ಗೂಂಡಾಗಿರಿ ಎಂದು ಕರೆಯುವ ಭಂಡತನ
ಸಂಶೋಧಕರಾದ(?!!) ಭಗವಾನ್ ಅವರ ಶಂಕರಾಚಾರ್ಯ ಮತ್ತು ಪ್ರತಿಗಾಮಿತನ ಪುಸ್ತಕದ ಎರಡನೆಯ ಅಧ್ಯಾಯ “ಶಂಕರಾಚಾರ್ಯನ ಗೂಂಡಾಗಿರಿ ಮತ್ತು ವೈದಿಕ ಸಂಸ್ಕೃತಿ” ಲೇಖನದ ಶೀರ್ಷಿಕೆಯನ್ನು ಸಾಬೀತು ಪಡಿಸಲು ಸಂಶೋಧಕರು ಹಾಕಿರುವ ತಿಪ್ಪರಲಾಗ ಮತ್ತು ಬಿಟ್ಟ ಸತ್ಯವಿಚಾರಗಳು ಬೃಹದಾಕಾರವಾಗಿವೆ. ಸದ್ಯ, ಇವರುಗಳು ಗಣಿತ, ರಸಾಯನ ಶಾಸ್ತ್ರ ಮುಂತಾದುವುಗಳನ್ನು ಓದಿಲ್ಲ. ಇಲ್ಲದೇ ಹೋಗಿದ್ದರೆ ಅಲ್ಲಿ ಇವರು ಹುಟ್ಟುಹಾಕಬಹುದಾಗಿದ್ದ ಪ್ರಮೇಯಗಳಿಂದ ಎಷ್ಟು ವಿಜ್ಞಾನಿಗಳ ಆತ್ಮಗಳು ಅಕಾಲ ಮೃತ್ಯುವನ್ನಪ್ಪಿ ಪ್ರೇತಗಳಾಗುತ್ತಿದ್ದವೋ ಗೊತ್ತಿಲ್ಲ. ವಿಜ್ಞಾನ ಉಳ್ಕೊಂಡ್ರೂ ಸಮಾಜ ವಿಜ್ಞಾನವನ್ನು ಮನಕ್ಕೆ ಬಂದ ತರ್ಕ, ಊಹೆಗಳನ್ನು ವೈಜ್ಞಾನಿಕವೆಂದು ಒರಲುತ್ತಾ ಬುಡವಿಲ್ಲದ ಸಿದ್ಧಾಂತ ಮಂಡನೆ ಮತ್ತು ಬ್ರಾಹ್ಮಣರ ಖಂಡನೆಯಿಂದ ಪ್ರಚಂಡನಾಗುವ ಕೌಶಲವು ಬುದ್ಧಿಜೀವಿಗಳು ಎಂದೆನಿಸಿಕೊಳ್ಳಬೇಕಾದರೆ ಕಲಿಯಬೇಕಾದ ಕಸರತ್ತಾದ್ದರಿಂದ, ಆ ವಿಷಯದಲ್ಲಿ ಅಸಾಮಾನ್ಯ ಪ್ರತಿಭೆಯನ್ನು ಮೆರೆದಿದ್ದಾರೆ. ಕಳೆದ ಅಧ್ಯಾಯದಲ್ಲಿ ಶಂಕರಾಚಾರ್ಯರಿಂದ ಶುರುಮಾಡಿದ ಪ್ರಲಾಪವನ್ನು ಕಡೆಯಾಗುವಾಗ ನೌಕರಿ ಮಾಡುವ ಜನರವರೆಗೂ ವಿಸ್ತರಿಸಿದ್ದು ಇವರ ಪ್ರತಿಭೆಗೆ ಸಾಕ್ಷಿ. ಇಲ್ಲಿಯೂ ಅಷ್ಟೆ; ಯುಗ ಯುಗಗಳನ್ನು ಲೀಲಾಜಾಲವಾಗಿ ಹಾರಿ ನೆಗೆದು ಒಂದೆರಡು ಉದಾಹರಣೆಗಳಿಂದ ಇಡೀ ಗ್ರಂಥದ ಆಶಯವನ್ನೇ, ಆ ಜನಪದದ ಸಾಮಾರ್ಥ್ಯವನ್ನೇ ದಿಕ್ಕಾಪಾಲು ಮಾಡುವ ಅಮೋಘ ವಾದಲಹರಿಯಲ್ಲಿ ಮುಳುಗಿ ತೇಲಿದ್ದಾರೆ. ಆದರೆ ಇತಿಹಾಸವನ್ನು ತಿರುಚಿ ಬರೆಯಬಹುದಾದರೂ ಐತಿಹಾಸಿಕ ಸತ್ಯಗಳನ್ನು ನಾಶಮಾಡಲು ಸಾಧ್ಯವಿಲ್ಲವಾದ್ದರಿಂದ ವಿಚಾರಗಳ ಸತ್ಯಾಂಶಗಳನ್ನು ಪ್ರಸ್ತುತಪಡಿಸುವಲ್ಲಿ ದಯನೀಯವಾಗಿ ಸೋತಿದ್ದಾರೆ. ಈ ಅಧ್ಯಾಯದಲ್ಲಿ ಮುಖ್ಯವಾಗಿ ಆಪಾದಿಸಿರುವ ನಾಗಾರ್ಜುನಕೊಂಡದ ಬೌದ್ಧ ಮಂದಿರಗಳು ಶಂಕರಾಚಾರ್ಯರ ನೇತೃತ್ವದಲ್ಲಿ ಧ್ವಂಸವಾಗಿದ್ದು ಎಂಬುದರ ಮತ್ತು ಇನ್ನಿತರ ಐತಿಹಾಸಿಕ ವಿಚಾರಗಳೆಡೆಗೆ ನೋಡೋಣ. ಉಳಿದಂತೆ ಅದೇ ಬ್ರಾಹ್ಮಣ, ಪುರೋಹಿತಶಾಹಿ, ಹಿಂದೂ ಧರ್ಮ ಮುಂತಾದ ಪದಪುಂಜಗಳಿಂದ ಅರೋಪ ಮಾಡುತ್ತ ಪುಟಭರ್ತಿ ಮಾಡುವ ಕೆಲಸ ಮಾಡಿದ್ದಾರಾದ್ದರಿಂದ ಮತ್ತೆ ಮತ್ತೆ ಅದನ್ನು ಪರಿಶೀಲಿಸುವ ಅಗತ್ಯವಿಲ್ಲ. ಮತ್ತಷ್ಟು ಓದು 
ಖಾಸಗಿ ಕಾಲೇಜಿನ ಕಲಿಕೆ- ಬರೀ ಗಿಲೀಟಿನ ಬುಡುಬುಡಿಕೆ
ಶ್ರದ್ಧಾಹಿ ಪರಮಾಗತಿಃ-
● ನನ್ನ ಆಟೋ ಮಾರಿದರು ಮಗಳಿಗೆ ಪ್ರವೇಶ ದೊರೆಯಲಿಲ್ಲ
● ೯೫% ಅಂಕ ಪಡೆದರೂ ಕಾಲೇಜಿನಲ್ಲಿ ಸೀಟಿಲ್ಲ
● ಹಿಂದೂ ಧರ್ಮದ ಮಕ್ಕಳಿಗೆ ಪ್ರವೇಶವಿಲ್ಲ; ನಮ್ಮ ಕೋಮಿನ ಮಕ್ಕಳಿಗೆ ಆದ್ಯತೆ
● ಪೋಷಕರು ಭರಿಸಲಾಗದಷ್ಟು ಕಾಲೇಜುಗಳು ದುಬಾರಿ
● ದುಬಾರಿ ಕಾಲೇಜಿಗೆ ಸೇರಿಸಿದರೂ ಟ್ಯೂಷನ್ ಹೇಳಿಸಲೇಬೇಕು – ಸಾವಿರಾರು ರೂಪಾಯಿಗಳ ಧಂಧೆ
● ದುಬಾರಿ ಕಾಲೇಜಿಗೆ ಸೇರಿಸುವ ಕುಟುಂಬಗಳಲ್ಲಿ ಆದಾಯದ ಬಹು ಭಾಗ ಶುಲ್ಕಕ್ಕೆ ಹೋಗುವ ಕಾರಣ ಜೀವನದ ಹಲವು ಅಗತ್ಯತೆಗಳನ್ನು ಕಡಿತಗೊಳಿಸಿಕೊಂಡು ಮನೆಯ/ಮನಸ್ಸಿನ/ದೇಹದ ಆರೋಗ್ಯಕ್ಕೆ ಸಂಚಾಕಾರ ತಂದುಕೊಳ್ಳುವ ಸಾಧ್ಯತೆ ಹೆಚ್ಚು.
● ಇಷ್ಟೆಲ್ಲಾ ಕಷ್ಟ ಪಡುವ ತಾಯಿತಂದೆಯರಿಂದ ಅಥವಾ ಮಗುವೇ ಸಂವೇದನಾಶೀಲನಾಗಿದ್ದರೆ ಅದಕ್ಕೆ ಕಷ್ಟಗಳು ತಿಳಿದು ನೇರ ಅಥವಾ ಪರೋಕ್ಷ ಒತ್ತಡಕ್ಕೆ ಒಳಗಾಗಿ ವಿದ್ಯಾಭ್ಯಾಸಕ್ಕೆ ಆಡ್ದಿಯಾಗಬಹುದು.
