಂಡಲವಾಯಿತು. ಏನು ಹೇಳಿದ್ದೇಯೊ ಆ ನಿನ್ನ ಥಿಯರಿಯನ್ನ ಮುಚ್ಚಿಕೊಂಡು ವಾಪಸ್ ತಗಂಬಿಡು ಅಂದಿತು. ಹಿಂದೊಬ್ಬ ಹೀಗೆಯೇ ಹೇಳಿ ಕೊನೆಗೆ ಹೆದರಿಸಿಕೊಂಡು ಸುಮ್ಮನಾಗಿದ್ದ. ಆದರೆ ಗೆಲೆಲಿಯೋ ಸುಮ್ಮನಿರುವ ಜಾಯಮಾನದವನಲ್ಲ. ತನ್ನದೇ ಸರಿ ಅಂದ. ತಾನು ಸಾಕ್ಷ್ಯ ಒದಗಿಸಬಲ್ಲೆ ಅಂದ. “ಈವಯ್ಯ ವಸಿ ಜಾಸ್ತಿ ಹಾರಾಡ್ತಿದಾನೆ” ಅಂತ ಆತನನ್ನು ಗೃಹಬಂಧನದಲ್ಲಿರಿಸಿದರು. ಶಿಕ್ಷೆ ಕೊಟ್ಟರು. ಆದರೆ ಕೊನೆಗೇನಾಯಿತು ಹೇಳಿ, ಸತ್ಯ ಸತ್ತುಹೋಯಿತಾ? ಒಂದಿಷ್ಟು ಅಜ್ಞಾನಿಗಳ ಗುಂಪು ಸುಳ್ಳನ್ನು ನಂಬಿ, ಇತರರನ್ನೂ ನಂಬಿಸಹೊರಟರು ಅಂತ ಭೂಮಿಯೇನಾದರೂ ಪುಸಕ್ಕಂತ ಚಪ್ಪಟೆಯಾಗಿಬಿಟ್ಟಿತಾ? ಇಲ್ಲ. ವಿಷಯಕ್ಕೆ ಬರುವ ಮುನ್ನ ತಮ್ಮನ್ನು ತಾವು ಎಡ ಅಥವಾ ಬಲಪಂಥದವರು ಅಂತ ಹೆಮ್ಮೆಯಿಂದ ಹೇಳಿಕೊಳ್ಳುವವರಿಗೆ ಈ ಘಟನೆಯನ್ನ ಮತ್ತೊಮ್ಮೆ ಓದಲು ರೆಕಮೆಂಡ್ ಮಾಡುತ್ತೇನೆ. ಅಂದಹಾಗೆ ನೀವು ನಿಮ್ಮ ಪೂರ್ವಗ್ರಹಗಳನ್ನ ಈ ದೇಶದ, ದೇಶದ ಜನರ ಮೇಲೆ ಹೇರಹೊರಟರೆ, ಅದರಲ್ಲಿ ನಿಮಗೆ ಯಶಸ್ಸು ಅಂತ ಸಿಕ್ಕರೆ, ಅದು ತಾತ್ಕಾಲಿಕ ಅಷ್ಟೆ. ಸತ್ಯವೇನು ಅಂತ ದೇಶವಾಸಿಗಳಿಗೆ ಒಂದಲ್ಲ ಒಂದು ದಿನ ಗೊತ್ತಾಗೇ ತೀರುತ್ತೆ!

