ಈ ಗೆಲುವು ಮತ್ತೊಂದು ಸೋಲಿಗೆ ಮುನ್ನುಡಿಯಾಗದಿರಲಿ ರಾಘವೇಶ್ವರರೇ….
– ಕೆ ಎಸ್ ರಾಘವೇಂದ್ರ ನಾವಡ
ಅಂತೂ ಇಂತು ಎರಡು ವರುಷಗಳ ಹಿಂದೆ ಹೋಗಿದ್ದ ಹಿಂದೂಗಳ ಮರ್ಯಾದೆ ಮೊನ್ನೆ ವಾಪಾಸು ಬಂದಿತು. ರಾಘವೇಶ್ವರರು ಮತ್ತೊಂದು “ಅಂತರಿಕ ಯುದ್ಧ” ಗೆದ್ದಿದ್ದಾರೆ!! ಏಕೆ0ದರೆ ಬಾಹ್ಯ ವೈರಿಗಿ0ತಲೂ ಆಂತರಿಕ ವೈರಿಯನ್ನು ಗೆಲ್ಲುವುದು ಬಹಳ ಕಷ್ಟ! ಅಂದ ಮೇಲೆ ನಮ್ಮ ರಾಘವೇಶ್ವರ ಗೆಲುವೇನು ಸಾಮಾನ್ಯವೇ? ಏಕೆಂದರೆ ರಾಘವೇಶ್ವರರ ವಿರುದ್ಧ ಹಿಂದಿನ0ತೆ ಯುದ್ದ ಸಾರಿದ್ದು ಬೇರಾರು ಅಲ್ಲ! ಅವರ ಸುತ್ತು ಬಳಗದಲ್ಲಿನ ಹಿತಶತ್ರುಗಳೇ!! ಬ್ರಾಹ್ಮಣರೇ!, ಹಿಂದೂ ಸಂಘಟನೆಗಳೇ! ಇವರೊಂದಿಗೆ ಸಾರಿಗೆ ಒಗ್ಗರಣೆ ಹಾಕುವಂತೆ ಈ ಬಳಗಕ್ಕೆ ಬೇರೆಯವರ ಸಾಥ್ ಇತ್ತಷ್ಟೇ ! ಹಿಂದೂಗಳು ಹಿಂದೂಗಳ ಬೆಳವಣಿಗೆಯನ್ನು ಸಹಿಸಲಾರರು ಎಂಬುದಕ್ಕೆ ಈ ಹಗರಣ ಮತ್ತೊಂದು ಉದಾಹರಣೆಯಷ್ಟೇ!! ಮತ್ತಷ್ಟು ಓದು