ಕ್ಯೂಬಾದಂತೆ ಕಾಣುವ ಪಿಣರಾಯಿ
– ಸಂತೋಷ್ ತಮ್ಮಯ್ಯ
ನಾಳೆ ಸಮಸ್ತ ಕೇರಳಕ್ಕೂ ಇದೇ ಗತಿ
ಬಹುಶಃ ಇದುವರೆಗೆ ಇಷ್ಟೊಂದು ಕಡಿಮೆ ಅವಧಿಯಲ್ಲಿ ಯಾವ ಸರ್ಕಾರಗಳೂ ಇಷ್ಟೊಂದು ಸಾಧನೆಯನ್ನು ಮಾಡಿರಲಾರರು. ಅದೂ ಒಂದು ತಿಂಗಳೊಳಗಾಗಿ ತನ್ನ ಕೆಲಸವನ್ನು ಅಷ್ಟೊಂದು ಶೀಘ್ರವಾಗಿ, ಅಚ್ಚುಕಟ್ಟಾಗಿ ಮಾಡಲು ಸಾಧ್ಯವಾಗುವುದು ಕಮ್ಯುನಿಸ್ಟರಿಗೆ ಮಾತ್ರ. ಕೇರಳದಲ್ಲಿ ಅವರ ಈ ಒಂದು ತಿಂಗಳಿನ ಸಾಧನೆಯನ್ನು ನೋಡಿದರೆ ಮುಂದಿನ ಐದು ವರ್ಷಗಳ ‘ಸಾಧನೆ’ ಇನ್ನೆಷ್ಟಿರಬಹುದು ಎಂಬ ಅಂದಾಜು ಸಿಗುತ್ತದೆ. ಮುಂದಿನ ಐದು ವರ್ಷಗಳಲ್ಲಿ ಕೇರಳ ಕೇರಳವಾಗಿಯೇ ಉಳಿಯುತ್ತದೆಯೋ ಎಂಬ ಸಂಶಯವೂ ಬರುತ್ತದೆ.
ಕೇರಳದಲ್ಲಿ ಕಮ್ಯುನಿಸ್ಟರು ಅಡಳಿತ ಆರಂಭಿಸಿ ನಿನ್ನೆಗೆ ಒಂದು ತಿಂಗಳಾಯಿತು. ಈ ಒಂದು ತಿಂಗಳಿನಲ್ಲಿ ಎದೆ ನಡುಗಿಸುವ ಹಲವು ಘಟನೆಗಳು ನಡೆದವು. ಆದರೂ ಬಿಜೆಪಿ ಆಡಳಿತವನ್ನು ಎರಡೇ ದಿನಗಳಲ್ಲಿ ವಿಮರ್ಶೆಗೆ ಒಡ್ಡುವಂತೆ ಯಾರೂ ಕಮ್ಯುನಿಸ್ಟ್ ಅಡಳಿತವನ್ನು ವಿಮರ್ಶೆ ಮಾಡಲಿಲ್ಲ. ಅಚ್ಯುತಾನಂದರನ್ನು ಪಿಣರಾಯಿ ವಿಜಯನ್ ಮೂಲೆಗುಂಪು ಮಾಡಿದ ಎಂಬ ಎಂಬ ಒಂದು ಸಂಗತಿಯನ್ನು ಮಾಧ್ಯಮಗಳು ಇನ್ನೂ ಗುನುಗುತ್ತಿವೆ. ಈ ಒಂದು ತಿಂಗಳಲ್ಲಿ ನಡೆದ ಘಟನೆಗಳನ್ನು ಯಾವ ಚಿತ್ರನಟನೂ ಅಸಹಿಷ್ಣುತೆ ಎಂದು ಕರೆಯಲಿಲ್ಲ, ಯಾವ ಪತ್ರಕರ್ತನೂ ಅರಾಜಕತೆ ಎಂದು ಬಣ್ಣಿಸಲಿಲ್ಲ. ಹಾಗಾದರೆ ಕೇರಳ ಕಮ್ಯುನಿಸ್ಟರ ತಿಂಗಳ ಸಾಧನೆ ಏನು? ಮತ್ತಷ್ಟು ಓದು