ವಿಷಯದ ವಿವರಗಳಿಗೆ ದಾಟಿರಿ

Archive for

19
ಮಾರ್ಚ್

ಪರೀಕ್ಷೆಯ ಲೆಕ್ಕಾಚಾರ

– ನಾಗೇಶ ಮೈಸೂರು

2284916ಒಲ್ಲದ ಮನಸ್ಸಿನಿಂದ ಪುಸ್ತಕ ಹಿಡಿದು ಪರೀಕ್ಷೆಗೆ ಓದಿಕೊಳ್ಳಲು ಒದ್ದಾಡುತ್ತಿದ್ದ ಮಗನನ್ನು ಸಾಮ, ದಾನ, ದಂಡ, ಭೇಧೋಪಾಯಗಳೆಲ್ಲದರ ಬಳಕೆ ಮಾಡುತ್ತ ಸಿದ್ಧಗೊಳಿಸಲು ಹೆಣಗಾಡುತ್ತಾ ಕುಳಿತಿದ್ದೆ. ಅದೇ ಹೊತ್ತಿನಲ್ಲಿ ಟೀವಿಯಲ್ಲಿ ಪ್ರವೇಶ ಪರೀಕ್ಷೆಯ ನಂತರದ ಸವಾಲು, ಮತ್ತದನ್ನೆದುರಿಸುವ ಬಗೆಯನ್ನು ಕುರಿತು ಆತಂಕಪೂರ್ಣ ಚರ್ಚೆ ನಡೆಯುತ್ತಾ ಇತ್ತು. ಒಂದು ಕಾಲದಲ್ಲಿ ನಾವೂ ಇದನ್ನೆಲ್ಲಾ ಅನುಭವಿಸಿ ಮುಂದೆ ಸಾಗಿದ್ದವರೇ. ಆದರೆ ಆ ದಿನದಲ್ಲಿ ಕಾಡಿದ್ದ ಅದೆಷ್ಟೋ ಆತಂಕ, ಒತ್ತಡಗಳು ಕೇವಲ ಆತಂಕ, ಅಜ್ಞಾನ, ನಿಖರ ಗಮ್ಯವಿಲ್ಲದ ಒದ್ದಾಟಗಳ ಕಾರಣದಿಂದ ಉಂಟಾದದ್ದು. ಇಂದು ತಿರುಗಿ ನೋಡಿದರೆ ನಾನು ಓದಿದ್ದಕ್ಕೂ, ಮಾಡುತ್ತಿರುವ ಕೆಲಸಕ್ಕೂ ನೇರ ಸಂಬಂಧವೇ ಇಲ್ಲ. ವಿದ್ಯಾರ್ಹತೆ ಕೇವಲ ಕೆಲಸ ಗಿಟ್ಟಿಸುವ ಆರಂಭದ ರಹದಾರಿಯಾಯ್ತೆಂಬುದನ್ನು ಬಿಟ್ಟರೆ ಮಿಕ್ಕೆಲ್ಲಾ  ಹೊಸ ಹೋರಾಟ, ಪರೀಕ್ಷೆಗಳೇ ಎದುರಾದದ್ದು ವಾಸ್ತವ ಸತ್ಯ. ನಮ್ಮ ವಿದ್ಯಾರ್ಹತೆ, ವಿದ್ಯಾಭ್ಯಾಸ ಆ ಹೋರಾಟಕ್ಕೆ ನಮ್ಮನ್ನು ಸಿದ್ದಪಡಿಸಿರಲೇ ಇಲ್ಲ. ಆದರೂ ನಾವು ಅದೇ ಮರೀಚಿಕೆಯ ಹಿಂದೆ ನಮ್ಮ ಭವಿಷ್ಯದ ಪೀಳಿಗೆಯನ್ನು ತಳ್ಳುತ್ತ ಕುರಿಮಂದೆಗಳ ಹಾಗೆ ಸಾಗುತ್ತಿದ್ದೇವಲ್ಲ ಎಂದೆನಿಸಿ ಖೇದವೂ ಆಯ್ತು.
ಮತ್ತಷ್ಟು ಓದು »