ವಿಷಯದ ವಿವರಗಳಿಗೆ ದಾಟಿರಿ

Archive for

19
ಮಾರ್ಚ್

ಪರೀಕ್ಷೆಯ ಲೆಕ್ಕಾಚಾರ

– ನಾಗೇಶ ಮೈಸೂರು

2284916ಒಲ್ಲದ ಮನಸ್ಸಿನಿಂದ ಪುಸ್ತಕ ಹಿಡಿದು ಪರೀಕ್ಷೆಗೆ ಓದಿಕೊಳ್ಳಲು ಒದ್ದಾಡುತ್ತಿದ್ದ ಮಗನನ್ನು ಸಾಮ, ದಾನ, ದಂಡ, ಭೇಧೋಪಾಯಗಳೆಲ್ಲದರ ಬಳಕೆ ಮಾಡುತ್ತ ಸಿದ್ಧಗೊಳಿಸಲು ಹೆಣಗಾಡುತ್ತಾ ಕುಳಿತಿದ್ದೆ. ಅದೇ ಹೊತ್ತಿನಲ್ಲಿ ಟೀವಿಯಲ್ಲಿ ಪ್ರವೇಶ ಪರೀಕ್ಷೆಯ ನಂತರದ ಸವಾಲು, ಮತ್ತದನ್ನೆದುರಿಸುವ ಬಗೆಯನ್ನು ಕುರಿತು ಆತಂಕಪೂರ್ಣ ಚರ್ಚೆ ನಡೆಯುತ್ತಾ ಇತ್ತು. ಒಂದು ಕಾಲದಲ್ಲಿ ನಾವೂ ಇದನ್ನೆಲ್ಲಾ ಅನುಭವಿಸಿ ಮುಂದೆ ಸಾಗಿದ್ದವರೇ. ಆದರೆ ಆ ದಿನದಲ್ಲಿ ಕಾಡಿದ್ದ ಅದೆಷ್ಟೋ ಆತಂಕ, ಒತ್ತಡಗಳು ಕೇವಲ ಆತಂಕ, ಅಜ್ಞಾನ, ನಿಖರ ಗಮ್ಯವಿಲ್ಲದ ಒದ್ದಾಟಗಳ ಕಾರಣದಿಂದ ಉಂಟಾದದ್ದು. ಇಂದು ತಿರುಗಿ ನೋಡಿದರೆ ನಾನು ಓದಿದ್ದಕ್ಕೂ, ಮಾಡುತ್ತಿರುವ ಕೆಲಸಕ್ಕೂ ನೇರ ಸಂಬಂಧವೇ ಇಲ್ಲ. ವಿದ್ಯಾರ್ಹತೆ ಕೇವಲ ಕೆಲಸ ಗಿಟ್ಟಿಸುವ ಆರಂಭದ ರಹದಾರಿಯಾಯ್ತೆಂಬುದನ್ನು ಬಿಟ್ಟರೆ ಮಿಕ್ಕೆಲ್ಲಾ  ಹೊಸ ಹೋರಾಟ, ಪರೀಕ್ಷೆಗಳೇ ಎದುರಾದದ್ದು ವಾಸ್ತವ ಸತ್ಯ. ನಮ್ಮ ವಿದ್ಯಾರ್ಹತೆ, ವಿದ್ಯಾಭ್ಯಾಸ ಆ ಹೋರಾಟಕ್ಕೆ ನಮ್ಮನ್ನು ಸಿದ್ದಪಡಿಸಿರಲೇ ಇಲ್ಲ. ಆದರೂ ನಾವು ಅದೇ ಮರೀಚಿಕೆಯ ಹಿಂದೆ ನಮ್ಮ ಭವಿಷ್ಯದ ಪೀಳಿಗೆಯನ್ನು ತಳ್ಳುತ್ತ ಕುರಿಮಂದೆಗಳ ಹಾಗೆ ಸಾಗುತ್ತಿದ್ದೇವಲ್ಲ ಎಂದೆನಿಸಿ ಖೇದವೂ ಆಯ್ತು.
ಮತ್ತಷ್ಟು ಓದು »

17
ಮಾರ್ಚ್

ಗೂಗಲ್ ಸರ್ಚ್ ಮಾಡಲು ಕೆಲವು ಸುಲಭ ಟ್ರಿಕ್ಸ್

-ಅವಿನಾಶ್ ಬಿ

google_lupaಹಿಂದೆಂದೂ ಗೂಗಲ್ ಎಂಬ ಕ್ಷಿಪ್ರ ಸಂಶೋಧಕ ಇರಲಿಲ್ಲ. ಮುಂದೆ ಅದು ಇಲ್ಲದೆ ಜೀವನವೇ ಮುಂದೆ ಸಾಗದು ಎಂಬಂತಹಾ ಪರಿಸ್ಥಿತಿ ನಿರ್ಮಾಣವಾಗಿರುವುದು ಹೆಚ್ಚಿನವರಿಗೆ ಗೊತ್ತು. ಅಂತರ್ಜಾಲದಲ್ಲಿ ಮಾಹಿತಿಯ ಹುಡುಕಾಟಕ್ಕೆ ಸಂಬಂಧಿಸಿದಂತೆ ಗೂಗ್ಲಿಸುವುದು ಎಂಬ ಕ್ರಿಯಾಪದವೇ ಹುಟ್ಟಿಕೊಂಡಿದೆ ಎಂದಾದರೆ, ಸರ್ಚ್ ಎಂಜಿನ್ ಗೂಗಲ್‌ನ ಸಾಮರ್ಥ್ಯ ಮತ್ತು ವ್ಯಾಪ್ತಿ ಎಷ್ಟೆಂಬುದು ವೇದ್ಯವಾಗುತ್ತದೆ. ಅಂತಹಾ ಗೂಗಲ್‌ನಲ್ಲಿ ಯಾವುದೇ ಮಾಹಿತಿ ಹುಡುಕುವುದಕ್ಕಾಗಿ ಕೆಲವೊಂದು ಸರಳವಾದ ಟ್ರಿಕ್ಸ್ ಇಲ್ಲಿದೆ. ನಿಮಗೆ ಉಪಯುಕ್ತವಾಗುತ್ತದೆ.

