ಕಾಂಗ್ರೆಸ್ನ ವ್ಯಾಘ್ರ ದಾಳಿಗೆ ನಲುಗಿದ ಸಾಧ್ವಿ
– ಎಸ್.ಆರ್. ಅನಿರುದ್ಧ ವಸಿಷ್ಠ, ಭದ್ರಾವತಿ
ಮಾಲೇಗಾಂವ್ ಸ್ಪೋಟ ಪ್ರಕರಣದಲ್ಲಿ ಸಾಧ್ವಿ ಪ್ರಜ್ಞಾ ಸಿಂಗ್ಗೆ ಕ್ಲೀನ್ಚಿಟ್ ನೀಡಿ ಆರೋಪಮುಕ್ತಗೊಳಿಸಲಾಗಿದೆ. ಹಾಗಾದರೆ, ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ನಿಜಕ್ಕೂ ಭಾಗಿಯಾದವರು ಯಾರು? ಸ್ಫೋಟದ ಹಿಂದಿರುವ ವ್ಯಕ್ತಿ ಹಾಗೂ ಸಂಘಟನೆಗಳು ಯಾರು ಎನ್ನುವುದರ ಕುರಿತು ಉನ್ನತ ಮಟ್ಟದ ತನಿಖೆ ನಡೆಯಬೇಕಿದ್ದು, ಈ ಕುರಿತಂತೆ ಸತ್ಯ ಹೊರಬರಬೇಕಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ.
ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣಕ್ಕೀಗ ತಾರ್ಕಿಕ ಅಂತ್ಯ ದೊರೆತಿದ್ದು, ಸಾಧ್ವಿ ಪ್ರಜ್ಞಾ ಸಿಂಗ್ ಸೇರಿದಂತೆ ಆರು ಜನರ ಮೇಲೆ ಹೇರಲಾಗಿದ್ದ ಮೋಕಾ ಪ್ರಕರಣದಲ್ಲಿ ಇವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಎಂದು ಚಾರ್ಜ್ಶೀಟ್ ಸಲ್ಲಿಸಿರುವ ತನಿಖಾ ಸಂಸ್ಥೆ ಎನ್ಐಎ ಆರೋಪಗಳಿಂದ ಕ್ಲೀನ್ ಚಿಟ್ ನೀಡಿದೆ.
ನಿಜಕ್ಕೂ ಇದು ಸತ್ಯಕ್ಕೆ ಸಂದ ಜಯ ಎಂದು ಸಂತಸ ಪಡುವ ವೇಳೆಯೇ ಈ ಸಂತಸವನ್ನು ಸಂಭ್ರಮಿಸುವ ಮನಸ್ಥಿತಿ ಹಾಗೂ ದೇಹಸ್ಥಿತಿಯಲ್ಲಿ ಸ್ವತಃ ಸಾಧ್ವಿ ಪ್ರಜ್ಞಾ ಸಿಂಗ್ ಇಲ್ಲ ಎನ್ನುವುದು ಇಡೀ ಪ್ರಜಾಪ್ರಭುತ್ವ ವ್ಯವಸ್ಥೆ ತಲೆ ತಗ್ಗಿಸಬೇಕಾದ ವಿಚಾರ. ಮತ್ತಷ್ಟು ಓದು