ತಮ್ಮನ ಪುನರ್ಮಿಲನ
– ರಂಜನ್ ಕೇಶವ
ಪ್ರತಾಪನು ಚೇತಕ್ ನೊಡನೆ ರಣಭೂಮಿಯಿಂದ ತೆರಳಿದಾಗ ಹಲ್ದೀಘಾಟಿಯ ಯುದ್ಧ ಭಾಗಶಃ ಮುಗಿದಿತ್ತು. ಪ್ರತಾಪನಿಗೆ ಒಂದುಕಡೆ ಯುದ್ಧದಲ್ಲುಂಟಾದ ಸೋಲಿನ ನಿರಾಶೆ ಮತ್ತೊಂದೆಡೆ ಮೊಘಲ್ ಸೇನೆಯನ್ನು ಮುಂದೆ ತಡೆಯುವುದು ಹೇಗೆಂಬ ಚಿಂತೆ. ತರಾತುರಿಯಲ್ಲಿ ತೆರಳಿದ್ದಕ್ಕಾಗಿ ಪ್ರತಾಪನು ಏಕಾಂಗಿಯಾಗಿದ್ದ, ಜೊತೆಗೆ ಯಾವೊಬ್ಬ ಸಹಚರನೋ ಸರದಾರರೋ ಇರಲಿಲ್ಲ. ವ್ಯಾಕುಲಗೊಂಡ ಮನಸ್ಸಿನ ಕಾರಣ ಏಕಾಂಗಿತನದ ಅರಿವೂ ಇಲ್ಲ.
ಹೀಗೆ ಸಾಗುತ್ತಿದ್ದ ಪ್ರತಾಪನನ್ನು ಅವನ ಅರಿವಿಗೆ ಬಾರದಂತೆ ಇಬ್ಬರು ಮೊಘಲ್ ಸವಾರರು ಹಿಂಬಾಲಿಸುತಿದ್ದರು ! ಇಬ್ಬರಲ್ಲೂ ಪ್ರತಾಪನನ್ನು ಕೊಂದು ಷೆಹಂಷಾಹ್ ನಿಂದ ಪುರಸ್ಕಾರ ಪಡೆಯುವ ಆಕಾಕ್ಷೆಯಿತ್ತು.
ಚೇತಕ್ ಕುದುರೆ ತನ್ನ ಸ್ವಾಮಿಯನ್ನು ರಕ್ಷಿಸಲೆಂದು ನೆಲದ ಏರಿಳಿತ, ಕಲ್ಲು ಬಂಡೆ ಮತ್ಯಾವ ಅಡೆತಡೆಗಳಿಗೂ ಸ್ವಲ್ಪವೂ ವೇಗ ಕುಗ್ಗಿಸದೇ ಒಂದೇ ರಭಸದಲ್ಲಿ ಓಡುತ್ತಿತ್ತು. ಕಾಲಿನ ಗಾಯದ ರಕ್ತಸ್ರಾವದಲ್ಲೂ ಯಾವ ಬಾಧೆಯನ್ನೂ ಲೆಕ್ಕಿಸದೇ ಮುನ್ನುಗ್ಗುತ್ತಿತ್ತು. ಹೀಗೆ ಸಾಗುತ್ತಾ ಒಂದು ನದಿಯ ಕವಲನ್ನು ಚೇತಕ್ ಒಂದೇ ನೆಗೆತಕ್ಕೆ ದಾಟಿತು. ಆದರೆ ಆ ಮೊಘಲ್ ಸೈನಿಕರ ಕುದುರೆಗಳಿಗೆ ದಾಟಲಾಗದೆಯೇ ಅಲ್ಲೇ ನಿಂತವು. Read more
ಧಾರಾವಾಹಿಗಳ ಜಗದಲ್ಲೊಂದು ಸುತ್ತು..