* ಯಾವುದೇ ನಿರ್ದಿಷ್ಟ ಪದ ಗುಚ್ಛ, ಉದಾಹರಣೆಗೆ ಒಂದು ಹಾಡಿನ ಬಗ್ಗೆ ಮಾಹಿತಿ ಬೇಕೆಂದಾದರೆ ಮತ್ತು ಆ ಪದಗಳು ಇರಲೇಬೇಕಾದ ಒಂದು ವಾಕ್ಯವನ್ನು ಹುಡುಕಿ ತೋರಿಸಬೇಕೆಂದಾದರೆ ಗೂಗಲ್‌ನಲ್ಲಿ ಸರ್ಚ್ ಮಾಡುವಾಗ ಉದ್ಧರಣ ಚಿಹ್ನೆ (ಕೋಟ್ ಮಾರ್ಕ್ಸ್) ಬಳಸಿ. ಉದಾಹರಣೆಗೆ, “ಕನ್ನಡದಲ್ಲಿ ಬರೆಯುವುದು ಹೇಗೆ” ಅಂತ ಸರ್ಚ್ ಮಾಡಿದರೆ, ಆ ಮೂರೂ ಅಕ್ಷರಗಳು ಒಟ್ಟಾಗಿಯೇ ಇರುವ ಪುಟಗಳು ಮಾತ್ರವೇ ಕಾಣಸಿಗುತ್ತವೆ. ಕೋಟ್ ಮಾರ್ಕ್ ತೆಗೆದರೆ, ಕನ್ನಡ, ಬರೆಯುವುದು, ಹೇಗೆ ಎಂಬ ಅಕ್ಷಗಳಿರುವ ಎಲ್ಲ ಪುಟಗಳೂ ಕಾಣಸಿಗುತ್ತವೆ.

ಮತ್ತಷ್ಟು ಓದು »

15
ಮಾರ್ಚ್

ಮೂಕಜ್ಜಿಯ ಕನಸುಗಳು (ಪುಸ್ತಕ ಪರಿಚಯ)

– ನಾಗೇಶ ಮೈಸೂರು

image1‘ … ಅಂಥ ಅಜ್ಜಿಯೊಬ್ಬಳು ಇದ್ದಾಳೆಯೇ ಎಂಬ ಸಂಶಯ ಬಂದರೆ, ಸಮ್ಮ ಸಂಸ್ಕೃತಿಯ ನಂಬಿಕೆಗಳ ಕುರಿತಾದ ಸಂಶಯ ಪಿಶಾಚಿಯ ರೂಪವೇ ಅವಳೆಂದು ತಿಳಿದರಾಯ್ತು. ಆದರೂ ಅವಳು ನಮ್ಮಲ್ಲನೇಕರಲ್ಲಿ ಪಿಶಾಚಿಯಂತಲ್ಲ, ಪ್ರಾಮಾಣಿಕ ಸಂದೇಹಗಳ ರೂಪದಲ್ಲಿ ಬದುಕಿಕೊಂಡೇ ಇದ್ದಾಳೆ…. ‘

‘ಸಾಂಪ್ರದಾಯಿಕತೆಯಿಂದ ಹೆರೆಗಟ್ಟಿದ ಮನಸುಗಳನ್ನು ತುಸುತುಸುವಾಗಿ ಕಾಯಿಸಿ, ಕರಗಿಸುವ ಕೆಲಸ ಅವಳದ್ದು…’

ಬಹುಶ ಮುನ್ನುಡಿಯಲ್ಲಿ ಶಿವರಾಮಕಾರಂತರು ಕಾಣಿಸಿರುವ ಇವೆರಡು ಸಾಲುಗಳು ಸಾಕೇನೋ – ಈ ಅದ್ಭುತ ಪುಸ್ತಕದ ಸಾರಾಂಶವನ್ನು ಎರಡೇ ಮಾತಲ್ಲಿ ಹಿಡಿದಿಡಲು. ಪರಂಪರಾನುಗತವಾಗಿ ಹರಿದುಬಂದ ನಂಬಿಕೆ, ಸಂಪ್ರದಾಯಗಳಲ್ಲಿ ನಿಮಿತ್ತವೆಂಬಂತೆ ಬದುಕು ಸಾಗಿಸಿದ ಜನಮಾನಸದ ಕೆಲವಾದರೂ ಚಿತ್ತಗಳನ್ನು ಕೆದಕಿ ಕದಡಿರಬಹುದಾದ ‘ಏನೀ ಜಗ ? ನಾನೇಕಿಲ್ಲಿದ್ದೇನೆ ?’ ಎಂಬ ಗಹನ ಪ್ರಶ್ನೆಗಳಿಗೆ ತನ್ನರಿವಿನ ಪರಿಧಿಯನುಸಾರ ಉತ್ತರ ಕಂಡುಕೊಳ್ಳುವ ಸೂಕ್ಷ್ಮಚಿತ್ರಣ ಈ ಕಾದಂಬರಿಯ ಸ್ಥೂಲ ಮೊತ್ತ ಎಂದರೆ ತಪ್ಪಾಗಲಾರದು.
ಮತ್ತಷ್ಟು ಓದು »

