ವಿಷಯದ ವಿವರಗಳಿಗೆ ದಾಟಿರಿ

Archive for

7
ಏಪ್ರಿಲ್

ಮತ್ತೊಮ್ಮೆ ಚೆಕಾಫ್

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

anton-chekhov-1-728ಮಧ್ಯಾಹ್ನದ ಸಮಯವದು. ತೀಕ್ಷ್ಣ ಕಂಗಳ,ಎತ್ತರದ ನಿಲುವಿನ ನಡುವಯಸ್ಕ ವಾಲ್ಡೆರೆವ್ ಕಚೇರಿಯ ಬಾಗಿಲಲ್ಲಿ ನಿಂತಿದ್ದ .ಧರಿಸಿದ್ದ ಮೇಲಂಗಿಯನ್ನು ಸರಿಪಡಿಸಿಕೊಳ್ಳುತ್ತ ನಿಂತಿದ್ದ ಆತ ಮಟ್ಟಸವಾಗಿ ತಲೆ ಬಾಚಿದ್ದ.ತನ್ನ ರೇಷ್ಮೆಯ ರುಮಾಲಿನಲ್ಲಿ ಹುಬ್ಬನ್ನೊರಿಸಿಕೊಳ್ಳುತ್ತ ಆ ಸರಕಾರಿ ಕಚೇರಿಯನ್ನು ಪ್ರವೇಶಿಸಿದ್ದ ಅವನ ನಡಿಗೆಯೂ ಕೊಂಚ ವಿಭಿನ್ನತೆಯಿಂದ ಕೂಡಿತ್ತು. ಸರಕಾರಿ ಕಚೇರಿಯಲ್ಲಿ ಎಂದಿನ ಸೋಮಾರಿತನದ ವಾತಾವರಣ.ಒಂದು ಹರಿವಾಣದ ತುಂಬ ಹತ್ತಾರು ಗ್ಲಾಸುಗಳನ್ನಿಟ್ಟುಕೊಂಡು ಗಡಿಬಿಡಿಯಲ್ಲಿ ನಡೆಯುತ್ತಿದ್ದ ಜವಾನನೊಬ್ಬನನ್ನು ತಡೆದು ನಿಲ್ಲಿಸಿ,’ನಾನೊಂದು ಮಾಹಿತಿಯನ್ನು ಪಡೆಯಬೇಕಿತ್ತು.’ಎಂದು ಪ್ರಶ್ನಿಸಿದ.ಕ್ಷಣಕಾಲ ವಾಲ್ಡೆರೆವ್ ನನ್ನು ದಿಟ್ಟಿಸುತ್ತ ನಿಂತಿದ್ದ ಜವಾನನ್ನು ಗಮನಿಸಿದ ವಾಲ್ಡೆರೆವ್ ಮತ್ತೊಮ್ಮೆ ” ಸರ್ ನಾನು ತುಂಬ ಅಗತ್ಯವಾದ ಮಾಹಿತಿಯೊಂದನ್ನು ಪಡೆದುಕೊಳ್ಳಬೇಕಿತ್ತು.ಹಾಗೆಯೇ ಮಂಡಳಿ ಪಾಸು ಮಾಡಿದ ಗೊತ್ತುವಳಿಯ ಪ್ರತಿಯೊಂದನ್ನು ಪಡೆದುಕೊಳ್ಳಬೇಕಿತ್ತು.ಇದನ್ನೆಲ್ಲಿ ವಿಚಾರಿಸಬೇಕೆನ್ನುವುದನ್ನು ದಯವಿಟ್ಟು ತಿಳಿಸಿ”ಎಂದು ಪ್ರಶ್ನಿಸಿದ. ಮತ್ತಷ್ಟು ಓದು »