● ಇದು ಒಂದು ಆರೋಗ್ಯಕರ ಬೆಳವಣಿಗೆ ಅಲ್ಲ.
● ಕ್ರಿಶ್ಚಿಯನ್ ಅಥವಾ ಮುಸಲ್ಮಾನರ ವಿದ್ಯಾ ಸಂಸ್ಥೆಗಳಿಗೆ ಸೇರಿ ಅಲ್ಲಿ ಹೂವು ಮುಡಿಯುವಂತಿಲ್ಲ, ಹಣೇ ಕುಂಕುಮ ಇಡುವಂತಿಲ್ಲ, ಸೀರೆ ಉಡುವಂತಿಲ್ಲ, ಬಳೆ ತೊಡುವಂತಿಲ್ಲ ಎಂಬ ತಲೆಹರಟೆ ಅಸಹಿಷ್ಣತೆಯ ಪರಮಾವಧಿಯ ನಿಷೇಧಗಳನ್ನು ಅನುಭವಿಸಬೇಕು. ಇನ್ನು ಲವ್ ಜಿಹಾದು/ಪ್ರೇಮಕ್ಕೆ ಒತ್ತಡ ಹಾಕುವುದು ಇತ್ಯಾದಿ ಸಮಸ್ಯೆಗಳು ಸೇರಿ ‘ಕಾಸು ಹಾಳು ತಲೆಯು ಬೋಳು’ ಎಂಬ ಗಾದೆಯಂತೆ ಆಗುವುದೊಂದು ಅಭಾಸ.
ಈ ಸಮಸ್ಯೆಗಳು ಎಂದಿಗೂ ಇದ್ದಂತಹವೇ.ಆದರೆ ಇತ್ತೀಚೆಗೆ ಅದರ ವ್ಯಾಪ್ತಿ, ಗಹನತೆ ಹೆಚ್ಚಾಗಿದೆ. ಮತ್ತಷ್ಟು ಓದು 
ಸಾಮಾನ್ಯ ಘಟನೆಯೂ, ಅಸಾಮಾನ್ಯ ಕತೆಯೂ..
“ಟೇಬಲ್ ಫಾರ್ ಟೂ ಸರ್..? ಹೀಗೆ ಬನ್ನಿ ಸರ್, ಮೇಡಮ್ ಅಲ್ನೋಡಿ” ಎಂದ ಪರಿಚಾರಕ, ಕಿಟಕಿಯ ಪಕ್ಕದಲ್ಲಿದ್ದ ಮೇಜಿನತ್ತ ಕೈ ತೋರಿಸಿ, “ಅಲ್ಲಿ ಕುಳಿತುಕೊಳ್ಳಿ ಸರ್, ಅಲ್ಲಿಂದ ಸಮುದ್ರದ ನಯನ ಮನೋಹರ ದೃಶ್ಯವನ್ನು ನೀವು ಸುಲಭವಾಗಿ ವೀಕ್ಷಿಸಬಹುದು” ಎಂದು ನುಡಿದ. “ನಿಜ ಮಾರ್ಕ್, ನಾವು ಅಲ್ಲಿಯೇ ಕುಳಿತುಕೊಳ್ಳೋಣ. ದೋಣಿಯಲ್ಲಿ ಕುಳಿತು ಊಟ ಮಾಡಿದ ಸುಂದರ ಅನುಭವ ಆ ಟೇಬಲ್ಲಿನ ಮೇಲೆ ನಮಗಾಗಬಹುದು” ಎಂದು ನುಡಿದ ಆಲಿಸ್ ಪರಿಚಾರಕನನ್ನು ಹಿಂಬಾಲಿಸತೊಡಗಿದಳು. ಚಕ್ಕನೇ ಅವಳ ತೋಳನ್ನು ಬಳಸಿದ ಆಕೆಯ ಪತಿ ಮಾರ್ಕ್, “ಆ ಟೇಬಲ್ಲಿಗಿಂತ ಬಹುಶಃ ನಾವು ಈ ಟೇಬಲ್ಲಿನಲ್ಲಿ ಕುಳಿತು ಊಟ ಮಾಡುವುದು ಹೆಚ್ಚು ತೃಪ್ತಿಕರವೆನಿಸಬಹುದು” ಎಂದು ನುಡಿದ. ತೀರ ಹೊಟೆಲ್ಲಿನ ನಟ್ಟುನಡುವಿದ್ದ ಮೇಜನ್ನು ಗಮನಿಸಿ “ಅಷ್ಟು ಜನರ ನಡುವೆಯಾ..?? ಆದರೆ..”ಎಂದು ರಾಗವೆಳೆಯುತ್ತಿದ್ದ ಆಲಿಸಳ ಮಾತನ್ನು ಅರ್ಧಕ್ಕೆ ತುಂಡರಿಸಿದ ಮಾರ್ಕ್, “ಪ್ಲೀಸ್ ಆಲಿಸ್”ಎನ್ನುತ್ತ ಬಿನ್ನವಿಸಿದ. ಹಾಗೆ ಪತ್ನಿಯನ್ನು ವಿನಂತಿಸಿಕೊಂಡ ಆತ, ಆಕೆಯ ತೋಳನ್ನು ಬಿಗಿಯಾಗಿ ಹಿಡಿದೆಳೆದುಕೊಂಡ ರೀತಿಯನ್ನು ಗಮನಿಸಿದ ಆಕೆ “ಏನಾಯ್ತು ಮಾರ್ಕ್..”? ಎಂದು ಕೇಳಿದಳು.”
ಶ್ಶ್..!!”ಎನ್ನುತ್ತ ಕೈಬೆರಳನ್ನು ತುಟಿಗಳ ಮೇಲಿಟ್ಟುಕೊಂಡ ಅವನು, ಆಲಿಸಳನ್ನು ಕರೆದುಕೊಂಡು ಹೋಟೆಲ್ಲಿನ ನಡುಮಧ್ಯದಲ್ಲಿದ್ದ ಟೇಬಲ್ಲಿನೆಡೆಗೆ ಕರೆದೊಯ್ದ. ಆತನ ವಿಲಕ್ಷಣ ವರ್ತನೆಯನ್ನು ಗಮನಿಸಿದ ಆಲಿಸ್, “ಏನಾಯ್ತು ಮಾರ್ಕ್..”?ಎಂದು ಪುನ: ಪ್ರಶ್ನಿಸಿದಳು. “ಹೇಳುತ್ತೇನೆ ಡಾರ್ಲಿಂಗ್, ಮೊದಲು ಊಟವನ್ನು ತರಿಸಿಕೊಳ್ಳೋಣ, ನೀನು ಸಿಗಡಿ ಮೀನು ತಿಂತಿಯಾ ಅಥವಾ ಮೊಟ್ಟೆಯ ಆಮ್ಲೆಟ್ ತರಿಸಲಾ..”? ಎಂದು ಕೇಳಿದ ಮಾರ್ಕ್. “ನಿಮಗೇನು ಇಷ್ಟವೋ ಅದನ್ನೇ ತರಿಸಿ” ಎಂದಳು ಅವನ ಮಡದಿ. ಕ್ಷಣಕಾಲ ಇಬ್ಬರೂ ಪರಸ್ಪರರತ್ತ ಪ್ರೇಮದಿಂದ ಮುಗುಳ್ನಕ್ಕರು. ಅವರ ಟೇಬಲ್ಲಿನ ಪಕ್ಕದಲ್ಲೇ ನಿಂತಿದ್ದ ಪರಿಚಾರಕ ಕೊಂಚ ಅಸಹನೆಯಿಂದ ಚಲಿಸಿದ.
