ಪಂಚ ಭೂತಗಳಲ್ಲಿ ಲೀನವಾದ ವಿಚಾರವಾದ! (ಸುಳ್ಸುದ್ದಿ)
-ಪ್ರವೀಣ್ ಕುಮಾರ್, ಮಾವಿನಕಾಡು
ಖ್ಯಾತ ವಿಚಾರವಾದಿ, ಸಾಹಿತಿ, ಬುದ್ಧಿಜೀವಿ, ಹಿಂದೇ ಎನ್ನುವ ಹೆಸರಿನಿಂದಲೇ ಪ್ರಖ್ಯಾತರಾಗಿದ್ದ ಹಿಂದೂಪುರ ದೇವಮೂರ್ತಿಯವರು ವಯೋಸಹಜ ಖಾಯಿಲೆಗಳ ಪರಿಣಾಮ ನಿನ್ನೆ ತಮ್ಮ ಸ್ವಗೃಹ ‘ದೇವಿ ಕೃಪಾ’ ದಲ್ಲಿ ಮೃತರಾದರು. ಅವರಿಗೆ ಎಪ್ಪತ್ಮೂರು ವರ್ಷ ವಯಸ್ಸಾಗಿತ್ತು. ಅವರು ಮುಜರಾಯಿ ಇಲಾಖೆಯ ಸಹಾಯಕ ನಿರ್ದೇಶಕರಾದ ಅರುಣ್ ಜೋಸೆಫ್ ಮತ್ತು ಮಗಳು ದೇವಿಶ್ರೀ, ಅಳಿಯ ಅಮೆರಿಕಾದಲ್ಲಿ ಖ್ಯಾತ ಪುರೋಹಿತರಾಗಿರುವ ಕ್ರಿಷ್ ಭಟ್ ಮತ್ತು ಐವರು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮತ್ತಷ್ಟು ಓದು