ವಿಷಯದ ವಿವರಗಳಿಗೆ ದಾಟಿರಿ

Archive for

21
ಏಪ್ರಿಲ್

‘ಹೊಸ ತಲೆಮಾರಿನ ತಲ್ಲಣ’ ಕೃತಿ ಪರಿಚಯ

ಮು.ಅ ಶ್ರೀರಂಗ ಬೆಂಗಳೂರು

hosa talemarina tavaka tallanagalu0001ಡಾ. ರಹಮತ್ ತರೀಕೆರೆ ಅವರ ಸಂಪಾದಕತ್ವದಲ್ಲಿ  ಪ್ರಸಾರಾಂಗ, ಕನ್ನಡ ವಿಶ್ವವಿದ್ಯಾಲಯ ಹಂಪಿ ಅವರು ೨೦೦೮ರಲ್ಲಿ ಪ್ರಕಟಿಸಿರುವ ‘ಹೊಸ ತಲೆಮಾರಿನ ತಲ್ಲಣ’ ಕೃತಿಯ ಒಂದು ಪರಿಚಯ ಮಾಡಿಕೊಡುವುದು ಈ ಲೇಖನದ ಉದ್ದೇಶ. ಈ ಕೃತಿಯಲ್ಲಿ ಒಟ್ಟು   ೩೮ ಲೇಖನಗಳಿವೆ. ಸಂಪಾದಕರಾದ  ರಹಮತ್ ತರೀಕೆರೆಯವರು ತಮ್ಮ ಮುನ್ನುಡಿಯಲ್ಲಿ ಹೇಳಿರುವಂತೆ ‘ಈ ಸಂಕಲನವು ಬರಹದಲ್ಲಿ ತೊಡಗಿಕೊಂಡಿರುವವರಿಗೂ, ಸಾಹಿತ್ಯ ಅಧ್ಯಯನ ಮಾಡುವವರಿಗೂ, ಸಾಹಿತ್ಯದಲ್ಲಿ ಸಾಮಾನ್ಯ ಆಸಕ್ತಿ ಇರಿಸಿಕೊಂಡಿರುವ ಓದುಗರಿಗೂ ಉಪಯುಕ್ತ ಆಗಬಹುದು’.   ಈ ಕೃತಿಯಲ್ಲಿ ಮೂರು ಭಾಗಗಳಿವೆ. ಮೊದಲ ಭಾಗದಲ್ಲಿ  ಹೊಸತಲೆಮಾರಿನ ಲೇಖಕರ ಆತ್ಮ ಕಥಾನಾತ್ಮಕ ಮಾದರಿಯ ಬರಹಗಳಿವೆ. ಎರಡನೇ ಭಾಗದ ಬರಹಗಳು ಸಂಪಾದಕರ ಕೆಲವು ನಿರ್ದಿಷ್ಟ ಪ್ರಶ್ನೆಗಳಿಗೆ ಕೊಟ್ಟ ಉತ್ತರವಾಗಿ ಮೂಡಿಬಂದ ಲೇಖನಗಳಿವೆ. ಮೂರನೇ ಭಾಗದಲ್ಲಿ ಈ ಎರಡೂ  ಭಾಗದ ಬರಹಗಳಿಗೆ ಸಂಪಾದಕರು ಮಾಡಿರುವ   ‘ತಲ್ಲಣಗಳ ಸ್ವರೂಪ’ ಎಂಬ ಉತ್ತಮ  ವಿಶ್ಲೇಷಣೆ ಇದೆ. ಮತ್ತಷ್ಟು ಓದು »