ತಲೆಕೆಟ್ಟ ಕಾನೂನುಗಳು ಮತ್ತು ಸ್ವಂತ ಬುದ್ಧಿಯಿಲ್ಲದ ಜೀವಿಗಳು
– ರಾಕೇಶ್ ಶೆಟ್ಟಿ
ಇತ್ತೀಚೆಗೆ ಮತ್ತೂರಿನಲ್ಲಿ ನಡೆದ ಸೋಮಯಾಗದಲ್ಲಿ ಸಂಕೇತಿ ಬ್ರಾಹ್ಮಣರು ಮೇಕೆ ಬಲಿ ಕೊಟ್ಟು ತಿಂದರಂತೆ, ಸೋಮರಸ ಕುಡಿದರಂತೆ ಅಂತ ಪ್ರಗತಿಪರರ ವಾಣಿಯೊಂದು ಸುಳ್ಳು ಸುದ್ದಿ ಬರೆಯಿತು. ಈ ಸುದ್ದಿಯಿಂದಾಗಿ ಟೌನ್ ಹಾಲ್ ಮುಂದೆ ನಿಂತು ದನ ತಿನ್ನುವುದನ್ನು ಬೆಂಬಲಿಸುವ ಕಬಾಬ್ ಕ್ರಾಂತಿಕಾರಿಗಳಿಗೂ ಹೊಟ್ಟೆನೋವು ಕಾಣಿಸಲಾರಂಭಿಸಿತು. ಇವರನ್ನು ಕರೆಯದೇ ತಿಂದರೂ ಎಂದು ಹೊಟ್ಟೆ ನೋವಾಗಿತ್ತೋ ಏನೋ. PhD ಮಹಾಶಯನೊಬ್ಬ ಬ್ರಾಹ್ಮಣರು ಮಾಂಸ ತಿನ್ನಲು ಶುರು ಮಾಡಿದರೆ ರೇಟ್ ಜಾಸ್ತಿಯಾಗುತ್ತೆ ಅಂತ ಅಳ್ತಾ ಇದ್ದ. ಎಂತೆಂತವರೆಲ್ಲ ವಿವಿಗಳಲ್ಲಿ ಪಾಠ ಮಾಡುತ್ತಾರಪ್ಪಾ ಅನಿಸಿತು. ಎಲ್ಲಾ (ಜಾತಿ/ಪಂಗಡದ) ಬ್ರಾಹ್ಮಣರು ಸಸ್ಯಹಾರಿಗಳು ಅನ್ನೋದು “ಮೂಢನಂಬಿಕೆ”. ಸಿದ್ರಾಮಯ್ಯನವರಿಗೆ ಹೇಳಿ ಮೌಢ್ಯ ನಿಷೇಧ ಕಾಯ್ದೆಯ ಮೂಲಕ ಈ ಮೂಢನಂಬಿಕೆಯನ್ನು ನಿಷೇಧಿಸಬೇಕು. ಕಾಶ್ಮೀರಿ ಪಂಡಿತರಿಗೆ ಶಿವರಾತ್ರಿ ಹಬ್ಬದಂದು ಮಾಂಸದಡುಗೆಯೇ ವಿಶೇಷವಾದದ್ದು. ಬಂಗಾಳಿ, ಓಡಿಶಾದ ಬ್ರಾಹ್ಮಣರೂ, ಗೌಡ ಸಾರಸ್ವತ ಬ್ರಾಹ್ಮಣರಲ್ಲೂ ಮಾಂಸಹಾರಿಗಳಿದ್ದಾರೆ. ಮತ್ತಷ್ಟು ಓದು