ವಿಷಯದ ವಿವರಗಳಿಗೆ ದಾಟಿರಿ

Archive for

26
ಮಾರ್ಚ್

ಬಾಜಿರಾಯನ ಉತ್ತರದ ದಂಡಯಾತ್ರೆ

-ರಂಜನ್ ಕೇಶವ

3542284598_ea990137ddಏಪ್ರಿಲ್ 9, 1737

ಬಾಜಿರಾಯನ ಅಶ್ವದಳ ತಲ್ಕತೋರಾ ಎಂಬಲ್ಲಿ ಕೆಂಪುಕೋಟೆ ತೋರುವಲ್ಲೇ ಡೇರೆ ಹಾಕಿತ್ತು. ಮರಾಠರ ಖಡ್ಗಗಳನ್ನು ಹೊತ್ತ ಈ ಅಶ್ವಬಲ ದಿನಕ್ಕೆ ನಲವತ್ತು ಕಿಲೋಮೀಟರ್ ವೇಗದಲ್ಲಿ ಒಂದೇ ಸಮನೇ ಯಾವ ಮುನ್ಸೂಚನೆಯಿಲ್ಲದೇ ಒಂದೇ ರಭಸಕ್ಕೆ ದೆಹಲಿಯ ಸರಹದ್ದನ್ನು ತಲುಪಿತ್ತು. ಇದರ ಸುದ್ದಿ ಹಬ್ಬಿದಂತೆ ಮೊಘಲ್ ಸಿಂಹಾಸನ ಗಡ ಗಡ ನಡುಗಿ ಅಲ್ಲಿಂದ ಕಾಲ್ಕೀಳಲು ದೋಣಿಗಳನ್ನು ಸಿದ್ಧಪಡಿಸಿದರು. ಅದರಲ್ಲೂ ಬಾಜಿರಾಯನ ಸೋಲಿಲ್ಲದ ಜಯಭೇರಿ ಭಾರತದುದ್ದಗಲಕ್ಕೂ ಹಬ್ಬಿತ್ತು. ಅವನ ಪರಾಕ್ರಮವನ್ನೆದುರಿಸುವ ಧೈರ್ಯ ಇವರಿಗೆಲ್ಲಿಂದ ಬರಬೇಕು ಪಾಪ. ಸಾವಿರ ವರ್ಷದ ಹಿಂದೆ ಇಮ್ಮಡಿ ಪುಲಕೇಶಿ ದಕ್ಷಿಣದಿಂದ ಉತ್ತರಕ್ಕೆ ಜಯಭೇರಿ ಬಾರಿಸಿದ್ದ. ಅದರ ನಂತರ ಈಗ ಬಾಜಿರಾಯ ಎರಡನೆಯ ಬಾರಿ ಉತ್ತರ ಭಾರತವನ್ನು ರಕ್ಷಿಸಲು ಕುದುರೆಯೇರಿ ಬಂದಿದ್ದ. ಮತ್ತಷ್ಟು ಓದು »