“ಮೊದಲು ಸಿಗಡಿ ಮೀನುಗಳನ್ನು ತನ್ನಿ” ಎನ್ನುತ್ತ, “ಆಮೇಲೆ ಆಮ್ಲೇಟ್, ನಂತರ ಸ್ವಲ್ಪ ಚಿಕನ್ ಮತ್ತು ಕಾಫಿ ತೆಗೆದುಕೊಳ್ಳೋಣ. ನನ್ನ ಡ್ರೈವರ್ ಕೂಡ ಇಲ್ಲಿಯೇ ಊಟ ಮಾಡಲಿದ್ದಾನೆ. ನಾವು ಎರಡು ಗಂಟೆಗೆಲ್ಲ ಇಲ್ಲಿಂದ ಹೊರಡಬೇಕು” ಎಂದು ವಿವರಿಸಿದ ಆತ, ಸುಸ್ತಾದವರಂತೆ ನಿಟ್ಟುಸಿರೊಂದನ್ನು ಹೊರಹಾಕಿದ. ದೂರದಲ್ಲಿ ಕಾಣುತ್ತಿದ್ದ ಸಮುದ್ರವನ್ನೊಮ್ಮೆ, ಶುಭ್ರವಾದ ಆಗಸದತ್ತ ಒಮ್ಮೆ ಕಣ್ಣು ಹಾಯಿಸಿದ ಅವನು ತನ್ನ ಮಡದಿಯನ್ನೇ ನೋಡತೊಡಗಿದ. ಸುಂದವಾದ ಟೋಪಿಯೊಂದನ್ನು ಧರಿಸಿದ್ದ ಆಕೆ, ಟೋಪಿಯ ಪಾರದರ್ಶಕ ಮುಖಪರದೆಯಡಿ ಮತ್ತಷ್ಟು ಮುದ್ದಾಗಿ ಗೋಚರಿಸಿದಳು ಅವನಿಗೆ. “ನೀನಿಂದು ತುಂಬಾ ಮುದ್ದಾಗಿ ಕಾಣುತ್ತಿದ್ದಿಯಾ ಡಾರ್ಲಿಂಗ್, ಸಾಗರದ ಈ ನೀಲಿ ನೀರಿನ ಪ್ರತಿಫಲನದಿಂದ ನಿನ್ನ ನೀಲಿ ಕಣ್ಣುಗಳು ಇನ್ನಷ್ಟು ಸುಂದರವಾಗಿ ಗೋಚರಿಸುತ್ತಿದೆ. ಇತ್ತೀಚೆಗೆ ನೀನು ಸ್ವಲ್ಪ ದಪ್ಪವಾಗಿದ್ದೀಯಾ. ಕೊಂಚ ದಪ್ಪವಾಗುವುದರಲ್ಲಿ ತಪ್ಪೇನಲ್ಲ ಆದರೆ ಮಿತಿ ಮೀರಬಾರದು ಅಷ್ಟೇ” ಎಂದು ಮುಗುಳ್ನಕ್ಕ. ತನ್ನ ಗಂಡನ ಹೊಗಳಿಕೆಯಿಂದ ಹೆಮ್ಮೆಯಿಂದ ಆಲಿಸಳ ಎದೆಯುಬ್ಬಿತು. “ಆದರೆ ನಾವೇಕೆ ಕಿಟಕಿಯ ಬಳಿಯಿದ್ದ ಟೇಬಲ್ಲಿನಲ್ಲಿ ಕೂರಲಿಲ್ಲ ಎಂದು ಹೇಳಲೇ ಇಲ್ಲವಲ್ಲ ನೀನು”ಎಂದು ಪ್ರಶ್ನಿಸಿದಳು ಆಲಿಸ್. ಮಾರ್ಕ್ ನಿಗೆ ಸುಳ್ಳು ಹೇಳಬೇಕೆನ್ನಿಸಲಿಲ್ಲ. “ಯಾಕೆಂದರೆ ಒಂದು ಕಾಲಕ್ಕೆ ನನಗೆ ತೀರ ಆತ್ಮೀಯರಾಗಿದ್ದವರೊಬ್ಬರು ಅಲ್ಲಿ ಕುಳಿತಿದ್ದರು” ಎಂದು ನುಡಿದ ಪತಿಯನ್ನು ಪ್ರಶ್ನಾರ್ಥಕವಾಗಿ ನೋಡಿದ ಆಲಿಸ್, “ಅವರು ನನಗೆ ಪರಿಚಯವಿಲ್ಲದವರೇನು ..”? ಎಂದು ಪ್ರಶ್ನಿಸಿದಳು. “ಹೌದು ನನ್ನ ಮಾಜಿ ಪತ್ನಿ”ಎಂದ ಮಾರ್ಕನ ದನಿಯಲ್ಲೊಂದು ಮುಜುಗರ. ಅಂಥದ್ದೊಂದು ಉತ್ತರವನ್ನು ನಿರೀಕ್ಷಿಸಿರದ ಆಲಿಸಳಿಗೆ ಹೇಗೆ ಪ್ರತಿಕ್ರಿಯಿಸಬೇಕೆನ್ನುವುದು ತಿಳಿಯದೆ ಅರೇಕ್ಷಣ ಪೆಚ್ಚಾಗಿ ಅವನನ್ನೇ ದಿಟ್ಟಿಸತೊಡಗಿದಳು. ನಿಮಿಷಾರ್ಧದಲ್ಲಿ ಸುಧಾರಿಸಿಕೊಂಡ ಆಲಿಸ್, “ಅರೇ..! ಅವಳು ಅಲ್ಲಿ ಕುಳಿತಿದ್ದರೇನಾಯ್ತು ಡಾರ್ಲಿ೦ಗ್, ಅದಕ್ಯಾಕೆ ನೀನು ತಲೆ ಕೆಡಿಸಿಕೊಳ್ಳಬೇಕಿತ್ತು? ಪ್ರಪಂಚ ತುಂಬ ಚಿಕ್ಕದು, ಆಕೆ ಮುಂದೆಯೂ ಎಲ್ಲಿಯಾದರೂ ನಮಗೆದುರಾಗಬಹುದು. ಅದರಲ್ಲೇನೂ ವಿಶೇಷವಿಲ್ಲ” ಎಂದು ನುಡಿದ ಆಲಿಸ್, ಕ್ಷಣ ಮಾತ್ರದ ಮೌನದ ನಂತರ, “ಆಕೆ ನಿನ್ನನ್ನು ನೋಡಿದಳಾ..?? ನೀನು ಅವಳನ್ನು ನೋಡಿದ್ದು ಆಕೆಗೆ ಗೊತ್ತಾಯಿತೆ..?? ಆಕೆಯನ್ನು ನನಗೆ ತೋರಿಸಬಲ್ಲೆಯಾ..”? ಎನ್ನುತ್ತ ಪ್ರಶ್ನೆಗಳ ಸುರಿಮಳೆಗೈದಳು.
“ಓಹ್, ಪ್ಲೀಸ್, ಈಗ ನೀನಾಕೆಯನ್ನು ನೋಡಬೇಡ ಆಲಿಸ್, ಬಹುಶಃ ಆಕೆ ನಮ್ಮನ್ನೀಗ ಗಮನಿಸುತ್ತಿರಲಿಕ್ಕೂ ಸಾಕು. ಅಲ್ಲಿ ಕುಳಿತಿದ್ದಾಳಲ್ಲ ಕಂದು ಕೇಶಗಳ ಟೋಪಿ ಧರಿಸಿದ ಹೆಂಗಸು. ನೋಡು, ಆ ಕೆಂಪಂಗಿ ಧರಿಸಿದ ಸಣ್ಣ ಹುಡುಗನ ಹಿಂದಿನ ಕುರ್ಚಿಯ ಮೇಲೆ ಕುಳಿತಿದ್ದಾಳಲ್ಲ ಅವಳೇ” ಎಂದ ಮಾರ್ಕ್. ತಾನಾಕೆಯನ್ನು ನೋಡಿದೆ ಎಂಬಂತೆ ತಲೆಯಾಡಿಸಿದ ಆಲಿಸ್, ನಿಜಕ್ಕೂ ತನ್ನ ಟೋಪಿಯಡಿಯಿಂದಲೇ ಆ ಹೆಂಗಸನ್ನು ಗಮಸಿದ್ದಳು. ತನಗೆ ತಾನೇ ಹೇಳಿಕೊಳ್ಳುತ್ತಿದ್ದಾನೇನೋ ಎನ್ನುವಂತೆ “ಹೊಂದಾಣಿಕೆ” ಎಂದು ಸುಮ್ಮನಾದನಾತ. ಆಲಿಸ್ ಕೇಳದಿದ್ದರೂ, “ಹೊಂದಾಣಿಕೆಯೇ ಇರಲಿಲ್ಲ ನಮ್ಮ ನಡುವೆ ಆಲಿಸ್. ಆದರೂ ಯಾವುದೇ ಜಗಳ ಕಿತ್ತಾಟಗಳಿಲ್ಲದಂತೆ ನಾವು ತುಂಬ ಪ್ರೌಢವಾಗಿಯೇ ಬೇರೆಯಾದೆವು. ಆನಂತರ ನನಗೆ ನಿನ್ನ ಮೇಲೆ ಪ್ರೀತಿಯಾಯಿತು. ನಿನಗೂ ನನ್ನ ಮೇಲೆ ಪ್ರೇಮವಿತ್ತು. ನಾವಿಬ್ಬರೂ ಒಂದಾಗಿದ್ದು ನಮ್ಮ ಅದೃಷ್ಟವೇ ಎನ್ನಬಹುದು ಆಲಿಸ್” ಎನ್ನುತ್ತ ಬಲಹೀನವಾಗಿ ನಕ್ಕ. ಸ್ವಚ್ಛ ಬಿಳುಪು ಉಡುಪುಗಳನ್ನು ಧರಿಸಿದ್ದ ಕಿಟಕಿ ಟೇಬಲ್ಲಿನ ಮಹಿಳೆಯ ಸುಂದರವಾದ ಕೂದಲುಗಳು ಸಮುದ್ರದ ಮೇಲಾಗುತ್ತಿದ್ದ ಬಿಸಿಲಿನ ಪ್ರತಿಫಲನದಿಂದ ಹೊಳೆಯುತ್ತಿದ್ದವು. ಆಕೆಯ ಅರೆತೆರೆದ ಕಣ್ಣುಗಳು, ಸೇದುತ್ತಿರುವ ಸಿಗರೇಟನ್ನು ಆಕೆ ಅಸ್ವಾದಿಸುತ್ತಿದ್ದಳೆನ್ನುವುದರ ಸಾಕ್ಷಿಯಂತಿತ್ತು. ಆಕೆಯನ್ನು ಗಮನಿಸುತ್ತಿದ್ದ ಆಲಿಸ್ ತನ್ನ ದೃಷ್ಟಿಯನ್ನು ತನ್ನ ಪತಿಯತ್ತ ತಿರುಗಿಸಿದಳು. ಕ್ಷಣ ಕಾಲದ ಮೌನದ ನಂತರ, “ಆಕೆಯ ಕಣ್ಣುಗಳೂ ಸಹ ನೀಲಿಯಾಗಿವೆ ಎಂದು ನೀನು ನನಗೇಕೆ ತಿಳಿಸಲಿಲ್ಲ ಮಾರ್ಕ್”? ಎಂದು ಪ್ರಶ್ನಿಸಿದಳು. “ಅದನ್ನು ನಿನಗೆ ಹೇಳಬೇಕೆಂದು ನನಗೆಂದೂ ಅನ್ನಿಸಲೇ ಇಲ್ಲ” ಎಂದ ಮಾರ್ಕ್, ಬ್ರೆಡ್ಡಿನ ಬುಟ್ಟಿಯನ್ನೆತ್ತಿ ಹಿಡಿದಿದ್ದ ಆಲಿಸಳ ಕೈಯನ್ನು ಮೃದುವಾಗಿ ಚುಂಬಿಸಿದ. ಹಾಗೊಂದು ಅನಿರೀಕ್ಷಿತ ಚುಂಬನದಿಂದ ಆಲಿಸಳ ಮುಖ ನಾಚಿಕೆಯಿಂದ ಕೆಂಪಾಯಿತು. ಹೊಂಬಣ್ಣದ ಕೇಶರಾಶಿಯ ಆಲಿಸ್, ನಾಜೂಕು ಸ್ವಭಾವದ ಭಾವುಕ ಮಹಿಳೆಯಾಗಿದ್ದಳು. ತನ್ನ ಪತಿಯ ಪ್ರೇಮದ ಭಾವುಕತೆಗೆ ಶರಣಾಗಿದ್ದ ಆಕೆಯ ಮುಖದಲ್ಲಿ ಸಂತೋಷವೆನ್ನುವುದು ಎದ್ದು ಕಾಣುತ್ತಿತ್ತು. ಅವರು ತೃಪ್ತಿಯಿಂದ ಊಟ ಮಾಡಿದರು. ಇಬ್ಬರೂ ಸಹ ಬಿಳಿಯುಡುಪಿನ ಮಹಿಳೆಯನ್ನು ಮರೆತವರಂತೆ ವರ್ತಿಸಿದರು. ಆಲಿಸ್ ಆಗಾಗ ಜೋರಾಗಿ ನಗುತ್ತಿದ್ದಳಾದರೂ, ಮಾರ್ಕ್ ಮಾತ್ರ ಕೊಂಚ ಎಚ್ಚರಿಕೆಯಿಂದಿದ್ದ. ಆತ ಕುರ್ಚಿಯ ಮೇಲೆ ತಲೆಯೆತ್ತಿ ನೇರವಾಗಿ ಕುಳಿತಿದ್ದ. ಕಾಫಿಗಾಗಿ ಕಾಯುತ್ತಿದ್ದಷ್ಟು ಸಮಯ ಇಬ್ಬರೂ ಪರಸ್ಪರ ಮಾತನಾಡದೆ ಮೌನವಾಗಿಯೇ ಕುಳಿತಿದ್ದರು. ನೆತ್ತಿಯ ಮೇಲಿನ ಸೂರ್ಯ ನಿಧಾನವಾಗಿ ಸಮುದ್ರದತ್ತ ಸಾಗುತ್ತಿದ್ದ. ಕೆಲವು ಕ್ಷಣಗಳ ನಂತರ, “ಆಕೆಯಿನ್ನೂ ಅಲ್ಲಿಯೇ ಕುಳಿತಿದ್ದಾಳೆ ಮಾರ್ಕ್”ಎಂದು ಪಿಸುಗುಟ್ಟಿದಳು ಆಲಿಸ್.
“ಆಕೆಯ ಉಪಸ್ಥಿತಿ ನಿನಗೆ ಕಿರಿಕಿರಿಯನ್ನುಂಟು ಮಾಡುತ್ತಿದೆಯಾ ಆಲಿಸ್..? ನಾವು ಬೇರೆಲ್ಲಿಯಾದರೂ ಕಾಫಿ ಕುಡಿಯೋಣವಾ..”? ಎನ್ನುತ್ತ ಕಾಳಜಿಯಿಂದ ಕೇಳಿದ ಮಾರ್ಕ್. “ಅಯ್ಯೋ..!! ಇಲ್ಲಪ್ಪ, ನಾನ್ಯಾಕೆ ಕಿರಿಕಿರಿ ಅನುಭವಿಸಬೇಕು. ಕಿರಿಕಿರಿಯನ್ನು ಬೇಕಿದ್ದರೆ ಆಕೆ ಅನುಭವಿಸಲಿ. ಇಷ್ಟಕ್ಕೂ ಆಕೆ ತುಂಬ ಸಂತೋಷವಾಗಿರುವಂತೆಯೇನೂ ಗೋಚರಿಸುತ್ತಿಲ್ಲ, ನೀನೊಮ್ಮೆ ಆಕೆಯನ್ನು ನೋಡಿದರೆ ನಿನಗೇ ಗೊತ್ತಾಗುತ್ತದೆ” ಎಂದಳು ಆಲಿಸ್. “ನನಗೆ ಆಕೆಯನ್ನು ನೋಡುವುದು ಇಷ್ಟವಿಲ್ಲ. ಆಕೆಯ ನೋಟ ಎಂಥದೆನ್ನುವುದು ನನಗೆ ಗೊತ್ತು” ಎಂದ ಮಾರ್ಕ್ ಒಮ್ಮೆ ನಿಟ್ಟುಸಿರಾದ. “ಓಹ್,ಆಕೆ ಅಷ್ಟು ಕೆಟ್ಟವಳಾಗಿದ್ದಳೇ..? ಎನ್ನುವ ಮರುಪ್ರಶ್ನೆ ಆಲಿಸಳದ್ದು. ಸೇದುತ್ತಿದ್ದ ಸಿಗರೇಟಿನ ಹೊಗೆಯನ್ನೊಮ್ಮೆ ತನ್ನ ಹೊಳ್ಳೆಗಳಿಂದ ಹೊರಚೆಲ್ಲಿದ ಮಾರ್ಕ್, ಹುಬ್ಬುಗಂಟಿಕ್ಕಿ, “ಛೇ,ಛೇ ಕೆಟ್ಟವಳು ಅಂತಲ್ಲ, ಆದರೆ ಆಕೆಯೊಂದಿಗೆ ನನಗೆ ಸಂತೋಷದಿಂದಿರಲಾಗಲಿಲ್ಲ ಅಷ್ಟೇ” ಎಂದು ನಕ್ಕ. “ಈಗ ನೀನು ಸಂತೋಷದಿಂದಿರುವೆಯಾ ಮಾರ್ಕ್..”? ಎಂದು ಪ್ರಶ್ನಿಸಿದ ಆಲಿಸ್, ಉತ್ತರಕ್ಕಾಗಿ ಕಾತುರದಿಂದ ಮಾರ್ಕನತ್ತ ನೋಡತೊಡಗಿದಳು. “ಇದೆಂತಹ ಪ್ರಶ್ನೆ ಆಲಿಸ್. ನಿನ್ನ ಪ್ರೀತಿಯಿಂದ ನಾನೆಷ್ಟು ಸುಖಿ ಎನ್ನುವ ಅನುಮಾನವೂ ನಿನಗಿಲ್ಲ. ನೀನು ನಿಜಕ್ಕೂ ಒಬ್ಬ ದೇವತೆ. ನೀನೇ ನನ್ನ ನಿಜವಾದ ಪ್ರೇಮ. ನಿನ್ನಂಥವಳನ್ನು ಪಡೆಯಲು ನಾನು ಪುಣ್ಯ ಮಾಡಿರಬೇಕು. ನಿನ್ನ ಪ್ರೇಮ ತುಂಬಿದ ಕಣ್ಣುಗಳನ್ನು ನೋಡುತ್ತಿದ್ದರೇ, ಸಾಗರದಬಣ್ಣ ತುಂಬಿದ ನಿನ್ನ ಕಣ್ಣುಗಳಲ್ಲಿ ನಾನು ಕಳೆದೇ ಹೋಗುತ್ತೇನೆ “ಎಂದ ಮಾರ್ಕ್ ನ ಮಾತುಗಳಲ್ಲಿ ಕೊಂಚ ನಾಟಕೀಯತೆ ಇತ್ತು. “ಆಕೆಯನ್ನು ಸಂತೊಷವಾಗಿಡುವುದು ಹೇಗೆನ್ನುವುದೇ ನನಗೆ ತಿಳಿಯುತ್ತಿರಲಿಲ್ಲ. ಅಸಾಧ್ಯಳು ಆಕೆ” ಎಂದು ನುಡಿದ ಮಾರ್ಕನ ಕಣ್ಣುಗಳಲ್ಲೊಂದು ಅವ್ಯಕ್ತ ಅಸಹನೆ. ವಾತಾವರಣ ತಂಪಾಗಿಯೇ ಇದ್ದರೂ ತೀರ ಸೆಖೆಯೆನ್ನುವಂತೆ ತನ್ನ ಕೈಯಿಂದ ಗಾಳಿಯಾಡಿಸಿಕೊಳ್ಳಲಾರಂಭಿಸಿದಳು ಆಲಿಸ್. ಆಕೆಯ ಕಣ್ಣಗಳಿನ್ನೂ ಬಿಳಿಯುಡುಪಿನ ಯುವತಿಯ ಮೇಲೆ ನೆಟ್ಟಿದ್ದವು. ಸಿಗರೇಟಿನ ಕೊನೆಯ ಜುರಿಕೆಗಳನ್ನೆಳೆಯುತ್ತಿದ್ದ ಆ ಯುವತಿಯ ತಲೆ ಕುರ್ಚಿಗೆ ಆತುಕೊಂಡಿತ್ತು. ತೀರ ಬಳಲಿಕೆಯಿಂದ ಮುಕ್ತಿ ಸಿಕ್ಕಿದ ಭಾವದ ಅಭಿವ್ಯಕ್ತಿಯೆನ್ನುವಂತೆ ಆಕೆ ಕಣ್ಣು ಮುಚ್ಚಿಕೊಂಡಿದ್ದಳು.