13
ಮಾರ್ಚ್

ವಾಸನ್ ಐ ಕೇರ್ ಎಂಬ “ಡೋಂಟ್ ಕೇರ್” ಕಂಪೆನಿಯ ಕತೆ

_ ರೋಹಿತ್ ಚಕ್ರತೀರ್ಥ

Vasan-WhenAt60ವಾಸನ್ ಐ ಕೇರ್ – ಹೆಸರು ಕೇಳಿಯೇ ಇರುತ್ತೀರಿ. ಟಿವಿಯಲ್ಲಿ, ಸಿನೆಮಾ ಪರದೆಗಳಲ್ಲಿ, ಮಾಲ್‍ಗಳಲ್ಲಿ, ರಸ್ತೆಬದಿಯ ಆಳೆತ್ತರದ ಹೋರ್ಡಿಂಗ್‍ಗಳಲ್ಲಿ, ಪತ್ರಿಕೆಯ ಪುಟಗಳಲ್ಲಿ – ಹೀಗೆ ಎಲ್ಲೆಂದರಲ್ಲಿ ಇದರ ಜಾಹೀರಾತು ನಿಮ್ಮ ಕಣ್ಣಿಗೆ ಬಿದ್ದಿರುತ್ತದೆ. ನಿಮ್ಮ ಕಣ್ಣುಗಳ ಕಾಳಜಿ ನಾವು ಮಾಡುತ್ತೇವೆ; ಒಮ್ಮೆ ಭೇಟಿ ಕೊಡಿ ಎಂದು ಅವರು ಪ್ರೀತಿಯಿಂದ ಕರೆದದ್ದನ್ನು ಕಂಡು ಖುಷಿಯಾಗಿ ಒಂದೆರಡು ಬಾರಿ ಭೇಟಿ ಇತ್ತಿರಲೂಬಹುದು. ಅಥವಾ ಈ ಲೇಖನವನ್ನು ನೀವು ವಾಸನ್ ಐ ಕೇರ್‍ನಲ್ಲಿ ಪರೀಕ್ಷಿಸಿ ಕೊಂಡ ಕನ್ನಡಕದ ಮೂಲಕವೇ ಓದುತ್ತಿರಲೂಬಹುದು! ಬೆಂಗಳೂರಂಥ ಸಿಟಿಗಳಲ್ಲಿ ಬೀದಿಗೊಂದರಂತೆ ತಲೆ ಎತ್ತಿರುವ ವಾಸನ್ ನೇತ್ರಾಸ್ಪತ್ರೆಗಳು ಕೇವಲ ಮೂರು ವರ್ಷಗಳ ಹಿಂದೆ ಅಪರೂಪವಾಗಿದ್ದವು. ಐದು ವರ್ಷಗಳ ಹಿಂದೆಯಂತೂ ಅವುಗಳ ಹೆಸರನ್ನೇ ಯಾರೂ ಕೇಳಿರಲಿಲ್ಲ. ಈ ಕ್ಲಿನಿಕ್ ಯಾ ಆಸ್ಪತ್ರೆ ಅಷ್ಟೊಂದು ವೇಗವಾಗಿ ಬೆಳೆಯಲು ಏನು ಕಾರಣ? ಇದರ ಹಿಂದಿನ ಪ್ರೇರಕಶಕ್ತಿ ಯಾರು? ಇವನ್ನೆಲ್ಲ ತಿಳಿದುಕೊಳ್ಳಬೇಕಾದರೆ ನಾವು ವಾಸನ್ ಚರಿತ್ರೆಯಲ್ಲಿ ನಡೆದುಹೋಗಿರುವ ಒಂದಷ್ಟು ಘಟನೆಗಳನ್ನು ಬಹಳ ಸೂಕ್ಷ್ಮವಾಗಿ ಅರ್ಥ ಮಾಡಿಕೊಳ್ಳಬೇಕಾಗುತ್ತದೆ. ಅಂದಹಾಗೆ, 2004ರಿಂದ 14ರವರೆಗೆ ನಮ್ಮ ದೇಶವನ್ನು ಆಳಿಹೋದ ಯುಪಿಎ ಸರಕಾರದ ಹತ್ತುಹಲವು ಹಗರಣಗಳ ಪಟ್ಟಿಯಲ್ಲಿ ವಾಸನ್ ಹೆಸರನ್ನೂ ದೊಡ್ಡದಾಗೇ ಬರೆಯಬೇಕಾಗುತ್ತದೆಂಬ ವಿಷಯ ನಿಮಗೆ ಅಚ್ಚರಿ ಮೂಡಿಸಬಹುದು. ಇಡೀ ಕತೆ ಶುರುವಾಗುವುದು 2007ರಲ್ಲಿ.

ಮತ್ತಷ್ಟು ಓದು »

12
ಮಾರ್ಚ್

“ಯೇಗ್ದಾಗೆಲ್ಲಾ ಐತೆ ” (ಪುಸ್ತಕ ಪರಿಚಯ)

– ನಾಗೇಶ ಮೈಸೂರು

4046ಕನ್ನಡದಲ್ಲಿ ಪುಸ್ತಕಗಳು ಒಂದು ಮುದ್ರಣ ಕಾಣುವುದೇ ಕಷ್ಟ. ಹೆಚ್ಚು ಪುಸ್ತಕಗಳು ಅಚ್ಚಿನ ಮನೆಯ ಮುಖವನ್ನೆ ಕಾಣುವುದಿಲ್ಲ. ಅಂತದ್ದರಲ್ಲಿ ಪುಸ್ತಕವೊಂದು ಹತ್ತು ಬಾರಿಗೂ ಮೀರಿ ಮುದ್ರಣ ಭಾಗ್ಯ ಕಂಡಿದೆಯೆಂದರೆ ? ಖಂಡಿತ ಅದರಲ್ಲೇನೊ ವಿಶೇಷ ಇರಲೇಬೇಕು. ಹಾಗೆಂದುಕೊಂಡೇ ಬೆಂಗಳೂರಿಗೆ ಭೇಟಿಯಿತ್ತಾಗ ಕೊಂಡು ತಂದ ಪುಸ್ತಕ – ‘ಯೇಗ್ದಾಗೆಲ್ಲಾ ಐತೆ’. ೨೫ ಸಾವಿರಕ್ಕೂ ಅಧಿಕ ಪ್ರತಿಗಳು ಅಚ್ಚಾಗಿದ್ದೇ ಅಲ್ಲದೆ ಇತರ ನಾಲ್ಕು ಭಾಷೆಗಳಿಗೂ ಅನುವಾದವಾಗಿದ್ದು, ನಾಟಕದ ರೂಪದಲ್ಲು ಜನಮನ ತಲುಪಿದ್ದು – ಇದೆಲ್ಲಾ ನೋಡಿದರೆ ಚಾಪೆಯಡಿ ನುಸುಳುವ ನೀರಂತೆ ಹರಿದು ಜನಪ್ರಿಯವಾಗುವುದು ಈ ಪುಸ್ತಕದ ‘ಯೇಗ್ದಾಗೇ’ ಇರುವಂತೆ ಕಾಣುತ್ತಿದೆ.

ಒಂಬತ್ತಿಂಚಿನ ಪೀಜಾಗು ೩೦೦ ರಿಂದ ೬೦೦ ರೂಪಾಯಿ ಪೀಕುವ ಈ ಕಾಲದಲ್ಲಿ, ೧೪೦ ಪುಟಗಳ ಈ ಪುಸ್ತಕ, ಎಷ್ಟೋ ಕಡೆ   ತೆರುವ  ಕಾಫಿಯ  ಕಾಸಿಗಿಂತಲು   ಅಗ್ಗವಾಗಿ  ೬೦  ರೂಪಾಯಿಗೆ ಸಿಕ್ಕಿತ್ತು ! ರೆಸ್ಟೋರೆಂಟಿನಲ್ಲಿ ಹಿಂದೆಮುಂದೆ ನೋಡದೆ ಸಾವಿರಾರು ಸುರಿವ ನಮಗೆ – ವರ್ಷಕ್ಕೊಂದು  ಸಾರಿಯಾದರು ಕನ್ನಡ ಪುಸ್ತಕ ಕೊಳ್ಳುವುದು ‘ ಯೇಗ್ದಾಗೆ ಬರ್ದಿಲ್ಲ’ ಅಂತ ಕಾಣುತ್ತೆ. ಆದರು ಪ್ಲೀಸ್ – ಓದಲಿ, ಬಿಡಲಿ ಛಾನ್ಸ್ ಸಿಕ್ಕಿದ್ರೆ ಈ ಪುಸ್ತಕ ಮಾತ್ರ ಕೊಂಡುಕೊಂಡು ಬಿಡಿ. ಯಾಕೇಂದ್ರೆ ಈ ಪುಸ್ತಕ ಮಾರಿ ಬಂದ ಆದಾಯವೆಲ್ಲ ನೇರವಾಗಿ ಹೋಗೋದು ಬೆಳಗೆರೆಯ ಶ್ರೀ ಶಾರದಾಮಂದಿರ ವಿದ್ಯಾಸಂಸ್ಥೆಯ ಶೈಕ್ಷಣಿಕ ಚಟುವಟಿಕೆಗಳಿಗೆ. ಓದದೇ ಇದ್ದರೂ ನಿಮ್ಮಿಂದ ಪುಕ್ಕಟೆಯಾಗಿ ಸಮಾಜ ಸೇವೆ ಮಾಡಿಸುತ್ತೆ ಈ ಪುಸ್ತಕ – ಅದೂ ತೀರಾ ಅಗ್ಗವಾಗಿ!

ಈ ಪುಸ್ತಕ ಮೂಲತಃ ಶ್ರೀ ಸಾಮಾನ್ಯನಂತಿದ್ದೂ ಅದ್ಭುತ ಯೋಗಿಯ ಬಾಳು ಬದುಕಿದ ಶ್ರೀ ಮುಕುಂದೂರು ಸ್ವಾಮಿಗಳ ‘ಪವಾಡ’ ವನ್ನು ಕುರಿತದ್ದು. ಪವಾಡವೆಂದರೆ ಇದು ಯಾವುದೊ ‘ಛೂ ಮಂತ್ರಕಾಳಿ’ಯ ತರದ ಬೂಟಾಟಿಕೆಯ ಪುಸ್ತಕವೆಂದು ಮೂಗು ಮುರಿಯಬೇಡಿ ತಾಳಿ… ಈ ಸ್ವಾಮಿಗಳನ್ನು ಹತ್ತಿರದಿಂದ ಕಂಡು ಅಲ್ಲೇನಾದರು ಢೋಂಗಿತನವಿತ್ತೆ ಎಂದು ಸ್ವತಃ ತಾವೇ ಅಳೆದು ನೋಡಲೆತ್ನಿಸಿದ ಶ್ರೀ ಬೆಳಗೆರೆ ಕೃಷ್ಣಶಾಸ್ತ್ರಿಗಳು, ವಿಜ್ಞಾನದ ನಿಲುಕಿಗೆ ಸಿಗದ ನೂರಾರು ಘಟನೆ, ಅನುಭವಗಳಿಂದ ವಿಸ್ಮಿತರಾಗಿ ನೆನಪಿನ ಕೋಶದಿಂದ ಸಿಕ್ಕಷ್ಟನ್ನು ಹೆಕ್ಕಿ ಕೊನೆಗೆ ಈ ಪುಸ್ತಕರೂಪದಲ್ಲಿ ಕಟ್ಟಿಕೊಟ್ಟಿದ್ದಾರೆ. ಒಂದು ವೇಳೆ ಬರೆಯುವ ಉದ್ದೇಶದಿಂದಲೇ ಅಭ್ಯಸಿಸಿ ಬರೆದಿದ್ದರೆ ಈ ಪುಸ್ತಕ ಇನ್ನೂ ಹೇಗಿರುತ್ತಿತ್ತೊ ?!
ಮತ್ತಷ್ಟು ಓದು »

10
ಮಾರ್ಚ್

ಪಕ್ಷಿಗಳಿಗೆ ಒಂದು ಬೊಗಸೆ ನೀರು ಕೊಡಿ.ಪ್ಲೀಸ್…!