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಓದು ನನಗಿರುವ ಏಕೈಕ ಹವ್ಯಾಸ. ತುಂಬ ಟಿವಿ ನೋಡುವ ಅಭ್ಯಾಸ ನನಗಿಲ್ಲ. ಆಗೊಮ್ಮೆ ಈಗೊಮ್ಮೆ ಕ್ರಿಕೆಟ್ಟು ನೋಡುವುದು ಬಿಟ್ಟರೆ ನಾನು ಟಿವಿಯಿಂದ ದೂರವೇ. ಕೆಲವು ದಿನಗಳ ಹಿಂದೆ ಸುಮ್ಮನೇ ಟಿವಿಯ ರಿಮೋಟಿನ ಬಟನ್ನುಗಳನ್ನು ಒತ್ತುತ್ತಾ ಚಾನಲ್ಲು ಬದಲಿಸುತ್ತಾ ಕುಳಿತಿದ್ದವನ ಕಣ್ಣಿಗೆ ಬಿದ್ದದ್ದು ಹೊಸ ಧಾರಾವಾಹಿಯೊಂದರ ಜಾಹಿರಾತು. ಸುಮಾರು ಐದಾರು ವರ್ಷದ ಬಾಲಕಿಯೊಬ್ಬಳು ಕುಂಟಾಬಿಲ್ಲೆ ಆಟವಾಡುತ್ತ ಮಾತನಾಡುವ ಜಾಹಿರಾತು ಕೆಲಕಾಲ ನನ್ನ ಗಮನವನ್ನು ತನ್ನತ್ತ ಸೆಳೆಯಿತು. ಅಲ್ಲಿ ಆಡುತ್ತಿದ್ದ ಪುಟ್ಟ ಹುಡುಗಿಯ ಗೆಳೆಯನೊಬ್ಬ ಓಡುತ್ತ ಬಂದು,”ಏಯ್ ಗಂಗಾ ನಿನ್ನ ಗಂಡ ಸತ್ತೋದ್ನಡಾ, ನೀ ವಿಧವೆ ಆದ್ಯಡಾ (ಏಯ್ ಗಂಗಾ ನಿನ್ನ ಗಂಡ ಸತ್ತು ನೀನು ವಿಧವೆಯಾದೆಯಂತೆ) ” ಎನ್ನುತ್ತಾನೆ. ಅದಕ್ಕುತ್ತರಿಸುವ ಮುಗ್ದೆ, “ಮಳ್ನಂಗ್ ಮಾತಾಡಡ್ದಾ, ಅವನ್ಯಾರೋ ಸತ್ತೋದ್ರೆ, ನಾ ಹ್ಯಾಂಗ್ ವಿಧವೆ ಆಗ್ತೆ “ಎನ್ನುತ್ತ ತನ್ನ ಆಟವನ್ನು ಮುಂದುವರೆಸುತ್ತಾಳೆ. ಜಾಹಿರಾತಿನ ಕೊನೆಯ ಭಾಗದಲ್ಲಿ “ಗಂಗಾಳ ಕುಂಕುಮ ಕರಗಿಹೋಯ್ತು, ಸವೆಯಿತು ಸೌಭಾಗ್ಯ, ಕಳಚಿತು ಕೊರಳ ಮಾಂಗಲ್ಯ” ಎನ್ನುವ ದನಿಯೊಂದು ಕೇಳಿಬರುತ್ತದೆ. ಇಂಥದ್ದೊಂದು ಪ್ರೋಮೊ ನೋಡಿದ ನನಗೆ ಒಂದರೆಕ್ಷಣ ನಖಶಿಖಾಂತ ಉರಿದುಹೋಯಿತು. Read more
ಶೂರ್ಪನಖಿ, ಆಹಾ! ಎಂಥಾ ಸುಖಿ!
– ನಾಗೇಶ ಮೈಸೂರು
ನಮ್ಮ ಟೀವಿ ಸೀರಿಯಲ್ಗಳಲ್ಲಿ ಬರುವ ಹೆಣ್ಣು ವಿಲನ್ ಪಾತ್ರಗಳಿಗೆಲ್ಲ ಈ ಶೂರ್ಪನಖಿ ಪಾತ್ರವೂ ಸ್ಪೂರ್ತಿಯಿರಬಹುದೇ?
ಬಹುಶಃ ರಾಮಾಯಣದ ಪಾತ್ರಗಳನ್ನು ವಿಶ್ಲೇಷಣೆಗೆ ಪರಿಗಣಿಸಿದಾಗ, ಅದರಲ್ಲೂ ಮಹಿಳೆಯ ಪಾತ್ರದ ವಿಷಯಕ್ಕೆ ಬಂದರೆ ಸೀತೆ, ಕೈಕೆ, ಮಂಡೋದರಿ, ಮಂಥರೆ ಹೀಗೆ ಎಷ್ಟೋ ಪಾತ್ರಗಳು ಕಣ್ಮುಂದೆ ಬಂದು ನಿಲ್ಲುತ್ತವೆ. ಆದರೆ ಅವುಗಳ ನಡುವೆ ಸಾಮಾನ್ಯವಾಗಿ ಯಾರೂ ಪರಿಗಣಿಸದ ಒಂದು ವಿಶೇಷ ಪಾತ್ರವೆಂದರೆ ಶೂರ್ಪನಖಿಯದು. ತೀರಾ ಪ್ರಖರವಾಗಿ ಎದ್ದು ಕಾಣದೆ, ತೆಳುವಾದ ಮೇಲುಸ್ತರದಲ್ಲೇ ಮುಲುಗಾಡುವ ಈ ಪಾತ್ರ ಇಡೀ ರಾಮಾಯಣದಲ್ಲಿ ಬಂದು ಹೋಗುವ ಆವರ್ತಗಳ ಗಣನೆಯಲ್ಲಿ ಕೆಲವೇ ಕೆಲವಾದರೂ, ಆ ಪಾತ್ರ ಇಡೀ ರಾಮಾಯಣ ಕಥನದಲ್ಲುಂಟುಮಾಡುವ ಪರಿಣಾಮ ನೋಡಿದರೆ, ಈ ಪಾತ್ರದ ಕುರಿತು ಅಷ್ಟಾಗಿ ಪರಿಶೀಲನೆ, ವಿಶ್ಲೇಷಣೆ ನಡೆದಿಲ್ಲವೆಂದೇ ಕಾಣುತ್ತದೆ. Read more
ಮನುಷ್ಯನಾಗುವುದೆಂದರೇನು?
