ವಿಷಯದ ವಿವರಗಳಿಗೆ ದಾಟಿರಿ

Archive for

30
ಏಪ್ರಿಲ್

ತಮ್ಮನ ಪುನರ್ಮಿಲನ

image (1)

– ರಂಜನ್ ಕೇಶವ

ಪ್ರತಾಪನು ಚೇತಕ್ ನೊಡನೆ ರಣಭೂಮಿಯಿಂದ ತೆರಳಿದಾಗ ಹಲ್ದೀಘಾಟಿಯ ಯುದ್ಧ ಭಾಗಶಃ ಮುಗಿದಿತ್ತು. ಪ್ರತಾಪನಿಗೆ ಒಂದುಕಡೆ ಯುದ್ಧದಲ್ಲುಂಟಾದ ಸೋಲಿನ ನಿರಾಶೆ ಮತ್ತೊಂದೆಡೆ ಮೊಘಲ್ ಸೇನೆಯನ್ನು ಮುಂದೆ ತಡೆಯುವುದು ಹೇಗೆಂಬ ಚಿಂತೆ. ತರಾತುರಿಯಲ್ಲಿ ತೆರಳಿದ್ದಕ್ಕಾಗಿ ಪ್ರತಾಪನು ಏಕಾಂಗಿಯಾಗಿದ್ದ, ಜೊತೆಗೆ ಯಾವೊಬ್ಬ ಸಹಚರನೋ ಸರದಾರರೋ ಇರಲಿಲ್ಲ. ವ್ಯಾಕುಲಗೊಂಡ ಮನಸ್ಸಿನ ಕಾರಣ ಏಕಾಂಗಿತನದ ಅರಿವೂ ಇಲ್ಲ.
ಹೀಗೆ ಸಾಗುತ್ತಿದ್ದ ಪ್ರತಾಪನನ್ನು ಅವನ ಅರಿವಿಗೆ ಬಾರದಂತೆ ಇಬ್ಬರು ಮೊಘಲ್ ಸವಾರರು ಹಿಂಬಾಲಿಸುತಿದ್ದರು ! ಇಬ್ಬರಲ್ಲೂ ಪ್ರತಾಪನನ್ನು ಕೊಂದು ಷೆಹಂಷಾಹ್ ನಿಂದ ಪುರಸ್ಕಾರ ಪಡೆಯುವ ಆಕಾಕ್ಷೆಯಿತ್ತು.

ಚೇತಕ್ ಕುದುರೆ ತನ್ನ ಸ್ವಾಮಿಯನ್ನು ರಕ್ಷಿಸಲೆಂದು ನೆಲದ ಏರಿಳಿತ, ಕಲ್ಲು ಬಂಡೆ ಮತ್ಯಾವ ಅಡೆತಡೆಗಳಿಗೂ ಸ್ವಲ್ಪವೂ ವೇಗ ಕುಗ್ಗಿಸದೇ ಒಂದೇ ರಭಸದಲ್ಲಿ ಓಡುತ್ತಿತ್ತು. ಕಾಲಿನ ಗಾಯದ ರಕ್ತಸ್ರಾವದಲ್ಲೂ ಯಾವ ಬಾಧೆಯನ್ನೂ ಲೆಕ್ಕಿಸದೇ ಮುನ್ನುಗ್ಗುತ್ತಿತ್ತು. ಹೀಗೆ ಸಾಗುತ್ತಾ ಒಂದು ನದಿಯ ಕವಲನ್ನು ಚೇತಕ್ ಒಂದೇ ನೆಗೆತಕ್ಕೆ ದಾಟಿತು. ಆದರೆ ಆ ಮೊಘಲ್ ಸೈನಿಕರ ಕುದುರೆಗಳಿಗೆ ದಾಟಲಾಗದೆಯೇ ಅಲ್ಲೇ ನಿಂತವು. ಮತ್ತಷ್ಟು ಓದು »