ಭಾರತದ ಬಗ್ಗೆಯೊಂದು ಓಬಿರಾಯನ ಕಾಲದ ಪೂರ್ವಗ್ರಹವಿದೆ. “ಭಾರತದಲ್ಲಿ ದಲಿತರನ್ನು ತೀರಾ ಹೀನಾಯವಾಗಿ ನಡೆಸಿಕೊಳ್ಳಲಾಗತ್ತೆ. ಸಮಾಜದ ಸ್ತರಸ್ತರದಲ್ಲೂ ತಾರತಮ್ಯದ ಕಬಂಧಬಾಹುಗಳು ಕಾಣಸಿಗುತ್ತವೆ” ಅಂತ! ನಾನು ಒಪ್ಪಿಕೊಂಡು ಬಿಡುತ್ತೇನೆ. ಭಾರತದಲ್ಲಿ ತಾರತಮ್ಯ ಇತ್ತು. ಯಾಕೆ, ಅಸ್ಪೃಶ್ಯತೆ ಎಂಬ ನಾಚಿಗೇಡಿನ ಆಚರಣೆಯೂ ಇತ್ತು. ಯೆಸ್, ಮೇಲ್ವರ್ಗದವರು ಕೆಳವರ್ಗದವರನ್ನ ಪ್ರಾಣಿಗಳಂತೆ ನಡೆಸಿಕೊಳ್ಳುತ್ತಿದ್ದ, ಅವರನ್ನು ಹಿಂಸಿಸುತ್ತಿದ್ದ ಕಾಲವೊಂದು ಇತ್ತು. ಒಬ್ಬ ಮೇಲ್ವರ್ಗದಲ್ಲಿ ಜನಿಸಿದ ಹುಡುಗನಾಗಿ ಇವತ್ತು ನಾನು ಆ ಕಾಲದಲ್ಲಿ ನಡೆದುಹೋದ ಆ ಕೊಳಕು ಆಚರಣೆಗಳ ಓದಿ ನಾಚಿಕೆಯಿಂದ ತಲೆತಗ್ಗಿಸುತ್ತೇನೆ! ಇವತ್ತಿಗೂ ತಾರತಮ್ಯ ಸಂಪೂರ್ಣವಾಗಿ ತೊಲಗಿಲ್ಲ ಬಿಡಿ. ನಗರ ಭಾರತದಲ್ಲಿ ತೊಲಗಿದೆ. ಮುಂದುವರಿದ ಗ್ರಾಮೀಣ ಭಾರತದಲ್ಲೂ ಬಹುತೇಕ ಸತ್ತಿದೆ. ಆದರೆ ಹಿಂದುಳಿದ ಪ್ರದೇಶಗಳಲ್ಲಿ ಇನ್ನೂ ಜೀವಂತವಿದೆ. ಆದರೆ ಈ ಪ್ರಗತಿಪರರು ಅನಿಸಿಕೊಂಡಿರುವವರು ಇವತ್ತು ಬೀದಿಬೀದಿಯಲ್ಲಿ ಬೊಂಬ್ಡಾ ಬಜಾಯಿಸುತ್ತಿರುವಂತೆ ಕತ್ತು ಹಿಸುಕುವ ತಾರತಮ್ಯವೇನು ಸಮಾಜದ ಮುಖ್ಯವಾಹಿನಿಯಲ್ಲಿ ಇಲ್ಲ. ಇವತ್ತು ದಲಿತರಿಗೆ ಪ್ರತಿಯೊಂದರಲ್ಲೂ ಸಾಕುಬೇಕಷ್ಟು ಮೀಸಲಾತಿ ಒದಗಿಸಿ, ಅವರು ಸಮಾಜದಲ್ಲಿ ಎಲ್ಲಾ ಸ್ಥಾನಗಳಲ್ಲೂ ಮಿಂಚುವಂತೆ ಈ ಸಮಾಜ ನೋಡಿಕೊಂಡಿದೆ.  ಇವತ್ತೇನು ನಡೆಯುತ್ತಿದೆ ಅಂತ ನಾವು ಓದಿ ತಿಳಿಯಬೇಕಿಲ್ಲ. ಕಣ್ಣಿದ್ದವರಿಗೆಲ್ಲ ಕಾಣಿಸುತ್ತೆ. ಇದೇ ‘ಜಾತ್ಯತೀತ’ ರಾಷ್ಟ್ರದಲ್ಲಿ ಚಿಕ್ಕವನಿದ್ದಾಗಿನಿಂದ ಇಲ್ಲಿಯವರೆಗೂ ನನ್ನ ಜಾತಿಯ ಕಾರಣಕ್ಕಾಗಿ ಅರ್ಹತೆಯಿದ್ದರೂ ಅನೇಕ scholarshipಗಳಿಂದ ವಂಚಿತನಾದವನು ನಾನು.ಆತ ಅನುಕೂಲಸ್ಥ ಕುಟುಂಬದವನೇ ಆದರೂ, ಓದುವ ಸಕಲ ಸುವರ್ಣಾವಕಾಶಗಳಿದ್ದರೂ ಓದದೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನನಗಿಂತ ಬಹಳ ಕೆಟ್ಟ rank ತೆಗೆದವ ನನ್ನದೇ ಕಾಲೇಜಿನಲ್ಲಿ ಓದುವುದನ್ನು ಕಂಡೂ ಕಾಣದಂತೆ ಸುಮ್ಮನಿರುವವ ನಾನು. ನನ್ನಷ್ಟೇ ಅಂಕಗಳನ್ನು ಪಡೆದರೂ, ನನ್ನ ಕಾಲೇಜಿನ ಹತ್ತುಪಟ್ಟು ಒಳ್ಳೆಯ ಸ್ಥಾನವಿರುವ ಕಾಲೇಜಿನಲ್ಲಿ, ನಾನು ಕೊಡುವ ಅರ್ಧ ಫೀಯನ್ನೂ ಕೊಡದೆ ಓದುವವರ ಕಂಡು ಆದ ಬೇಸರವ ಹೊಟ್ಟೆಯಲ್ಲಿ ನುಂಗಿಕೊಂಡು ಓದುತ್ತಿರುವವನು ನಾನು. ನನ್ನ ಜಾತಿಯ ಕಾರಣಕ್ಕಾಗಿ ಸರ್ಕಾರದ ಅನೇಕ ಸೌಲಭ್ಯಗಳಿಂದ ವಂಚಿತವಾದ ಕುಟುಂಬಕ್ಕೆ ಸೇರಿದವನು ನಾನು. So, for your kind information ಭಾರತದಲ್ಲಿ ದಲಿತರ ಮೇಲೆ ಮಾತ್ರ “ಅಮಾನವೀಯ” “ಸೋ”ಸಣೆಯಾಗುತ್ತಿದೆ ಅಂತ ನನ್ನ ಮುಂದೆ ಪುಂಗಿ ಓದುವ ಅವಶ್ಯಕತೆ ಇಲ್ಲ.
ಮತ್ತಷ್ಟು ಓದು »

