ವಿಷಯದ ವಿವರಗಳಿಗೆ ದಾಟಿರಿ

Archive for

15
ಮೇ

ಸಿದ್ಧಾಂತಗಳ ಸಂಗ ಸಾಕಾಗಿದೆ; ದೇಶಭಕ್ತಿಯ ಸಂಘ ಬೇಕಾಗಿದೆ

– ರೋಹಿತ್ ಚಕ್ರತೀರ್ಥ

indian-flag-rallyಕನ್ನಡದಲ್ಲಿ “ತಾಯಿನಾಡು” ಪತ್ರಿಕೆಯನ್ನು ನಾಲ್ಕು ದಶಕಗಳ ಕಾಲ ನಡೆಸಿದ ಮತ್ತು ಬೆಂಗಳೂರಿನ ಬಸವನಗುಡಿ ಕ್ಷೇತ್ರದ ಮೊದಲ ಚುನಾಯಿತ ಶಾಸಕನಾಗಿದ್ದ ಪಿ.ಆರ್.ರಾಮಯ್ಯ ಬನಾರಸ್ ಹಿಂದೂ ವಿಶ್ವ ವಿದ್ಯಾಲಯದಲ್ಲಿ ಕಲಿಯುತ್ತಿದ್ದ ದಿನಗಳು. ಪದವಿಯ ಅಂತಿಮ ವರ್ಷದಲ್ಲಿದ್ದರು. ದೇಶದಲ್ಲಿ ಸ್ವಾತಂತ್ರ್ಯ ಹೋರಾಟದ ಕಾವು ದಿನದಿನಕ್ಕೆ ಏರುತ್ತಿದ್ದ ಹೊತ್ತು. ಗಾಂಧಿಯ ಮಾತುಗಳನ್ನು ಕೇಳಲು ಎಲ್ಲಿಂದ ಎಲ್ಲಿಯವರೆಗೂ ಕಾಲ್ನಡಿಗೆಯಲ್ಲೋ ರೈಲಿನಲ್ಲೋ ಹೋಗಿಬರಲು ತಯಾರಾಗಿದ್ದ ರಾಮಯ್ಯನವರಿಗೆ ಒಂದು ದಿನ ವಾರಾಣಸಿಯ ಪಕ್ಕದಲ್ಲೇ ಗಾಂಧಿ ಭಾಷಣ ಏರ್ಪಾಟಾಗಿದ್ದನ್ನು ಕಂಡು ಸಕ್ಕರೆ ಹಾಲು ಕುಡಿದಷ್ಟು ಸಂತೋಷವಾಯಿತು. ಅಂದಿನ ಭಾಷಣದಲ್ಲಿ ಗಾಂಧಿ, ಹೋರಾಟಕ್ಕೆ ಭೀಮಬಲ ಬರಬೇಕಾದರೆ ವಿದ್ಯಾರ್ಥಿಗಳೆಲ್ಲರೂ ತಮ್ಮ ಶಾಲಾ-ಕಾಲೇಜುಗಳಿಂದ ಹೊರಬಂದು ಹೋರಾಟದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ಈ ಮಾತು ರಾಮಯ್ಯನವರ ಮೇಲೆ ಎಷ್ಟು ಪ್ರಭಾವ ಬೀರಿತೆಂದರೆ ಅವರು ತಕ್ಷಣ ತನ್ನ ಪದವಿ ವ್ಯಾಸಂಗವನ್ನು ಮೊಟಕುಗೊಳಿಸಿ ಚಳವಳಿಯಲ್ಲಿ ಭಾಗವಹಿಸಲು ನಿರ್ಧರಿಸಿಬಿಟ್ಟರು. ಇನ್ನೊಂದೆರಡು ವಾರಗಳು ಕಳೆದರೆ ಮುಖ್ಯಪರೀಕ್ಷೆಗಳು ಪ್ರಾರಂಭವಾಗುವುದರಲ್ಲಿದ್ದವು. ಈಗ ಏಕಾಏಕಿ ವಿಶ್ವವಿದ್ಯಾಲಯ ತೊರೆದರೆ ಗತಿಯೇನು ಎಂಬ ಸಣ್ಣದೊಂದು ಅಂಜಿಕೆಯೂ ಅವರ ಮನದ ಮೂಲೆಯಲ್ಲಿತ್ತು. ನೇರವಾಗಿ ವಿವಿಯ ಕುಲಪತಿಗಳಾಗಿದ್ದ ಮದನ ಮೋಹನ ಮಾಲವೀಯರಲ್ಲಿಗೆ ಹೋಗಿ ತನ್ನ ಇಬ್ಬಂದಿತನವನ್ನು ವಿವರಿಸಿ ಏನು ಮಾಡಲಿ ಎಂದು ಮಾರ್ಗದರ್ಶನ ಕೇಳಿದರು. ಮತ್ತಷ್ಟು ಓದು »