9
ಮಾರ್ಚ್

ನನ್ನಿ- ತಾತ್ವಿಕ ಒಳಸುಳಿಗಳ ವಿಶ್ಲೇಷಣೆ.

ನವೀನ ಗಂಗೋತ್ರಿ

12122868_977678548941892_2941475822589158080_nಗಂಭೀರ ಓದುಗರು, ನೋಡುಗರು, ಕನ್ನಡದಲ್ಲಿ ಕಡಿಮೆಯಾದ್ದರಿಂದಲೇ ಕಡಮೆ ದರ್ಜೆಯ ಪತ್ರಿಕೆಗಳು, ಸಿನಿಮಾಗಳು, ಕಾದಂಬರಿಗಳು ನಮ್ಮಲ್ಲಿ ನಾಯಿಕೊಡೆಯಂತೆ ಹುಟ್ಟಿಕೊಂಡಿವೆ ಎನ್ನುವ ಮಾತನ್ನು ಆಗಾಗ ನಿರಾಶಾವಾದಿ ವಿಮರ್ಶಕರೂ, ತಮ್ಮ ಕಣ್ಣೀರಿನ ಕಾರ್ಯಕ್ರಮಗಳ ಸಮರ್ಥಕರಾದ ಚಾನೆಲ್ಗಳೂ ಹೇಳಿಕೊಂಡು ಬಂದಿವೆ. ಸಕಾರಾತ್ಮಕ ಧೋರಣೆಯ ಕೆಲವು ಬರಹಗಾರರು, ಚಿಂತಕರು ಓದುಗರನ್ನು ಇಷ್ಟು ತಳಮಟ್ಟದಲ್ಲಿ ಕಾಣುವುದಿಲ್ಲ. ಹಾಗಾಗಿಯೇ ಘನವಾದ ಕೃತಿಗಳನ್ನು ಕೊಡುವುದು ಅವರಿಗೆ ಇಂದಿಗೂ ಸಾಧ್ಯವಾಗುತ್ತಿದೆ.

ಕರ್ಮ ಕಾದಂಬರಿಯ ಮೂಲಕ ಕರಣಂ ಪವನ್ ಪ್ರಸಾದ್ ಹಾಗೊಬ್ಬ ಆಳ ಚಿಂತನೆಯ ಕಾದಂಬರಿಕಾರರಾಗುವ ಭರವಸೆಯನ್ನು ಹುಟ್ಟಿಸಿದ್ದರು. ತಾತ್ತ್ವಿಕ ಎತ್ತರವನ್ನು ಅಡಕಗೊಳಿಸಿಕೊಂಡಿದ್ದರೂ ಕರ್ಮದ ಓಘದಲ್ಲಿ ಇನ್ನೊಂದಿಷ್ಟು ನೈಪುಣ್ಯವನ್ನು ಬಯಸಿದ್ದ ಓದುಗ, ಇದೀಗ ಅವರ ಹೊಸ ಕಾದಂಬರಿ ’ನನ್ನಿ’ಯ ಮೂಲಕ ಹೆಚ್ಚು ಕುಶಲಿಯಾದ ಮತ್ತು ಪ್ರಭಾವಿಯಾದ ಕಾದಂಬರಿಕಾರನನ್ನು ಕಂಡಿದ್ದಾರೆ. ಎರಡುವಾರದ ಹಿಂದೆ ಬಿಡುಗಡೆಯಾದ ನನ್ನಿ ಅದಾಗಲೇ ಎರಡುಬಾರಿ ಟಾಪ್ ಟೆನ್ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ಆನ್ ಲೈನ್ ನ್ಯೂಸ್ ಪೋರ್ಟಲ್ಗಳಲ್ಲಿ ಸುದ್ದಿಯಾಗ್ತಿದೆ, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗ್ತಿದೆ. ಹೊತ್ತಿ ಉರಿವ ಬೆಂಕಿಯಂತಲ್ಲದೆ, ಚಾಪೆಯಡಿಗೆ ಹರಿವ ನೀರಿನಂತೆ ಓದುಗನನ್ನು ಆಂತವಾಗಿ ತಲುಪುತ್ತಿದೆ. ಅದ್ಯಾಕೆ ಹಾಗೆ ತಲುಪುತ್ತಿದೆ ಎನ್ನುವುದಕ್ಕೆ ನನ್ನಿ ಕಾದಂಬರಿಯ ಸಾಮರ್ಥ್ಯವೇ ಉತ್ತರ.

ಮತ್ತಷ್ಟು ಓದು »

9
ಮಾರ್ಚ್

ಹೂ ಈಸ್ ಕನ್ಹಯ್ಯಾ ಕುಮಾರ್?

