ವಿಷಯದ ವಿವರಗಳಿಗೆ ದಾಟಿರಿ

Archive for

11
ಮೇ

ನೀನೋದಿದ ವಿದ್ಯೆಗೆಲ್ಲಿಡುವೆ ನೈವೇದ್ಯ?

– ನಾಗೇಶ ಮೈಸೂರು
EDUCATIONಹೀಗೆ ಯೋಚಿಸುತ್ತ ಕುಳಿತಿದ್ದೆ ಪಾರ್ಕಿನ ಬೆಂಚೊಂದರ ಮೇಲೆ. ಶನಿವಾರ, ಭಾನುವಾರಗಳ ಒಂದೂವರೆ ತಾಸಿನ ನಡೆದಾಟ ಮುಗಿಸಿ, ಹಿಂದಿರುಗುವ ಮುನ್ನ ಅಲ್ಲೊಂದರ್ಧ ಗಂಟೆ ಕೂತು ವಿಶ್ರಮಿಸಿ ಹೊರಡುವುದು ರೂಢಿ. ಹಾಗೆ ಕೂತ ಗಳಿಗೆ, ಮನಸಿಗಷ್ಟು ಹುರುಪೆದ್ದರೆ ಒಂದು ಕವನವೊ, ಚುಟುಕವೊ ಗೀಚುವುದುಂಟು. ಇಲ್ಲವಾದರೆ, ಕಿವಿಗುಟ್ಟುವ ಹಾಡಿನ ಜತೆ ಗುನುಗುತ್ತ ಯಾವುದೋ ಆಲೋಚನೆಯಲ್ಲಿ ಕಳುವಾಗುವುದು ಉಂಟು. ಪ್ರತಿಬಾರಿಯೂ ಇದೇ ಪದೇ ಪದೇ ಪುನರಾವರ್ತನೆಯಾದರೂ ಇನ್ನು ಬೋರೆನಿಸುವ ಮಟ್ಟಕ್ಕೆ ತಲುಪದ ಕಾರಣ, ಇದನ್ನು ಮನಸಿಗೆ ಹಿತವಾದ ಪ್ರಕ್ರಿಯೆಯೆಂದೇ ಅಂದುಕೊಂಡೇನೋ, ಒಂದೆರಡು ವರ್ಷಗಳಿಂದ ಇದು ಹಾಗೆ ಮುಂದುವರೆದಿದೆ. ಮತ್ತಷ್ಟು ಓದು »