-ರಾಜಕುಮಾರ.ವ್ಹಿ.ಕುಲಕರ್ಣಿ, ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ, ಬಾಗಲಕೋಟ
ಮೊನ್ನೆ ನನ್ನೂರಿನ ಆ ಹಳ್ಳಿಗೆ ಹೋಗಿದ್ದೆ. ಊರ ಹೆಬ್ಬಾಗಿಲಲ್ಲಿ ಪರಿಚಿತರೋರ್ವರು ಭೇಟಿಯಾದರು. ಅದು ಇದು ಮಾತನಾಡುತ್ತ ತಮ್ಮ ಅಣ್ಣನ ಮಗನಿಗೆ ಸರ್ಕಾರಿ ಕೆಲಸ ಸಿಕ್ಕ ವಿಷಯ ತಿಳಿಸಿದರು. ವಿಷಯ ಕೇಳಿ ತುಂಬ ಸಂತೋಷವಾಯಿತು. ಬಾಲ್ಯದಿಂದಲೂ ಬಡತನದಲ್ಲೇ ಬೆಳೆದ ಹುಡುಗ ಪರಿಶ್ರಮ ಪಟ್ಟು ಓದಿ ಡಿಪ್ಲೋಮ ಡಿಗ್ರಿ ಸಂಪಾದಿಸಿದ್ದ. ಆತನ ಅರ್ಹತೆಗೆ ತಕ್ಕುದಾದ ಹುದ್ದೆ ಲೋಕೋಪಯೋಗಿ ಇಲಾಖೆಯಲ್ಲಿ ಲಭಿಸಿತ್ತು. ನನ್ನ ಪರಿಚಿತರು ತಮ್ಮ ಅಣ್ಣನ ಮಗನ ಕುರಿತು ಅಭಿಮಾನದಿಂದ ಮಾತನಾಡಿದರು. `ನೋಡ್ರಿ ಅವ್ನಿಗಿ ಭಾಳ ಛಲೋ ಡಿಪಾರ್ಟ್ಮೆಂಟ್ ಸಿಕ್ಕಾದ. ಇನ್ನ ಮುಂದ ಅವ್ನಿಗಿ ಯಾರೂ ಹಿಡಿಯೋ ಹಂಗಿಲ್ಲ. ಯಾಕಂದ್ರ ಮುಂದ ಸುರಿಯೋದೆಲ್ಲ ರೊಕ್ಕದ ಮಳಿನಾ. ಬ್ಯಾಡ ಅಂದ್ರೂ ಮಂದಿ ಮನಿಗಿ ಬಂದು ರೊಕ್ಕ ಕೊಡ್ತಾರ. ರೊಕ್ಕ ಎಣಿಸಾಕ ಅಂವ ಒಂದು ಆಳ ಇಟ್ಕೊಬೇಕಾಗ್ತದ. ಎರ್ಡ ವರ್ಷದಾಗ ಅಂವ ಹ್ಯಾಂಗ ಮನಷ್ಯಾ ಆಗ್ತಾನ ನೋಡ್ರಿ’ ಒಂದು ಕ್ಷಣ ಕಾಲ ಸ್ತಬ್ಧವಾದಂತಾಯಿತು. ಹಾಗಾದರೆ ಅವರ ದೃಷ್ಟಿಯಲ್ಲಿ ಮನುಷ್ಯನಾಗುವುದೆಂದರೇನು. ಸರ್ಕಾರಿ ನೌಕರಿಗೆ ಸೇರಿ ಲಂಚ ಹೊಡೆಯುತ್ತ, ಬಂಗ್ಲೆ ಮೇಲೆ ಬಂಗ್ಲೆ ಕಟ್ಟಿಸಿ, ಹವಾನಿಯಂತ್ರಿತ ಕಾರುಗಳಲ್ಲಿ ಓಡಾಡುತ್ತ ಐಷಾರಾಮಿ ಬದುಕು ನಡೆಸುವಾತನೇ ನಿಜವಾದ ಮನುಷ್ಯ ಎನ್ನುವ ಅವರ ಯೋಚನಾ ಲಹರಿ ಅರೇ ಕ್ಷಣ ನನ್ನನ್ನು ನಾನು ಯಾರು? ಎನ್ನುವ ಯೋಚನೆಗೆ ಹಚ್ಚಿತು. ಒಂದಿಷ್ಟು ಶೃದ್ಧೆ, ನಿಷ್ಟೆ, ಪ್ರಾಮಾಣಿಕತೆಯ ನೆರಳಲ್ಲಿ ಬದುಕು ನೂಕುತ್ತಿರುವ ಜನ ಮನುಷ್ಯರೇ ಅಲ್ಲ ಎನ್ನುವ ಅಭಿಪ್ರಾಯ ಅವರ ಮಾತಿನುದ್ದಕ್ಕೂ ಇಣುಕುತ್ತಿತ್ತು. Read more
ವಿಡಂಬನೆ: ಸಾಹಿತ್ಯ ಗದ್ದುಗೆ ಹಾಗೂ ಮಣ್ಣಂಗಟ್ಟಿ ಸಾಹಿತ್ಯ!
