ನನ್ನಿ- ತಾತ್ವಿಕ ಒಳಸುಳಿಗಳ ವಿಶ್ಲೇಷಣೆ.
— ನವೀನ ಗಂಗೋತ್ರಿ
ಗಂಭೀರ ಓದುಗರು, ನೋಡುಗರು, ಕನ್ನಡದಲ್ಲಿ ಕಡಿಮೆಯಾದ್ದರಿಂದಲೇ ಕಡಮೆ ದರ್ಜೆಯ ಪತ್ರಿಕೆಗಳು, ಸಿನಿಮಾಗಳು, ಕಾದಂಬರಿಗಳು ನಮ್ಮಲ್ಲಿ ನಾಯಿಕೊಡೆಯಂತೆ ಹುಟ್ಟಿಕೊಂಡಿವೆ ಎನ್ನುವ ಮಾತನ್ನು ಆಗಾಗ ನಿರಾಶಾವಾದಿ ವಿಮರ್ಶಕರೂ, ತಮ್ಮ ಕಣ್ಣೀರಿನ ಕಾರ್ಯಕ್ರಮಗಳ ಸಮರ್ಥಕರಾದ ಚಾನೆಲ್ಗಳೂ ಹೇಳಿಕೊಂಡು ಬಂದಿವೆ. ಸಕಾರಾತ್ಮಕ ಧೋರಣೆಯ ಕೆಲವು ಬರಹಗಾರರು, ಚಿಂತಕರು ಓದುಗರನ್ನು ಇಷ್ಟು ತಳಮಟ್ಟದಲ್ಲಿ ಕಾಣುವುದಿಲ್ಲ. ಹಾಗಾಗಿಯೇ ಘನವಾದ ಕೃತಿಗಳನ್ನು ಕೊಡುವುದು ಅವರಿಗೆ ಇಂದಿಗೂ ಸಾಧ್ಯವಾಗುತ್ತಿದೆ.
ಕರ್ಮ ಕಾದಂಬರಿಯ ಮೂಲಕ ಕರಣಂ ಪವನ್ ಪ್ರಸಾದ್ ಹಾಗೊಬ್ಬ ಆಳ ಚಿಂತನೆಯ ಕಾದಂಬರಿಕಾರರಾಗುವ ಭರವಸೆಯನ್ನು ಹುಟ್ಟಿಸಿದ್ದರು. ತಾತ್ತ್ವಿಕ ಎತ್ತರವನ್ನು ಅಡಕಗೊಳಿಸಿಕೊಂಡಿದ್ದರೂ ಕರ್ಮದ ಓಘದಲ್ಲಿ ಇನ್ನೊಂದಿಷ್ಟು ನೈಪುಣ್ಯವನ್ನು ಬಯಸಿದ್ದ ಓದುಗ, ಇದೀಗ ಅವರ ಹೊಸ ಕಾದಂಬರಿ ’ನನ್ನಿ’ಯ ಮೂಲಕ ಹೆಚ್ಚು ಕುಶಲಿಯಾದ ಮತ್ತು ಪ್ರಭಾವಿಯಾದ ಕಾದಂಬರಿಕಾರನನ್ನು ಕಂಡಿದ್ದಾರೆ. ಎರಡುವಾರದ ಹಿಂದೆ ಬಿಡುಗಡೆಯಾದ ನನ್ನಿ ಅದಾಗಲೇ ಎರಡುಬಾರಿ ಟಾಪ್ ಟೆನ್ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಆನ್ ಲೈನ್ ನ್ಯೂಸ್ ಪೋರ್ಟಲ್ಗಳಲ್ಲಿ ಸುದ್ದಿಯಾಗ್ತಿದೆ, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗ್ತಿದೆ. ಹೊತ್ತಿ ಉರಿವ ಬೆಂಕಿಯಂತಲ್ಲದೆ, ಚಾಪೆಯಡಿಗೆ ಹರಿವ ನೀರಿನಂತೆ ಓದುಗನನ್ನು ಆಂತವಾಗಿ ತಲುಪುತ್ತಿದೆ. ಅದ್ಯಾಕೆ ಹಾಗೆ ತಲುಪುತ್ತಿದೆ ಎನ್ನುವುದಕ್ಕೆ ನನ್ನಿ ಕಾದಂಬರಿಯ ಸಾಮರ್ಥ್ಯವೇ ಉತ್ತರ.
ಹೂ ಈಸ್ ಕನ್ಹಯ್ಯಾ ಕುಮಾರ್?
