ವಿಷಯದ ವಿವರಗಳಿಗೆ ದಾಟಿರಿ

Archive for

18
ಮೇ

ನಂಜುಂಡೇಗೌಡರು ಮೋದಿಗೆ ಬರೆದ ಪತ್ರಕ್ಕೊಂದು ಆತ್ಮೀಯ ಪ್ರತಿಕ್ರಿಯೆ

– ವಿಜಯ್ ಪೈ

pvec16may16editmainಸನ್ಮಾನ್ಯ ಹೊನಕೆರೆ ನಂಜುಂಡೇಗೌಡರಿಗೆ ವಂದನೆಗಳು.

ತಾವು ಪ್ರಧಾನ ಮಂತ್ರಿಗಳಿಗೆ ಪ್ರಜಾವಾಣಿ ಪತ್ರಿಕೆಯಲ್ಲಿ ಬರೆದ ‘ಆತ್ಮೀಯ’ ಪತ್ರವನ್ನು ಓದಿದ ನಂತರ ನಿಮಗೊಂದು ಆತ್ಮೀಯ ಪ್ರತಿಕ್ರಿಯೆ ನೀಡಬೇಕಾಯಿತು.

(ನಂಜುಂಡೇಗೌಡರ ಪತ್ರ : www.prajavani.net/columns/ಗೌರವಾನ್ವಿತ-ಪ್ರಧಾನಿಗೆ-ಆತ್ಮೀಯ-ಪತ್ರ )

ಮೋದಿ ಆಡಳಿತದಿಂದ ಈ ದೇಶದಲ್ಲಿ ಬಂದ ಒಂದು ಅತ್ಯುತ್ತಮ ಬದಲಾವಣೆಯೆಂದರೆ, ‘ಬುದ್ಧಿಜೀವಿ’ಗಳೆಂದು / ಪತ್ರಕರ್ತರೆಂಬ ಅಪಾದನೆಗೊಳಲ್ಪಟ್ಟವರು ಆಗಾಗ ಪ್ರಧಾನಿಗೆ ಪತ್ರ ಬರೆಯುವ, ಬುದ್ಧಿವಾದ ಹೇಳುವ/ ಎಚ್ಚರಿಸುವ ಕಾರ್ಯಕ್ರಮದಲ್ಲಿ ತೊಡಗಿಕೊಂಡಿರುವುದು. ದಶಕಗಳ ಕಾಲ ಕೋಮಾಕ್ಕೆ ಒಳಗಾಗಿದ್ದ ಇವರುಗಳು, ಈಗ ಮೋದಿ ಎಂಬ ಸಂಜೀವಿನಿಯಿಂದ ಮತ್ತೆ ಜೀವಂತಗೊಂಡು ಮತ್ತೆ ‘ಸಾಕ್ಷಿ ಪ್ರಜ್ಞೆ’ಗಳಾಗಿದ್ದಾರೆ ಎಂದು ಜನ ಭಾವಿಸಿದರೆ, ನೀವೂ ಕೂಡ ಅಲ್ಲಗೆಳೆಯುವುದಿಲ್ಲ ಅಂದುಕೊಳ್ಳುತ್ತೇನೆ. ಮೊನ್ನೆ-ಮೊನ್ನೆ ಬರವನ್ನು ಹೇಗೆ ನಿರ್ವಹಿಸಬೇಕು, ಈ ವಿಷಯದಲ್ಲಿ ಸರಕಾರದ ನ್ಯೂನತೆಗಳೇನು ಎಂಬ ಬಗ್ಗೆ ನಮ್ಮ ದೇಶ ಕಂಡ ಕೆಲವು ಬಹುಮುಖ್ಯ ಸಾಕ್ಷಿಪ್ರಜ್ಞೆಗಳು ಪ್ರಧಾನಿಗಳಿಗೆ ಪತ್ರ ಬರೆದಿದ್ದರು. ಈಗ ನೀವು ಕೂಡ ಸರಕಾರದ ಎರಡನೆಯ ವರ್ಷಾಚರಣೆಯ ಸಂದರ್ಭದಲ್ಲಿ ಪತ್ರ ಬರೆದಿದ್ದೀರಿ. ತಮ್ಮ ಕಾಳಜಿಗೆ ವಂದನೆಗಳು. ಮತ್ತಷ್ಟು ಓದು »