-ಎಸ್.ಆರ್. ಅನಿರುದ್ಧ ವಸಿಷ್ಠ

kanhaiya-kumar_650x400_81457076102ಈ ಹುಡುಗನಿಗೆ ಆಜಾದಿ ಬೇಕಂತೆ! ಹಸಿವಿನಿಂದ ಆಜಾದಿ, ಭ್ರಷ್ಟಾಚಾರದಿಂದ ಆಜಾದಿ, ಜಾತಿವಾದದಿಂದ ಆಜಾದಿ ಬೇಕಂತೆ. ಇದಕ್ಕಾಗಿ ಆತ ಮೋದಿಯನ್ನು ದೂರುತ್ತಿದ್ದಾನೆ. ಆದರೆ, ಮೋದಿ ಅಧಿಕಾರಕ್ಕೆ ಬಂದು ಎರಡು ವರ್ಷ ಕೂಡಾ ಸಂದಿಲ್ಲ. ಇವನನ್ನು ಬೆಂಬಲಿಸಿದ ರಾಹುಲ್ ಗಾಂಧಿ ಪಕ್ಷವೇ ದೇಶವನ್ನು ೬೦ ವರ್ಷ ಆಳಿದ್ದು. ಇವನು ಕೇಳುತ್ತಿರುವ ಆಜಾದಿಗಳು ೬೦ ವರ್ಷದಲ್ಲಿ ಸಿಗಲಿಲ್ಲ. ಆದರೆ, ಮೋದಿ ಬಂದ ನಂತರ ಆ ಆಜಾದಿಗಳು ಸಿಗುವ ಭರವಸೆ ಮೂಡಿವೆ. ಆದರೆ ಇವನ ಪ್ರಕಾರ ಇವನು ಕೇಳುವ ಆಜಾದಿ ಮೋದಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನಿಂದ ಸಿಕ್ಕಿಲ್ಲವಂತೆ. ಎಂತಹ ಹಾಸ್ಯಪ್ರಜ್ಞೆ ಈ ಹುಡುಗನಿಗೆ.
ಒಂದು ಪ್ರಸಂಗ:
ದೇಶದ ಒಂದು ವಿವಿಯಲ್ಲಿ ಓರ್ವ ವಿದ್ಯಾರ್ಥಿಯಿದ್ದ. ಆತ ಒಂದು ತಿಂಗಳ ಹಿಂದಿನವರೆಗೂ ಕೇವಲ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿ ಒಕ್ಕೂಟ ನಾಯಕನಷ್ಟೇ. ಆದರೆ, ಈಗ ಆತ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದಲ್ಲದೇ ಯುವಕರ ಶಕ್ತಿ(?)ಯಾಗಿ ಮಾರ್ಪಡುತ್ತಾನೆ. ಮುಂಬರುವ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷವೊಂದರ ಪರ ಪ್ರಚಾರಕ್ಕೆ ಆತನನ್ನು ಕರೆಸಲು ನಿರ್ಧಾರ ಮಾಡಲಾಗುತ್ತದೆ. ಆದರೆ, ಆ ವಿದ್ಯಾರ್ಥಿ ರಾತ್ರೋ ರಾತ್ರಿ ರಾಷ್ಟ್ರೀಯ ಮುಖಂಡ(?)ನಾದ ಪರಿ ಹೇಗೆ? ದೇಶ ಸೇವೆ ಮಾಡಿಯೇ, ದೇಶಕ್ಕಾಗಿ ಹೋರಾಡಿಯೇ, ಸಮಾಜಕ್ಕಾಗಿ ತ್ಯಾಗ ಮಾಡಿಯೇ? ಅಲ್ಲವೇ ಅಲ್ಲ, ರಾಷ್ಟ್ರದ್ರೋಹದ ಆರೋಪ ಹೊತ್ತು. ಯಾರು ಆ ವಿದ್ಯಾರ್ಥಿ ? ಅವರೇ ಈಗ ಪ್ರಚಂಡ ನಾಯಕನೆಂದು ಬಿಂಬಿಸಿಕೊಳ್ಳುತ್ತಿರುವ ಕನ್ಹಯ್ಯ ಕುಮಾರ್.

ಮತ್ತಷ್ಟು ಓದು »

9
ಮಾರ್ಚ್

ಸಾಯದ ಹೊರತು ನಿಮಗವನ ಹೆಸರು ಕೂಡ ಗೊತ್ತಿರುವುದಿಲ್ಲ…

ರೋಹಿತ್ ಚಕ್ರತೀರ್ಥ
beggar-made-store-owner-cryಅವನೊಬ್ಬನಿದ್ದ. ತನ್ನ ಮನೆಯ ಒಂದು ಭಾಗದಲ್ಲಿ ಅಂಗಡಿ ಇಟ್ಟುಕೊಂಡಿದ್ದ. ಪ್ರತಿದಿನ ಬೆಳಗ್ಗೆ ಮನೆಯ ಒಳಗಿಂದ ಷಟರ್ ತೆಗೆದು ಅಂಗಡಿ ತೆರೆಯುತ್ತಿದ್ದ. ಆದರೆ ಪ್ರತಿದಿನ ಆ ಕಬ್ಬಿಣದ ಬಾಗಿಲನ್ನು ಮೇಲಕ್ಕೆ ಸರಿಸುವಾಗ ಆತನ ಕಣ್ಣಿಗೆ ಮೊದಲು ಬೀಳುತ್ತಿದ್ದದ್ದು, ಅಂಗಡಿಯ ಎದುರಿಗೇ ಮಲಗಿರುತ್ತಿದ್ದ ಒಬ್ಬ ಭಿಕ್ಷುಕ. ಕೆದರಿದ, ಎಣ್ಣೆ ಕಾಣದ ತಲೆಕೂದಲು, ಬಣ್ಣಗೆಟ್ಟ ಮುಖ, ಹಲವು ದಿನಗಳಿಂದ ಸ್ನಾನ ಕಾಣದ ಮೈ, ಹರಿದ ಪ್ಯಾಂಟು, ಪುಟ್ಟಮಕ್ಕಳು ಗೀಚಿದಂತಿರುವ ನೂರೆಂಟು ಗೆರೆಗೀಟುಗಳಿಂದ ಕೂಡಿದ ಹರಕುಮುರುಕು ಅಂಗಿ, ಪ್ರಕ್ಷಾಲನವಿಲ್ಲದೆ ರಸಿಕೆಕಟ್ಟಿದ ಕೆಂಡಗಣ್ಣು, ಬಾಯಿ ತೆರೆದರೆ ಬ್ರಹ್ಮಾಂಡದರ್ಶನ. ಅಂಥ ಒಬ್ಬ ಭಿಕಾರಿ ತನ್ನ ಅಂಗಡಿಯೆದುರು ಅಪಶಕುನದಂತೆ ಕೈಕಾಲು ಮುದುರಿಕೊಂಡು ನಿದ್ದೆ ಹೊಡೆಯುವುದನ್ನು ನೋಡಿ ಅಂಗಡಿಯ ಮಾಲಿಕನಿಗೆ ನಖಶಿಖಾಂತ ಕೋಪ ಬಂದುಬಿಡುತ್ತಿತ್ತು. “ಕತ್ತೇ ಭಡವಾ” ಎಂದು ಗಟ್ಟಿಯಾಗಿ ಕಿರುಚುತ್ತಿದ್ದ. ಆತನ ಗಂಟಲಿಗೆ ಬೆಚ್ಚಿಬಿದ್ದೆದ್ದ ಭಿಕ್ಷುಕ ಕಂಗಾಲಾಗಿ ದಿಕ್ಕಾಪಾಲಾಗಿ ಓಡಿಹೋಗುತ್ತಿದ್ದ.

