ಬೀಭತ್ಸ…….!!(ಭಾಗ ೧)
ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಅದು ಜೂನ್ ಇಪ್ಪತ್ತೇಳನೆಯ ತಾರೀಖು. ಎಳೆಯ ಬಿಸಿಲಿನ್ನೂ ಭೂಮಿಯನ್ನು ಚುಂಬಿಸುತಿತ್ತು. ಮೈದಾನದುದ್ದಕ್ಕೂ ಆವರಿಸಿಕೊಂಡಿದ್ದ ಹಸಿರು ಹುಲ್ಲಿನ ನಡುನಡುವೆ ಬೆಳೆದುಕೊಂಡಿದ್ದ ಸಣ್ಣ ಗಿಡಗಳ ತುಂಬೆಲ್ಲ ಚಂದದ ಪುಷ್ಫಗಳು ಅರಳಿಕೊಂಡಿದ್ದವು. ಹಳ್ಳಿಯ ಅಂಚೆ ಕಚೇರಿ ಮತ್ತು ಬ್ಯಾಂಕುಗಳ ರಸ್ತೆಗಳು ಕೂಡುವ ಚೌಕದಲ್ಲಿ ನಿಧಾನವಾಗಿ ಹಳ್ಳಿಗರು ಸೇರಲಾರಂಭಿಸಿದ್ದರು. ಹಳ್ಳಿಯ ಚೀಟಿ ಎತ್ತುವಿಕೆಯ ಕಾರ್ಯಕ್ರಮ ಕೇವಲ ಒಂದೇ ದಿನದಲ್ಲಿ ಮುಗಿದು ಹೋಗುತ್ತದೆ. ಆದರೆ ಬೇರೆ ಕೆಲವು ಪಟ್ಟಣಗಳಲ್ಲಿ ಜನಸಂಖ್ಯೆ ಹೆಚ್ಚಿರುವುದರಿಂದ ಕಡಿಮೆಯೆಂದರೂ ಎರಡು ದಿನಗಳಷ್ಟು ಕಾಲಾವಕಾಶ ಬೇಕು. ಕಡಿಮೆ ಜನಸಂಖ್ಯೆಯ ಕಾರಣದಿಂದಾಗಿ ಆ ಹಳ್ಳಿಯ ಜನ ಬೆಳಗ್ಗಿನ ಹತ್ತು ಗಂಟೆಗೆಲ್ಲ ಕಾರ್ಯಕ್ರಮ ಆರಂಭಿಸಿ, ಮಧ್ಯಾಹ್ನದ ಹೊತ್ತಿಗೆ ವಿಧಿವಿಧಾನಗಳನ್ನು ಪೂರೈಯಿಸಿ ಊಟಕ್ಕೆಂದು ತಮ್ಮತಮ್ಮ ಮನೆಗಳಿಗೆ ತೆರಳುತ್ತಿದ್ದರು. ಮತ್ತಷ್ಟು ಓದು