ಪ್ರತಿಭಾ ಪಲಾಯನ
-ಮಯೂರ ಲಕ್ಷ್ಮೀ
ಅದೊಂದು ಕಾಲದಲ್ಲಿ ನಳಂದಾ, ತಕ್ಷಶಿಲಾ ಮುಂತಾದ ವಿಶ್ವವಿಖ್ಯಾತ ವಿದ್ಯಾಲಯಗಳಿಂದ ಪ್ರಸಿದ್ಧಿಹೊಂದಿ ಎಲ್ಲೆಡೆಯಿಂದ ಎಲ್ಲರನ್ನೂ ಆಕರ್ಷಿಸಿ ಜ್ಞಾನದೇಗುಲವೆನಿಸಿದ್ದ ಭಾರತ ದೇಶವು ತನ್ನ ಹಿಂದಿನ ವೈಭವಗಳನ್ನು ಮರೆತುಹೋಗುವ ಸ್ಥಿತಿ ತಲುಪಿದ್ದಾದರೂ ಏಕೆ? ಯಾವುದೇ ಒಂದು ದೇಶವು ಆರ್ಥಿಕವಾಗಿ ಸಧೃಢವೆನಿಸಿಕೊಳ್ಳುವುದು ದೇಶದ ಬೆನ್ನೆಲುಬಾದ ಯುವಶಕ್ತಿಯಿಂದಾ ಮಾತ್ರ! ಜಗತ್ತಿಗೆ ಅರಿವು ನೀಡುವ ಜ್ಞಾನದೇಗುಲವೆನಿಸಿದ್ದ ಭಾರತ ಮೆಕಾಲೆಯ ಆಗಮನದಿಂದ ತನ್ನ ಮೌಲ್ಯಾಧರಿತ ಶಿಕ್ಷಣ ವ್ಯವಸ್ಥೆಯನ್ನೇ ಕಳೆದುಕೊಂಡಿತು. ಭಾರತವು ವಿಶ್ವಮಾನ್ಯವೆನಿಸಿದ್ದು ತನ್ನ ಜ್ಞಾನ-ವಿಜ್ಞಾನ, ತಂತ್ರಜ್ಞಾನಗಳಿಂದ ಪ್ರಪಂಚಕ್ಕೆ ನೀಡಿದ ಕೊಡುಗೆಯಿಂದ. ಮತ್ತಷ್ಟು ಓದು