ವಿಷಯದ ವಿವರಗಳಿಗೆ ದಾಟಿರಿ

Archive for

16
ಜೂನ್

ಗೂಂಡಾಗಿರಿ ಎಂದು ಕರೆಯುವ ಭಂಡತನ

Untitled5555

ಸಂಶೋಧಕರಾದ(?!!) ಭಗವಾನ್ ಅವರ ಶಂಕರಾಚಾರ್ಯ ಮತ್ತು ಪ್ರತಿಗಾಮಿತನ ಪುಸ್ತಕದ ಎರಡನೆಯ ಅಧ್ಯಾಯ “ಶಂಕರಾಚಾರ್ಯನ ಗೂಂಡಾಗಿರಿ ಮತ್ತು ವೈದಿಕ ಸಂಸ್ಕೃತಿ” ಲೇಖನದ ಶೀರ್ಷಿಕೆಯನ್ನು ಸಾಬೀತು ಪಡಿಸಲು ಸಂಶೋಧಕರು ಹಾಕಿರುವ ತಿಪ್ಪರಲಾಗ ಮತ್ತು ಬಿಟ್ಟ ಸತ್ಯವಿಚಾರಗಳು ಬೃಹದಾಕಾರವಾಗಿವೆ. ಸದ್ಯ, ಇವರುಗಳು ಗಣಿತ, ರಸಾಯನ ಶಾಸ್ತ್ರ ಮುಂತಾದುವುಗಳನ್ನು ಓದಿಲ್ಲ. ಇಲ್ಲದೇ ಹೋಗಿದ್ದರೆ ಅಲ್ಲಿ ಇವರು ಹುಟ್ಟುಹಾಕಬಹುದಾಗಿದ್ದ ಪ್ರಮೇಯಗಳಿಂದ ಎಷ್ಟು ವಿಜ್ಞಾನಿಗಳ ಆತ್ಮಗಳು ಅಕಾಲ ಮೃತ್ಯುವನ್ನಪ್ಪಿ ಪ್ರೇತಗಳಾಗುತ್ತಿದ್ದವೋ ಗೊತ್ತಿಲ್ಲ. ವಿಜ್ಞಾನ ಉಳ್ಕೊಂಡ್ರೂ ಸಮಾಜ ವಿಜ್ಞಾನವನ್ನು ಮನಕ್ಕೆ ಬಂದ ತರ್ಕ, ಊಹೆಗಳನ್ನು ವೈಜ್ಞಾನಿಕವೆಂದು ಒರಲುತ್ತಾ ಬುಡವಿಲ್ಲದ ಸಿದ್ಧಾಂತ ಮಂಡನೆ ಮತ್ತು ಬ್ರಾಹ್ಮಣರ ಖಂಡನೆಯಿಂದ ಪ್ರಚಂಡನಾಗುವ ಕೌಶಲವು ಬುದ್ಧಿಜೀವಿಗಳು ಎಂದೆನಿಸಿಕೊಳ್ಳಬೇಕಾದರೆ ಕಲಿಯಬೇಕಾದ ಕಸರತ್ತಾದ್ದರಿಂದ, ಆ ವಿಷಯದಲ್ಲಿ ಅಸಾಮಾನ್ಯ ಪ್ರತಿಭೆಯನ್ನು ಮೆರೆದಿದ್ದಾರೆ. ಕಳೆದ ಅಧ್ಯಾಯದಲ್ಲಿ ಶಂಕರಾಚಾರ್ಯರಿಂದ ಶುರುಮಾಡಿದ ಪ್ರಲಾಪವನ್ನು ಕಡೆಯಾಗುವಾಗ ನೌಕರಿ ಮಾಡುವ ಜನರವರೆಗೂ ವಿಸ್ತರಿಸಿದ್ದು ಇವರ ಪ್ರತಿಭೆಗೆ ಸಾಕ್ಷಿ. ಇಲ್ಲಿಯೂ ಅಷ್ಟೆ; ಯುಗ ಯುಗಗಳನ್ನು ಲೀಲಾಜಾಲವಾಗಿ ಹಾರಿ ನೆಗೆದು ಒಂದೆರಡು ಉದಾಹರಣೆಗಳಿಂದ ಇಡೀ ಗ್ರಂಥದ ಆಶಯವನ್ನೇ, ಆ ಜನಪದದ ಸಾಮಾರ್ಥ್ಯವನ್ನೇ ದಿಕ್ಕಾಪಾಲು ಮಾಡುವ ಅಮೋಘ ವಾದಲಹರಿಯಲ್ಲಿ ಮುಳುಗಿ ತೇಲಿದ್ದಾರೆ. ಆದರೆ ಇತಿಹಾಸವನ್ನು ತಿರುಚಿ ಬರೆಯಬಹುದಾದರೂ ಐತಿಹಾಸಿಕ ಸತ್ಯಗಳನ್ನು ನಾಶಮಾಡಲು ಸಾಧ್ಯವಿಲ್ಲವಾದ್ದರಿಂದ ವಿಚಾರಗಳ ಸತ್ಯಾಂಶಗಳನ್ನು ಪ್ರಸ್ತುತಪಡಿಸುವಲ್ಲಿ ದಯನೀಯವಾಗಿ ಸೋತಿದ್ದಾರೆ. ಈ ಅಧ್ಯಾಯದಲ್ಲಿ ಮುಖ್ಯವಾಗಿ ಆಪಾದಿಸಿರುವ ನಾಗಾರ್ಜುನಕೊಂಡದ ಬೌದ್ಧ ಮಂದಿರಗಳು ಶಂಕರಾಚಾರ್ಯರ ನೇತೃತ್ವದಲ್ಲಿ ಧ್ವಂಸವಾಗಿದ್ದು ಎಂಬುದರ ಮತ್ತು ಇನ್ನಿತರ ಐತಿಹಾಸಿಕ ವಿಚಾರಗಳೆಡೆಗೆ ನೋಡೋಣ. ಉಳಿದಂತೆ ಅದೇ ಬ್ರಾಹ್ಮಣ, ಪುರೋಹಿತಶಾಹಿ, ಹಿಂದೂ ಧರ್ಮ ಮುಂತಾದ ಪದಪುಂಜಗಳಿಂದ ಅರೋಪ ಮಾಡುತ್ತ ಪುಟಭರ್ತಿ ಮಾಡುವ ಕೆಲಸ ಮಾಡಿದ್ದಾರಾದ್ದರಿಂದ ಮತ್ತೆ ಮತ್ತೆ ಅದನ್ನು ಪರಿಶೀಲಿಸುವ ಅಗತ್ಯವಿಲ್ಲ. ಮತ್ತಷ್ಟು ಓದು »