ವಿಷಯದ ವಿವರಗಳಿಗೆ ದಾಟಿರಿ

Archive for

2
ಮಾರ್ಚ್

ಕಾಂಗ್ರೆಸ್ ಮುಕ್ತ ಸುಳ್ಯದಲ್ಲಿ ಅರಳಿದ ಕಮಲ

  – ತಾರನಾಥ ನಡುಮನೆ

BJP Wಸುಳ್ಯ- ಇಂದು ಇದು ರಾಜಕೀಯವಾಗಿ ದಕ್ಷಿಣಕನ್ನಡಕ್ಕೆ ಸೇರಿದರೂ, ಇನ್ನೂ ಕೊಡಗಿನ ಕೆಲವು ಸಂಪ್ರದಾಯವನ್ನು ಉಳಿಸಿಕೊಂಡು ಬಂದ ಪ್ರದೇಶ. ಕರ್ನಾಟಕದ ಪ್ರಮುಖ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವನ್ನು ಹೊಂದಿರುವ ತಾಲೂಕು.

ಸುಳ್ಯ ಪರಿಸರ ಮಂಗಳೂರಿನಂತೆ ಸಮತಟ್ಟಾಗಿರದೆ , ಕೊಡಗಿನಂತೆ ಸಣ್ಣ ಬೆಟ್ಟ-ಗುಡ್ಡ ವನ್ನು ಹೊಂದಿರೋ ಪ್ರದೇಶ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಹಸಿರು ಸಿರಿಯಲ್ಲಿ  ಮಲಗಿರುವ ಊರು. ಇಲ್ಲಿನ ಜನ ಸ್ವಾಭಿಮಾನಿಗಳು , 1837 ರಲ್ಲಿ ನಡೆದ ಅಮರ ಸುಳ್ಯದ ರೈತ ದಂಗೆ ಇದಕ್ಕೆ ಸಾಕ್ಷಿ. ಅಂದು ಕಂದಾಯ ಪಾವತಿ ಹಾಗೂ ಕೊಡಗಿನ ಅರಸ ಚಿಕ್ಕವೀರರಾಜೇಂದ್ರನ ಪದಚ್ಯುತಿ ಕಾರಣಕ್ಕಾಗಿ ತಮ್ಮನಾಳುತ್ತಿದ್ದ ಬ್ರಿಟಿಷರ ವಿರುದ್ದ ದಂಗೆ ಎದ್ದ ರೈತರು ಮಂಗಳೂರಿಗೆ ಮುತ್ತಿಗೆ ಹಾಕಿದ್ದರು. ಮೊದಲು ಮಂಗಳೂರನ್ನು ಗೆದ್ದರೂ ನಂತರ ಆಂಗ್ಲರಿಗೆ ಬಿಟ್ಟು ಕೊಡಬೇಕಾಯಿತು.

ಮತ್ತಷ್ಟು ಓದು »