ಸಭ್ಯವಾಗಿಯೇ ತನ್ನ ಭುಜವನ್ನೊಮ್ಮೆ ಮೇಲೆ ಹಾರಿಸಿದ ಮಾರ್ಕ್, “ಏನು ಮಾಡುವುದು ಆಲಿಸ್..? ಕೆಲವರು ಇರುವುದೇ ಹಾಗೆ. ಸದಾಕಾಲ ಅತೃಪ್ತರು. ಅಂಥವರು ಯಾವತ್ತಿಗೂ ಆನಂದದಿಂದ ಇರಲಾರರು. ಅಂಥವರೆಡೆಗೆ ನಾವು ಸಹಾನುಭೂತಿ ತೋರುವುದರ ಹೊರತಾಗಿ ಇನ್ನೇನೂ ಮಾಡಲಾಗದು. ಆದರೆ ನಾವು ಸಂಪೂರ್ಣ ತೃಪ್ತರು ಅಲ್ಲವಾ ಡಾರ್ಲಿಂಗ್..”? ಎಂದು ಹಿತವಾಗಿ ಪ್ರಶ್ನಿಸಿದ ಮಾರ್ಕ್. ಆಕೆ ಉತ್ತರಿಸಲಿಲ್ಲ. ತನ್ನ ಪತಿಯ ಮುಖದತ್ತ ಕಳ್ಳನೋಟ ಬೀರುತ್ತಿದ್ದ ಆಲಿಸಳಲ್ಲೊಂದು ಅವ್ಯಕ್ತ ಕಸಿವಿಸಿ. ನಸುಗೆಂಪು ಮೊಗದ, ತುಂಬು ತೋಳುಗಳ ತನ್ನ ಸದೃಡ ಪತಿಯನ್ನೇ ದಿಟ್ಟಿಸುತ್ತಿದ್ದ ಆಲಿಸಳ ಮನದಲ್ಲಿ, “ಇಷ್ಟು ಸುಂದರ ವ್ಯಕ್ತಿಯೊಂದಿಗೂ ಸಂತಸದಿಂದಿರದಿದ್ದ ಆಕೆಗೆ ಬೇಕಿದ್ದಾದರೂ ಏನು..”? ಎನ್ನುವ ಅನುಮಾನವೊಂದು ಮೂಡಿತ್ತು. ಊಟ ಮುಗಿಸಿ ಎದ್ದ ಮಾರ್ಕ್, ಬಿಲ್ ಕೊಟ್ಟು ತನ್ನ ಕಾರು ಚಾಲಕನಿಗೆ ತಾವು ತೆರಳಬೇಕಾಗಿರುವ ವಿಳಾಸದ ಬಗ್ಗೆ ವಿವರಿಸುತ್ತಿದ್ದರೆ, ಅಸೂಯೆ ಮತ್ತು ಕುತೂಹಲಭರಿತ ದೃಷ್ಟಿಯಿಂದ ಬಿಳಿಯುಡುಪಿನ ಹೆಂಗಸನ್ನೇ ನೋಡುತ್ತಿದ್ದ ಆಲಿಸಳ ಬಾಯಲ್ಲಿ “ಥೂ ಎಂಥಾ ಹೆಂಗಸಪ್ಪ ಈಕೆ, ಅಸಂತೃಪ್ತ, ಅಸಾಧ್ಯ, ಗರ್ವಿ ಹೆಣ್ಣು”ಎನ್ನುವ ಮಾತುಗಳೇ…..
ತೀರ ಸಾಮಾನ್ಯವಾದ ಸಂಗತಿಗಳನ್ನಿಟ್ಟುಕೊಂಡು ಹೀಗೆ ಅಸಾಮಾನ್ಯವಾದ ಕತೆಗಳನ್ನು ಬರೆಯುವುದು ಫ್ರೆಂಚ್ ಕತೆಗಾರರಿಂದ ಮಾತ್ರ ಸಾಧ್ಯವೇನೋ. ನಮ್ಮ ನಡುವೆಯೇ ನಡೆಯಬಹುದಾದ ಸಣ್ಣದ್ದೊಂದು ಘಟನೆಯನ್ನು ಹೆಕ್ಕಿಕೊಂಡು ರಚಿಸಲ್ಪಟ್ಟಿರುವ ಕತೆಯ ಓಘವನ್ನು ಗಮನಿಸಿ. ಊಟಕ್ಕೆಂದು ಹೊಟೆಲ್ಲೊಂದಕ್ಕೆ ತೆರಳುವ ಯುವಕನಿಗೆ ತನ್ನ ಗತಕಾಲದ ಮಡದಿಯೆದುರು ಹೊಸ ಮಡದಿಯನ್ನು ಹೊಗಳುವ ಅನಿವಾರ್ಯತೆ. ಆತ ತನ್ನದೇ ಮನಸ್ಸಿನ ತುಮುಲಗಳಿಂದ ತಪ್ಪಿಸಿಕೊಳ್ಳಲು ಹೆಣಗಾಡುತ್ತಿದ್ದಾನೆ. ಹಾಗಾಗಿ ತೀರ ನಾಟಕೀಯವಾಗಿ ತನ್ನ ಪ್ರೇಮವನ್ನು ಹೊಸ ಮಡದಿಯೆದುರು ಅಭಿವ್ಯಕ್ತಿಸುತ್ತಿದ್ದಾನೆ. ಏನೇ ಹರ ಸಾಹಸಪಟ್ಟರೂ ನವದಂಪತಿಗಳಿಗೆ ಮುಜುಗರವನ್ನು ತಪ್ಪಿಸಿಕೊಳ್ಳುವುದು ಅಸಾಧ್ಯವೆನ್ನಿಸಿ ತಮ್ಮನ್ನು ತಾವೇ ಪರಸ್ಪರರು ಸಂತೈಸಿಕೊಳ್ಳುತ್ತಿದ್ದಾರೆ. ತನ್ನ ಹೊಸ ಮಡದಿಯೊಂದಿಗೆ ಕುಳಿತಿರುವ ಯುವಕನಿಗೆ ತನ್ನ ಮೊದಲ ಮಡದಿ ಏಕಾಏಕಿ ಎದುರಾಗಿಬಿಟ್ಟರೇ ಉಂಟಾಗುವ ಕಸಿವಿಸಿ ತಲ್ಲಣಗಳ ಚಿತ್ರಣವನ್ನು ಬಹುಶಃ “The other wife” ಎನ್ನುವ ಈ ಕತೆಯಷ್ಟು ಅದ್ಭುತವಾಗಿ ಇನ್ಯಾವ ಕತೆಯೂ ಕಟ್ಟಿಕೊಡಲಾರದು. ಫ್ರೆಂಚ್ ಸಾಹಿತ್ಯ ಲೋಕದ ಶ್ರೇಷ್ಟ ಕತೆಗಾರ್ತಿ ಎಂದು ಗುರುತಿಸಲಟ್ಟ ಸಿಡನಿ ಕೂಲೆಟ್ 1937ರಲ್ಲಿ ಈ ಕತೆಯನ್ನು ಬರೆದರು. ಮೂರು ಬಾರಿ ವಿವಾಹವಾಗಿದ್ದ ಕೂಲೆಟ್ಟರ ವೈಯಕ್ತಿಕ ಅನುಭವವೇ ಇಂಥದ್ದೊಂದು ಕತೆಗೆ ಪ್ರೇರಣೆಯಾಗಿರಬಹುದೆನ್ನುವುದು ವಿಮರ್ಶಕರ ಅಭಿಮತ. ಸುಮ್ಮನೇ ಓದಿಕೊಳ್ಳಿ. ನಿಮಗೊಬ್ಬ ಮಾಜಿ ಪ್ರೇಮಿಯೋ, ಪ್ರಿಯಕರನೋ ಇದ್ದು, ಬದುಕಿನ ಅನೂಹ್ಯ ತಿರುವಿನಲ್ಲೊಮ್ಮೆ ನಿಮ್ಮ ಬಾಳಸಂಗಾತಿಯೆದುರು ಅಂಥವರು ಸಿಕ್ಕಾಗ, ನೀವು ಅನುಭವಿಸಿರಬಹುದಾದ ಕಿರಿಕಿರಿ, ಮುಜುಗರಗಳು ನೆನಪಾಗಿ ಸಣ್ಣದ್ದೊಂದು ಮುಗುಳ್ನಗು ನಿಮ್ಮ ಮುಖದಲ್ಲರಳಲಿಕ್ಕೂ ಸಾಕು…
– ಗುರುರಾಜ್ ಕೊಡ್ಕಣಿ,ಯಲ್ಲಾಪುರ
ಯಾಕ್ ಯಾಕ್ ಚಿಕ್ಕಪ್ಪ, ಕಣ್ಕಣ್ ಬಿಡ್ತೀಯ?