– ತುರುವೇಕೆರೆ ಪ್ರಸಾದ್
ತರ್ಲೆಕ್ಯಾತನಳ್ಳಿ ಖ್ಯಾತ ಸಾಹಿತಿ ಅನಂತ ಜೋಷಿ ಮತ್ತು ತಾಲ್ಲೂಕ ಸಾಹಿತ್ಯ ಸಭೆಯ ನೂತನ ಅಧ್ಯಕ್ಷ ಗುದ್ಲಿಂಗ ಜಮಖಂಡಿ ಅವರ ಮಧ್ಯೆ ನಡೆದ ಫೋನ್ ಸಂಭಾಷಣೆ ಹೀಗಿದೆ:
‘ನಮಸ್ಕಾರ್ರೀ ! ನಾನ್ ಜಮಖಂಡಿ ಮಾತಾಡಕ್ ಹತ್ತೀನಿ’
‘ಓಹೋ! ಜಮಖಂಡಿ ಅವರು!ಏನ್ರಪ್ಪಾ! ಆರಾಮದೀರೇನು?’
‘ಹಾಂ! ಆರಾಮದೀನಿ..ವಿಷ್ಯ ತಿಳೀತೇನ್ರೀ ಎಪ್ಪಾ?’
‘ಯಾವ ವಿಷ್ಯ ಹೇಳಕ್ ಹತ್ತೀರಿ ನೀವು? ಕೊಶ್ನೆ ಪೇಪರ್ ಲೀಕಾಯ್ತಲ್ಲ ಅದಾ ? ಇಲ್ಲ ಯಡಿಯೂರಪ್ಪಗೆ ಅಧ್ಯಕ್ಷ ಪಟ್ಟ ಸಿಕ್ತಲ್ಲ ಅದಾ?’
‘ಏ ! ಅವೆಲ್ಲಾ ಹಳೇದಾತ್ ಬಿಡ್ರಿ, ಈಗ ನಂಗ್ ಸಾಹಿತ್ಯ ಸಭೆ ಅಧ್ಯಕ್ಷಗಿರಿ ಸಿಕ್ಕೈತೆ, ಮೊನ್ನೆ ಯುಗಾದಿ ಮುಂದ ಪೇಪರ್ನಾಗ್ ಬಂದಿತ್ತು, ನೀವು ನೋಡ್ಲಿಲ್ಲೇನು?’
‘ಅರೆ! ಹೌದಾ? ನಿಮ್ಗೆ ಅಧ್ಯಕ್ಷಗಿರಿ ಕಟ್ಯಾರಾ? ಅಂದ್ರೆ ಹಾರ ತುರಾಯಿ ಹಾಕಿಸ್ಕೊಳೋಕ್ ಕೊಳ್ ಚಾಚ್ಕಂಡ್ ಕುಂತ್ ಬಿಟ್ರಿ ಅನ್ನಿ, ಇಂದ್ರಾಬಾಯವ್ರು ನಮಗಾ ಒಂದ್ ಮಾತೂ ಕೇಳ್ದ, ಸಭೆನೂ ಕರೀದೆ ನಿಮ್ಮನ್ನ ಹೆಂಗ್ ಅಧ್ಯಕ್ಷ ಮಾಡಾರೆ?’
‘ನಿಮ್ಗೆ ಇದ್ ಕೇಳಿದ್ ಕೂಡ್ಲೆ ಹೊಟ್ಟೆನಾಗೆ ಮೆಣಸಿನಕಾಯ್ ಕಿವುಚಿದಂಗಾಗ್ತದೆ ಅಂತ ನಂಗೊತ್ತಿತ್ತು ಬಿಡ್ರಲಾ! ಅದೆಂಥ ಹೊಟ್ಟೆ ಉರೀನ್ರೀ ನಿಮ್ದು..! ಇನ್ನೊಬ್ರಿಗೆ ಒಳ್ಳೇದಾತು ಅಂದ್ರೆ ಸಹಿಸೋ ಮಂದಿ ಅಲ್ಲ ನೀವು’ Read more
ಸಾಯಣರ ವೇದವ್ಯಾಖ್ಯಾನವು ಏನನ್ನು ತಿಳಿಸುತ್ತದೆ?
