ವಿಷಯದ ವಿವರಗಳಿಗೆ ದಾಟಿರಿ

Archive for

1
ಜೂನ್

ಇಂದಿನವರೆಗೂ ಬುದ್ದಿಜೀವಿಗಳ ಬುದ್ಧಿ ನೆಟ್ಟಗಾಗಿಲ್ಲ. ಮುಂದಾದರೂ ಆದೀತಾ?

-ಶ್ರೀಕಾಂತ್ ಆಚಾರ್ಯ

1ಇಲ್ಲೇ ಹುಟ್ಟಿ, ಇಲ್ಲೇ ಬೆಳೆದು ಈ ದೇಶದ ಅಷ್ಟೂ ಸವಲತ್ತನ್ನ ಚಪ್ಪರಿಸಿಕೊಂಡು ಅನುಭವಿಸಿದವರಿಂದ ಭಾರತದ ‘ಬರ್ಬಾದಿಗೆ’ ಜಂಗ್(?) ಶುರುವಾಯ್ತಲ್ಲ. ಆಶ್ಚರ್ಯ ಅನ್ನಿಸಿತಾ? ಬಹುಶಃ ಇರಲಿಕ್ಕಿಲ್ಲ. ಈ ದೊಂಬರಾಟಗಳನ್ನ ನಾವೆಲ್ಲಾ ಕಂಡವರೇ. ಬದುಕಿನಲ್ಲಿ ತನಗೊಂದು ‘ಐಡೆಂಟಿಟಿ’ಯೇ ಇಲ್ಲದೇ ಪರಿತಪಿಸುವ ಮಂದಿ ಬಹಳಷ್ಟು ಬಾರಿ ಹೀಗೆಲ್ಲ ಮಾಡಿಯೇ ಹೆಸರಿಗೆ ಬರೋದಿದೆ. ಹಾಗಂತ ಇವರನ್ನ ಅಸಡ್ಡೆ ಮಾಡಿ ಬದಿಗಿಡುವಂತಿಲ್ಲ. ಯಾಕೆಂದರೆ ಇವರೆಲ್ಲರ ಹೋರಾಟ ಇರೋದು ಕೆಟ್ಟದರ ಬಗ್ಗೆಯಲ್ಲ, ಈ ದೇಶಕ್ಯಾವುದೋ ಮಾರಕವಾಗಿದ್ದರೆ ಅದರ ಬಗ್ಗೆಯೂ ಅಲ್ಲ. ಇವರ ‘ಜಂಗ್’ ಇರೋದು ಈ ದೇಶದ ಸಮಗ್ರತೆಯ ಬಗ್ಗೆ. ಈ ದೇಶದ ಸನಾತನತೆಯ ಬಗ್ಗೆ. ಒಟ್ನಲ್ಲಿ ಈ ದೇಶದ ಬಗ್ಗೆಯೇ. ಇವೆಲ್ಲಾ ‘ಬುದ್ಧಿಮಾಂದ್ಯ’ ಜೀವಗಳಿಗೆ ಹೆಗಲಾಗಿ ನಿಂತು ಪೋಷಿಸುತ್ತಿರುವುದು ಇಲ್ಲಿನ ಬುದ್ಧಿ ಜೀವಿಗಳೆಂಬ ಅಡಕಸುಬಿಗಳು. ಅದಲ್ಲದೇ ಇನ್ನೇನು? ಮತಿ ತಪ್ಪಿದವ ಮಾಡಿದ ತಪ್ಪನ್ನ, ತಪ್ಪು ಅನ್ನೋದು ಬಿಟ್ಟು ಅವರೊಲ್ಲಬ್ಬರಾಗಿ ನಿಂತು ಗುರಾಣಿ ಹಿಡಿದು ಮತ್ತಷ್ಟು ಇನ್ನಷ್ಟು ಪ್ರಪಾತಕ್ಕೆ ಇಳಿಯೋಕೆ, ಎಳೆಯೋಕೆ ತಯಾರಾದರೆ? ಮತ್ತಷ್ಟು ಓದು »