ಆದರೆ ಅದು, ಒಂದು ದಿನದ ಮಟ್ಟಿಗೆ ಮಾತ್ರ. ಮರುದಿನ ಅಂಗಡಿ ಬಾಗಿಲು ತೆರೆಯುವಾಗ ಭಿಕ್ಷುಕನ ಸವಾರಿ ಅಲ್ಲಿ ಹಾಜರಿರುತ್ತಿತ್ತು. ಮತ್ತೆ ಮಾಲಿಕನ ಅರಚಾಟ ನಡೆಯುತ್ತಿತ್ತು. ಈ ಕ್ರಮ ಒಂದು ದಿನವೂ ತಪ್ಪದಂತೆ ನಡೆದುಕೊಂಡು ಬರುತ್ತಿತ್ತು. ಕೆಲವೊಮ್ಮೆ ಮಾಲೀಕ ದೊಡ್ಡ ದೊಣ್ಣೆ ಎತ್ತಿಕೊಂಡು ಬಂದು ಭಿಕ್ಷುಕನಿಗೆ ಬಾರಿಸುತ್ತಿದ್ದ. ಪೆಟ್ಟು ತಿಂದ ಭಿಕ್ಷುಕ ನೋವಿನಿಂದ ಕೈಕಾಲು ಬಡಿದುಕೊಂಡು ಓಡಿಹೋಗುತ್ತಿದ್ದ. ಇನ್ನು ಕೆಲವೊಮ್ಮೆ ಮಾಲೀಕ ಒಂದು ಬಕೆಟ್ ತಣ್ಣಗೆ ನೀರು ತಂದು ಈತನ ಮೈಮೇಲೆ ಸುರಿಯುತ್ತಿದ್ದ. ಮತ್ತೆ ಕೆಲವೊಮ್ಮೆ ಬೂಟು ಹಾಕಿಕೊಂಡು ಬಂದು ಮಲಗಿ ಗೊರಕೆ ಹೊಡೆಯುತ್ತಿದ್ದವನನ್ನು ಒದ್ದದ್ದೂ ಉಂಟು. ಒಮ್ಮೆ, ಅಂಗಡಿಯ ಬಾಗಿಲು ತೆಗೆಯುವಾಗ, ಮೂತ್ರವಿಸರ್ಜನೆಯ ವಾಸನೆ ಮಾಲೀಕನ ಮುಖಕ್ಕೆ ಹೊಡೆಯಿತು. ಈ ದರಿದ್ರ ಮನುಷ್ಯ ಇಲ್ಲಿ ಮಲಗುವುದು ಮಾತ್ರವಲ್ಲದೆ ತನ್ನ ದೇಹಬಾಧೆಗಳನ್ನೂ ತೀರಿಸಿಕೊಳ್ಳುತ್ತಾನೆಂದು ಅವತ್ತು ಅವನಿಗೆ ಮೈಯೆಲ್ಲ ಉರಿದಿತ್ತು. ಕೈಗೆ ಸಿಕ್ಕಿದ್ದನ್ನೆಲ್ಲ ಆ ಭಿಕ್ಷುಕನ ಮೇಲೆ ಎತ್ತಿಹಾಕಿ ತನ್ನ ಕೋಪ ತೋರಿಸಿದ್ದ.

ಮತ್ತಷ್ಟು ಓದು »

8
ಮಾರ್ಚ್

ನನಗೆ ಅಜಾದಿ ಬೇಕು” ಎಂಬ ಆಕರ್ಷಕ ಅಪ್ರಬುದ್ಧತೆ!!