– ವಿನಾಯಕ ಹಂಪಿಹೊಳಿ
ಸಾಯಣಾಚಾರ್ಯರು ಋಗ್ವೇದಕ್ಕೆ ಭಾಷ್ಯವನ್ನು ಬರೆಯುವಾಗ ಮೊದಲು ವೇದ ಎಂದರೇನು ?, ಅದರ ಲಕ್ಷಣವೇನು ಎಂಬುದರ ಕುರಿತು ಒಂದು ದೀರ್ಘ ಚರ್ಚೆಯನ್ನು ಮಾಡಿದ್ದಾರೆ. ಅದರಲ್ಲಿ ಪೂರ್ವಪಕ್ಷದ ವಾದಗಳನ್ನೆಲ್ಲ ಒಂದೊಂದಾಗಿ ಪರಿಗಣಿಸಿ, ವೇದದ ಲಕ್ಷಣದ ಕುರಿತು ತಮ್ಮ ಸಿದ್ಧಾಂತವನ್ನು ಮಂಡಿಸಿ, ಪೂರ್ವಪಕ್ಷಿಯ ಸಂದೇಹಗಳನ್ನೆಲ್ಲ ಪರಿಹರಿಸುತ್ತಾ ಸಾಗಿದ್ದಾರೆ. ಆ ಚರ್ಚೆ ಏನು ಎಂಬುದು ಮುಖ್ಯವಲ್ಲ. ಆ ಚರ್ಚೆಯಲ್ಲಿ ಪೂರ್ವಪಕ್ಷಿಗಳು ಮತ್ತು ಸಿದ್ಧಾಂತಿಗಳು ವೇದದ ಕುರಿತು ಯಾವ ದೃಷ್ಟಿಕೋಣವನ್ನು ಇಟ್ಟುಕೊಂಡಿದ್ದರು ಎಂಬುದು ಇಲ್ಲಿ ಮುಖ್ಯ. ಹೀಗಾಗಿ ಆ ಚರ್ಚೆಯ ಆದಿಭಾಗದ ಸಾರಾಂಶವನ್ನು ಮಾತ್ರ ನೋಡೋಣ. ಮೊದಲು ಪೂರ್ವಪಕ್ಷದ ವಾದಗಳನ್ನು ಪಟ್ಟಿ ಮಾಡಿ ನಂತರ ಸಾಯಣರು ಕೊಟ್ಟ ವೇದದ ವ್ಯಾಖ್ಯಾನವನ್ನು ನೀಡಲಾಗಿದೆ. ಪೂರ್ವಪಕ್ಷದ ಮತ: ವೇದ ಎನ್ನುವದು ಯಾವದನ್ನು? ವೇದಕ್ಕೆ ಲಕ್ಷಣಗಳೇನಾದರೂ ಇವೆಯೇ? ಪ್ರತ್ಯಕ್ಷ, ಅನುಮಾನ ಮತ್ತು ಆಗಮ ಎಂಬ ಮೂರು ಪ್ರಮಾಣಗಳಿವೆಯಲ್ಲ (ಊಟ ಮಾಡಿದರೆ ಹೊಟ್ಟೆ ತುಂಬುತ್ತದೆ ಎನ್ನುವದಕ್ಕೆ ಪ್ರತ್ಯಕ್ಷ ಪ್ರಮಾಣ, ಹೊಗೆಯಾಡುತ್ತಿರುವಲ್ಲಿ ಬೆಂಕಿಯಿರಬಹುದೆಂಬುದಕ್ಕೆ ಅನುಮಾನ ಪ್ರಮಾಣ, ಯಾಗದಿಂದ ಸ್ವರ್ಗಪ್ರಾಪ್ತಿ ಎಂಬುದಕ್ಕೆ ಆಗಮ ಪ್ರಮಾಣ), ಅವುಗಳಲ್ಲಿ ಕೊನೆಯ ಆಗಮ ಪ್ರಮಾಣವೆಂಬುದೇ ವೇದದ ಲಕ್ಷಣವೆನ್ನಲು ಸಾಧ್ಯವಿಲ್ಲ. ಏಕೆಂದರೆ ಮನ್ವಾದಿ ಸ್ಮೃತಿಗಳೂ ಆಗಮಗಳಾಗಿವೆ. ವೇದ ಎನ್ನುವದು ಸ್ವರ್ಗ ಅಥವಾ ಮೋಕ್ಷಕ್ಕೆ ಸಾಧನ ಎಂಬ ಲಕ್ಷಣವನ್ನೂ ಹೇಳಲು ಸಾಧ್ಯವಿಲ್ಲ ಕಾರಣ ಇತಿಹಾಸ ಪುರಾಣಗಳೂ ಸ್ವರ್ಗ ಅಥವಾ ಮೋಕ್ಷಕ್ಕೆ ಸಾಧನಗಳಾಗಿರುತ್ತವೆ. ಆಗಮವೇ ವೇದದ ಲಕ್ಷಣ ಎನ್ನುವದು ಅತಿವ್ಯಾಪ್ತಿದೋಷ ಒಳಗೊಂಡಿದೆ. ಬೆಳ್ಳಗಿರುವದು ಹಾಲಿನ ಲಕ್ಷಣ ಎಂದರೆ, ಸುಣ್ಣವೂ ಬೆಳ್ಳಗಿರುವದರಿಂದ, ಈ ಲಕ್ಷಣವಾಕ್ಯವು ಅತಿವ್ಯಾಪ್ತಿದೋಷ (Necessary But Not Sufficient) ಎಂಬ ದೋಷವನ್ನು ಹೊಂದಿರುತ್ತದೆ. Read more
ಶನಿಯ ಬೆನ್ನೇರಿದ ಕಾಕ, ಇದೆಲ್ಲ ನಾಟಕ ಯಾಕ?
