ವಿಷಯದ ವಿವರಗಳಿಗೆ ದಾಟಿರಿ

Archive for

15
ಮಾರ್ಚ್

ಮೂಕಜ್ಜಿಯ ಕನಸುಗಳು (ಪುಸ್ತಕ ಪರಿಚಯ)

– ನಾಗೇಶ ಮೈಸೂರು

image1‘ … ಅಂಥ ಅಜ್ಜಿಯೊಬ್ಬಳು ಇದ್ದಾಳೆಯೇ ಎಂಬ ಸಂಶಯ ಬಂದರೆ, ಸಮ್ಮ ಸಂಸ್ಕೃತಿಯ ನಂಬಿಕೆಗಳ ಕುರಿತಾದ ಸಂಶಯ ಪಿಶಾಚಿಯ ರೂಪವೇ ಅವಳೆಂದು ತಿಳಿದರಾಯ್ತು. ಆದರೂ ಅವಳು ನಮ್ಮಲ್ಲನೇಕರಲ್ಲಿ ಪಿಶಾಚಿಯಂತಲ್ಲ, ಪ್ರಾಮಾಣಿಕ ಸಂದೇಹಗಳ ರೂಪದಲ್ಲಿ ಬದುಕಿಕೊಂಡೇ ಇದ್ದಾಳೆ…. ‘

‘ಸಾಂಪ್ರದಾಯಿಕತೆಯಿಂದ ಹೆರೆಗಟ್ಟಿದ ಮನಸುಗಳನ್ನು ತುಸುತುಸುವಾಗಿ ಕಾಯಿಸಿ, ಕರಗಿಸುವ ಕೆಲಸ ಅವಳದ್ದು…’

ಬಹುಶ ಮುನ್ನುಡಿಯಲ್ಲಿ ಶಿವರಾಮಕಾರಂತರು ಕಾಣಿಸಿರುವ ಇವೆರಡು ಸಾಲುಗಳು ಸಾಕೇನೋ – ಈ ಅದ್ಭುತ ಪುಸ್ತಕದ ಸಾರಾಂಶವನ್ನು ಎರಡೇ ಮಾತಲ್ಲಿ ಹಿಡಿದಿಡಲು. ಪರಂಪರಾನುಗತವಾಗಿ ಹರಿದುಬಂದ ನಂಬಿಕೆ, ಸಂಪ್ರದಾಯಗಳಲ್ಲಿ ನಿಮಿತ್ತವೆಂಬಂತೆ ಬದುಕು ಸಾಗಿಸಿದ ಜನಮಾನಸದ ಕೆಲವಾದರೂ ಚಿತ್ತಗಳನ್ನು ಕೆದಕಿ ಕದಡಿರಬಹುದಾದ ‘ಏನೀ ಜಗ ? ನಾನೇಕಿಲ್ಲಿದ್ದೇನೆ ?’ ಎಂಬ ಗಹನ ಪ್ರಶ್ನೆಗಳಿಗೆ ತನ್ನರಿವಿನ ಪರಿಧಿಯನುಸಾರ ಉತ್ತರ ಕಂಡುಕೊಳ್ಳುವ ಸೂಕ್ಷ್ಮಚಿತ್ರಣ ಈ ಕಾದಂಬರಿಯ ಸ್ಥೂಲ ಮೊತ್ತ ಎಂದರೆ ತಪ್ಪಾಗಲಾರದು.
ಮತ್ತಷ್ಟು ಓದು »