-ಎಸ್.ಆರ್. ಅನಿರುದ್ಧ ವಸಿಷ್ಠ

ಸಾಯದ ಹೊರತು ನಿಮಗವನ ಹೆಸರು ಕೂಡ ಗೊತ್ತಿರುವುದಿಲ್ಲ…
– ರೋಹಿತ್ ಚಕ್ರತೀರ್ಥ
ಅವನೊಬ್ಬನಿದ್ದ. ತನ್ನ ಮನೆಯ ಒಂದು ಭಾಗದಲ್ಲಿ ಅಂಗಡಿ ಇಟ್ಟುಕೊಂಡಿದ್ದ. ಪ್ರತಿದಿನ ಬೆಳಗ್ಗೆ ಮನೆಯ ಒಳಗಿಂದ ಷಟರ್ ತೆಗೆದು ಅಂಗಡಿ ತೆರೆಯುತ್ತಿದ್ದ. ಆದರೆ ಪ್ರತಿದಿನ ಆ ಕಬ್ಬಿಣದ ಬಾಗಿಲನ್ನು ಮೇಲಕ್ಕೆ ಸರಿಸುವಾಗ ಆತನ ಕಣ್ಣಿಗೆ ಮೊದಲು ಬೀಳುತ್ತಿದ್ದದ್ದು, ಅಂಗಡಿಯ ಎದುರಿಗೇ ಮಲಗಿರುತ್ತಿದ್ದ ಒಬ್ಬ ಭಿಕ್ಷುಕ. ಕೆದರಿದ, ಎಣ್ಣೆ ಕಾಣದ ತಲೆಕೂದಲು, ಬಣ್ಣಗೆಟ್ಟ ಮುಖ, ಹಲವು ದಿನಗಳಿಂದ ಸ್ನಾನ ಕಾಣದ ಮೈ, ಹರಿದ ಪ್ಯಾಂಟು, ಪುಟ್ಟಮಕ್ಕಳು ಗೀಚಿದಂತಿರುವ ನೂರೆಂಟು ಗೆರೆಗೀಟುಗಳಿಂದ ಕೂಡಿದ ಹರಕುಮುರುಕು ಅಂಗಿ, ಪ್ರಕ್ಷಾಲನವಿಲ್ಲದೆ ರಸಿಕೆಕಟ್ಟಿದ ಕೆಂಡಗಣ್ಣು, ಬಾಯಿ ತೆರೆದರೆ ಬ್ರಹ್ಮಾಂಡದರ್ಶನ. ಅಂಥ ಒಬ್ಬ ಭಿಕಾರಿ ತನ್ನ ಅಂಗಡಿಯೆದುರು ಅಪಶಕುನದಂತೆ ಕೈಕಾಲು ಮುದುರಿಕೊಂಡು ನಿದ್ದೆ ಹೊಡೆಯುವುದನ್ನು ನೋಡಿ ಅಂಗಡಿಯ ಮಾಲಿಕನಿಗೆ ನಖಶಿಖಾಂತ ಕೋಪ ಬಂದುಬಿಡುತ್ತಿತ್ತು. “ಕತ್ತೇ ಭಡವಾ” ಎಂದು ಗಟ್ಟಿಯಾಗಿ ಕಿರುಚುತ್ತಿದ್ದ. ಆತನ ಗಂಟಲಿಗೆ ಬೆಚ್ಚಿಬಿದ್ದೆದ್ದ ಭಿಕ್ಷುಕ ಕಂಗಾಲಾಗಿ ದಿಕ್ಕಾಪಾಲಾಗಿ ಓಡಿಹೋಗುತ್ತಿದ್ದ.
ಆದರೆ ಅದು, ಒಂದು ದಿನದ ಮಟ್ಟಿಗೆ ಮಾತ್ರ. ಮರುದಿನ ಅಂಗಡಿ ಬಾಗಿಲು ತೆರೆಯುವಾಗ ಭಿಕ್ಷುಕನ ಸವಾರಿ ಅಲ್ಲಿ ಹಾಜರಿರುತ್ತಿತ್ತು. ಮತ್ತೆ ಮಾಲಿಕನ ಅರಚಾಟ ನಡೆಯುತ್ತಿತ್ತು. ಈ ಕ್ರಮ ಒಂದು ದಿನವೂ ತಪ್ಪದಂತೆ ನಡೆದುಕೊಂಡು ಬರುತ್ತಿತ್ತು. ಕೆಲವೊಮ್ಮೆ ಮಾಲೀಕ ದೊಡ್ಡ ದೊಣ್ಣೆ ಎತ್ತಿಕೊಂಡು ಬಂದು ಭಿಕ್ಷುಕನಿಗೆ ಬಾರಿಸುತ್ತಿದ್ದ. ಪೆಟ್ಟು ತಿಂದ ಭಿಕ್ಷುಕ ನೋವಿನಿಂದ ಕೈಕಾಲು ಬಡಿದುಕೊಂಡು ಓಡಿಹೋಗುತ್ತಿದ್ದ. ಇನ್ನು ಕೆಲವೊಮ್ಮೆ ಮಾಲೀಕ ಒಂದು ಬಕೆಟ್ ತಣ್ಣಗೆ ನೀರು ತಂದು ಈತನ ಮೈಮೇಲೆ ಸುರಿಯುತ್ತಿದ್ದ. ಮತ್ತೆ ಕೆಲವೊಮ್ಮೆ ಬೂಟು ಹಾಕಿಕೊಂಡು ಬಂದು ಮಲಗಿ ಗೊರಕೆ ಹೊಡೆಯುತ್ತಿದ್ದವನನ್ನು ಒದ್ದದ್ದೂ ಉಂಟು. ಒಮ್ಮೆ, ಅಂಗಡಿಯ ಬಾಗಿಲು ತೆಗೆಯುವಾಗ, ಮೂತ್ರವಿಸರ್ಜನೆಯ ವಾಸನೆ ಮಾಲೀಕನ ಮುಖಕ್ಕೆ ಹೊಡೆಯಿತು. ಈ ದರಿದ್ರ ಮನುಷ್ಯ ಇಲ್ಲಿ ಮಲಗುವುದು ಮಾತ್ರವಲ್ಲದೆ ತನ್ನ ದೇಹಬಾಧೆಗಳನ್ನೂ ತೀರಿಸಿಕೊಳ್ಳುತ್ತಾನೆಂದು ಅವತ್ತು ಅವನಿಗೆ ಮೈಯೆಲ್ಲ ಉರಿದಿತ್ತು. ಕೈಗೆ ಸಿಕ್ಕಿದ್ದನ್ನೆಲ್ಲ ಆ ಭಿಕ್ಷುಕನ ಮೇಲೆ ಎತ್ತಿಹಾಕಿ ತನ್ನ ಕೋಪ ತೋರಿಸಿದ್ದ.