-ಸಂಕೇತ್ ಡಿ ಹೆಗಡೆ, ಸಾಗರ

images (14)ಫೇಸ್ಬುಕ್ಕಿನಲ್ಲಿ ಸುಮ್ಮನೆ ಜಾಲಾಡುತ್ತಿದ್ದಾಗ ವಾಕ್ಯವೊಂದು ಎಡತಾಕಿತು. “Strict parents raise best liars” ಅಂತ. ತೀರಾ ಸ್ಟ್ರಿಕ್ಟ್ ಪೋಷಕರ ಮಕ್ಕಳು ಅತ್ಯುತ್ತಮ ಸುಳ್ಳುಗಾರರಾಗುತ್ತಾರೆ ಅಂತ. ಸತ್ಯ. ಮಕ್ಕಳು ಸ್ವಚ್ಚಂದವಾಗಿ ಸ್ವತಂತ್ರ್ಯವಾಗಿ  ಅವರಷ್ಟಕ್ಕೆ ಬೆಳೆಯಲು ಬಿಡದಿದ್ದರೆ, ಅವರು ತಪ್ಪಿಸಿಕೊಳ್ಳಲು ಅದ್ಭುತ ಸುಳ್ಳುಗಳನ್ನು ಹೆಣೆಯಬಲ್ಲ ಪ್ರತಿಭಾವಂತರಾಗಿಬಿಡುತ್ತಾರೆ! ಮನುಷ್ಯ ಅಂತ ಅಲ್ಲ, ಸ್ವಾತಂತ್ರ್ಯ ಪ್ರತಿ ಜೀವಿಯ ಮೂಲಭೂತ ಹಕ್ಕು. ಆದರೆ… ತನ್ನ ಮಗುವಿಗೆ ಸ್ವಾತಂತ್ರ್ಯ ಕೊಡಬೇಕೆಂದು ತಾಯಿ ಮಗುವಿಗೆ ಸಂಪೂರ್ಣ ತನ್ನಷ್ಟಕ್ಕೆ ಬೆಳೆಯಲು ಬಿಟ್ಟರೆ ಏನಾಗುತ್ತೆ? ತನ್ನ ಮಗು ಸರ್ವತೋಮುಖವಾಗಿ ಬೆಳೆಯಬೇಕೆಂದು ತಂದೆ ಮಗುವನ್ನು ಸಂಪೂರ್ಣ ಸ್ವೇಚ್ಛೆಗೆ ಬಿಟ್ಟುಬಿಟ್ಟರೆ ಏನಾಗುತ್ತೆ? ಮಗು ಹಾದಿತಪ್ಪದೆ ಉಳಿದೀತೇನು? ಆಜಾದಿ ಸರಿ, ಆದರೆ ಅದು ಆರೋಗ್ಯಪೂರ್ಣ ಆಜಾದಿ ಆದರೆ ಮಾತ್ರ ಚಂದ. ಸುಮ್ಮನೆ ಬೀದಿತಪ್ಪಿದ ನಾಲ್ಕು ಹುಡುಗರು ಹಾದಿತಪ್ಪಿದ ಹಳೆಯ ಸಿದ್ದಾಂತವೊಂದನ್ನು ನಂಬಿ, ಮತ್ತೂ ನಾಲ್ಕು ಕುರಿಗಳನ್ನ ಸೇರಿಸಿ ಕೆಲಸಕ್ಕೆ ಬಾರದ so called ಕ್ರಾಂತಿ ಮಾಡುತ್ತೇವೆ, ಆಜಾದಿ ತರುತ್ತೇವೆ ಅಂತೆಲ್ಲ ಕೂಗಿದರೆ ಚಂದವಲ್ಲ, ಭಂಗ. ಅವರು ಕೇಳುತ್ತಿರುವುದು ಖಂಡಿತವಾಗಿಯೂ ಸ್ವಾತಂತ್ರ್ಯವನ್ನಲ್ಲ, ಸ್ವೇಚ್ಛೆಯನ್ನ, ಅರಾಜಕತೆ ತಂದಿಡುವ ಸ್ವೇಚ್ಛೆಯನ್ನ. ಅದನ್ನೇ ಸ್ವಲ್ಪ ಆಕರ್ಷಣೀಯವಾಗಿ “ನಮಗೆ ಭಾರತದಿಂದ ಸ್ವಾತಂತ್ರ್ಯ ಬೇಡ. ಭಾರತದಲ್ಲಿ ಬೇಕು” ಅಂತ ಕೇಳುತ್ತಿರುವುದು. ಪ್ರಥಮ ಬಾರಿಗೆ ಕೇಳುತ್ತಿರುವವನಿಗೆ “ಎಷ್ಟು ಸೊಗಸಾಗಿ ಮಾತಾಡ್ತಾನಪಾ” ಅನ್ನಿಸಬೇಕು.

ನನಗೆ ತೀರಾ ನಿಗೂಢವಾಗಿ ಕಾಣುವ ವಿಷಯ ಅಂದರೆ ಈ ಎಡಪಂಥೀಯ ಚಿಂತನೆ ಉಳ್ಳ ಬುದ್ಧಿಜೀವಿಗಳು, ಕನ್ನಯ್ಯನಂತವರೆಲ್ಲ ಯಾಕೆ ಹೀಗೆ ರಾಷ್ಟ್ರೀಯತೆಗೆ ವಿರೋಧವಾಗಿರುವ ಸಂಗತಿಗಳನ್ನೇ ಹೆಚ್ಚು ಇಷ್ಟಪಟ್ಟು ಪಸರಿಸುತ್ತಾರೆ ಎಂಬುದು. ಅವರಿಗೇನು ನಿಜವಾಗಿಯೂ ಸತ್ಯ ಗೊತ್ತಿಲ್ಲವ? ಭಾರತ ತನ್ನ ಪ್ರಜೆಗಳಿಗೆ ಬೇಕಾಬಿಟ್ಟಿ ಸ್ವಾತಂತ್ರ್ಯ ಕೊಟ್ಟಿದೆ ಎಂಬುದು. ನಾವು ನೀವು ಇರುವುದೂ ಒಂದೇ ಭೂಮಿಯಲ್ಲಿ, ಅಂಥವರಿರುವುದೂ ಒಂದೇ ಭೂಮಿಯಲ್ಲಿ, ಅಂಥದ್ದರಲ್ಲಿ ನಮಗೆ ಕಣ್ಣಿಗೆ ಹೊಡೆಯುವ ಸತ್ಯ ಅವರ ಕಣ್ಣಿಗೆ ಮಸುಬಾಗಿಯೂ ಕಾಣದೇನು? ಯಾಕೀ ಪೂರ್ವಗ್ರಹಪೀಡಿತ ರೋಗಗ್ರಸ್ಥ ಮನಸ್ಸು? ಖ್ಯಾತಿಯ ಚಿಂತೆಯಾ? ವೋಟಿನ ಚಿಂತೆಯಾ? ಕಾಸಿನ ಚಿಂತೆಯಾ? ಅಸ್ತಿತ್ವದ ಚಿಂತೆಯಾ? ಅಥವಾ ಪೊಳ್ಳು ಭ್ರಮೆಯನ್ನೇ ತಾನೂ ನಂಬಿ ಪರರನ್ನೂ ನಂಬಿಸುವುದು ಒಂದು ಮಾನಸಿಕ ಖಾಯಿಲೆಯಾ?

ಮತ್ತಷ್ಟು ಓದು »