ವಿಷಯದ ವಿವರಗಳಿಗೆ ದಾಟಿರಿ

Archive for

15
ಏಪ್ರಿಲ್

ನೂರು ಸಾಲಿನ ಸರಳ (ಮಿನಿ) ರಾಮಾಯಣ ಕಾವ್ಯ…

ನಾಗೇಶ ಮೈಸೂರು

Ram-Vs-Ravan-14

ಶ್ರೀ ರಾಮ ಸೀತೆಯ ಕಥೆ ನಮಗೇನು ಹೊಸದಲ್ಲ ಬಿಡಿ.. ಎಲ್ಲಾ ಭಾಷೆಗಳಲ್ಲಿ ಖಂಡುಗಗಟ್ಟಲೆ ಕಥೆ, ಕಾವ್ಯಗಳು ಸಿಕ್ಕುತ್ತವೆ. ಆದರಿದು ಆಧುನಿಕ ವೇಗದ ಜಗ.. ಎಲ್ಲಾ ಸಂಕ್ಷಿಪ್ತದಲ್ಲಿ, ಫಾಸ್ಟ್ ಪುಡ್ಡಿನ ಹಾಗೆ ಶೀಘ್ರಗತಿಯಲ್ಲಿ ಸಿಗುವಂತಿದ್ದರೆ ಅದನ್ನೇ ಬಯಸುವ ಗ್ರಾಹಕ ವರ್ಗವೂ ಸಾಕಷ್ಟು ದೊಡ್ಡದಿದೆ. ಇನ್ನು ಮಿಕ್ಕವರಿಗೆ ದೊಡ್ಡದು, ಚಿಕ್ಕದು ಎನ್ನುವ ಜಿಜ್ಞಾಸೆಗಿಂತ ಸಮಯದ ಅಭಾವ. ಇನ್ನು ಕಿರಿಯರ ವಿಷಯಕ್ಕೆ ಬಂದರೆ ಅವರಿಗೆ ತೀರಾ ಭಾರವಾಗದ ರೀತಿಯಲ್ಲಿ ಅರುಹಬೇಕಾದ ಅನಿವಾರ್ಯ.. ಇದನ್ನೆಲ್ಲಾ ಗಮನದಲ್ಲಿರಿಸಿಕೊಂಡು ಹೆಣೆದ ನೂರು ಸಾಲಿನ, ಚತುಷ್ಪಾದಿ ಅವತಾರದಲ್ಲಿರುವ ಕಾವ್ಯರೂಪಿ ರಾಮಾಯಣ ಸಾರ – ಈ ಶ್ರೀರಾಮ ಚರಿತ. ನರಮಾನವನಾಗಿ ಪಡಿಪಾಟಲು ಪಟ್ಟನೆನ್ನುವ ಹಿನ್ನಲೆಯನ್ನು ಅಂತರ್ಗತವಾಗಿಸಿಕೊಂಡು ಮೂಡಿಬಂದ ಕಥಾಲಹರಿ. ಸರಳ ಲಹರಿ ಹಿತವಾಗಿ ನುಡಿವಂತಿದ್ದು ಮುದ ತಂದರೆ ಧನ್ಯ .

ಮೂರ್ಖತೆಯ ತೆಗುಳು, ದ್ವಾರಪಾಲರ ಅಹಂಕಾರಗಳು

ನೆಮ್ಮದಿಯ ವೈಕುಂಠ, ಕಿಚ್ಚನ್ಹಚ್ಚಿಸಿ ಮಹಾಲಕ್ಷ್ಮಿಗೆ ದಿಗಿಲು

ಸನಕಾದಿ ಮುನಿಗಳ ಶಾಪ, ಭೂಲೋಕದ ಜನ್ಮಪರಿತಾಪ

ಸೇವೆಯಾಳುಗಳ ವತಿಯಿಂದ, ಶ್ರೀ ಹರಿಗೂ ಬಿಡದ ಕೂಪ || ೦೧ ||

ಮತ್ತಷ್ಟು ಓದು »

15
ಏಪ್ರಿಲ್

ನನ್ನನ್ನು ಆಕರ್ಷಿಸಿದ್ದು ಆಕೆಯ ಕಣ್ಣುಗಳು…!!

– ಗುರುರಾಜ್ ಕೊಡ್ಕಣಿ,ಯಲ್ಲಾಪುರ

The-Eyes-Have-It-Postರೋಹಾನಾ ಪಟ್ಟಣಕ್ಕೆ ತೆರಳುವವರೆಗೂ ರೈಲಿನ ಆ ಬೋಗಿಯೊಳಗಿದ್ದಿದ್ದು ನಾನೊಬ್ಬನೇ. ರೋಹಾನಾದ ಸ್ಟೇಷನ್ನಿನಲ್ಲಿ ಅವಳು ಹತ್ತಿಕೊಂಡಳು. ಆಕೆಯನ್ನು ನಿಲ್ದಾಣಕ್ಕೆ ಬಿಡಲು ಬಂದ ಅವರ ಅಪ್ಪ ಅಮ್ಮನಿಗೋ ಅವಳ ಬಗ್ಗೆ ಅತಿಯಾದ ಕಾಳಜಿ. ರೈಲು ಬಿಡುವವರೆಗೂ ಅವಳಿಗೆ ನಿಮಿಷಕ್ಕೊಂದು ಎಚ್ಚರಿಕೆ ಕೊಡುತ್ತ ನಿಂತಿದ್ದ ಆಕೆಯ ಪೋಷಕರ ಮಾತುಗಳು ನನಗೆ ಸ್ಪಷ್ಟವಾಗಿ ಕೇಳಿಸುತ್ತಿದ್ದವು. “ಬ್ಯಾಗುಗಳನ್ನು ಕಾಲ ಬಳಿಯೇ ಇರಿಸಿಕೋ, ಕಿಟಕಿಯಿಂದ ಕೈ ಹೊರಗೆಹಾಕಬೇಡ, ಹುಶಾರು, ಅಪರಿಚಿತರೊಡನೆ ಮಾತನಾಡಬೇಡ” ಹೀಗೆ ಕೆಲವು ಸಲಹೆಗಳನ್ನು ಆಕೆಯ ಹೆತ್ತವರು ನೀಡುತ್ತಿರುವಂತೆಯೇ ರೈಲು ಹೊರಟಿತು. ಮೊದಲೇ ನಾನು ಕುರುಡ. ಬೆಳಕು ಮತ್ತು ಕತ್ತಲುಗಳನ್ನು ಹೊರತುಪಡಿಸಿ ಇನ್ನೇನನ್ನೂ ಗುರುತಿಸಲು ನನ್ನಿಂದಾಗುತ್ತಿರಲಿಲ್ಲ. ಹಾಗಾಗಿ ಆ ಹುಡುಗಿ ನೋಡಲು ಹೇಗಿರಬಹುದೆಂದು ಊಹಿಸುವುದು ನನ್ನಿಂದ ಶಕ್ಯವಾಗಲಿಲ್ಲ. ಆಕೆಯ ಚಪ್ಪಲಿಯಿಂದ ಬರುತ್ತಿದ್ದ ಸಪ್ಪಳದಿಂದಾಗಿ ಆಕೆ ಹವಾಯಿ   ಚಪ್ಪಲಿಗಳನ್ನು   ಧರಿಸಿರಬೇಕೆನ್ನುವುದನ್ನು   ಅರಿತೆ.   ಆಕೆಯದ್ದೋ ಕೋಗಿಲೆಯಂತಹ ಮಧುರ ಧ್ವನಿ.  ಹೇಗಾದರೂ  ಸರಿ,  ಆಕೆಯ  ರೂಪವನ್ನು ಗ್ರಹಿಸಬೇಕೆಂದುಕೊಂಡೆನಾದರೂ  ನನ್ನ ಸಹಾಯಕ್ಕೆ ಅಲ್ಲಿ ಯಾರೂ ಇರದಿದ್ದದ್ದು ನನಗೆ ಕೊಂಚ ಬೇಸರವನ್ನುಂಟು ಮಾಡಿತ್ತು. ಮತ್ತಷ್ಟು ಓದು »