– ರೋಹಿತ್ ಚಕ್ರತೀರ್ಥ
ನಮ್ಮ ದೇಶದಲ್ಲಿ ಖರ್ಚಿಲ್ಲದೆ ಪ್ರಸಿದ್ಧಿ ಒದಗಿಸುವ ಎರಡು ಸಂಗತಿಗಳಿವೆ. ಒಂದು ಬುದ್ಧಿಜೀವಿಯಾಗುವುದು, ಇನ್ನೊಂದು ಮಹಿಳಾವಾದಿಯಾಗುವುದು. ಬುದ್ಧಿಜೀವಿಯಾಗಬೇಕಾದರೆ ನೀವು ಸೆಕ್ಯುಲರ್ ಎಂದು (ಏನೆಂದು ಗೊತ್ತಿರದಿದ್ದರೂ) ತೋರಿಸಿಕೊಳ್ಳಬೇಕು. ಹಿಂದೂಗಳನ್ನು, ಅವರ ಆಚರಣೆ, ಪದ್ಧತಿ, ಹಬ್ಬಹರಿದಿನಗಳನ್ನು ಬಯ್ಯಬೇಕು. ಹಿಂದೂ ದೇವರನ್ನು, ದೇವಾಲಯಗಳನ್ನು ಪ್ರಶ್ನಿಸಬೇಕು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ರಿಲಿಜನ್ನುಗಳನ್ನು ಓಲೈಸಬೇಕು. ಮೋದಿಯನ್ನು ತೆಗಳಬೇಕು. ಭಯೋತ್ಪಾದಕರನ್ನು, ನಕ್ಸಲರನ್ನು ಬೆಂಬಲಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನಿಮಗೆ ಬೆನ್ನುಮೂಳೆ ಇರಬಾರದು. ಜೊತೆಗೆ, ಅರ್ಥವತ್ತಾದ ಮಾತು, ತರ್ಕಬದ್ಧವಾದ ಚಿಂತನೆ – ಇವೆರಡರ ಬಗ್ಗೆ ನೀವು ಎಂದೆಂದೂ ತಲೆ ಕೆಡಿಸಿಕೊಂಡಿರಬಾರದು. ಹಾಗೆಯೇ, ಮಹಿಳಾವಾದಿಯಾಗುವುದು ಕೂಡ ಸುಲಭ. ಮೊದಲಿಗೆ ಮಹಿಳಾವಾದ = ಪುರುಷದ್ವೇಷ ಎಂಬ ಸಮೀಕರಣ ಬರೆಯಿರಿ. ಮಹಿಳೆಗೆ ಸ್ವಾತಂತ್ರ್ಯ ಬೇಕು ಅನ್ನಿ. ಉದ್ಯೋಗದಲ್ಲಿ, ಸಂಸತ್ತಿನಲ್ಲಿ, ಬಸ್ಸಿನಲ್ಲಿ, ಚಿತ್ರಮಂದಿರದಲ್ಲಿ, ನಡೆದಾಡುವ ರಸ್ತೆಯಲ್ಲಿ – ಹೀಗೆ ಎಲ್ಲೆಲ್ಲೂ ಹೆಣ್ಣಿಗೆ ಸಮಾನತೆ ಬೇಕೆಂದು ಬೊಬ್ಬೆ ಹೊಡೆಯಿರಿ. ಉದ್ಧೇಶವೇ ಇಲ್ಲದೆ ಪ್ರತಿಭಟನೆ ಮಾಡಿದರೂ ಓಕೆ. ವಿರೋಧಿಸದವರಿಗೂ ಧಿಕ್ಕಾರ ಕೂಗಿದರೂ ಓಕೆ. ಒಟ್ಟಲ್ಲಿ ನಿಮ್ಮ ಮಾತು, ಕೂಗಾಟ, ಹಾರಾಟ, ಹೋರಾಟವೆಲ್ಲ ನಾಲ್ಕು ಜನಕ್ಕೆ ಗೊತ್ತಾಗಬೇಕು, ಪತ್ರಿಕೆ ಟಿವಿಗಳಲ್ಲಿ ಬರಬೇಕು. ಮತ್ತು ಇವೆಲ್ಲದರ ಜೊತೆ, ನೀವು, ಮೇಲೆ ಹೇಳಿದ ಬುದ್ಧಿಜೀವಿಯೂ ಆಗಿರಬೇಕಾದ್ದು ಅನಿವಾರ್ಯ. ಎರಡು ವರ್ಷಗಳ ಹಿಂದೆ ಒಂದು ಬುದ್ಧಿಜೀವಿ ಮಹಿಳಾಪರ ಲೇಖಕಿ, “ಮೋದಿಯ ಮುಖ ನೋಡಿದರೇನೇ ಆತ ಸ್ತ್ರೀದ್ವೇಷಿ ಅನ್ನೋದು ಗೊತ್ತಾಗುತ್ತದೆ” ಎಂದಿದ್ದರು. ಇಂಥ ಹೇಳಿಕೆ ಕೊಡುವವರಿಗೆ ಮಹಿಳಾಪರ ಸಂಘಟನೆಗಳಲ್ಲಿ ಒಳ್ಳೆಯ ಬೇಡಿಕೆ ಇದೆ. Read more
