ವಿಷಯದ ವಿವರಗಳಿಗೆ ದಾಟಿರಿ

Archive for

24
ಏಪ್ರಿಲ್

ಶನಿಯ ಬೆನ್ನೇರಿದ ಕಾಕ, ಇದೆಲ್ಲ ನಾಟಕ ಯಾಕ?

– ರೋಹಿತ್ ಚಕ್ರತೀರ್ಥ

shani-shingnapur_650x400_41460171606ನಮ್ಮ ದೇಶದಲ್ಲಿ ಖರ್ಚಿಲ್ಲದೆ ಪ್ರಸಿದ್ಧಿ ಒದಗಿಸುವ ಎರಡು ಸಂಗತಿಗಳಿವೆ. ಒಂದು ಬುದ್ಧಿಜೀವಿಯಾಗುವುದು, ಇನ್ನೊಂದು ಮಹಿಳಾವಾದಿಯಾಗುವುದು. ಬುದ್ಧಿಜೀವಿಯಾಗಬೇಕಾದರೆ ನೀವು ಸೆಕ್ಯುಲರ್ ಎಂದು (ಏನೆಂದು ಗೊತ್ತಿರದಿದ್ದರೂ) ತೋರಿಸಿಕೊಳ್ಳಬೇಕು. ಹಿಂದೂಗಳನ್ನು, ಅವರ ಆಚರಣೆ, ಪದ್ಧತಿ, ಹಬ್ಬಹರಿದಿನಗಳನ್ನು ಬಯ್ಯಬೇಕು. ಹಿಂದೂ ದೇವರನ್ನು, ದೇವಾಲಯಗಳನ್ನು ಪ್ರಶ್ನಿಸಬೇಕು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ರಿಲಿಜನ್ನುಗಳನ್ನು ಓಲೈಸಬೇಕು. ಮೋದಿಯನ್ನು ತೆಗಳಬೇಕು. ಭಯೋತ್ಪಾದಕರನ್ನು, ನಕ್ಸಲರನ್ನು ಬೆಂಬಲಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ನಿಮಗೆ ಬೆನ್ನುಮೂಳೆ ಇರಬಾರದು. ಜೊತೆಗೆ, ಅರ್ಥವತ್ತಾದ ಮಾತು, ತರ್ಕಬದ್ಧವಾದ ಚಿಂತನೆ – ಇವೆರಡರ ಬಗ್ಗೆ ನೀವು ಎಂದೆಂದೂ ತಲೆ ಕೆಡಿಸಿಕೊಂಡಿರಬಾರದು. ಹಾಗೆಯೇ, ಮಹಿಳಾವಾದಿಯಾಗುವುದು ಕೂಡ ಸುಲಭ. ಮೊದಲಿಗೆ ಮಹಿಳಾವಾದ = ಪುರುಷದ್ವೇಷ ಎಂಬ ಸಮೀಕರಣ ಬರೆಯಿರಿ. ಮಹಿಳೆಗೆ ಸ್ವಾತಂತ್ರ್ಯ ಬೇಕು ಅನ್ನಿ. ಉದ್ಯೋಗದಲ್ಲಿ, ಸಂಸತ್ತಿನಲ್ಲಿ, ಬಸ್ಸಿನಲ್ಲಿ, ಚಿತ್ರಮಂದಿರದಲ್ಲಿ, ನಡೆದಾಡುವ ರಸ್ತೆಯಲ್ಲಿ – ಹೀಗೆ ಎಲ್ಲೆಲ್ಲೂ ಹೆಣ್ಣಿಗೆ ಸಮಾನತೆ ಬೇಕೆಂದು ಬೊಬ್ಬೆ ಹೊಡೆಯಿರಿ. ಉದ್ಧೇಶವೇ ಇಲ್ಲದೆ ಪ್ರತಿಭಟನೆ ಮಾಡಿದರೂ ಓಕೆ. ವಿರೋಧಿಸದವರಿಗೂ ಧಿಕ್ಕಾರ ಕೂಗಿದರೂ ಓಕೆ. ಒಟ್ಟಲ್ಲಿ ನಿಮ್ಮ ಮಾತು, ಕೂಗಾಟ, ಹಾರಾಟ, ಹೋರಾಟವೆಲ್ಲ ನಾಲ್ಕು ಜನಕ್ಕೆ ಗೊತ್ತಾಗಬೇಕು, ಪತ್ರಿಕೆ ಟಿವಿಗಳಲ್ಲಿ ಬರಬೇಕು. ಮತ್ತು ಇವೆಲ್ಲದರ ಜೊತೆ, ನೀವು, ಮೇಲೆ ಹೇಳಿದ ಬುದ್ಧಿಜೀವಿಯೂ ಆಗಿರಬೇಕಾದ್ದು ಅನಿವಾರ್ಯ. ಎರಡು ವರ್ಷಗಳ ಹಿಂದೆ ಒಂದು ಬುದ್ಧಿಜೀವಿ ಮಹಿಳಾಪರ ಲೇಖಕಿ, “ಮೋದಿಯ ಮುಖ ನೋಡಿದರೇನೇ ಆತ ಸ್ತ್ರೀದ್ವೇಷಿ ಅನ್ನೋದು ಗೊತ್ತಾಗುತ್ತದೆ” ಎಂದಿದ್ದರು. ಇಂಥ ಹೇಳಿಕೆ ಕೊಡುವವರಿಗೆ ಮಹಿಳಾಪರ ಸಂಘಟನೆಗಳಲ್ಲಿ ಒಳ್ಳೆಯ ಬೇಡಿಕೆ ಇದೆ. ಮತ್ತಷ್ಟು ಓದು »