ಗೊತ್ತಾಯ್ತಾ ಗೊತ್ತಾಯ್ತಾ ಗೊತ್ತಾಯ್ತಾ
ಎಂದರೆ ಗೊತ್ತಾದ್ದನ್ನು ಗೊತ್ತಾಯ್ತು ಅನ್ನಬೇಕು
ಗೊತ್ತಾಗದ್ದನ್ನು ಗೊತ್ತಾಗಿಲ್ಲ ಅನ್ನಬೇಕು
ಗೊತ್ತಾಗದ್ದನ್ನೂ ಗೊತ್ತಾಯ್ತು ಅಂದರೆ
ಗೊತ್ತಾಗದೇ ಹೋದೀತು ಗೊತ್ತಾಯ್ತಾ?
-ಅಂತ ನಾವು ಚಿಕ್ಕವರಿರುವಾಗ ಒಬ್ಬರಿಗೊಬ್ಬರು ಹೇಳಿಕೊಂಡು, ಈಗ ನೀನು ಹೇಳು ನೋಡೋಣ ಎಂದು ಸವಾಲು ಹಾಕಿಕೊಂಡು, ಹಾಕಿಸಿಕೊಂಡು, ಹೇಳಿ, ನಾಲಗೆ ತೊದಲಿ ಬ್ಬೆಬ್ಬೆಬ್ಬೆ ಎಂದು ನಕ್ಕು-ನಗಿಸುವ ಆಟವಾಡುತ್ತಿದ್ದೆವು. ಹಾಗೆಯೇ ಕಾಗೆಪುಕ್ಕ ಗುಬ್ಬಿಪುಕ್ಕ ಎಂದು ವೇಗವಾಗಿ ಹೇಳಲು ಹೋದರೆ ಅದು ಕಕ್ಕಪಕ್ಕ ಎಂದು ಬದಲಾಗುವ ಪರಿಗೆ ಕಕ್ಕಾಬಿಕ್ಕಿಯಾಗಿ ನಿಲ್ಲುತ್ತಿದ್ದೆವು. “ಯಾಕ್ ಯಾಕ್ ಚಿಕ್ಕಪ್ಪ ಕಣ್ಕಣ್ ಬಿಡ್ತೀಯ?” ಎಂದು ಹೇಳಲು ಹೋದರೆ ಚಿಕ್ಕಪ್ಪನ ಲಿಂಗ ಬದಲಾಗಿ ಚಿಪ್ಪಕ್ಕ ಎದುರು ನಿಲ್ಲುತ್ತಿದ್ದಳು. “ಬಂಕಾಪುರದ ಕೆಂಪು ಕುಂಕುಮ”ವನ್ನೂ ಅಷ್ಟೇ, ಜೋರಾಗಿ ಹಾರಿಸಹೋದರೆ ಅದು “ಕೆಂಕು ಪುಂಕಮ”ವಾಗಿ ಬದಲಾಗಿ ನಮಗೆ ಅಳ್ಳು ಹಿಡಿಸುವಷ್ಟು ನಗು ತರಿಸುತ್ತಿತ್ತು. “ಅವಳರಳಳೆದ ಕೊಳಗದಲಿ ಇವಳರಳಳೆದ”ದ್ದನ್ನು ನಿಧಾನವಾಗಿ ಹೇಳಿದೆವೋ ಬದುಕಿಕೊಂಡೆವು. ಜೋರಾಗಿ ಅಳೆಯಹೋದರೆ ಗಂಟಲಲ್ಲಿ ಬರಿಯ ಗೊಳಗೊಳಗಳೇ ನಿಂತು ಸುತ್ತಲಿನವರು ಗೊಳ್ಳೆಂದು ನಗುವಂತಾಗುತ್ತಿತ್ತು. ಅರಳು ಮತ್ತು ಕೊಳಗಗಳು ಮಾಯವಾಗಿರುವ ಈ ಕಾಲದ ಮಕ್ಕಳಿಗೆ ಇದೇನು ಗ್ರೀಕೋ ಫ್ರೆಂಚೋ ಎಂದೂ ಅನುಮಾನ ಬಂದೀತು! ಮತ್ತಷ್ಟು ಓದು 
ಅನಾಥ ಪ್ರಜ್ಞೆಯ ಸ್ಥಿತಿ
ಇದೊಂದು ಮನಸಿನ ಭಾವನೆ ವಿಚಿತ್ರವಾದರೂ ಸತ್ಯ. ಅದೆಷ್ಟು ಮನಸ್ಸನ್ನು ಕಾಡುವ ಹಿಂಸೆ ಕೊಟ್ಟು ಸಾಯಿಸಿಬಿಡುವ ದುರ್ಬಲ ಮನಸ್ಸಿನ ಹಪಹಪಿಸುವ ಕ್ಷಣ. ಆ ಒಂದು ಸಂದರ್ಭ ನಾನು ಒಂಟಿ, ನನಗ್ಯಾರು ಇಲ್ಲ, ನಾನು ಯಾಕೆ ಬದುಕಿರಬೇಕು, ಯಾರಿಗಾಗಿ ಬದುಕಬೇಕು, ನಾನಿಲ್ಲದಿದ್ದರೆ ಏನಂತೆ, ನಾನು ಯಾರಿಗೂ ಬೇಡಾದವಳು/ನು. ಹೀಗೆ ದುರ್ಬಲ ಮನಸ್ಸು ಹೇಳಿಕೊಳ್ಳುತ್ತದೆ. ಯಾಕೆ ಹೀಗೆ ಈ ಮನಸ್ಸು. ಇದಕ್ಕಿನ್ನೇನು ಬೇಕು ? ಸುತ್ತ ಎಲ್ಲರೂ ಇದ್ದಾರಲ್ಲ! ಇನ್ನೂ ಯಾಕೆ ಈ ಕೊರಗು. ಹೀಗೆ ಎಷ್ಟು ಬುದ್ಧಿ ಹೇಳಿದರೂ ಕೇಳಲಾರದ ಮನಸ್ಸು ಪದೇ ಪದೇ ಈ ಸ್ಥಿತಿಗೆ ಬರುತ್ತದೆ. ಯೋಚಿಸಿ ಯೋಚಿಸಿ ಕಣ್ಣೀರು ಹೆಣ್ಣಾದರೆ, ಅದೇ ಗಂಡಾದರೆ ಸಾಮಾನ್ಯವಾಗಿ ದುಶ್ಚಟಕ್ಕೆ ದಾಸ. ಯಾಕೆ ಹೀಗೆ? ಮತ್ತಷ್ಟು ಓದು 
ಪಂಚ ಭೂತಗಳಲ್ಲಿ ಲೀನವಾದ ವಿಚಾರವಾದ! (ಸುಳ್ಸುದ್ದಿ)
-ಪ್ರವೀಣ್ ಕುಮಾರ್, ಮಾವಿನಕಾಡು
ಖ್ಯಾತ ವಿಚಾರವಾದಿ, ಸಾಹಿತಿ, ಬುದ್ಧಿಜೀವಿ, ಹಿಂದೇ ಎನ್ನುವ ಹೆಸರಿನಿಂದಲೇ ಪ್ರಖ್ಯಾತರಾಗಿದ್ದ ಹಿಂದೂಪುರ ದೇವಮೂರ್ತಿಯವರು ವಯೋಸಹಜ ಖಾಯಿಲೆಗಳ ಪರಿಣಾಮ ನಿನ್ನೆ ತಮ್ಮ ಸ್ವಗೃಹ ‘ದೇವಿ ಕೃಪಾ’ ದಲ್ಲಿ ಮೃತರಾದರು. ಅವರಿಗೆ ಎಪ್ಪತ್ಮೂರು ವರ್ಷ ವಯಸ್ಸಾಗಿತ್ತು. ಅವರು ಮುಜರಾಯಿ ಇಲಾಖೆಯ ಸಹಾಯಕ ನಿರ್ದೇಶಕರಾದ ಅರುಣ್ ಜೋಸೆಫ್ ಮತ್ತು ಮಗಳು ದೇವಿಶ್ರೀ, ಅಳಿಯ ಅಮೆರಿಕಾದಲ್ಲಿ ಖ್ಯಾತ ಪುರೋಹಿತರಾಗಿರುವ ಕ್ರಿಷ್ ಭಟ್ ಮತ್ತು ಐವರು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮತ್ತಷ್ಟು ಓದು 
“ನೆಟ್ಟಿ”ಗೇರಿದ ಪಠ್ಯ @ ನೆತ್ತಿಗೇರುವುದೇ?
