ವಿಷಯದ ವಿವರಗಳಿಗೆ ದಾಟಿರಿ

Archive for

9
ಜುಲೈ

ವಿದ್ಯಾರ್ಥಿ ರಾಜಕೀಯ ಕ್ರಿಯಾಶೀಲತೆ ಮುಂದಿರುವ ಸವಾಲುಗಳು

ಬಿ.ಜಿ. ಕುಲಕರ್ಣಿ
ಸಹಾಯಕ ಪ್ರಾಧ್ಯಾಪಕರು
ರಾಜ್ಯಶಾಸ್ತ್ರ ವಿಭಾಗ
ಬಸವಪ್ರಭು ಕೋರೆ ಮಹಾವಿದ್ಯಾಲಯ
ಚಿಕ್ಕೋಡಿ. ಜಿಲ್ಲಾ: ಬೆಳಗಾವಿ

poverವಿದ್ಯಾರ್ಥಿ ರಾಜಕೀಯ ಕ್ರೀಯಾಶಿಲತೆ ಕುರಿತು ಚರ್ಚಿಸುವಾಗ ಉದ್ಭವವಾಗುವ ಮೊದಲ ಪ್ರಶ್ನೆಯೆಂದರೆ ವಿದ್ಯಾರ್ಥಿಗಳು ರಾಜಕೀಯದಲ್ಲಿ ಭಾಗವಹಿಸಬೇಕೆ ಅಥವಾ ಬೇಡವೇ ? ಈ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಪಂಥಗಳಿವೆ. ಮೊದಲನೆಯ ಪಂಥದ ಅಭಿಪ್ರಾಯವೆನೆಂದರೆ ವಿದ್ಯಾರ್ಥಿಗಳ ಮೊದಲ ಆದ್ಯತೆ ಅಧ್ಯಯನ. ಆದ್ದರಿಂದ ವಿದ್ಯಾರ್ಥಿಗಳು ಅಧ್ಯಯನದಲ್ಲಿ ನಿರತರಾಗಬೇಕು. ಆ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ವಾದಿಸುತ್ತಾರೆ. ಎರಡನೆ ಪಂಥವು ವಿದ್ಯಾರ್ಥಿಗಳೂ ಜನ ಸಮೂಹದ ಭಾಗವಾಗಿರುವುದರಿಂದ, ರಾಜಕೀಯ ಸಮಾಜ ಬಿಟ್ಟು ಇಲ್ಲವಾದ್ದರಿಂದ, ರಾಜಕೀಯ ನಿರ್ಧಾರಗಳು ವಿದ್ಯಾರ್ಥಿಗಳ ಮೇಲೂ ಪ್ರಭಾವ ಬೀರುವುದರಿಂದ ವಿದ್ಯಾರ್ಥಿಗಳು ರಾಜಕೀಯದಲ್ಲಿ ಭಾಗವಹಿಸಬೇಕು ಎಂಬ ವಾದ ಮಂಡಿಸುತ್ತಾರೆ. ವಿದ್ಯಾರ್ಥಿಗಳು ರಾಜಕೀಯದಲ್ಲಿ ಏಕೆ ಭಾಗವಹಿಸಬೇಕು ಎಂಬ ವಾದಕ್ಕೆ ಪ್ರಬಲ ಕಾರಣಗಳನ್ನು ಇಲ್ಲಿ ಚರ್ಚಿಸಲಾಗಿದೆ. ಮತ್ತಷ್ಟು ಓದು »