1
ಫೆಬ್ರ

ದೇವಾಲಯ ಪ್ರವೇಶದ ಕುರಿತು ತಪ್ಪು ತಿಳಿವಳಿಕೆಗಳು

– ಡಾ. ರಾಜಾರಾಮ ಹೆಗಡೆ
ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗ,ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ.

ಶನಿಸಿಂಗಾಣಪುರಇಂದು ಎರಡು ವಿಭಿನ್ನ ಸ್ಥಳಗಳಲ್ಲಿ ದೇವಾಲಯಗಳಿಗೆ ಸ್ತ್ರೀಯರ ಪ್ರವೇಶದ ಕುರಿತು ಹೋರಾಟಗಳು ನಡೆಯುತ್ತಿವೆ. ಈ ಹೋರಾಟವನ್ನು ನಡೆಸುತ್ತಿರುವವರು ಪ್ರಗತಿಪರರು ಹಾಗೂ ಸ್ತ್ರೀವಾದಿಗಳು. ಈ ಸಂದರ್ಭದಲ್ಲಿ ಅವರು ಎತ್ತುತ್ತಿರುವ ಚರ್ಚೆಯನ್ನು ಗಮನಿಸಿದಾಗ ಭಾರತೀಯ ಸಂಸ್ಕೃತಿಯ ಕುರಿತು ಈ ಮುಂದಿನ ತಪ್ಪು ಕಲ್ಪನೆಗಳು ಅವರಿಗೆ ಇರುವುದು ಸ್ಪಷ್ಟ. ಅದೆಂದರೆ: 1. ಹಿಂದೂ ಎನ್ನುವುದು ಇಸ್ಲಾಂ, ಕ್ರಿಶ್ಚಿಯಾನಿಟಿಗಳಂತೆ ಒಂದು ರಿಲಿಜನ್ನು. 2. ಹಿಂದೂಗಳ ದೇವಾಲಯಗಳು ಚರ್ಚು ಮಸೀದಿಗಳಂತೆ ಹಿಂದೂಗಳ ಸಾರ್ವಜನಿಕ ಪೂಜಾ ಸ್ಥಳಗಳು. ಹಾಗಾಗಿ ಹಿಂದೂ ಮಹಿಳೆಯರಿಗೆ ಇಂಥ ದೇವಾಲಯಗಳಲ್ಲಿ ಬಿಟ್ಟುಕೊಳ್ಳದಿರುವುದು ಲೈಂಗಿಕ ತಾರತಮ್ಯವನ್ನು ಮಾಡಿದಂತೇ ಎಂಬುದು ಅವರ ತರ್ಕ.