-ಸುದರ್ಶನ ರಾವ್
ಅಂತರ್ಜಾಲದಲ್ಲಿ ಕನ್ನಡ ಮಾಧ್ಯಮ ಶಾಲಾ ಪಠ್ಯಗಳು
ನಾವು ಶಾಲೆಯಲ್ಲಿ ಓದುತ್ತಿರುವಾಗ ಒಂದು ತರಗತಿಯಿಂದ ಉತ್ತೀರ್ಣರಾಗಿ ಇನ್ನೊಂದು ತರಗತಿಗೆ ಹೋಗುವುದರ ಜೊತೆಗೆ ಮುಂದಿನ ತರಗತಿಯ ಪಠ್ಯ ಪುಸ್ತಕಗಳ ಬೇಟೆಯೂ ಶುರುವಾಗುತ್ತಿತ್ತು. ಏಪ್ರಿಲ್ ಹತ್ತನೇ ತಾರೀಖು ನಮ್ಮ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಿ ಅಧಿಕೃತವಾಗಿ ಪಾಸಾಗಿದ್ದೇವೆಂದು ಘೋಷಣೆಯಾಗುತ್ತಿದ್ದಂತೆ ನಮಗಿಂತ ಒಂದು ವರ್ಷ ಮುಂದಿನ ವಿದ್ಯಾರ್ಥಿಗಳೊಂದಿಗೆ ನಮ್ಮ ಮಾತುಕತೆ ಶಾಲಾ ಆವರಣದಲ್ಲೇ ಶುರುವಾಗುತ್ತಿತ್ತು. . ಮತ್ತಷ್ಟು ಓದು 
ಸಾಮಾಜಿಕ ಪ್ರಜ್ಞೆ ಮತ್ತು ನಾವು
-ರಾಜಕುಮಾರ.ವ್ಹಿ.ಕುಲಕರ್ಣಿ
ಮುಖ್ಯಗ್ರಂಥಪಾಲಕ
ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ
ಬಾಗಲಕೋಟ
ಒಮ್ಮೆ ಹೀಗಾಯ್ತು, ಮನೆಗೆ ಬರುತ್ತಿರುವಾಗ ದಾರಿಯಲ್ಲಿ ನನ್ನ ಸ್ನೇಹಿತ ಜಗಳವಾಡಿದ. ಅವನ ಜಗಳಕ್ಕೂ ಕಾರಣವಿತ್ತು. ಮನೆಕಟ್ಟಿಸುತ್ತಿದ್ದ ಯಜಮಾನರೊಬ್ಬರು ರಸ್ತೆ ಬದಿಯ ಚರಂಡಿಗೆ ಮರಳು, ಜಲ್ಲಿಕಲ್ಲುಗಳನ್ನು ತುಂಬಿಬಿಟ್ಟಿದ್ದರು. ಕೊಳಚೆ ನೀರು ಹರಿದು ಹೋಗದೆ ಚರಂಡಿ ತುಂಬಿ ನಿಂತಿತ್ತು. ಅಂಥದ್ದೊಂದು ಘಟನೆ ಅವನ ಆಕ್ರೋಶಕ್ಕೆ ಕಾರಣವಾಗಿತ್ತು. ಚರಂಡಿಯಲ್ಲಿ ತುಂಬಿರುವ ಮರಳು ಮತ್ತು ಜಲ್ಲಿಕಲ್ಲುಗಳನ್ನು ಕೂಡಲೇ ತೆಗೆದುಹಾಕುವಂತೆ ಅಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರಿಗೆ ಹೇಳಿದ. ಅಲ್ಲೇ ಸಮೀಪದಲ್ಲಿ ನಿಂತಿದ್ದ ಯಜಮಾನರು ಮನೆ ಕೆಲಸ ಪೂರ್ಣಗೊಳ್ಳುವವರೆಗೆ ಅದು ಸಾಧ್ಯವಿಲ್ಲವೆಂದು ಬಿರುಸಾಗಿಯೇ ನುಡಿದರು. ಮಾತಿಗೆ ಮಾತು ಬೆಳೆಯಿತು. ಗಲಾಟೆ ಕೇಳಿ ಸುತ್ತಮುತ್ತಲಿನ ಮನೆಯವರು ಹೊರಗೆ ಬಂದರು. ಆಶ್ಚರ್ಯವೆಂದರೆ ಯಾರೊಬ್ಬರೂ ನನ್ನ ಗೆಳೆಯನ ಬೆಂಬಲಕ್ಕೆ ನಿಲ್ಲಲಿಲ್ಲ. ಅವನನ್ನೆ ವಿಚಿತ್ರ ಎನ್ನುವಂತೆ ನೋಡಿದರು. ಆದ ತಪ್ಪನ್ನು ತಪ್ಪು ಎಂದು ಹೇಳುವ ಧೈರ್ಯ ಅಲ್ಲಿದ್ದ ಯಾರೊಬ್ಬರಲ್ಲೂ ಇರಲಿಲ್ಲ. ಅಷ್ಟಕ್ಕೂ ಅದು ತಪ್ಪೆಂದು ಜಗಳಕ್ಕೆ ನಿಂತವನು ಅಸಲಿಗೆ ಆ ಕಾಲೋನಿಯವನೂ ಆಗಿರಲಿಲ್ಲ. ಆ ನಿಂತ ನೀರಿನ ಪಕ್ಕದ ಮನೆಯೂ ಅವನದಾಗಿರಲಿಲ್ಲ. ಆದರೂ ಆ ಸಂದರ್ಭ ಅವನಲ್ಲಿನ ಸಾಮಾಜಿಕ ಪ್ರಜ್ಞೆ ಜಾಗೃತಗೊಂಡಿತ್ತು. ತಪ್ಪನ್ನು ಸರಿಪಡಿಸಲು ಪ್ರಯತ್ನಿಸಿದ. ಯಾರು ಸಮಸ್ಯೆಯ ಸಮೀಪದಲ್ಲಿದ್ದರೋ ಅವರಲ್ಲಿ ಮಾತ್ರ ಸಾಮಾಜಿಕ ಸಮಸ್ಯೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿತ್ತು. ಆದರೆ ಅದೇ ಜನ ಅಣ್ಣಾ ಹಜಾರೆ ಹೆಸರಿನ ಟೊಪ್ಪಿಗೆ ಧರಿಸಿ ಭೃಷ್ಟಾಚಾರ ವಿರೋಧಿ ಆಂದೋಲನದಲ್ಲಿ ಭಾಗವಹಿಸಿದ್ದು ವ್ಯವಸ್ಥೆಯೊಂದರ ವ್ಯಂಗ್ಯಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಮತ್ತಷ್ಟು ಓದು 
ಶಂಕರಾಚಾರ್ಯರ ಕುರಿತು ವಿವೇಕಾನಂದರ ಧೋರಣೆಗಳು.