ನೆಪೋಲಿಯನ್ ಹಾದಿ
– ರಂಜನ್ ಕೇಶವ
ಕೇವಲ 27 ವರ್ಷದ ಹರೆಯ ನೆಪೋಲಿಯನ್ ಬೋನಾಪಾರ್ಟ್ ಆಗಷ್ಟೇ ಇಟಲಿಯಲ್ಲಿಯ ಫ್ರೆಂಚ್ ಸೇನೆಗೆ ಬ್ರಿಗೇಡಿಯರ್ ಜನರಲ್ ಆಗಿ ನೇಮಕಗೊಂಡಿದ್ದ . ಅಲ್ಲಿಯತನಕವೂ ಯಾವತ್ತೂ ಒಂದು ಬೃಹತ್ ಸೇನೆಯನ್ನು ನೇತೃತ್ವ ವಹಿಸಿರಲಿಲ್ಲ . ಮೊದಲ ಬಾರಿಗೆ ನೇಮಕಗೊಂಡ ಈ ಚಿಕ್ಕ ಹುಡುಗ ಏನು ಸಾಧಿಸಿ ತೋರಿಸಿಯಾನೋ ಎಂದು ಅವನ ಕೆಳಗಿನವರು ಮೂದಲಿಸುತ್ತಿದ್ದರು. ಅದಲ್ಲದೇ ಕುಬ್ಜಕಾಯ ಬೇರೆ ಎಂದು ಅಣಕಿಸುತ್ತಿದ್ದರಂತೆ. ಆದರೆ ನೆಪೋಲಿಯನ್ನಿನ ಆ ಕುಬ್ಜ ಶರೀರದೊಳಡಗಿತ್ತು ಅಧಮ್ಯ ಆತ್ಮವಿಶ್ವಾಸ ಮಿತಿಮೀರಿದ ಛಲ. ಇದನ್ನು ವ್ಯಕ್ತಪಡಿಸಲು ಒಂದು ಅವಕಾಶಕ್ಕಾಗಿ ಹಾತೊರೆಯುತ್ತಿದ್ದನಷ್ಟೇ. ಸಿಕ್ಕ ಈ ಮೊದಲ ಅವಕಾಶವನ್ನು ಚೆನ್ನಾಗಿ ಬಳಸಿಕೊಳ್ಳುವುದಕ್ಕಾಗಿ ಜಾಗರೂಕತೆಯಿಂದ ತಯಾರಿಮಾಡುತ್ತಿದ್ದ. Read more
ಕನ್ನಡ ಎನೆ ಕಿವಿ ನಿಮಿರಬೇಕಿರುವುದು ಪರರದ್ದು!
-ಸಂಕೇತ್ ಡಿ ಹೆಗಡೆ, ಸಾಗರ
ಕೋರಾ ಅಂತ ಒಂದು ಸಾಮಾಜಿಕ ಜಾಲತಾಣವಿದೆ. ಮೊನ್ನೆ ಹೀಗೆ ಜಾಲಾಡುತ್ತಿದ್ದಾಗ ಒಂದು ಭಲೇ ಬುದ್ಧಿವಂತಿಕೆಯ ಪ್ರಶ್ನೆ ಎದುರಾಯಿತು. ಪುಣ್ಯಾತ್ಮನೊಬ್ಬ ಬೆಂಗಳೂರಿನ ರಸ್ತೆಯೊಂದರ ಮೇಲೆ ಕಾರಿನಲ್ಲಿ ಕುಳಿತು ಪೋಸ್ಟ್ ಮಾಡಿದ್ದು. “ನಾನೀಗ ಬೆಂಗಳೂರಿನಲ್ಲಿದ್ದೇನೆ. ಕರ್ನಾಟಕ ಇಲ್ಲಿಂದ ಎಷ್ಟು ಕಿಲೋಮೀಟರ್ ಪ್ರಯಾಣಿಸಿದರೆ ಸಿಗುತ್ತೆ” ಅಂತ! ಹಾಗೆ ಕೇಳಿದವನ ಕಂಡು ಮತ್ತೊಬ್ಬ ಉತ್ತರ ಬರೆದಿದ್ದ. “೧೦೮ಕ್ಕೆ ಕರೆಮಾಡಿ ’ನಾನು ಬೆಂಗಳೂರಿನಲ್ಲಿದ್ದೇನೆ, ನನಗೆ ಕರ್ನಾಟಕಕ್ಕೆ ಕರೆದುಕೊಂಡುಹೋಗಿ’ ಅಂತ ಹೇಳಿ. ಅವರು ವಿಲ್ಸನ್ ಗಾರ್ಡನ್ ಅನ್ನುವ ಸ್ಥಳದಲ್ಲಿರುವ ನಿಮ್ಹಾನ್ಸ್ ಅನ್ನುವ ಕಟ್ಟಡದ ಬಳಿ ಇಳಿಸುತ್ತಾರೆ” ಅಂತ. ಇವರ ಪ್ರಶ್ನೋತ್ತರಗಳ ನೋಡಿ ಉಕ್ಕಿಬಂದ ನಗು, “ತಪ್ಪು ಅವನದಲ್ಲ” ಎಂದು ಅನಿಸಿದಾಗ ಮುಚ್ಚಿಕೊಂಡು ಹಿಂದೆಹೋಗಿಬಿಟ್ಟಿತು. ಎಂತಹ ಸ್ಥಿತಿಗೆ ಬೆಂಗಳೂರನ್ನು ತಂದಿಟ್ಟುಬಿಟ್ಟಿದ್ದೇವೆ ಅನ್ನುವುದು ನೆನಪಾಗಿ ಹೃದಯದ ಒಂದು ಮೂಲೆಯಲ್ಲಿರುವ ಭಾಷಾಭಿಮಾನಕ್ಕೆ ಅತೀವ ವೇದನೆಯಾಯಿತು. ಪಾಪ ಆ ಕಾರಿನವನದೇನು ತಪ್ಪು? ಬೆಂಗಳೂರಿನ ಗಾಳಿಯನ್ನು ಪ್ರಥಮ ಬಾರಿಗೆ ಕುಡಿಯುತ್ತಿರುವ ಯಾವನಿಗೆ ಕರ್ನಾಟಕದ “ರಾಜಧಾನಿ”ಯ ಗಾಳಿ ಕುಡಿದ ಅನುಭವವಾಗುತ್ತೆ? ಅವನೋ ಕನ್ನಡಿಗರ ನಾಡಾಗಿರುವ, ಕನ್ನಡವನ್ನು ಉಸಿರಾಗಿಸಿಕೊಂಡಿರುವ, ಕನ್ನಡತನದ ಬೀಡಾಗಿರುವ ಪ್ರದೇಶವೊಂದು ಸಿಕ್ಕಾಗ ಇಳಿದುಕೊಂಡುಬಿಡೋಣ ಅಂದುಕೊಂಡಿದ್ದ. ಅವನಿಗೇನು ಗೊತ್ತು, “ದಿಸ್ ಇಸ್ ಕರ್ನಾಟಕಾಸ್ ಕ್ಯಾಪಿಟಲ್, ಫಾರ್ ಯು” ಅಂತ. ಬೆಂಗಳೂರು ಕರ್ನಾಟಕದಲ್ಲಿದೆ, ಅದೇ ಅದರ ರಾಜಧಾನಿ ಅಂತ ಅವನಿಗೆ ಗೊತ್ತಿಲ್ಲದಿರುವ ಅವನ ಸಾಮಾನ್ಯ ಜ್ನಾನಕ್ಕೆ ವಿಷಾದಿಸೋಣ. ಆದರೆ ಅವನಿಗೆ ಬೆಂಗಳೂರಿನಲ್ಲಿದ್ದರೂ ಇದು ಕರ್ನಾಟಕವೆನ್ನುವುದು ಗೊತ್ತಾಗದ ಮಟ್ಟದಲ್ಲಿ ನಾವು ಬೆಂಗಳೂರನ್ನು ಕಾಪಾಡಿಕೊಂಡಿದ್ದೇವೆ ಎಂಬ ಕಟುವಾಸ್ತವಕ್ಕೆ, ಕೇವಲ ವಿಷಾದಿಸಿದರೆ ಸಾಕೇನು? Read more
‘ಹೊಸ ತಲೆಮಾರಿನ ತಲ್ಲಣ’ ಕೃತಿ ಪರಿಚಯ
– ಮು.ಅ ಶ್ರೀರಂಗ ಬೆಂಗಳೂರು
ಡಾ. ರಹಮತ್ ತರೀಕೆರೆ ಅವರ ಸಂಪಾದಕತ್ವದಲ್ಲಿ ಪ್ರಸಾರಾಂಗ, ಕನ್ನಡ ವಿಶ್ವವಿದ್ಯಾಲಯ ಹಂಪಿ ಅವರು ೨೦೦೮ರಲ್ಲಿ ಪ್ರಕಟಿಸಿರುವ ‘ಹೊಸ ತಲೆಮಾರಿನ ತಲ್ಲಣ’ ಕೃತಿಯ ಒಂದು ಪರಿಚಯ ಮಾಡಿಕೊಡುವುದು ಈ ಲೇಖನದ ಉದ್ದೇಶ. ಈ ಕೃತಿಯಲ್ಲಿ ಒಟ್ಟು ೩೮ ಲೇಖನಗಳಿವೆ. ಸಂಪಾದಕರಾದ ರಹಮತ್ ತರೀಕೆರೆಯವರು ತಮ್ಮ ಮುನ್ನುಡಿಯಲ್ಲಿ ಹೇಳಿರುವಂತೆ ‘ಈ ಸಂಕಲನವು ಬರಹದಲ್ಲಿ ತೊಡಗಿಕೊಂಡಿರುವವರಿಗೂ, ಸಾಹಿತ್ಯ ಅಧ್ಯಯನ ಮಾಡುವವರಿಗೂ, ಸಾಹಿತ್ಯದಲ್ಲಿ ಸಾಮಾನ್ಯ ಆಸಕ್ತಿ ಇರಿಸಿಕೊಂಡಿರುವ ಓದುಗರಿಗೂ ಉಪಯುಕ್ತ ಆಗಬಹುದು’. ಈ ಕೃತಿಯಲ್ಲಿ ಮೂರು ಭಾಗಗಳಿವೆ. ಮೊದಲ ಭಾಗದಲ್ಲಿ ಹೊಸತಲೆಮಾರಿನ ಲೇಖಕರ ಆತ್ಮ ಕಥಾನಾತ್ಮಕ ಮಾದರಿಯ ಬರಹಗಳಿವೆ. ಎರಡನೇ ಭಾಗದ ಬರಹಗಳು ಸಂಪಾದಕರ ಕೆಲವು ನಿರ್ದಿಷ್ಟ ಪ್ರಶ್ನೆಗಳಿಗೆ ಕೊಟ್ಟ ಉತ್ತರವಾಗಿ ಮೂಡಿಬಂದ ಲೇಖನಗಳಿವೆ. ಮೂರನೇ ಭಾಗದಲ್ಲಿ ಈ ಎರಡೂ ಭಾಗದ ಬರಹಗಳಿಗೆ ಸಂಪಾದಕರು ಮಾಡಿರುವ ‘ತಲ್ಲಣಗಳ ಸ್ವರೂಪ’ ಎಂಬ ಉತ್ತಮ ವಿಶ್ಲೇಷಣೆ ಇದೆ. Read more