ಹಿಂದೂ ಎನ್ನುವುದು ಇಸ್ಲಾಂ ಕ್ರಿಶ್ಚಿಯಾನಿಟಿಗಳಂತೆ ರಿಲಿಜನ್ನಲ್ಲ. ಇದೊಂದು ಬಹು ಸಂಪ್ರದಾಯಗಳ ಸಮಾಜ. ಈ ಸಂಪ್ರದಾಯಗಳಿಗೆ ಆಧಾರವಾಗಿ ಕ್ರೈಸ್ತ ಮುಸ್ಲಿಮರಿಗೆ ಇರುವಂತೆ ಯಾವುದೇ ದೇವವಾಣಿ, ಪವಿತ್ರ ಗ್ರಂಥ ಅಥವಾ ಏಕರೂಪೀ ಡಾಕ್ಟ್ರಿನ್ನುಗಳ ಆಧಾರವಿಲ್ಲ. ಹಾಗಾಗಿ ಇಂಥ ಸಂಪ್ರದಾಯಗಳು ವೈವಿಧ್ಯಪೂರ್ಣವಾಗಿ ಬೆಳೆದುಕೊಂಡಿವೆ. ಹಿಂದೂ ದೇವಾಲಯಗಳು ಚರ್ಚುಗಳಂತೆ ಒಂದು ಕೇಂದ್ರೀಕೃತ ಆಡಳಿತ ವ್ಯವಸ್ಥೆಯ ಘಟಕಗಳಲ್ಲ. ಅವು ಹುಟ್ಟಿಕೊಳ್ಳುವುದು,ಅವುಗಳ ಅಭಿವೃದ್ಧಿ,ಜನಪ್ರಿಯತೆ,ನಿರ್ವಹಣೆ,ಅವನತಿ ಇವೆಲ್ಲ ಆಯಾ ಕ್ಷೇತ್ರಗಳ ಕ್ರಿಯಾಶೀಲತೆಗೆ ಸಂಬಂಧಪಟ್ಟ ಖಾಸಗಿ ವಿಚಾರಗಳಾಗಿವೆ. ಅವುಗಳಿಗೆ ಭಕ್ತರು ನಾನಾ ಕಡೆಗಳಿಂದ ಬರುತ್ತಾರೆ ಎಂಬ ಕಾರಣಕ್ಕೆ ಅವು ಸಾರ್ವಜನಿಕವಲ್ಲ. ಏಕೆಂದರೆ ಆ ಭಕ್ತರಿಗೆ ಅಲ್ಲಿ ಬರಲೇಬೇಕೆಂಬ ನಿರ್ಬಂಧವಿಲ್ಲ.ಭಕ್ತರು ಆಯಾ ಕ್ಷೇತ್ರದ ರೀತಿ ರಿವಾಜುಗಳಿಗೆ ಗೌರವಕೊಟ್ಟೇ ಅಲ್ಲಿಗೆ ತಮ್ಮ ಇಷ್ಟಾರ್ಥಗಳನ್ನು ಪಡೆಯಲು ಅಲ್ಲಿಗೆ ಬಂದಿರುತ್ತಾರೆ.ಯಾರಿಗಾದರೂ ಹೊಸ ದೇವಾಲಯವನ್ನು ಕಟ್ಟಿ ಬೆಳೆಸುವ ಆಯ್ಕೆ ಮುಕ್ತವಾಗಿದೆ. ಹಾಗಾಗಿ ನಮ್ಮಲ್ಲಿ ಜಾತಿಗಳಿಗೆ,ಮತಗಳಿಗೆ,ಕುಲಗಳಿಗೆ,ಪ್ರದೇಶಗಳಿಗೆ,ಊರುಗಳಿಗೆ,ಗಲ್ಲಿಗಳಿಗೆ ಪ್ರತ್ಯೇಕದೇವಾಲಯಗಳು ಇರುವುದು.

ಮತ್ತಷ್ಟು ಓದು »