-ಚೈತನ್ಯ ಮಜಲುಕೋಡಿ
ಶಂಕರರ ಕುರಿತು ಹಲವು ಬುದ್ಧಿಜೀವಿಗಳು ಅನುಸರಿಸಿರುವ ಏಕಮುಖ ಮತ್ತು ಛಿದ್ರಾನ್ವೇಷಣ ಮನಸ್ಥಿತಿಯ ಧೋರಣೆಯಲ್ಲಿ ಶಂಕರರೆಂದರೆ ವಿವೇಕಾನಂದರಿಗೆ ಅಲರ್ಜಿ ಎಂಬಂತೆ ಬಿಂಬಿಸಿಬಿಟ್ಟಿದ್ದಾರೆ. ಅಂತಹವರಿಂದಾಗಿ ನಮ್ಮಲ್ಲಿ ಯಾರು ಏನು ಬರೆದಿದ್ದಾರೆಂದು ಪೂರ್ತಿಯಾಗಿ ಅವಲೋಕಿಸುವ ಜಿಜ್ಞಾಸೆಯ ಆಸಕ್ತಿ ಮತ್ತೂ ಕಡಿಮೆಯಾಗಿಬಿಟ್ಟಿದೆ. ಪ್ರಸ್ತುತ ನಮಗೆ ವಿವೇಕಾನಂದರು ತಮ್ಮ ವಿಚಾರಗಳಲ್ಲಿ ಶಂಕರರ ಬಗ್ಗೆ ಯಾವ ರೀತಿಯ ಮನೋಭಾವ ಹೊಂದಿದ್ದರೆಂದು ಸಮಗ್ರವಾಗಿ ಅರಿಯಬೇಕಾದ್ದು ಮುಖ್ಯವಾದ ಕೆಲಸ. ತಮ್ಮ ಪ್ರಖರ ವಿದ್ವತ್ತಿನ ಸ್ವರೂಪದಿಂದ ಇಂದಿಗೂ ಈ ಆಚಾರ್ಯದ್ವಯರು ದೇದೀಪ್ಯಮಾನರಾಗಿ ಬೆಳಗುತ್ತಿದ್ದಾರೆ. ಸಾವಿರವಿವೇಕಾನಂದರು ಸೇರಿದರೆ ಒಬ್ಬರು ಶಂಕರಾಚಾರ್ಯರಾಗಬಹುದು ಎಂದು ಅವರ ಪಟ್ಟಶಿಷ್ಯೆ ಸಿಸ್ಟರ್ ನಿವೇದಿತಾ ಅವರೇ ಒಂದೆಡೆ ಹೇಳಿದ್ದಾರೆ. ಹಾಗಾಗಿ ಸ್ವಾಮಿ ವಿವೇಕಾನಂದರು ಯಾವ ಸಂದರ್ಭಗಳಲ್ಲಿ ಏನೆಲ್ಲ ನುಡಿದಿದ್ದಾರೆ/ಬರೆದಿದ್ದಾರೆ ಎಂಬ ಹಿನ್ನೆಲೆ, ಶಂಕರರ ಬಗ್ಗೆ ಅವರಿಗೆ ದೊರಕಿರಬಹುದಾದ ಅಂಶಗಳು, ಅವರ ವೈಚಾರಿಕ ತುಲನೆ ಮತ್ತು ಧೋರಣೆ, ಶಂಕರಾಚಾರ್ಯರ ಬರವಣಿಗೆ ಮತ್ತು ಜೀವನ ಇವುಗಳ ಬಗ್ಗೆ ವಿವೇಕಾನಂದರ ವಿಚಾರಗಳೇನಿದ್ದವು ಎಂಬುದನ್ನ ನೋಡೋಣ. ಮತ್ತಷ್ಟು ಓದು 
ಜೀವಮಾನದ ಸಿದ್ಧಿ ಮತ್ತು ಹದಿನೈದು ನಿಮಿಷಗಳ ಪ್ರಸಿದ್ಧಿ
– ರೋಹಿತ್ ಚಕ್ರತೀರ್ಥ
1966ರಲ್ಲಿ ನಡೆದ ಸಣ್ಣ ಘಟನೆ ಅದು. ಆಂಡಿ ವಾರ್ಹಲ್ ಎಂಬ ಪ್ರಸಿದ್ಧ ಅಮೆರಿಕನ್ ಕಲಾವಿದನನ್ನು ನ್ಯಾಟ್ ಫಿಂಕಲ್ಸ್ಟೀನ್ ಎಂಬ ಫೋಟೋಗ್ರಾಫರ್ ಸೆರೆ ಹಿಡಿಯುತ್ತಿದ್ದಾಗ, ಆಂಡಿಯ ನೂರಾರು ಅಭಿಮಾನಿಗಳು ತಾವೂ ಕ್ಯಾಮೆರಾ ಫ್ರೇಮಿನಲ್ಲಿ ಬರಬೇಕೆಂದು ಆತನ ಹಿಂಬದಿಯಲ್ಲಿ ಮುಖ ತೂರಿಸುವುದೋ ಸುಮ್ಮಸುಮ್ಮನೆ ಅಡ್ಡ ಹಾಯುವುದೋ ಮಾಡುತ್ತಿದ್ದರಂತೆ. ಆಗ ಆಂಡಿ ನ್ಯಾಟ್ಗೆ “ನೋಡಯ್ಯ, ಪ್ರತಿಯೊಬ್ಬರೂ ಪ್ರಸಿದ್ಧರಾಗಲು ಬಯಸುತ್ತಿದ್ದಾರೆ” ಎಂದ. ನ್ಯಾಟ್, “ಹೌದು ಆಂಡಿ! ಹದಿನೈದು ನಿಮಿಷಗಳ ಪ್ರಸಿದ್ಧಿಗಾಗಿ!” ಎಂದುತ್ತರಿಸಿದ. ಹಾಗೆ ಅಕಸ್ಮಾತ್ತಾಗಿ ಹುಟ್ಟಿದ ಈ “ಹದಿನೈದು ನಿಮಿಷಗಳ ಪ್ರಸಿದ್ಧಿ” ಎಂಬ ಪಡೆನುಡಿ ಅಮೆರಿಕನ್ ಸಂಸ್ಕೃತಿಯಲ್ಲಿ ಹದಿನೈದು ನಿಮಿಷಗಳಲ್ಲ, ಹಲವು ವರ್ಷಗಳ ಕಾಲ ಪ್ರಸಿದ್ಧವಾಗಿ ಚಾಲ್ತಿಯಲ್ಲಿತ್ತು. ಜಗತ್ತಿನಲ್ಲಿ ಮೊದಲೆಲ್ಲ ದೇಶದ ರಾಜರಾಣಿಯರು ಮತ್ತು ಬೆರಳೆಣಿಕೆಯಷ್ಟು ಸಚಿವರನ್ನು ಬಿಟ್ಟರೆ ಬೇರಾರೂ ಪ್ರಸಿದ್ಧಿಯ ಉತ್ತುಂಗಕ್ಕೆ ಏರುತ್ತಿರಲಿಲ್ಲ. ರಾಜಕೀಯದ ಸೋಂಕಿಲ್ಲದೆ ಪ್ರಸಿದ್ಧಿಗೆ ಬರಬೇಕೆಂದರೆ ಒಂದೋ ಸಾಹಿತಿ/ಕಲಾವಿದನಾಗಬೇಕಿತ್ತು ಇಲ್ಲವೇ ವಿಜ್ಞಾನಿಯಾಗಬೇಕಿತ್ತು. ಎರಡೂ ಹತ್ತುಹಲವು ವರ್ಷಗಳ ಕಠಿಣ ಪರಿಶ್ರಮ, ತಪಸ್ಸುಗಳನ್ನು ಬೇಡುವ ಕೆಲಸಗಳು. ದಿನಬೆಳಗಾಗುವುದರಲ್ಲಿ ಪ್ರಸಿದ್ಧರಾದರು ಎಂದು ಹೇಳುವ ವ್ಯಕ್ತಿಗಳು ಕೂಡ ಅಂಥದೊಂದು ಪ್ರಸಿದ್ಧಿಗಾಗಿ ಹಲವು ವರ್ಷಗಳ ದಿನ-ರಾತ್ರಿಗಳನ್ನು ವ್ಯಯ ಮಾಡುತ್ತಿದ್ದರು. ಕಾಲ ಮುಂದುವರಿದಂತೆ, ಪತ್ರಿಕೆ ರೇಡಿಯೋ ಟಿವಿ ಸಿನೆಮ ಇತ್ಯಾದಿ ಹಲವು ಮಾಧ್ಯಮಗಳು ಬಂದವು. ಇಂಥ ಹಲವು ಆಯ್ಕೆಗಳು ಸುಲಭಸಾಧ್ಯವಾದ ಮೇಲೆ ಯೇನಕೇನ ಪ್ರಕಾರೇಣ ಪ್ರಸಿದ್ಧ ಪುರುಷೋ ಭವ ಎಂಬ ಧ್ಯೇಯಮಾರ್ಗದಲ್ಲಿ ನಡೆಯುವವರೂ ಹೆಚ್ಚಾದರು. ಶಾಶ್ವತ ಸಿದ್ಧಿ ಬಯಸುವವರಿಗಿಂತ ಇಂದೋ ಈ ವಾರವೋ ತಪ್ಪಿದರೆ ಈ ಒಂದು ತಿಂಗಳು ಚಲಾವಣೆಯಲ್ಲಿದ್ದರೆ ಸಾಕು ಎಂಬ ಮನೋಭಾವದವರು ಹೆಚ್ಚಾದರು. ಇವೆಲ್ಲವನ್ನು ಮುಂಚಿತವಾಗಿ ಊಹಿಸಿಯೇ “ಮುಂದೊಂದು ದಿನ ಜನ ಕೇವಲ ಹದಿನೈದು ನಿಮಿಷಗಳ ಪ್ರಸಿದ್ಧಿಯನ್ನಷ್ಟೇ ಪಡೆಯುವ ಸಂದರ್ಭ ಬರಬಹುದು” ಎಂಬರ್ಥದಲ್ಲಿ ನ್ಯಾಟ್ ಆ ಮಾತುಗಳನ್ನು ಹೇಳಿದ್ದ. ಮತ್ತಷ್ಟು ಓದು 









